ಸಿದ್ದಗಂಗಾ ಮಠಕ್ಕೆ ಸುದೀಪ್ ಭೇಟಿ – ಕಿಚ್ಚನಿಗೆ ಇಂದ್ರಜಿತ್ ಸಾಥ್

Public TV
1 Min Read
TMK 4

ತುಮಕೂರು: ಬುಧವಾರ ಸ್ಯಾಂಡಲ್‍ವುಡ್‍ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟಿದ್ದಾರೆ.

ನಟ ಸುದೀಪ್ ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಗೆ ಹೋಗಿ ದರ್ಶನ ಪಡೆದುಕೊಂಡಿದ್ದಾರೆ. ನಾಳೆ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಸುದೀಪ್ ನಿರ್ಧಾರ ಮಾಡಿದ್ದಾರೆ. ಆದ್ದರಿಂದ ಸಾಂಕೇತಿಕವಾಗಿ ಮಠಕ್ಕೆ ಭೇಟಿ ಕೊಟ್ಟು ಗದ್ದುಗೆ ದರ್ಶನ ಪಡೆದಿದ್ದಾರೆ. ಇದೇ ವೇಲೆ ಸುದೀಪ್ ಅವರಿಗೆ ನಿರ್ದೇಶಕ ಇಂದ್ರಜೀತ್ ಲಂಕೇಶ್ ಭೇಟಿ ಕೊಟ್ಟಿದ್ದಾರೆ.

TMK

ಗದ್ದುಗೆಗೆ ಪೂಜೆ, ಕುಂಕುಮಾರ್ಚನೆ ಮಾಡಿ ದರ್ಶನ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅರ್ಚಕರು ಶಿವಕುಮಾರ ಶ್ರೀಗಳ ಭಾವಚಿತ್ರವನ್ನು ಸುದೀಪ್ ಅವರಿಗೆ ಕಾಣಿಕೆಯಾಗಿ ಕೊಟ್ಟಿದ್ದಾರೆ. ಈಗಾಗಲೇ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವುದಿಲ್ಲ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಸ್ನೇಹಿತರಾದ ನಿಮಗೆಲ್ಲ ಒಂದು ಸಣ್ಣ ಮನವಿ: ಕಿಚ್ಚ ಸುದೀಪ್

TMK 3

ಈ ವರ್ಷ ಸದ್ಯದ ಪರಿಸ್ಥಿತಿ ಸರಿಯಿಲ್ಲ. ಈ ಬಾರಿಯ ಹುಟ್ಟುಹಬ್ಬವನ್ನು ನಿಮ್ಮ ಜೊತೆ ಆಚರಣೆ ಮಾಡುತ್ತಿಲ್ಲ ಎಂದು ಹೇಳಲು ನಾನು ವಿಷಾದಿಸುತ್ತೇನೆ. ನಾನು ನಿಮ್ಮೆಲ್ಲರ ಹಾಗೂ ನನ್ನ ಪೋಷಕರ ಆರೋಗ್ಯವನ್ನು ಗಮನದಲ್ಲಿಟ್ಟುಕೊಳ್ಳಬೇಕಾಗುತ್ತೆ. ಕೋವಿಡ್ ಇನ್ನು ದೊಡ್ಡ ಬೆದರಿಕೆಯಾಗಿಯೇ ಇದೆ. ನಾವೆಲ್ಲರೂ ಕುಟುಂಬಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ನಿಮ್ಮ ಕುಟುಂಬದವರು ನಮ್ಮ ಕುಟುಂಬದವರು ಇದ್ದಂತೆ. ಅವರು ರೋಗಕ್ಕೆ ತುತ್ತಾಗಿ ಕಷ್ಟಪಟ್ಟರೆ, ನರಳುವ ಸುದ್ದಿ ಕೇಳಿದರೆ ನಿಮ್ಮಷ್ಟೇ ನನಗೂ ನೋವಾಗುತ್ತದೆ ಎಂದು ಹೇಳಿದ್ದರು.

TMK 2

ನಿಮ್ಮ ಶುಭಾಶಯಗಳು ನನಗೆ ಮುಖ್ಯವಾದದ್ದೇ ಹಾಗೂ ನಾನು ಹೇಳಿದಂತೆ ಬೃಹತ್ ಸಂಖ್ಯೆಯಲ್ಲಿ ಬರುವ ನಿಮ್ಮನ್ನು ಕಾಣುವ ಸಂತೋಷವನ್ನು ಬೇರೆ ಯಾವುದೂ ನನಗೆ ನೀಡುವುದಿಲ್ಲ. ನಾನು ಖಚಿತವಾಗಿ ಹೇಳುತ್ತೇನೆ ಬಹಳ ಬೇಗ ಆ ದಿನವೂ ಬರುತ್ತದೆ ಹಾಗೂ ನಾವು ಮತ್ತೆ ಭೇಟಿಯಾಗುತ್ತೇವೆ. ಆದರೆ ಸದ್ಯಕ್ಕೆ ನಿಮ್ಮಲ್ಲಿ ಕೋರುವುದೇನೆಂದರೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಎಲ್ಲೂ ಹುಟ್ಟುಹಬ್ಬ ಆಚರಿಸಬೇಡಿ. ಯಾವುದೇ ಸಂಭ್ರಮಾಚರಣೆ ಹಾಗೂ ಕಾರ್ಯಕ್ರಮಗಳು ಬೇಡ. ಸಾಧ್ಯವಾದರೆ ನಿಮ್ಮ ಸುತ್ತಮುತ್ತಲಿನ ಪ್ರದೇಶದ ಕೆಲವರಿಗೆ ಯಾವುದಾದರೂ ರೀತಿಯಲ್ಲಿ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದರು.

TMK 1

Share This Article
Leave a Comment

Leave a Reply

Your email address will not be published. Required fields are marked *