Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರೀಕ್ಷೆಗೂ 5 ದಿನ ಮುನ್ನ ಕೂಲಿ ಕೆಲಸದಿಂದ ರಜೆ- 625ಕ್ಕೆ 616 ಅಂಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪರೀಕ್ಷೆಗೂ 5 ದಿನ ಮುನ್ನ ಕೂಲಿ ಕೆಲಸದಿಂದ ರಜೆ- 625ಕ್ಕೆ 616 ಅಂಕ

Bengaluru City

ಪರೀಕ್ಷೆಗೂ 5 ದಿನ ಮುನ್ನ ಕೂಲಿ ಕೆಲಸದಿಂದ ರಜೆ- 625ಕ್ಕೆ 616 ಅಂಕ

Public TV
Last updated: August 11, 2020 2:50 pm
Public TV
Share
3 Min Read
SSLC Exam Mahesh Topper 1
SHARE

-ಶಾಲೆಗೆ ಶಿಕ್ಷಕರನ್ನ ನೇಮಿಸಿ ಎಂದ ವಿದ್ಯಾರ್ಥಿ
-ಮನೆಗೆ ಭೇಟಿ ನೀಡಿ ಶಿಕ್ಷಣ ಸಚಿವರಿಂದ ಸನ್ಮಾನ

ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಐದು ದಿನ ಮೊದಲು ಕೂಲಿ ಕೆಲಸದಿಂದ ರಜೆ ಪಡೆದು ಓದಿದ್ದ ವಿದ್ಯಾರ್ಥಿ ಮಹೇಶ್ ಬಿ. 625ಕ್ಕೆ 616 ಅಂಕ ಪಡೆದಿದ್ದಾನೆ. ಮಹೇಶ್ ಕಟ್ಟಡ ಕಾಮಗಾರಿಯಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಸೋಮವಾರ ಪ್ರಕಟಗೊಂಡ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಟಾಪರ್ ಗಳಲ್ಲಿ ಮಹೇಶ್ ಸಹ ಒಬ್ಬನಾಗಿದ್ದಾನೆ.

SSLC Exam Mahesh Topper 4

ಮಹೇಶ್ ಮೂಲತಃ ಯಾದಗಿರಿ ಜಿಲ್ಲೆಯವರು. ತನ್ನ ತಾಯಿ ಹಾಗೂ ಇಬ್ಬರು ಸಹೋದರರೊಂದಿಗೆ ಮಹೇಶ್ ಬೆಂಗಳೂರಿನ ಮಲ್ಲೇಶಪಾಳ್ಯದಲ್ಲಿ ವಾಸವಾಗಿದ್ದು, ಜೀವನಭೀಮಾನಗರದ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾನೆ. ಮನೆಯಿಂದ ಐದು ಕಿಲೋ ಮೀಟರ್ ದೂರದಲ್ಲಿರುವ ಶಾಲೆಗೆ ಮಹೇಶ್ ಬಿಎಂಟಿಸಿ ಬಸ್ ಮೂಲಕ ತೆರಳುತ್ತಿದ್ದನು. ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ರಿಸಲ್ಟ್‌ – ಈ ಬಾರಿ ಜಿಲ್ಲೆಗಳಿಗೆ ಗ್ರೇಡ್‌ ನೀಡಿದ್ದು ಯಾಕೆ?

ಮಹೇಶ್ ಯಾವುದೇ ಟ್ಯೂಷನ್ ಸಹ ಪಡೆದುಕೊಂಡಿಲ್ಲ. ಇನ್ನು ಮಹೇಶ್ ಶಾಲೆಯಲ್ಲಿ ಕನ್ನಡ ಮತ್ತು ಹಿಂದಿ ಭಾಷೆಗೆ ಶಿಕ್ಷಕರು ಇರಲಿಲ್ಲ. ಸಮಾಜದ ಶಿಕ್ಷಕರೇ 10ನೇ ತರಗತಿಯ ಕನ್ನಡ ಪಠ್ಯ ಮಾಡಿದ್ದಾರೆ. ಆದರೆ ಹಿಂದಿಯನ್ನ ಮಕ್ಕಳೇ ಅಭ್ಯಾಸ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಆಟೋ ಚಾಲಕನ ಮಗ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ

SSLC Exam Mahesh Topper 2

ಮಹೇಶ್ ಐದು ವರ್ಷದ ಮಗು ಇದ್ದಾಗಲೇ ತಂದೆಯನ್ನ ಕಳೆದುಕೊಂಡಿದ್ದು, ತಾಯಿ ಮಲ್ಲಮ್ಮ ಅನಕ್ಷರಸ್ಥೆಯಾಗಿದ್ದು ಅವರಿವರ ಮನೆಗಳಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಇನ್ನು ಮಹೇಶ್ ಕಿರಿಯ ಸೋದರತ ಎಂಟನೇ ತರಗತಿ ಓದುತ್ತಿದ್ದು, ಅಣ್ಣ ಕಟ್ಟಡ ಕೆಲಸಗಳಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ಮಹೇಶ್ ಸೋದರ ಟೆಂಪೋ ತೆಗದುಕೊಂಡು ಯಾದಗಿರಿಗೆ ಹೋದಾಗ ಲಾಕ್‍ಡೌನ್ ನಿಂದಾಗಿ ಅಲ್ಲಿಯೇ ಸಿಲುಕಿಕೊಂಡಿದ್ದನು.

SSLC Exam Mahesh Topper

ಇತ್ತ ಮಹೇಶ್ ತಾಯಿ ಸಹ ಕೆಲಸ ಕಳೆದುಕೊಂಡು ಮನೆಯಲ್ಲಿ ಕೂರುವಂತಾಗಿತ್ತು. ಲಾಕ್‍ಡೌನ್ ಕಷ್ಟದ ಸಮಯದಲ್ಲಿ ಅಮ್ಮನ ಬಳಿ ಕೆಲಸವೂ ಇರಲಿಲ್ಲ, ಹಣವೂ ಇರಲಿಲ್ಲ. ಈ ವೇಳೆ ಬಿಬಿಎಂಪಿ ನೀಡಿದ ರೇಷನ್ ಕಿಟ್ ನಮಗೆ ಆಸರೆಯಾಯ್ತು.

ಸಕ್ಸಸ್ ಮಂತ್ರ?: ಹೆಚ್ಚು ಕಠಿಣ ಪಾಠಗಳನ್ನು ಅಭ್ಯಾಸ ಮಾಡುತ್ತಿದ್ದೆ. ಶಾಲೆಯಲ್ಲಿ ನೀಡಿದ ನೋಟ್ಸ್ ಮತ್ತು ಪುಸ್ತಕಗಳನ್ನು ಓದಿದ್ದೇನೆ. ಶೇ.90ಕ್ಕಿಂತ ಹೆಚ್ಚು ಅಂಕ ಬರುತ್ತೆ ಎಂದು ಲೆಕ್ಕ ಹಾಕಿದ್ದೆ. ಆದ್ರೆ 616 ಅಂಕಗಳ ಬಂದಿದ್ದಕ್ಕೆ ಖುಷಿಯಾಗಿದೆ ಎಂದು ಮಹೇಶ್ ಹೇಳುತ್ತಾನೆ.

SSLC Exam Mahesh Topper 3

ಮುಂದೆ ಶಿಕ್ಷಕನಾಗುವ ಕನಸು ಕಂಡಿರುವ ಮಹೇಶ್, ಶಾಲೆಗೆ ಶಿಕ್ಷಕರನ್ನು ನೇಮಿಸುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬಳಿ ವಿದ್ಯಾರ್ಥಿ ಮನವಿ ಮಾಡಿಕೊಂಡಿದ್ದಾನೆ. ತಾನು ಅನುಭವಿಸಿದ ಕಷ್ಟ ಮುಂದಿನ ವಿದ್ಯಾರ್ಥಿಗಳಿಗೆ ಬರೋದು ಬೇಡ ಎಂದು ಮಹೇಶ್ ಹೇಳುತ್ತಾನೆ.

ಇನ್ನೂ ಮಹೇಶ್ ಸಾಧನೆ ಕಂಡ ಶಿಕ್ಷಣ ಸಚಿವರು, ಫೋನ್ ಮಾಡಿ ವಿದ್ಯಾರ್ಥಿ ಜೊತೆ ಮಾತನಾಡಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಖುದ್ದು ಸಚಿವರು ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿದ್ದಾರೆ.

SSLC Exam Mahesh Topper 5

ಸಚಿವರ ಫೋಸ್ಟ್: ಮಹೇಶ್ ಯಾದಗಿರಿಯಿಂದ ಬೆಂಗಳೂರಿಗೆ ಗುಳೆ ಬಂದಿರುವ ಕುಟುಂಬಕ್ಕೆ ಸೇರಿದ ಬಾಲಕ. ಇಂದಿರಾನಗರದ ಜೀವನಭೀಮಾನಗರದ ವ್ಯಾಪ್ತಿಯಲ್ಲಿರುವ ಕರ್ನಾಟಕ ಸರ್ಕಾರದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿ. ಇಂದು ಮಹೇಶ್ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 616 ಅಂಕಗಳನ್ನು ಪಡೆದು ಎಲ್ಲರಿಂದ ಭೇಶ್ ಎನಿಸಿಕೊಂಡಿದ್ದಾನೆ.

https://t.co/GwpF9pfM0R pic.twitter.com/FIuJQvbSqI

— S.Suresh Kumar (@nimmasuresh) August 11, 2020

ಅವರ ತಾಯಿ ಮಲ್ಲಮ್ಮ ಅವರಿವರ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದಾರೆ. ಮಹೇಶ್ ಸಹ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡೇ ವಿದ್ಯಾಭ್ಯಾಸವನ್ನು ಇದುವರೆಗೆ ಮುಗಿಸಿದ್ದಾನೆ. ಇಂದು ಅವನ ಮನೆಯೆಂದು ಕರೆಯಬಹುದಾದ ಪುಟ್ಟ ಗುಡಿಸಲಿಗೆ ನಾನೇ ಹೋಗಿದ್ದೆ. ಮನೆಯಲ್ಲಿ ಕುಳಿತುಕೊಳ್ಳಲು ಜಾಗವಿಲ್ಲ. ಮಹೇಶನಿಗೆ ಶಿಕ್ಷಣ ಇಲಾಖೆಯ ಪರವಾಗಿ ಅಭಿನಂದನೆ ಸಲ್ಲಿಸಿ ಕಾಲೇಜು ಶಿಕ್ಷಣಕ್ಕೆ ವ್ಯವಸ್ಥೆ ಮಾಡುವುದಾಗಿ ಧೈರ್ಯ ತುಂಬಿ ಬಂದಿದ್ದೇನೆ.

Congratulations Mahesh, scored 616 out of 625 in SSC exam. Congratulations to him. He is a motivation to lakhs of children.

And look at our education minister Shri @nimmasuresh goes to his small house and compliments him.

Big salutes to both. pic.twitter.com/70T3LuqQ3o

— Tejaswini AnanthKumar (@Tej_AnanthKumar) August 11, 2020

ಮಹೇಶನಿಗೆ ಪಿಯುಸಿ ತರಗತಿಗಳಲ್ಲಿ ವಿಜ್ಞಾನ ವಿಷಯಗಳನ್ನು ತೆಗೆದುಕೊಂಡು ಓದಬೇಕೆಂಬ ಮಹದಾಸೆಯಿದೆ. ಅವನ ಮನೆ, ಅವನ ಕುಟುಂಬ, ಅವರ ತಾಯಿಯ ಮುಗ್ಧತೆ, ಮಹೇಶನ ಸಾಧನೆ ಎಲ್ಲ ಕಂಡಾಗ ಕಣ್ತುಂಬಿ ಬಂತು – ಅದೇ ರೀತಿ ಹೃದಯ ತುಂಬಿ ಬಂತು ಎಂದು ಬರೆದುಕೊಂಡಿದ್ದಾರೆ.

TAGGED:Public TVSSLCsslc resultssuresh kumarಎಸ್‍ಎಸ್‍ಎಲ್‍ಸಿಎಸ್‍ಎಸ್‍ಎಲ್‍ಸಿ ಫಲಿತಾಂಶಪಬ್ಲಿಕ್ ಟಿವಿಶಿಕ್ಷಣ ಸಚಿವಸರ್ಕಾರಿ ಶಾಲೆಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories

You Might Also Like

HC Balakrishna zameer
Bengaluru City

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ – ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಬಾಲಕೃಷ್ಣ ಒತ್ತಾಯ

Public TV
By Public TV
58 minutes ago
HC BALAKRISHNA
Bengaluru City

ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ: ಹೆಚ್.ಸಿ.ಬಾಲಕೃಷ್ಣ

Public TV
By Public TV
1 hour ago
congress mlas randeep singh surjewala
Bengaluru City

ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸರ್ಕಸ್ – 12 ಶಾಸಕರಿಂದ ರಣದೀಪ್ ಸುರ್ಜೇವಾಲ ಭೇಟಿ

Public TV
By Public TV
2 hours ago
krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
2 hours ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
3 hours ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?