18 ತಿಂಗಳ ಹಿಂದೆಯಷ್ಟೇ ಭಾರತೀಯ ಸೇನೆಗೆ ಸೇರಿದ್ದ ಯೋಧ ನಿಧನ

Public TV
1 Min Read
ckd

ಬೆಳಗಾವಿ/ಚಿಕ್ಕೋಡಿ: ಸೇನೆಯಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿಯ ಗ್ರಾಮದ ಯೋಧರೊಬ್ಬರು ನಿಧನರಾಗಿದ್ದಾರೆ.

ಕರೋಶಿಯ ಗ್ರಾಮದ ನಿವಾಸಿ ಅನಿಲ ಶಿವಾಜಿ ಶಿಂಗಾಯಿ (23) ಅವರು ದೆಹಲಿಯಲ್ಲಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ನಿಧನರಾಗಿದ್ದಾರೆ. ಸಾವಿಗೆ ಇನ್ನೂ ನಿಖರವಾದ ಕಾರಣ ತಿಳಿದುಬಂದಿಲ್ಲ.

indian army 1

ಅನಿಲ ಶಿವಾಜಿ ಶಿಂಗಾಯಿ 18 ತಿಂಗಳ ಹಿಂದೆಯಷ್ಟೇ ಸೇನೆಗೆ ಸೆರ್ಪಡೆಯಾಗಿದ್ದರು. ಆದರೆ ಲಾಕ್‍ಡೌನ್ ಇದ್ದ ಪರಿಣಾಮ ಯೋಧ ಊರಲ್ಲಿದ್ದರು. ಕಳೆದ ಒಂದು ತಿಂಗಳ ಹಿಂದೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ಇದ್ದಕ್ಕಿದ್ದಂತೆ ಯೋಧ ಸೇವೆಯಲ್ಲಿ ಇದ್ದಾಗಲೇ ನಿಧನರಾಗಿದ್ದಾರೆ.

ಸಾವಿನ ಸುದ್ದಿ ತಿಳಿಯುತ್ತಿದಂತೆ ಕುಟುಂಬಸ್ಥರು ದೆಹಲಿಗೆ ದೌಡಾಯಿಸಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಕರೋಶಿಯತ್ತ ಯೋಧನ ಪಾರ್ಥಿವ ಶರೀರ ಬರಲಿದೆ ಎಂದು ಹೇಳಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *