ಕಾಮೇಗೌಡರ ಆರೋಗ್ಯದಲ್ಲಿ ಚೇತರಿಕೆ- ವೈದ್ಯರು, ಸಿಬ್ಬಂದಿಗೆ ಸುಧಾಕರ್ ಧನ್ಯವಾದ

Public TV
1 Min Read
SUDHAKAR 5

ಬೆಂಗಳೂರು: ಮಂಡ್ಯದ ಕಾಮೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ವೈದಯಕೀಯ ಸಚಿವ ಸುಧಾಕರ್ ಅವರು ಮಂಡ್ಯ ಕೋವಿಡ್ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ಧನ್ಯವಾದ ಸಲ್ಲಿಸಿದ್ದಾರೆ.

Kamegowda

ಈ ಸಂಬಂಧ ಟ್ವೀಟ್ ಮಾಡಿರುವ ಸುಧಾಕರ್, ಅನಾರೋಗ್ಯದಿಂದ ಬಳಲುತ್ತಿದ್ದ ಕಾಮೇಗೌಡರನ್ನು ಮಂಡ್ಯ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಚಿಕಿತ್ಸ ನೀಡುವಂತೆ ಸೂಚಿಸಿದ್ದೆ. ಕಾಮೇಗೌಡರು ಈಗ ಚೇತರಿಸಿಕೊಂಡಿರುವುದು ಸಂತಸದ ಸಂಗತಿ. ಮಂಡ್ಯ ಮೆಡಿಕಲ್ ಕಾಲೇಜಿನ ವೈದ್ಯರು ಹಾಗೂ ಸಿಬ್ಬಂದಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಗುಡ್ಡಗಾಡಿನಲ್ಲಿ 16 ಕೆರೆ- ಮಂಡ್ಯದ ಕಾಮೇಗೌಡರ ಸಾಧನೆಗೆ ಮೋದಿ ಮೆಚ್ಚುಗೆ

mnd 4 1

ಈ ಹಿಂದೆ ಕಾಮೇಗೌಡರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಐಸೋಲೇಷನ್ ವಾರ್ಡಿನಲ್ಲಿ ಆರೈಕೆ ಮಾಡುವವರು ಇಲ್ಲದ ಕಾರಣ ಅನ್ನ, ನೀರು ಸೇವಿಸುವುದನ್ನು ತ್ಯಜಿಸಿದ್ದಾರೆ ಎಂಬ ಸುದ್ದಿಯಾಗಿತ್ತು. ಈ ಸಂಬಂಧ ಸ್ವತಃ ಕಾಮೇಗೌಡರೇ ಮಾತನಾಡಿ, ಆಸ್ಪತ್ರೆಯಲ್ಲಿ ನನ್ನನ್ನ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದರು. ಇದನ್ನೂ ಓದಿ:  ಹೊಗಳಿ ಹೊನ್ನಶೂಲಕ್ಕೆ ಏರಿಸಿದ್ರೆ ಸಾಲದು, ಕಾಮೇಗೌಡರಿಗೆ ಚಿಕಿತ್ಸೆ ಕೊಡಿಸಿ: ಹೆಚ್‍ಡಿಕೆ

Share This Article
Leave a Comment

Leave a Reply

Your email address will not be published. Required fields are marked *