ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ – ಕಂಡಕ್ಟರ್ ದೇಹಕ್ಕೆ ಚುಚ್ಚಿದ ಕಬ್ಬಿಣದ ರಾಡ್‍ಗಳು

Public TV
1 Min Read
bly 7

ಬಳ್ಳಾರಿ: ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಬಸ್ ಕಂಡಕ್ಟರ್ ದೇಹಕ್ಕೆ ಕಬ್ಬಿಣದ ರಾಡ್‍ಗಳು ಚುಚ್ಚಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ಹೊರವಲಯದಲ್ಲಿ ನಡೆದಿದೆ.

ಕೂಡ್ಲಿಗಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಘಟನೆ ನಡೆದಿದೆ. ಕಬ್ಬಿಣದ ರಾಡ್‍ ತುಂಬಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್‍ನ ಎಡಭಾಗದಲ್ಲಿ ಕಂಡಕ್ಟರ್ ಕುಳಿತಿದ್ದ. ಹೀಗಾಗಿ ಡಿಕ್ಕಿ ಹೊಡೆದ ರಭಸಕ್ಕೆ ಕಂಡಕ್ಟರ್ ಹೊಟ್ಟೆಗೆ ಕಬ್ಬಿಣದ ರಾಡ್‍ಗಳು ಚುಚ್ಚಿವೆ.

steel rods 500x500 1

ತಕ್ಷಣ ಸ್ಥಳೀಯರು ಕಂಡಕ್ಟರ್‌ಗೆ ಚುಚ್ಚಿರುವ ರಾಡ್‍ಗಳನ್ನ ಕತ್ತರಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಕಂಡಕ್ಟರನ್ನ ದಾಖಲಿಸಲಾಗಿದೆ. ಸದ್ಯಕ್ಕೆ ಕಂಡಕ್ಟರ್ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಈ ಕುರಿತು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *