– ಎರಡು ಮಕ್ಕಳ ತಂದೆಯ ಜೊತೆ ಗಾಯಕಿ ಲವ್
– ವಿಷ ಸೇವಿಸಿ ಗೆಳೆಯ ಆತ್ಮಹತ್ಯೆ
ಜೈಪುರ: ಕಿರುತೆರೆಯ ‘ಇಂಡಿಯನ್ ಐಡಲ್ ಸೀಸನ್ 10’ನ ಸ್ಪರ್ಧಿ ರೇಣು ನಗರ್ ಅವರನ್ನು ರಾಜಸ್ಥಾನದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಿಯಕರನ ಸಾವಿನ ಸುದ್ದಿ ತಿಳಿದ ತಕ್ಷಣ ಗಾಯಕಿ ಆಘಾತಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರಿಯಕರನ ರವಿ ಶಂಕರ್ ಬುಧವಾರ ಮಧ್ನಾಹ್ನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಗೆಳೆಯನ ಸಾವಿನ ಸುದ್ದಿ ತಿಳಿದು ತಕ್ಷಣ ಗಾಯಕಿ ರೇಣು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಮಿತ್ತಲ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ನಡೆಯುತ್ತಿದೆ. ಗಾಯಕಿ ರೇಣು ನಗರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮೃತ ರವಿ ತಮಲಾ ಕ್ಲಾಸ್ ಮಾಡಲು ಗಾಯಕಿ ರೇಣು ನಗರ್ ಮನೆಗೆ ಬರುತ್ತಿದ್ದರು. ರವಿ ತಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೂ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ನಂತರ ರೇಣು ಮತ್ತು ರವಿ ಇಬ್ಬರು ಜೂನ್ ತಿಂಗಳಿನಲ್ಲಿ ಮನೆಬಿಟ್ಟು ಓಡಿ ಹೋಗಿದ್ದರು. ಈ ಸಂಬಂಧ ರೇಣು ತಂದೆ ರವಿ ಶಂಕರ್ ವಿರುದ್ಧ ಪೊಲೀಸ್ ಸ್ಟೇಷನ್ನಲ್ಲಿ ದೂರು ದಾಖಲಿಸಿದ್ದರು. ನಂತರ ಮಗಳನ್ನು ಮನವೊಲಿಸಿ ಮನೆಗೆ ಕರೆದುಕೊಂಡು ಹೋಗಿದ್ದರು.
ಐದು ದಿನಗಳ ಹಿಂದೆಯಷ್ಟೆ ಇಬ್ಬರು ತಮ್ಮ ತಮ್ಮ ಮನೆಗೆ ಹೋಗಿದ್ದರು. ಆದರೆ ಬುಧವಾರ ಮಧ್ಯಾಹ್ನ ರವಿ ವಿಷ ಸೇವಿಸಿದ್ದಾರೆ. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ರವಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ನಂತರ ರವಿ ಸಾವಿನ ಸುದ್ದಿ ತಿಳಿದು ರೇಣು ಆಘಾತಕ್ಕೊಳಗಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.