Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನುಷ್ಕಾಳನ್ನು ಭೇಟಿಯಾಗದಿದ್ದರೆ ನಾನು ಬದಲಾಗುತ್ತಿರಲಿಲ್ಲ: ಪತ್ನಿಯನ್ನು ಹಾಡಿಹೊಗಳಿದ ವಿರಾಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅನುಷ್ಕಾಳನ್ನು ಭೇಟಿಯಾಗದಿದ್ದರೆ ನಾನು ಬದಲಾಗುತ್ತಿರಲಿಲ್ಲ: ಪತ್ನಿಯನ್ನು ಹಾಡಿಹೊಗಳಿದ ವಿರಾಟ್

Cinema

ಅನುಷ್ಕಾಳನ್ನು ಭೇಟಿಯಾಗದಿದ್ದರೆ ನಾನು ಬದಲಾಗುತ್ತಿರಲಿಲ್ಲ: ಪತ್ನಿಯನ್ನು ಹಾಡಿಹೊಗಳಿದ ವಿರಾಟ್

Public TV
Last updated: July 29, 2020 8:36 am
Public TV
Share
2 Min Read
virat anushka
SHARE

– ನನ್ನನ್ನು ಒಳ್ಳೆಯ ವ್ಯಕ್ತಿಯನ್ನಾಗಿ ಮಾಡಿದ್ದು ಅನುಷ್ಕಾ

ನವದೆಹಲಿ: ಅನುಷ್ಕಾಳನ್ನು ಭೇಟಿಯಾಗದಿದ್ದರೆ ಜೀವನದಲ್ಲಿ ನಾನು ಬದಲಾಗುತ್ತಿರಲಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಹೇಳಿದ್ದಾರೆ.

ಕೊರೊನಾ ಲಾಕ್‍ಡೌನ್ ನಂತರ ಭಾರತ ಕ್ರಿಕೆಟ್ ತಂಡ ಯಾವುದೇ ಕ್ರಿಕೆಟ್ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಮನೆಯಲ್ಲೇ ಉಳಿದಿರುವ ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇದ್ದಾರೆ. ಈಗ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ಜೊತೆ ‘ಓಫನ್ ನೆಟ್ಸ್ ವಿತ್ ಅಗರ್ವಾಲ್’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿರುವ ವಿರಾಟ್, ಪತ್ನಿಯನ್ನು ಹಾಡಿಹೊಗಳಿದ್ದಾರೆ.

virat amp anushka spotted at the airport amid wedding rumours1400 1512727283 1100x513

ನಾನು ನನ್ನ ಬವದಲಾವಣೆಯ ಪೂರ್ಣ ಪ್ರಮಾಣದ ಕ್ರೆಡಿಟ್ ಅನ್ನು ಅನುಷ್ಕಾಗೆ ನೀಡುತ್ತೇನೆ. ಆಕೆ ನನ್ನ ಬಾಳ ಸಂಗಾತಿಯಾಗಿರುವುದಕ್ಕೆ ನನಗೆ ಬಹಳ ಹೆಮ್ಮೆ ಇದೆ. ಜೀವನದಲ್ಲಿ ಮಾಡುವ ಒಳ್ಳೆಯ ಕೆಲಸಗಳು ಇನ್ನೂ ಮುಂದೆ ಬಹಳ ಇದೆ ಎಂದು ಆಕೆ ನನಗೆ ಮನವರಿಕೆ ಮಾಡಿಕೊಟ್ಟಿದ್ದಾಳೆ. ಒಬ್ಬ ಆಟಗಾರನಾಗಿ ನನ್ನ ಜವಾಬ್ದಾರಿ ಏನು? ನಾನು ಈಗಿರುವ ಸ್ಥಾನದಲ್ಲಿ ಯಾವ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಉತ್ತಮ ಗುಣಗಳ ಮೂಲಕ ಜನರಿಗೆ ಒಳ್ಳೆಯ ಮಾದರಿಯಾಗಿರಬೇಕು ಎಂಬುದೆಲ್ಲವನ್ನು ಕಲಿಸಿ ಕೊಟ್ಟವಳು ಅನುಷ್ಕಾ ಎಂದು ವಿರಾಟ್ ತಿಳಿಸಿದ್ದಾರೆ.

virat anushka 1

ನಾನು ಅನುಷ್ಕಾಳನ್ನು ಭೇಟಿ ಮಾಡದಿದ್ದರೆ ನಾನು ಮುಕ್ತ ವ್ಯಕ್ತಿಯಾಗುತ್ತಿರಲಿಲ್ಲ. ನನ್ನ ಸ್ವಭಾವ ತುಂಬಾ ಕಠಿಣವಾಗಿದ್ದರಿಂದ ನಾನು ಬದಲಾಗುತ್ತಿರಲಿಲ್ಲ. ಆದರೆ ಇಂದು ಅವಳು ಒಳ್ಳೆಯ ವ್ಯಕ್ತಿಯಾಗಿ ನನ್ನನ್ನು ಬದಲಾಯಿಸಿದ್ದಾಳೆ ಎಂದು ಪತ್ನಿ ಅನುಷ್ಕಾ ಶರ್ಮಾರನ್ನ ವಿರಾಟ್ ಹಾಡಿಹೊಗಳಿದ್ದಾರೆ. ಜೊತೆಗೆ ಈ ಕಾರ್ಯಕ್ರಮದಲ್ಲಿ ನಾನು ಅನುಷ್ಕಾಳಿಗಾಗಿ ಅವಳ ಹುಟ್ಟುಹಬ್ಬದ ದಿನ ಕೇಕ್ ಮಾಡಿದ್ದೆ ಎಂದು ಕೊಹ್ಲಿ ತಿಳಿಸಿದ್ದಾರೆ.

virat anushka1

ಕೊರೊನಾ ಲಾಕ್‍ಡೌನ್‍ನಿಂದ ಕಳೆದ ಮಾರ್ಚ್‍ನಲ್ಲಿ ನಡೆಯಬೇಕಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮುಂದಕ್ಕೆ ಹೋಗಿತ್ತು. ಈಗ ಈ ವರ್ಷದ ಐಪಿಎಲ್ ಅನ್ನು ಸೆಪ್ಟೆಂಬರ್ 19ರಿಂದ ಯುಎಇನಲ್ಲಿ ನಡೆಸಲು ಬಿಸಿಸಿಐ ತೀರ್ಮಾನ ಮಾಡಿದೆ. ಎಂದಿನಂತೆ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ)ಯಲ್ಲಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಇದುವರೆಗೆ 177 ಪಂದ್ಯಗಳನ್ನು ಆಡಿದ್ದಾರೆ.

virat kohli rcb

ಐಪಿಎಲ್‍ನಲ್ಲಿ ಬ್ಯಾಟ್ಸ್ ಮ್ಯಾನ್ ಆಗಿ ಉತ್ತಮ ಸಾಧನೆ ಮಾಡಿರುವ ಕೊಹ್ಲಿ, ಐಪಿಎಲ್‍ನಲ್ಲಿ 37.84ರ ಸರಾಸರಿಯೊಂದಿಗೆ ಒಟ್ಟು 5,412 ರನ್ ಗಳಿಸಿದ್ದಾರೆ ಮತ್ತು 131.61 ಸ್ಟ್ರೈಕ್ ರೇಟ್ ಬ್ಯಾಟ್ ಬೀಸಿದ್ದಾರೆ. ಪ್ರಪಂಚದ ಶ್ರೀಮಂತ ಕ್ರಿಕೆಟ್ ಟೂರ್ನಿಯಲ್ಲಿ ಕೊಹ್ಲಿ ಐದು ಶತಕ ಮತ್ತು ಮೂವತ್ತಾರು ಅರ್ಧಶತಕ ಗಳಿಸಿದ್ದಾರೆ. ಜೊತೆಗೆ ಐಪಿಎಲ್‍ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆದರೆ ಇದುವರೆಗೆ ನಾಯಕನಾಗಿ ಅವರು ಐಪಿಎಲ್ ಟ್ರೋಫಿಯನ್ನು ಗೆದ್ದಿಲ್ಲ.

TAGGED:anushka sharmacricketIPLMayank AgarwalNew DelhiPublic TVvirat kohliಅನುಷ್ಕಾ ಶರ್ಮಾಐಪಿಎಲ್ಕ್ರಿಕೆಟ್ನವದೆಹಲಿಪಬ್ಲಿಕ್ ಟಿವಿಮಯಾಂಕ್ ಅಗರ್ವಾಲ್ವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
9 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
17 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
1 hour ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
1 hour ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
1 hour ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?