Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪೀಣ್ಯ ಶ್ರೀ ಬಸವೇಶ್ವರ ಬಸ್ ನಿಲ್ದಾಣ ಈಗ ಕೋವಿಡ್ ಕೇರ್ ಸೆಂಟರ್

Public TV
Last updated: August 5, 2020 5:21 pm
Public TV
Share
3 Min Read
Covid Care Center 2
SHARE

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೋಗದ ಲಕ್ಷಣವೇ ಇಲ್ಲದವಿರಗೆ ಕೊರೊನಾ ಪಾಸಿಟಿವ್ ಬರುತ್ತಿರುವ ಕಾರಣ, ಈ ರೋಗಿಗಳಿಗೆ ಚಿಕಿತ್ಸೆ ನೀಡಿಲು ಪೀಣ್ಯದ ಶ್ರೀ ಬಸವೇಶ್ವರ ಬಸ್ ನಿಲ್ದಾಣವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಮಾರ್ಪಾಡು ಮಾಡಲಾಗಿದೆ.

ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕೋವಿಡ್-19 ಲಕ್ಷಣಗಳಿಲ್ಲದ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಅವಕಾಶ ಕಲ್ಪಿಸುವುದು ಕಷ್ಟಕರವಾಗುತ್ತಿದೆ. ಸರ್ಕಾರದ ಸಲಹೆಯಂತೆ, ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಲಕ್ಷಣ ರಹಿತ ಮತ್ತು ಸೌಮ್ಯ ಪ್ರಕರಣಗಳನ್ನು ನಿರ್ವಹಿಸಲು ಕೋವಿಡ್ ಆರೈಕೆ ಕೇಂದ್ರಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕೋವಿಡ್ ಆರೈಕೆ ಕೇಂದ್ರದ ಸ್ಥಾಪನೆಗಾಗಿ ಶ್ರೀ ಬಸವೇಶ್ವರ ಬಸ್ ನಿಲ್ದಾಣ, ಪೀಣ್ಯ ಬೆಂಗಳೂರಿನಲ್ಲಿ ಸ್ಥಳಾವಕಾಶ ಒದಗಿಸಿದೆ ಎಂದು ಕೆ.ಎಸ್.ಆರ್.ಟಿ.ಸಿಯು ಮಾಹಿತಿ ನೀಡಿದೆ.

Covid Care Center

ಕೇಂದ್ರವು ಆಗಸ್ಟ್ 6 ರಿಂದ ಕಾರ್ಯಾರಂಭ ಮಾಡಲಿದೆ. ರೋಟರಿ ಅಡ್ವಿಕಾ ಕೇರ್ ಫೌಂಡೇಶನ್ ಮತ್ತು ನಯೋನಿಕಾ ಐ ಟ್ರಸ್ಟ್ ಸಹಯೋಗದೊಂದಿಗೆ ಈ ಕೇಂದ್ರವನ್ನು ಸ್ಥಾಪಿಸಲು ಮುಂದಾಗಿರುತ್ತಾರೆ. ಈ ಕೇಂದ್ರವನ್ನು ನಿರ್ವಹಿಸಲು ವೈದ್ಯಕೀಯ ಪಾಲುದಾರರಾಗಿ ಪ್ರಕ್ರಿಯಾ ಆಸ್ವತ್ರೆ, ನಾಗಸಂದ್ರ, ಬೆಂಗಳೂರು ಮತ್ತು ಟೈಟಾನ್ ಸಂಸ್ಥೆ ಪ್ರಮುಖ ಹಣಕಾಸಿನ ಪಾಲುದಾರರಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈ ಕೇಂದ್ರವನ್ನು ಇಂದು ಡಿಸಿಎಂ ಲಕ್ಷಣ ಸವದಿಯವರು ಉದ್ಘಾಟಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ: ಕೇಂದ್ರ ಕಛೇರಿ: ಬೆಂಗಳೂರು

ಪತ್ರಿಕಾ ಪ್ರಕಟಣೆ

ವಿಷಯ: ‘’ಕೆ ಎಸ್ ಆರ್ ಟಿ ಸಿ- ರೋಟರಿ ಅಡ್ವಿಕಾ ನಯೋನಿಕಾ ಕೋವಿಡ್ ಕೇರ್ ಸೆಂಟರ್’’, ಶ್ರೀ ಬಸವೇಶ್ವರ ಬಸ್ ನಿಲ್ದಾಣ, ಬೆಂಗಳೂರು.

ಲಿಂಕ್; https://t.co/IjIR5VypQv pic.twitter.com/h9OkQN1wVQ

— KSRTC (@KSRTC_Journeys) August 5, 2020

ಕೊವಿಡ್-19 ಗೆ ತುತ್ತಾಗಿ ಗುಣಮುಖರಾದ ಕೆ.ಎಸ್.ಆರ್.ಟಿ.ಸಿ ಚಾಲಕ, ನಿರ್ವಾಹಕ, ಸಿಬ್ಬಂದಿಗಳಿಗೆ ಮಾನ್ಯ ಉಪಮುಖ್ಯಮಂತ್ರಿಗಳು ಹೂ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ಸುಮಾರು ಒಂದು ಸಾವಿರ ಸಿಬ್ಬಂದಿ ಕೊವಿಡ್-19 ಗೆ ತುತ್ತಾಗಿದು 700 ಸಿಬ್ಬಂದಿಗಳು ಗುಣಮುಖರಾಗಿದ್ದಾರೆ. ಅವರುಗಳ ಯೋಗ ಕ್ಷೇಮ ನಮ್ಮ ಪ್ರತಮ ಆದ್ಯತೆಯಾಗಿದ್ದು, ಈ ಕೋವಿಡ್ ಕೇರ್ ಸೆಂಟರ್ ನಲ್ಲಿ ನಮ್ಮ ಸಿಬ್ಬಂದಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು. ಮುಂಜಾಗ್ರತೆ ವಹಿಸಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

Covid Care Center 4

ಪೀಣ್ಯ ಬಸ್ ನಿಲ್ದಾಣದ ನೆಲಮಹಡಿ ಹಾಗೂ ಮೊದಲನೆ ಮಹಡಿಯಲ್ಲಿ, ಈ ಕೇಂದ್ರವು ಮೊದಲನೆ ಹಂತದಲ್ಲಿ 200 ಹಾಸಿಗೆಗಳನ್ನು ಹೊಂದಿರುತ್ತದೆ. ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಮತ್ತು ಬೇಡಿಕೆ ಹೆಚ್ಚಾದರೆ ಇನ್ನೂ 100 ಹಾಸಿಗೆಗಳನ್ನು ಸೇರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಕೇಂದ್ರದಲ್ಲಿ ಪೂರ್ಣ ಸಮಯದ ದಾದಿಯರು, ವೈದ್ಯರು, ರೋಗಿಗಳ ಆರೈಕೆ ಮಾಡುವವರು, ಸ್ವಚ್ಛತಾಕಾರರು, ವ್ಯವಸ್ಥಾಪಕರು, ಬಿಲ್ಲಿಂಗ್ ತಂಡ, ಸ್ವಾಗತಕಾರರು, ನಿರ್ವಹಣೆ ಮತ್ತು ಭದ್ರತಾ ತಂಡಗಳು ಇರಲಿವೆ. ರೋಗಿಗೆ ಆಸ್ವತ್ರೆಯ ಆರೈಕೆ ಅಗತ್ಯವಿದ್ದಲ್ಲಿ, ಪ್ರಕ್ರಿಯಾ ಆಸ್ವತ್ರೆ ತನ್ನ ಆಸ್ವತ್ರೆಗಳಲ್ಲಿ ಅವಕಾಶ ಕಲ್ಪಿಸುತ್ತದೆ. ಕೇಂದ್ರದಲ್ಲಿ ಅಂಬುಲೆನ್ಸ್ ಜೊತೆ ಆಕ್ಸಿಜನ್ ಸೌಲಭ್ಯ ಲಭ್ಯವಿರುತ್ತದೆ. ಸ್ವಾಬ್ ಸಂಗ್ರಹ ಕೇಂದ್ರವನ್ನು ಸಹ ಇಲ್ಲಿ ಸ್ಥಾಪಿಸಲಾಗಿದೆ.

Covid Care Center 5

ಈ ಕೇಂದ್ರದಲ್ಲಿ ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ, ಈಶಾನ್ಯ ಸಾರಿಗೆ ಮತ್ತು ವಾಯವ್ಯ ಸಾರಿಗೆ ಉದ್ಯೋಗಿಗಳು ಮತ್ತು ಅವರ ಕುಟುಂಬಗಳಿಗೆ 50% ಹಾಸಿಗೆಗಳನ್ನು ಒದಗಿಸಲಾಗಿದೆ. ಈ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ರೋಟರಿ ಮತ್ತು ಟೈಟಾನ್‍ನಿಂದ ಉಲ್ಲೇಖಿಸಲಾದ ರೋಗಿಗಳಿಗೆ 10% ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಸರ್ಕಾರ ಸೂಚಿಸಿದ ದರಗಳ ಪ್ರಕಾರ ರೋಗಿಗಳಿಗೆ ಶುಲ್ಕ ವಿಧಿಸಲಾಗುತ್ತದೆ. ಬಡವರು ಮತ್ತು ನಿರ್ಗತಿಕರಿಗೆ ಈ ಕೇಂದ್ರದಿಂದ ಅನುಕೂಲವಾಗಲಿದೆ.

corona virus 2

ರೋಗಿಗಳಿಗೆ ಆಹಾರ ಮತ್ತು ಇತರ ಸೇವೆಗಳೊಂದಿಗೆ ಮೂಲ ವೈದ್ಯಕೀಯ ಸೇವೆಯನ್ನು ನೀಡಲಾಗುತ್ತದೆ. ಸದರಿ ಕೇಂದ್ರದಲ್ಲಿ ಶೌಚಾಲಯ, ಬಿಸಿ ನೀರಿನ ಸ್ನಾನದ ಸೌಲಭ್ಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ. ಎಲ್ಲಾ ರೋಗಿಗಳಿಗೆ ಪೌಷ್ಠಿಕ ಆಹಾರವನ್ನು ನೀಡಲಾಗುವುದು. ಈ ಕೇಂದ್ರದಲ್ಲಿ ಸಿಬ್ಬಂದಿ ಇರಲು ಅವಕಾಶ ಕಲ್ಪಿಸಲಾಗಿದೆ. ಸಿಬ್ಬಂದಿ ಮತ್ತು ವೈದ್ಯರುಗಳಿಗೆ ಸೋಂಕು ಹರಡದಂತೆ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಈ ಕೇಂದ್ರದಲ್ಲಿ ಕೆಲಸ ಮಾಡುವ ಎಲ್ಲರಿಗೂ ಸಂಪೂರ್ಣ ಪಿಪಿಇ ಕಿಟ್‍ಗಳನ್ನು ಒದಗಿಸಲಾಗಿದೆ.

CORONA VIRUS 1

ಕೇಂದ್ರವು ತುರ್ತು ವಾರ್ಡ್ ಮತ್ತು 10 ಹಾಸಿಗೆಗಳ ಐಸಿಯು ಹೊಂದಿದ್ದು, ಇದರಲ್ಲಿ ರೋಗಿಗಳ ಹಾಸಿಗೆಗಳು, ಮಾನಿಟರ್ ಗಳು, ಆಮ್ಲಜನಕ ಪೂರೈಕೆ ಮತ್ತು ಆಮ್ಲಜನಿಕ ಸಾಂದ್ರತೆಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಐಸಿಯು ಅನ್ನು ಟೈಟಾನ್ ಕಂಪನಿಯು ಪ್ರಾಯೋಜಿಸುತ್ತಿದೆ. ರೋಗಿಗಳು ಆಸ್ವತ್ರೆಯಲ್ಲಿ ಹಾಸಿಗೆ ಸಿಗುವವರೆಗೂ ಅವರನ್ನು ಇಲ್ಲಿ ತಾತ್ಕಲಿಕವಾಗಿ ನೋಡಿಕೊಳ್ಳಲಾಗುತ್ತದೆ. ಹೆಚ್ಚಿನ ವೈದ್ಯಕೀಯ ಅಗತ್ಯ ಕಂಡು ಬಂದಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು.

TAGGED:bengaluruCovid Care CenterksrtcPublic TVShree Basaveshwara Bus Stationಕೆ.ಎಸ್.ಆರ್.ಟಿ.ಸಿಕೋವಿಡ್ ಕೇರ್ ಸೆಂಟರ್ಪಬ್ಲಿಕ್ ಟಿವಿಬೆಂಗಳೂರುಶ್ರೀ ಬಸವೇಶ್ವರ ಬಸ್ ನಿಲ್ದಾಣ
Share This Article
Facebook Whatsapp Whatsapp Telegram

Cinema Updates

Shivaraj Tangadagi
ಕಮಲ್ ಹಾಸನ್ ಕ್ಷಮೆ ಕೇಳೋವರೆಗೂ ಬಿಡೋದಿಲ್ಲ: ಶಿವರಾಜ್ ತಂಗಡಗಿ
46 minutes ago
sreeleela 4
ಬಾಲಿವುಡ್ ನಟನೊಂದಿಗೆ ಮದುವೆಗೆ ರೆಡಿಯಾದ್ರಾ ಶ್ರೀಲೀಲಾ?- ಅರಿಶಿಣ ಶಾಸ್ತ್ರದ ಫೋಟೋ ವೈರಲ್
49 minutes ago
shivanna kamal haasan
ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!
2 hours ago
shivanna
ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ
3 hours ago

You Might Also Like

japan
Latest

ಜಪಾನ್‌ನ ಹೊಕ್ಕೈಡೋದಲ್ಲಿ 6.1 ತೀವ್ರತೆಯ ಭೂಕಂಪ

Public TV
By Public TV
14 minutes ago
tumakuru outrage erupts against hemavati express link canal project work temporarily halted
Districts

ಭುಗಿಲೆದ್ದ ರೈತರ ಆಕ್ರೋಶ – ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ತಾತ್ಕಾಲಿಕ ಸ್ಥಗಿತ

Public TV
By Public TV
16 minutes ago
Shashi Tharoor 3
Latest

ಪಾಕ್ ಪರ ನೀಡಿದ್ದ ಹೇಳಿಕೆಗೆ ಶಶಿ ತರೂರ್ ಆಕ್ಷೇಪ ಬೆನ್ನಲ್ಲೇ ಕೊಲಂಬಿಯಾ ಯೂಟರ್ನ್ – ಭಾರತಕ್ಕೆ ರಾಜತಾಂತ್ರಿಕ ಯಶಸ್ಸು

Public TV
By Public TV
26 minutes ago
Narendra Modi 5
Latest

ಪಾಕಿಸ್ತಾನದ ಗುಂಡಿಗೆ ಫಿರಂಗಿ ಗುಂಡುಗಳಿಂದಲೇ ಉತ್ತರ – ಭಯೋತ್ಪಾದಕರಿಗೆ ಮೋದಿ ಮತ್ತೆ ವಾರ್ನಿಂಗ್‌

Public TV
By Public TV
58 minutes ago
pune law student
Crime

‘ಆಪರೇಷನ್‌ ಸಿಂಧೂರ’ ಬಗ್ಗೆ ಆಕ್ಷೇಪಾರ್ಹ ಪೋಸ್ಟ್‌ – ಪುಣೆ ಕಾನೂನು ವಿದ್ಯಾರ್ಥಿನಿ ಬಂಧನ

Public TV
By Public TV
1 hour ago
D.K Shivakumar 4
Bengaluru City

ಸಿಎಸ್ಸಾರ್ ನಿಧಿಯಲ್ಲಿ ಪಬ್ಲಿಕ್ ಶಾಲೆ ನಿರ್ಮಾಣ ವಿಳಂಬ – ಡಿ.ಕೆ‌ ಶಿವಕುಮಾರ್ ಅಸಮಾಧಾನ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?