ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೆ ಪಲ್ಸ್ ಆಕ್ಸಿಮೀಟರ್: ಧಾರವಾಡ ಎಸ್‍ಪಿ

1 Min Read

ಧಾರವಾಡ: ಕೊರೊನಾ ವಿರುದ್ಧ ನಮ್ಮ ಪೊಲೀಸರು ಹೋರಾಡಬೇಕಿದೆ, ಕೆಲಸ ಮಾಡಬೇಕಿದೆ. ಹೀಗಾಗಿ ಮುನ್ನೆಚ್ಚರಿಕಾ ಪರಿಕರಗಳ ಅಗತ್ಯವಿದೆ ಎಂದು ಧಾರವಾಡ ಎಸ್‍ಪಿ ವರ್ತಿಕಾ ಕಟಿಯಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಠಾಣೆಗೆ ಪಲ್ಸ್ ಆಕ್ಸಿಮೀಟರ್ ಕೊಟ್ಟಿದ್ದೇವೆ, ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಠಾಣೆಯವರು ಪಲ್ಸ್ ಆಕ್ಸಿಮೀಟರ್ ರೀಡಿಂಗ್ ತೆಗೆಯಬೇಕು ಎಂದು ಹೇಳಿದರು.

ಈಗಾಗಲೇ ನಮ್ಮಲ್ಲಿ 8 ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಆಗಿದೆ, ಇಬ್ಬರು ಗುಣಮುಖರಾಗಿದ್ದಾರೆ, ನಮ್ಮೊಂದಿಗೆ ಕರ್ತವ್ಯ ನಿರ್ವಹಿಸಿದ್ದ ಓರ್ವ ಸಿಬ್ಬಂದಿಯನ್ನು ನಾವು ಕಳೆದುಕೊಂಡಿದ್ದೇವೆ. ನಾನೂ ಸಹ ಕ್ವಾರಂಟೈನದಲ್ಲಿದ್ದೆ, ನಾವೆಲ್ಲ ಸಹ ಟೆಸ್ಟ್ ಮಾಡಿಸಿದ್ದೇವೆ. ಎಲ್ಲ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಎಲ್ಲ ಠಾಣೆಯಲ್ಲಿ ಪಲ್ಸ್ ಆಕ್ಸಿಮೀಟರ್ ಇಡಲು ನಿರ್ಧರಿಸಲಾಗಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *