ಪ್ರಜಾಪ್ರಭುತ್ವಕ್ಕೆ ಅರ್ಥ ಗೊತ್ತಿಲ್ಲದ ಪಕ್ಷ ಕಾಂಗ್ರೆಸ್: ಸಚಿವ ಸುಧಾಕರ್

Public TV
1 Min Read
sudhakar 4

-ಖಾಸಗಿ ಆಸ್ಪತ್ರೆಗಳು ಸಹಕಾರ ಕೊಡ್ತಿಲ್ಲ

ಚಿಕ್ಕಬಳ್ಳಾಪುರ: ಪ್ರಜಾಪ್ರಭುತ್ವಕ್ಕೆ ಅರ್ಥವೇ ಗೊತ್ತಿಲ್ಲದ ಪಕ್ಷ ಅಂದ್ರೆ ಅದು ಕಾಂಗ್ರೆಸ್ ಎಂದು ಕೈ ನಾಯಕರ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ವಾಗ್ದಾಳಿ ನಡೆಸಿದರು.

sudhakar 1 1

ಚಿಕ್ಕಬಳ್ಳಾಪುರ ನಗರದಲ್ಲಿ ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆಯ ಕಿರು ಹೊತ್ತಿಗೆ ಬಿಡುಗಡೆ ಕಾರ್ಯಕ್ರಮ ನಡೆಸಿ ನಂತರ ಮಾತನಾಡಿದ ಸಚಿವ ಸುಧಾಕರ್, ರಾಜಸ್ಥಾನ ಸರ್ಕಾರ ಬಿಕ್ಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಪ್ರಜಾಪ್ರಭುತ್ವಕ್ಕೆ ಅರ್ಥವೇ ಗೊತ್ತಿರದ ಪಕ್ಷ ಕಾಂಗ್ರೆಸ್. ಇತ್ತೀಚೆಗೆ ಪ್ರಜಾಪ್ರಭುತ್ವ ಅಸ್ತಿತ್ವಕ್ಕೆ ಧಕ್ಕೆ ಬರ್ತಿದೆ ಎಂದು ಟೀಕಿಸಿದರು.

sudhakar 2 1

ಹಲವು ಸವಾಲುಗಳ ಏಳು ಬೀಳುಗಳ ನಡುವೆ ಸಿಎಂ ಯಡಿಯೂರಪ್ಪ ಯಶಸ್ವಿಯಾಗಿ ಒಂದು ವರ್ಷದ ಆಡಳಿತ ನಡೆಸಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಸ್ಥಾನ ನೀಡಿ ಕೊರೊನಾ ಮಣಿಸಲು ಅವಕಾಶ ಕೊಟ್ಟ ಸಿಎಂ ಯಡಿಯೂರಪ್ಪನವರಿಗೆ ಧನ್ಯವಾದಗಳನ್ನ ಅರ್ಪಿಸಿದರು. ಖಾಸಗಿ ಆಸ್ಪತ್ರೆಗೆಳು ಕೊರೊನಾ ವಿಚಾರವಾಗಿ ಸಂಪೂರ್ಣ ಸಹಕಾರ ಕೊಡ್ತಿಲ್ಲ. ಸಾಧ್ಯವಾದರೆ ಖಾಸಗಿ ಆಸ್ಪತ್ರೆಗಳ ಕೊರೊನಾ ಚಿಕಿತ್ಸಾ ದರ ಕಡಿಮೆ ಮಾಡಲು ಪ್ರಯತ್ನಿಸುತ್ತೇವೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *