ಚಿಕ್ಕಬಳ್ಳಾಪುರ: ಬೈಕ್- ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಚಿಂತಾಮಣಿ ತಾಲೂಕಿನ ಟಿ.ಹೊಸಹಳ್ಳಿ ಗೇಟ್ ಬಳಿ ಘಟನೆ ನಡೆದಿದ್ದು, ಕಾರ್ತಿಕ್ (18), ಪವನ್ (20) ಮೃತ ಬೈಕ್ ಸವಾರರು. ಘಟನೆ ನಡೆಯುತ್ತಿದ್ದಂತೆ ಟ್ರ್ಯಾಕ್ಟರ್ ಸಮೇತ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತರು ಬಾಗೇಪಲ್ಲಿ ಮೂಲದ ಗಡ್ಡಂಪಲ್ಲಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೈಕ್ ಸವಾರರು ಬಾಗೇಪಲ್ಲಿಯಿಂದ ಚಿಂತಾಮಣಿಗೆ ಹೊರಟಿದ್ದರು. ಟ್ರ್ಯಾಕ್ಟರ್ ಚಿಂತಾಮಣಿಯಿಂದ ಬಾಗೇಪಲ್ಲಿಗೆ ಹೊರಟಿತ್ತು. ವೇಗವಾಗಿ ಬಂದ ಬೈಕ್ ಸವಾರರು ಟ್ರ್ಯಾಕ್ಟರ್ ಗೆ ಗುದ್ದಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.