Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆಯಲ್ಲೇ ಪತ್ನಿಯ ಪುತ್ಥಳಿ ಸ್ಥಾಪಿಸಿದ ಕೊಪ್ಪಳದ ಉದ್ಯಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮನೆಯಲ್ಲೇ ಪತ್ನಿಯ ಪುತ್ಥಳಿ ಸ್ಥಾಪಿಸಿದ ಕೊಪ್ಪಳದ ಉದ್ಯಮಿ

Districts

ಮನೆಯಲ್ಲೇ ಪತ್ನಿಯ ಪುತ್ಥಳಿ ಸ್ಥಾಪಿಸಿದ ಕೊಪ್ಪಳದ ಉದ್ಯಮಿ

Public TV
Last updated: August 11, 2020 9:46 am
Public TV
Share
3 Min Read
KPL 5
SHARE

ಕೊಪ್ಪಳ: ಆ ಮಹಿಳೆಗೆ ಹೀಗೆಯೇ ಮನೆಕಟ್ಟಿಸಬೇಕೆಂದು ಕನಸಿತ್ತು. ಮನೆ ನಿರ್ಮಾಣದ ಭೂಮಿ ಪೂಜೆಗೆ ಇದ್ದ ಆಕೆ ಮನೆಯ ಗೃಹ ಪ್ರವೇಶಕ್ಕೆ ಜೀವಂತವಾಗಿದ್ದಿಲ್ಲ. ಆದರೆ ಅದೇ ಮನೆಯಲ್ಲಿ ಜೀವಂತ ಪ್ರತಿಮೆಯಾಗಿದ್ದಳು. ಅರೇ ಇದೇನಪ್ಪ ಜೀವಂತ ಪ್ರತಿಮೆ ಅಂತೀರಾ? ಹಾಗಿದ್ರೆ ಈ ಸ್ಟೋರಿ ಓದಿ.

ಒಂದೆಡೆ ಜೀವಂತ ಇರಬೇಕಾದಾಗಿನ ಫೋಟೋದಲ್ಲಿನ ಮಹಿಳೆ, ಇನ್ನೊಂದೆಡೆ ಮನೆಯಲ್ಲಿ ಜೀವಂತ ಇದ್ದಾರೇನೋ ಎನ್ನುವ ರೀತಿಯಲ್ಲಿ ಪ್ರತಿಮೆಯಾಗಿ ಕುಳಿತಿರುವ ಮಹಿಳೆ. ಮತ್ತೊಂದೆಡೆ ಮನೆಯೊಡತಿ ಜೊತೆ ಕುಳಿತಿರುವ ಪತಿ, ಮಕ್ಕಳು. ಇವೆಲ್ಲ ಕಂಡುಬಂದದ್ದು ಕೊಪ್ಪಳದಲ್ಲಿ. ಹೌದು. ಕೊಪ್ಪಳದ ಸಮೀಪದ ಭಾಗ್ಯನಗರದಲ್ಲಿನ ಉದ್ಯಮಿ ಶ್ರೀನಿವಾಸ್ ಗುಪ್ತಾರ ನೂತನ ಮನೆಯಲ್ಲಿ ವಿಶೇಷವಾದ ಪ್ರತಿಮೆ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಅಷ್ಟಕ್ಕೂ ಈ ಪ್ರತಿಮೆ ಬೇರೆಯಾರದ್ದೂ ಅಲ್ಲ. ಸ್ವತಃ ಶ್ರೀನಿವಾಸ ಗುಪ್ತಾ ಅವರ ಪತ್ನಿ ಕೆವಿಎನ್ ಮಾಧವಿ ಅವರದ್ದು.

KPL 1 2

ಕೆವಿಎನ್ ಮಾಧವಿ ಅವರಿಗೆ ತಮ್ಮ ಕನಸಿನ ಮನೆಯೊಂದನ್ನು ಕಟ್ಟಬೇಕೆಂದು ಆಸೆ ಇತ್ತು. ಅದರಂತೆ ಅವರು ಮನೆಯ ಭೂಮಿ ಪೂಜೆ ನೆರವೇರಿಸಿ, ಮನೆ ನಿರ್ಮಾಣ ಸಹ ಆರಂಭ ಮಾಡಿದ್ದರು. ಆದರೆ 2017ರ ಜುಲೈ 5 ರಂದು ತಿರುಪತಿಗೆ ಹೋಗುವ ವೇಳೆಯಲ್ಲಿ ಕೋಲಾರದ ಬಳಿ ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಆ ಬಳಿಕ ಮನೆ ನಿರ್ಮಾಣದ ಕೆಲಸವನ್ನು ಶ್ರೀನಿವಾಸ್ ಗುಪ್ತಾ ಅರ್ಧಕ್ಕೆ ನಿಲ್ಲಿಸಿದ್ದರು. ನಂತರ ಮಕ್ಕಳ ಒತ್ತಾಯದ ಮೆರೆಗೆ ಮನೆ ನಿರ್ಮಾಣದ ಕೆಲಸವನ್ನು ಪುನಃ ಆರಂಭ ಮಾಡಿದರು.

#Karnataka: Industrialist Shrinivas Gupta, celebrated house warming function of his new house in Koppal with his wife Madhavi’s silicon wax statue, who died in a car accident in July 2017.

Statue was built inside Madhavi's dream house with the help of architect Ranghannanavar pic.twitter.com/YYjwmmDUtc

— ANI (@ANI) August 11, 2020

ಈ ವೇಳೆಯಲ್ಲಿ ಮನೆಯ ನಿರ್ಮಾಣದ ಬಳಿಕ ಪತ್ನಿಯ ನೆನಪಿಗೆ ಏನಾದರೂ ಇರಲೇಬೇಕೆಂದು ನಿರ್ಧರಿಸಿದರು. ಮನೆಯ ಆರ್ಕಿಟೆಕ್ಟ್ ರಂಘಣ್ಣನವರ್ ಮೇಣದ ಪ್ರತಿಮೆ ಮಾಡಿಸಲು ಸಲಹೆ ನೀಡಿದರು. ಅದರಂತೆ ಬೆಂಗಳೂರಿನ ಶ್ರೀಧರಮೂರ್ತಿ ಅವರ ಗೊಂಬೆ ಮನೆಗೆ ಹೋದರು. ಅಲ್ಲಿ ಅವರು ಮೇಣದ ಪ್ರತಿಮೆ ಬದಲಾಗಿ ಸಿಲಿಕಾನ್ ಪ್ರತಿಮೆ ಮಾಡಿಸಲು ಸಲಹೆ ನೀಡಿದರು. ಅದರಂತೆ ಶ್ರೀಧರಮೂರ್ತಿ ಸಿಲಿಕಾನ್ ಮೆಟಿರಿಯಲ್ ನಲ್ಲಿ ಮಾಧವಿ ಅವರ ಪ್ರತಿಮೆ ಮಾಡಿದರು. ಈ ಹಿನ್ನಲೆಯಲ್ಲಿ ಇದೇ ಅಗಸ್ಟ್ ತಿಂಗಳ 8 ರಂದು ಶ್ರೀನಿವಾಸ್ ಅವರ ನೂತನ ಮನೆಯ ಗೃಹಪ್ರವೇಶವಾಗಿದ್ದ ಆ ಮನೆಯಲ್ಲಿ ತಮ್ಮ ಪತ್ನಿ ಕೆವಿಎನ್ ಮಾಧವಿಯ ಸಿಲಿಕಾನ್ ಪ್ರತಿಮೆಯನ್ನು ಇಟ್ಟಿದ್ದಾರೆ.

KPL FINAL 2

 

ಪತ್ನಿಯ ಸಿಲಿಕಾನ್ ಪ್ರತಿಮೆ ಹೇಗಿದೆ?
ಈ ಸಿಲಿಕಾನ್ ಪ್ರತಿಮೆಯನ್ನು ಮಾಡಲು ಶ್ರೀಧರ ಮೂರ್ತಿ ಒಂದು ವರ್ಷಕ್ಕೂ ಹೆಚ್ಚು ಕಾಲ ಸಮಯ ತೆಗೆದುಕೊಂಡಿದ್ದಾರೆ. ಈ ಸಿಲಿಕಾನ್ ಪ್ರತಿಮೆಗೆ ಜೀವ ಇಲ್ಲ ಎನ್ನುವುದನ್ನು ಒಂದು ಬಿಟ್ಟರೆ ಥೇಟ್ ಮಾಧವಿ ಅವರ ತರಹನೇ ಇದೆ. ಮಾಧವಿ ಅವರ ಸಿಲಿಕಾನ್ ಪ್ರತಿಮೆಯನ್ನು ಮನೆಯ ಹಾಲ್ ನಲ್ಲಿಟ್ಟಿದ್ದು, ಯಾರಾದರೂ ಮನೆಗೆ ಬಂದರೆ ಇವರನ್ನು ಮಾತನಾಡಿಸದೆ ಇರಲಾರರು. ಈ ಪ್ರತಿಮೆಯಲ್ಲಿ ಮಾಧವಿ ಅವರ ಉಡುತ್ತಿದ್ದ ಸೀರೆಯನ್ನೇ ಉಡಿಸಲಾಗಿದ್ದು, ಅವರು ತೊಡುತ್ತಿದ್ದ ಬಂಗಾರದ ಆಭರಣಗಳನ್ನು ಅವರ ಮೈಮೇಲೆ ಹಾಕಲಾಗಿದೆ. ಜೊತೆಗೆ ಅವರಂತೆಯೇ ಹೇರ್ ಸ್ಟೈಲ್ ಸಹ ಮಾಡಲಾಗಿದೆ. ಈ ಪ್ರತಿಮೆಯ ದೇಹದ ಭಾಗಗಳು ಫ್ಲೆಕ್ಸಿಬಲ್ ಆಗಿದ್ದು, ಮೇಕಪ್, ಸೀರೆ ಬದಲಾವಣೆ, ಹೆರ್ ಸ್ಟೈಲ್ ಸಹ ಚೇಂಜ್ ಮಾಡಬಹುದಾಗಿದ್ದು, ಎಲ್ಲಿಗೆ ಬೇಕಾದರೂ ಸಹ ಕ್ಯಾರಿ ಮಾಡಬಹುದಾಗಿದೆ.

ಮಾಧವಿ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಅವರು ಈ ಪ್ರತಿಮೆ ಬಂದಾಗಿನಿಂದ ತಮ್ಮ ತಾಯಿ ಎಲ್ಲಿಗೂ ಹೋಗಿಲ್ಲ. ನಮ್ಮ ಜೊತೆಗೇನೆ ಇದ್ದಾರೆ ಎನ್ನುವ ಭಾವದಲ್ಲಿ ಇದ್ದಾರೆ. ಅಷ್ಟೇ ಅಲ್ಲ ತಮ್ಮ ತಾಯಿಯ ಪ್ರತಿಮೆಯ ಪಕ್ಕಕ್ಕೆ ಕುಳಿತು ಖುಷಿ ಪಡುತ್ತಾರೆ.

KPL 3 2

ಇಷ್ಟು ದಿನ ಸಾಕಷ್ಟು ಸೆಲೆಬ್ರೆಟಿ, ರಾಜಕಾರಣಿಗಳ ಕಂಚಿನ ಪ್ರತಿಮೆ, ಮೇಣದ ಪ್ರತಿಮೆಗಳನ್ನು ನಾವು ನೋಡಿದ್ದೇವೆ. ಅವು ಪ್ರತಿಮೆಗಳ ತರಹ ಕಾಣುತ್ತಿದ್ದವು. ಆದರೆ ಶ್ರೀನಿವಾಸ್ ಗುಪ್ತಾ ಅವರ ಪತ್ನಿ ಮಾಧವಿ ಅವರ ಪ್ರತಿಮೆ ಮಾತ್ರ ಯಾರಿಗೂ ಪ್ರತಿಮೆ ತರಹ ಕಾಣಲು ಸಾಧ್ಯವೇ ಇಲ್ಲ. ಒಟ್ಟಿನಲ್ಲಿ ಪತ್ನಿಯ ಕನಸಿನ ಮನೆಯಲ್ಲಿ ತಮ್ಮ ಕನಸಿನ ರಾಣಿಯ ಪ್ರತಿಮೆ ಇಡುವ ಮೂಲಕ ಶ್ರೀನಿವಾಸ್ ಗುಪ್ತಾ ತಮ್ಮ ಪತ್ನಿ ಮೇಲಿನ ಪ್ರೀತಿಯನ್ನು ತೋರಿಸಿಕೊಟ್ಟಿದ್ದಾರೆ. ಇವರ ಪ್ರೀತಿಗೆ ನಮ್ಮದೊಂದು ಹ್ಯಾಟ್ಸ್ ಆಫ್.

It's a great feeling to have my wife again at my home, as this was her dream home. Artist Shreedhar Murthy from Bengaluru took a year to prepare my wife's statue. Silicon was used for the statue for durability: Shrinivas Gupta on installing silicon statue of his deceased wife https://t.co/UY4bFcHnvL pic.twitter.com/AbtH1spYbD

— ANI (@ANI) August 11, 2020

TAGGED:homehusbandkoppalaPublic TVstatueWifeಕೊಪ್ಪಳಪತಿಪತ್ನಿಪಬ್ಲಿಕ್ ಟಿವಿಪುತ್ಥಳಿಮನೆ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Cylinder Blast
Bengaluru City

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್‌ ಸ್ಫೋಟ – ಮನೆ ಗೋಡೆ ಛಿದ್ರ

Public TV
By Public TV
13 minutes ago
Mujarayi Temple 2
Bengaluru City

ಮುಜರಾಯಿ ಇಲಾಖೆ ನಿರ್ಲಕ್ಷ್ಯ – ಪಾಳು ಬಿದ್ದ 140 ವರ್ಷ ಇತಿಹಾಸವುಳ್ಳ ಪುರಾತನ ದೇವಾಲಯ!

Public TV
By Public TV
38 minutes ago
Maha Shivratri Mantralayam
Districts

ಮಂತ್ರಾಲಯದಲ್ಲಿ ಶಿವರಾತ್ರಿ ಸಂಭ್ರಮ – ಸುಬುಧೇಂದ್ರ ತೀರ್ಥ ಶ್ರೀಗಳಿಂದ ಮಹಾರುದ್ರಾಭಿಷೇಕ

Public TV
By Public TV
1 hour ago
Bangladesh Election Results 2
Latest

ಫೆ.17 ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣ ಸ್ವೀಕಾರ – ಮೋದಿಗೆ ಆಹ್ವಾನ

Public TV
By Public TV
1 hour ago
five youths die in horrific road accident in bengaluru
Bengaluru Rural

ಬೆಂಗಳೂರು | ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿಯಾದ ಕಾರು – ಐವರು ದುರ್ಮರಣ

Public TV
By Public TV
2 hours ago
TAMBITTU 1
Food

ಶಿವನಿಗೆ ಪ್ರಿಯವಾದ ತಂಬಿಟ್ಟು ಹೀಗೆ ಮಾಡಿ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?