ಚಾಮರಾಜನಗರ: ಜಿಲ್ಲಾ ಅಯುಷ್ ವೈದ್ಯಾಧಿಕಾರಿ ಡಾ.ರಾಚಯ್ಯ ಕೋವಿಡ್-19 ಗೆ ಬಲಿಯಾಗಿದ್ದಾರೆ. ಕೊರೊನಾ ಸೋಂಕು ದೃಢಪಟ್ಟ ನಂತರ ಜುಲೈ 26ರಿಂದ ಮೈಸೂರಿನ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಡಾ.ರಾಚಯ್ಯ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೈಸೂರಿನ ಉದಯಗಿರಿ ನಿವಾಸಿಯಾಗಿದ್ದ ರಾಚಯ್ಯ ಅವರು ಕಳೆದ 22 ವರ್ಷಗಳಿಂದ ಚಾಮರಾಜನಗರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜುಲೈ 31 ರಂದು ಇವರು ನಿವೃತ್ತರಾಗಿದ್ದರೂ ಸಹ ಆಸ್ಪತ್ರೆಯಲ್ಲಿ ಇದ್ದುದ್ದರಿಂದು ಇನ್ನು ಅಧಿಕಾರಿ ಹಸ್ತಾಂತರ ಮಾಡಿರಲಿಲ್ಲ. ಅಷ್ಟರೊಳಗೆ ಕೊರೋನಾ ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದಾರೆ.
ಡಾ.ರಾಚಯ್ಯ ಅವರಿಗೆ ಮಧುಮೇಹ ಹಾಗು ರಕ್ತದೊತ್ತಡ ಇತ್ತು ಎಂದು ಹೇಳಲಾಗಿದೆ. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಆಯುಷ್ ಇಲಾಖೆಯ ಇಬ್ಬರು ಸಿಬ್ಬಂದಿಯ ಕೊರೊನಾ ವರದಿ ನೆಗೆಟಿವ್ ಬಂದಿದೆ.