ಮಹಿಳೆಯ ಪ್ರಚೋದನೆ – ನಿವೃತ್ತ ಸೈನಿಕನಿಂದ ಯುವಕನ ಕೊಲೆ

Public TV
1 Min Read
HBL 1

ಹುಬ್ಬಳ್ಳಿ: ನಿವೃತ್ತ ಸೈನಿಕನೊಬ್ಬ ಮಹಿಳೆಯ ಪ್ರಚೋದನೆಯಿಂದ ಯುವಕನ ಕೊಲೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ.

ತಿಪ್ಪೆ ಹಾಕುವ ವಿಚಾರದಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.

Police Jeep 1

ಕಲಘಟಗಿ ತಾಲೂಕಿನ ಕಲಕುಂಡಿ ಗ್ರಾಮದ ಜಗದೀಶ್ ಹನಮಂತಪ್ಪ ತಾಂಬೆ ಎಂಬ ಯುವಕನನ್ನ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ದೇವಿಕೊಪ್ಪ ಗ್ರಾಮದ ನಿವೃತ್ತ ಸೈನಿಕ ಗಂಗಾಧರ ನಿಂಗಪ್ಪ ನೂಲ್ವಿ ಹಾಗೂ ಶಾರದಾ ಪಾಟೀಲ್ ಸೇರಿಕೊಂಡು ಯುವಕನ ಕೊಲೆ ಮಾಡಿದ್ದಾರೆ.

ಕೊಲೆಯಾದ ಜಗದೀಶ್ ಸಹೋದರ ದೊಂಡಿಬಾ ತಾಂಬೆಯ ಮೇಲಿನ ಸಿಟ್ಟಿಗೆ ಗೌಂಡಿ ಕೆಲಸ ಮಾಡುತ್ತಿದ್ದ ಜಗದೀಶ್‍ನನ್ನ ಕೊಲೆ ಮಾಡಿದ್ದಾರೆ. ಈ ಕೊಲೆಗೆ ಶಾರದಾ ಪಾಟೀಲ್ ಎಂಬ ಮಹಿಳೆಯ ಪ್ರಚೋದನೆಯ ಕಾರಣ ಎಂದು ದೂರಿನಲ್ಲಿ ಹೇಳಲಾಗಿದೆ.

police 1 e1585506284178 2 medium

ಕಳೆದ ವರ್ಷವಷ್ಟೇ ಸೇನೆಯಿಂದ ನಿವೃತ್ತಿಯಾಗಿದ್ದ ಗಂಗಾಧರ ಹಾಗೂ ಶಾರದಾ ಪಾಟೀಲ್‍ರನ್ನ ಕಲಘಟಗಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *