ಚನ್ನಪಟ್ಟಣದ ಬಗ್ಗೆ ‘ಮನ್ ಕಿ ಬಾತ್’ನಲ್ಲಿ ಮೋದಿ ಮಾತು

Public TV
2 Min Read
modi 2

– ಭಾರತವನ್ನ ಸ್ವಾವಲಂಬಿಗಳನ್ನಾಗಿ ಮಾಡೋದು ನಮ್ಮ ಜವಾಬ್ದಾರಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಮನಗರದ ಚನ್ನಪಟ್ಟಣದ ಬಗ್ಗೆ ಮಾತನಾಡಿದ್ದಾರೆ.

ಇಂದು ಪ್ರಧಾನಿ ಮೋದಿ ಅವರು 68ನೇ ಆವೃತ್ತಿಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದಾರೆ. ಮೊದಲಿಗೆ ಪ್ರಧಾನಿ ಮೋದಿ ಅವರು ಕೊರೊನಾ ವೈರಸ್ ಮಧ್ಯೆ ತಂತ್ರಜ್ಞಾನಕ್ಕೆ ಹೊಂದಿಕೊಂಡು ಮಕ್ಕಳಿಗೆ ಪಾಠ ಮಾಡುತ್ತಿರುವ ಶಿಕ್ಷಕರನ್ನು ಶ್ಲಾಘಿಸಿದರು. ಈ ವೇಳೆ ಚೀನಾದಿಂದ ಆಟಿಕೆಗಳನ್ನು ಕಡಿಮೆ ಮಾಡಿ ಭಾರತದ ಆಟಿಕೆಗಳನ್ನು ಖರೀದಿಸಬೇಕೆಂದು ಪರೋಕ್ಷವಾಗಿ ತಿಳಿಸಿದರು.

ಭಾರತವನ್ನು ಸ್ವಾವಲಂಬಿಗಳನ್ನಾಗಿ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಹೀಗಾಗಿ ನಮ್ಮ ದೇಶದಲ್ಲಿ ಸ್ಥಳೀಯ ಆಟಿಕೆಗಳ ಶ್ರೀಮಂತ ಸಂಪ್ರದಾಯವಿದೆ. ಉತ್ತಮ ಆಟಿಕೆಗಳನ್ನು ತಯಾರಿಸುವಲ್ಲಿ ಪರಿಣತಿಯನ್ನು ಹೊಂದಿರುವ ಅನೇಕ ಪ್ರತಿಭಾವಂತ ಮತ್ತು ನುರಿತ ಕುಶಲಕರ್ಮಿಗಳು ಇದ್ದಾರೆ. ಭಾರತದ ಕೆಲವು ಭಾಗಗಳಿಂದು ಆಟಿಕೆ ಸಮೂಹಗಳಾಗಿ ಬೆಳೆಯುತ್ತಿದೆ. ಅಂದರೆ ಆಟಿಕೆಗಳ ಕೇಂದ್ರಗಳಾಗಿ ರೂಪುಗೊಳ್ಳುತ್ತಿವೆ. ಹಾಗೆ ರಾಮನಗರದ ಚನ್ನಪಟ್ಟಣ (ಕರ್ನಾಟಕ), ಕೃಷ್ಣದಲ್ಲಿ ಕೊಂಡಪಲ್ಲಿ (ಆಂಧ್ರಪ್ರದೇಶ), ತಮಿಳುನಾಡಿನ ತಂಜಾವೂರು, ಅಸ್ಸಾಂನ ಧುಬ್ರಿ, ಯುಪಿಯಲ್ಲಿ ವಾರಣಾಸಿ ಆಟಿಕೆಗಳ ಕೇಂದ್ರಗಳಾಗಿವೆ. ಇಷ್ಟೇ ಅಲ್ಲ ಇನ್ನೂ ಅನೇಕ ಹೆಸರುಗಳನ್ನು ಭಾರತದಲ್ಲಿ ಎಣಿಸಬಹುದು ಎಂದರು.

ನಾವು ರಾಷ್ಟ್ರೀಯ ಶಿಕ್ಷಣ ನೀತಿಯಲ್ಲೂ ಆಟಿಕೆಗಳತ್ತ ಗಮನ ಹರಿಸಿದ್ದೇವೆ. ಆಡುವಾಗ ಕಲಿಯುವುದು, ಆಟಿಕೆಗಳು ತಯಾರಿಸುವುದು ಇತ್ಯಾದಿಗಳನ್ನು ಪಠ್ಯಕ್ರಮದ ಒಂದು ಭಾಗವನ್ನಾಗಿ ಮಾಡಲಾಗಿದೆ. ಜಾಗತಿಕೆ ಆಟಿಕೆ ವ್ಯವಹಾರ ಸುಮಾರು 7 ಲಕ್ಷ ಕೋಟಿ ರೂ. ಆಗಿದ್ದು, ಇದರಲ್ಲಿ ಭಾರತದ ಪಾಲು ತುಂಬಾ ಕಡಿಮೆ ಇದೆ. ಹಿಗಾಗಿ ಆಟಿಕೆ ಉದ್ಯಮಕ್ಕೆ ಹೊಸ ರೂಪ ನೀಡಲು ನಮ್ಮ ಸರ್ಕಾರ ಯೋಜನೆ ರೂಪಿಸಲಿದೆ ಎಂದು ತಿಳಿಸಿದರು.

ನಮ್ಮ ಹಬ್ಬಗಳು ಮತ್ತು ಪರಿಸರದ ನಡುವೆ ಬಲವಾದ ಬಂಧವಿದೆ. ನಮ್ಮ ಪರಿಸರದ ರಕ್ಷಣೆಗೆ ಸಂಬಂಧಿಸಿದ ಅನೇಕ ಹಬ್ಬಗಳು ನಮ್ಮಲ್ಲಿವೆ. ಓಣಂ ಹಬ್ಬವನ್ನು ಸಹ ಸಂತೋಷದಿಂದ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತದೆ. ಈ ಹಬ್ಬವು ಚಿಂಗಂ ತಿಂಗಳಲ್ಲಿ ಬರುತ್ತದೆ. ಈ ಅವಧಿಯಲ್ಲಿ, ಜನರು ಹೊಸದನ್ನು ಖರೀದಿಸುತ್ತಾರೆ. ಮನೆಗಳನ್ನು ಅಲಂಕರಿಸುತ್ತಾರೆ, ಪೂಕಲಂ ತಯಾರಿಸುತ್ತಾರೆ, ಓಣಂ-ಸಾದಿಯಾವನ್ನು ಆನಂದಿಸುತ್ತಾರೆ. ವೈವಿಧ್ಯಮಯ ಆಟಗಳು, ಸ್ಪರ್ಧೆಗಳು ಸಹ ನಡೆಯುತ್ತವೆ. ಇದು ಹಬ್ಬಗಳ ಸಮಯ. ಆದರೆ ಅದೇ ಸಮಯದಲ್ಲಿ ಕೊರೊನಾ ಪರಿಸ್ಥಿತಿಯಿಂದಾಗಿ ಜನರಲ್ಲಿ ಶಿಸ್ತಿನ ಪ್ರಜ್ಞೆಯೂ ಇದೆ ಎಂದು ಮೋದಿ ಹೇಳಿದರು.

ಈ ತಿಂಗಳ ಆರಂಭದಲ್ಲಿ ಅಪ್ಲಿಕೇಶನ್ ಸಂಶೋಧನಾ ಸವಾಲನ್ನು ದೇಶದ ಯುವಕರ ಮುಂದೆ ಇಡಲಾಗಿತ್ತು. ಆತ್ಮನಿರ್ಭರ್ ಭಾರತ್ ಆ್ಯಪ್ ಇನ್ನೋವೇಶನ್ ಚಾಲೆಂಜ್‍ನ ಅಡಿಯಲ್ಲಿ kutuki kids ಹೆಸರಿನ ಕಲಿಕಾ ಆಪ್ಯ ಒಂದು ಸಿದ್ಧವಾಗಿದೆ. ಇದರ ಮೂಲಕ ಗಣಿತ, ವಿಜ್ಞಾನದ ಅನೇಕ ವಿಷಯಗಳನ್ನು ಹಾಡು ಮತ್ತು ಕತೆಗಳ ಮೂಲಕ ಮಕ್ಕಳು ಸುಲಭವಾಗಿ ಕಲಿಯಬಹುದು ಎಂದು ತಿಳಿಸಿದರು.

ನಾವು ದೇಶದಲ್ಲಿ ತಯಾರಾದ ಹಲವು ವಿಭಿನ್ನ ಅಪ್ಲಿಕೇಶನ್‍ಗಳನ್ನು ಹೊಂದಿದ್ದೇವೆ. ಮತ್ತೊಂದು ಆ್ಯಪ್ ಇದೆ. ಅದರ ಹೆಸರು ಸ್ಟಪ್ ಸೆಟ್ ಗೋ. ಇದೊಂದು ಫಿಟ್‍ನೆಸ್ ಆ್ಯಪ್ ಆಗಿದ್ದು, ನೀವು ಎಷ್ಟು ದೂರ ಹೋಗಿದ್ದೀರಿ ಮತ್ತು ಎಷ್ಟು ಕ್ಯಾಲರಿ ಬರ್ನ್ ಮಾಡಿದ್ದೀರಿ ಎಂಬ ಮಾಹಿತಿಯನ್ನು ನೀಡುತ್ತದೆ. ಈ ಮೂಲಕ ನೀವು ಫಿಟ್ ಆಗಿರಲು ಉತ್ಸಾಹ ತುಂಬುತ್ತದೆ. ಅದೇ ರೀತಿ ಭಾರತೀಯರಲ್ಲಿ ‘ಚಿಂಗಾರಿ ಆ್ಯಪ್’ ಪ್ರಖ್ಯಾತವಾಗಿದೆ ಎಂದರು.

ಕೋವಿಡ್ 19 ಸಮಯದಲ್ಲಿ ನಮ್ಮ ರೈತರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಇನ್ನೂ ರಾಷ್ಟ್ರದ ಭದ್ರತಾ ಕಾರ್ಯಾಚರಣೆಯಲ್ಲಿ ಶ್ವಾನಗಳ ಪಾತ್ರವನ್ನು ಪ್ರಮುಖವಾಗಿದೆ ಎಂದು ಶ್ಲಾಘಿಸಿದರು.

Share This Article
Leave a Comment

Leave a Reply

Your email address will not be published. Required fields are marked *