ಶಿವಮೊಗ್ಗದಲ್ಲಿ ನಾಳೆಯಿಂದ ಹಾಫ್ ಲಾಕ್‍ಡೌನ್

Public TV
2 Min Read
SMG Half Lockdown 1

-ಬೆಳಗ್ಗೆ 5 ರಿಂದ ಮಧ್ಯಾಹ್ನ 12ರವರೆಗೆ ವ್ಯಾಪಾರ

ಶಿವಮೊಗ್ಗ: ಕೊರೊನಾ ನಿಯಂತ್ರಣದ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ನಾಳೆಯಿಂದ ಮುಂದಿನ ಆದೇಶದವರೆಗೆ ಮುಂಜಾನೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದ ಬಳಿಕ ಈ ತೀರ್ಮಾನ ಪ್ರಕಟಿಸಿದರು. ಪೆಟ್ರೋಲ್ ಬಂಕ್‍ಗಳು, ಮದ್ಯದ ಅಂಗಡಿಗಳು, ಕಚೇರಿಗಳು ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಕೈಗಾರಿಕಾ ಚಟುವಟಿಕೆಗಳಿಗೆ ಸಮಯ ನಿರ್ಬಂಧ ವಿಧಿಸಿರುವುದಿಲ್ಲ. ಆದರೆ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹೊಂದಿರಬೇಕು. ಕಾರ್ಮಿಕರಿಗೆ ಗುರುತಿನ ಚೀಟಿಯನ್ನು ಒದಗಿಸುವುದು ಮಾಲೀಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

SMG Half Lockdown 2

ಹಬ್ಬ ಹರಿದಿನಗಳನ್ನು ಸಾಮೂಹಿಕವಾಗಿ ಆಚರಿಸಲು ಅವಕಾಶವಿರುವುದಿಲ್ಲ. ಎಲ್ಲಾ ಹಬ್ಬಗಳನ್ನು ಮನೆಗಳಲ್ಲಿಯೇ ಆಚರಿಸಬೇಕು. ಮದುವೆ, ಅಂತ್ಯಸಂಸ್ಕಾರ ಚಟುವಟಿಕೆಗಳಿಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಮಾನದಂಡವನ್ನು ಕಟ್ಟುನಿಟ್ಟಿನಿಂದ ಪಾಲಿಸಲು ಸೂಚಿಸಲಾಗಿದೆ ಎಂದರು.

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪುಗೂಡುವುದು, ಮಾಸ್ಕ್ ಧರಿಸದೇ ಇರುವುದು ಸೇರಿದಂತೆ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದರು.

Corona 3

ಇದಕ್ಕೂ ಮೊದಲು ನಡೆದ ಸಮಾಲೋಚನಾ ಸಭೆಯಲ್ಲಿ ಚೇಂಬರ್ ಆಫ್ ಕಾಮರ್ಸ್, ಲಾರಿ ಮಾಲೀಕರ ಸಂಘ, ಅಟೋ ಕಾಂಪ್ಲೆಕ್ಸ್ ಸಂಘ, ಸಗಟು ತರಕಾರಿ ವ್ಯಾಪಾರಿಗಳ ಸಂಘ, ಮಾಚೇನಹಳ್ಳಿ ಕೈಗಾರಿಕಾ ವಸಾಹತು ಸಂಘ, ವಿಶ್ವೇಶ್ವರಯ್ಯ ಸಣ್ಣ ಕೈಗಾರಿಕೆಗಳ ಸಂಘ, ಬಸ್ ಮಾಲೀಕರ ಸಂಘ, ಜವಳಿ ವರ್ತಕರ ಸಂಘ, ರಿಕ್ಷಾ ಚಾಲಕರ ಒಕ್ಕೂಟ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

CoronaVirusHeader Final 3

ಕೈಗಾರಿಕೆಗಳಿಗೆ ವಿನಾಯಿತಿ ನೀಡಬೇಕು, ಅಟೋ ಕಾಂಪ್ಲೆಕ್ಸ್ ನಲ್ಲಿ ಸಂಜೆ 6 ರವರೆಗೆ ಚಟುವಟಿಕೆಗಳಿಗೆ ಅವಕಾಶ ನೀಡಬೇಕು, ಸೀಲ್‍ಡೌನ್ ಪ್ರದೇಶದಲ್ಲಿರುವ ಬಡವರಿಗೆ ಜಿಲ್ಲಾಡಳಿತದ ವತಿಯಿಂದ ಉಚಿತವಾಗಿ ತರಕಾರಿ, ದಿನಸಿ ವಿತರಿಸಬೇಕು, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಇತ್ಯಾದಿ ಸಲಹೆಗಳು ಬಂದವು.

vlcsnap 2020 07 15 14h05m09s457

ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಅರಗ ಜ್ಞಾನೇಂದ್ರ, ಆಯನೂರು ಮಂಜುನಾಥ್, ಪ್ರಸನ್ನ ಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಸಿಇಒ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಮತ್ತಿತರರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *