Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಮ್ಮ ಮಾದರಿಯನ್ನ ಕೇಂದ್ರ ಹಾಗೂ ಅನೇಕ ರಾಜ್ಯಗಳು ಅನುಸರಿಸಿವೆ – ಸಿಎಂ ಬಿಎಸ್‍ವೈ

Public TV
Last updated: August 15, 2020 10:18 am
Public TV
Share
2 Min Read
CM FLAG
SHARE

– ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಕ್ರಮ
– ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣ

ಬೆಂಗಳೂರು: ಅಭಿವೃದ್ಧಿಯೇ ಆಡಳಿತ ಮಂತ್ರ. ಕಲ್ಯಾಣ ರಾಜ್ಯ ಕಟ್ಟೋದು ನಮ್ಮ ಗುರಿಯಾಗಿದೆ. ಕೊರೊನಾ ವಿರುದ್ಧ ನಮ್ಮ ಹೋರಾಟ. ಕೊರೊನಾ ಜಾಗತಿಕ ಪಿಡುಗು ನಮಗೆ ಕಾಡುತ್ತಿದೆ. ಕೇವಲ ಆರೋಗ್ಯ ಕ್ಷೇತ್ರ ಮಾತ್ರವಲ್ಲದೆ ಎಲ್ಲ ಕ್ಷೇತ್ರವನ್ನು ಬಾಧಿಸಿದ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೊರೊನಾ ಮಧ್ಯೆ ಎಸ್‍ಎಸ್‍ಎಲ್‍ಸಿ ಯಶಸ್ವಿಯಾಗಿ ನಡೆಸಲಾಗಿದೆ. ನಮ್ಮ ಮಾದರಿಯನ್ನ ಕೇಂದ್ರ ಹಾಗೂ ಅನೇಕ ರಾಜ್ಯಗಳು ಅನುಸರಿಸಿವೆ. ಸಿಇಟಿ ಪರೀಕ್ಷೆಯಲ್ಲಿ ಕೊರೊನಾ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ಕೊಡಲಾಗಿದೆ. ವಿದ್ಯಾರ್ಥಿಗಳಿಗೆ ಆನ್‍ಲೈನ್ ಶಿಕ್ಷಣ ನೀಡಲು ಅಗತ್ಯ ಕ್ರಮವಹಿಸಿದೆ. ಜೊತೆಗೆ ವಿದ್ಯಾಗಮ ವಿಶೇಷ ಕಾರ್ಯಕ್ರಮ ಜಾರಿ ಮಾಡಿದೆ ಎಂದರು.

EfbvWnuUwAI0k5C e1597466385764

ಲಾಕ್‍ಡೌನ್ ಮುಕ್ತಾಯದಿಂದ ಜನರ ಜೀವನ ಇಂದು ಚೇತರಿಸಿಕೊಂಡಿದೆ. ನಾನು ಕೊರೊನಾ ಪಾಸಿಟಿವ್ ತುತ್ತಾಗಿದ್ದೆ. ಈಗ ಗುಣ ಮುಖನಾಗಿದ್ದೇನೆ. ಕೊರೊನಾದಿಂದ ಯಾರೂ ಆತಂಕ ಆಗೋದು ಬೇಡ. ಜಾಗರೂಕತೆಯಿಂದ ಜೀವನ ನಡೆಸಬೇಕು ಅಷ್ಟೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಅಗತ್ಯ ಕ್ರಮ ತೆಗೆದುಕೊಂಡಿದೆ ಎಂದು ತಿಳಿಸಿದರು.

ಸಚಿವರ ಕಾರ್ಯ ಪಡೆ, ಪರಿಣಿತ ವೈದ್ಯರ ಪಡೆ, ಅಧಿಕಾರಿಗಳ ಕಾರ್ಯ ಪಡೆ ರಚನೆ ಮಾಡಲಾಗಿದೆ. ಅಲ್ಲದೇ ಎಲ್ಲಾ ಜಿಲ್ಲೆಯಲ್ಲಿ ಕೇರ್ ಸೆಂಟರ್ ಸ್ಥಾಪನೆ, ಫೀವರ್ ಕ್ಲೀನಿಕ್ ಸ್ಥಾಪನೆ ಮಾಡಲಾಗಿದೆ. ಕ್ವಾರಂಟೈನ್ ವ್ಯವಸ್ಥೆ ಮಾಡಿದ್ದೇವೆ. ಆಯುಷ್ಮಾನ್ ಭಾರತ್ ಅಡಿ 1.31 ಕೋಟಿ ಜನರಿಗೆ ಕಾರ್ಡ್ ವಿತರಿಸಲಾಗಿದೆ. 1,694 ಕೋಟಿ ವೆಚ್ಚದಲ್ಲಿ 8.5 ಲಕ್ಷ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

EfbvWssUMAE15K e1597466426554

ಕೊರೊನಾ ಹಿನ್ನೆಲೆಯಲ್ಲಿ ಕಾರ್ಮಿಕರು, ಕ್ಷೌರಿಕ, ಆಟೋ ಚಾಲಕರು ಸೇರಿದಂತೆ ದುರ್ಬಲ ವರ್ಗದವರಿಗೆ 3,187 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೊರೊನಾ ವಾರಿಯರ್ಸ್ ಮತ್ತು ಸರ್ಕಾರೇತರ ಸಂಸ್ಥೆಗಳು, ಉದ್ಯಮಿಗಳನ್ನ ಸಿಎಂ ನೆನಪಿಸಿಕೊಂಡರು.

ಕಿಸಾನ್ ಸಮ್ಮಾನ್ ಯೋಜನೆಗೆ 6 ಸಾವಿರದ ಜೊತೆ ರಾಜ್ಯ ಸರ್ಕಾರ 4 ಸಾವಿರ ನೀಡುತ್ತಿದೆ. ಮೊದಲ ಕಂತು 2 ಸಾವಿರ ಈಗಾಗಲೇ ಬಿಡುಗಡೆ ಮಾಡಿದೆ. 50 ಲಕ್ಷ ರೈತರಿಗೆ ಹಣ ತಲುಪಿದೆ. ಇನ್ನೂ 10 ಲಕ್ಷ ರೈತರಿಗೆ 6,500 ಕೋಟಿ ಬೆಳೆ ಸಾಲ ನೀಡಲಾಗಿದೆ. 2020-21 ನೇ ಸಾಲಿಗೆ 14.50 ಸಾವಿರ ಕೋಟಿ ಬೆಳೆ ಸಾಲ ನೀಡುವ ಗುರಿ ಸರ್ಕಾರ ಹೊಂದಿದೆ. ಹೆಸರುಕಾಳು, ತೊಗರಿ, ಶೆಂಗಾ, ಕಡಲೇಕಾಳು, ಕೊಬ್ಬರಿಗೆ ಸೇರಿದಂತೆ ಹಲವು ಬೆಳೆಗೆ 3,175 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

CM FLAG 2 e1597466461378

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಕ್ರಮವಹಿಸಲಾಗಿದೆ. ಕಾಲಕಾಲಕ್ಕೆ ಸಭೆಗಳನ್ನು ನಡೆಸಿ ವಿವಿಧ ಕ್ರಮ ತೆಗೆದುಕೊಂಡು ಅಪರಾಧ ನಿಯಂತ್ರಣ ಮಾಡಲಾಗಿದೆ. ಸೈಬರ್ ಅಪರಾಧ ತಡೆಗೆ ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಕಾನೂನು ವ್ಯವಸ್ಥೆಯ ಬಗ್ಗೆ ಮಾತನಾಡಿದರು.

74ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು ಮುಖ್ಯಮಂತ್ರಿ ಶ್ರೀ @BSYBJP ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.#IndependenceDayIndia pic.twitter.com/YWTCfFtUp4

— CM of Karnataka (@CMofKarnataka) August 15, 2020

ಸಿಎಂ ಯಡಿಯೂರಪ್ಪ ಕೊರೊನಾದಿಂದ ಗುಣಮುಖರಾದ ಬಳಿಕ ಮೊದಲ ಕಾರ್ಯಕ್ರಮ ಇದಾಗಿದ್ದು, ಸಿಎಂಗಾಗಿ ವಿಶೇಷವಾಗಿ ವೇದಿಕೆ ಸಿದ್ಧತೆ ಮಾಡಲಾಗಿತ್ತು. ವೇದಿಕೆಗೆ ಸೋಂಕು ತಡೆ ಪರದೆ(ಫೇಸ್ ಶೀಲ್ಡ್ ಪರದೆ) ಅಳವಡಿಕೆ ಮಾಡಲಾಗಿತ್ತು. ಸಿಎಂ ಆಗಮನದಿಂದ ಧ್ವಜಾರೋಹಣ ಮಾಡೋವರೆಗೂ ಪರದೆ ಅಳವಡಿಕೆ ಮಾಡಲಾಗಿತ್ತು. ಅಲ್ಲದೇ ವೇದಿಕೆ ಮೇಲೆ ಮೂವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಜೊತೆಗೆ ಪ್ರತ್ಯೇಕ ಆಸನ ವ್ಯವಸ್ಥೆ ಹಾಗೂ ಪ್ರತಿ ಆಸನಕ್ಕೆ ಫೇಸ್‍ಶೀಲ್ಡ್ ಪರದೆಯನ್ನು ಅಳವಡಿಕೆ ಮಾಡಲಾಗಿತ್ತು.

ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಘೋಷಣೆ ಮಾಡಿದರು.

TAGGED:Ayodhyabengalurucm yeddyurappaDay Independence DayflagPublic TVಅಯೋಧ್ಯೆಧ್ವಜಾರೋಹಣಪಬ್ಲಿಕ್ ಟಿವಿಬೆಂಗಳೂರುಸಿಎಂ ಯಡಿಯೂರಪ್ಪಸ್ವಾತಂತ್ರ್ಯ ದಿನಾಚರಣೆ
Share This Article
Facebook Whatsapp Whatsapp Telegram

Cinema Updates

pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
44 minutes ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
1 hour ago
Kamal Haasan Sudha rani
ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ
2 hours ago
Rachita Ram
ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್
4 hours ago

You Might Also Like

Raichuru Hatti Gold Mine Blast
Crime

ಹಟ್ಟಿ ಚಿನ್ನದಗಣಿ | 2,800 ಅಡಿ ಆಳದಲ್ಲಿ ಏರ್ ಬ್ಲಾಸ್ಟ್ – ಕಾರ್ಮಿಕ ದುರ್ಮರಣ

Public TV
By Public TV
10 minutes ago
nigeria flood
Latest

ರೌದ್ರರೂಪ ತಾಳಿದ ನೈಜೀರಿಯಾ ನದಿಗಳು – ಜಲಪ್ರಳಯಕ್ಕೆ 150ಕ್ಕೂ ಅಧಿಕ ಮಂದಿ ಬಲಿ

Public TV
By Public TV
38 minutes ago
Mandya 4
Latest

ಮಂಡ್ಯದಲ್ಲಿ ಬಾಲಕಿ ಸಾವು ಪ್ರಕರಣ – ಭುಗಿಲೆದ್ದ ಆಕ್ರೋಶ, ತನಿಖೆಗೆ ವೈದ್ಯರ ತಂಡ ರಚನೆ

Public TV
By Public TV
41 minutes ago
Vidhyapeeta
Bengaluru City

ಪಬ್ಲಿಕ್ ಟಿವಿ ವಿದ್ಯಾಪೀಠ – ಮೊದಲ ದಿನವೇ ಬನ್ನಿ ಲ್ಯಾಪ್‌ಟಾಪ್‌ ಗೆಲ್ಲಿ!

Public TV
By Public TV
1 hour ago
Vidhyapeeta
Bengaluru City

`ಪಬ್ಲಿಕ್ ಟಿವಿ’ ವಿದ್ಯಾಪೀಠಕ್ಕೆ ಬನ್ನಿ – ಗಂಟೆಗೊಂದು ಬೈಸಿಕಲ್ ಗೆಲ್ಲಿ!

Public TV
By Public TV
1 hour ago
Public TV vidyapeeta
Bengaluru City

ಇಂದಿನಿಂದ `ಪಬ್ಲಿಕ್ ಟಿವಿ ವಿದ್ಯಾಪೀಠʼ – ಕರ್ನಾಟಕದ ಅತಿದೊಡ್ಡ ಶೈಕ್ಷಣಿಕ ಮೇಳಕ್ಕೆ ತಪ್ಪದೇ ಬನ್ನಿ!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?