ಮೈಸೂರು: ವಾಚ್ಮ್ಯಾನ್ ಆಗುತ್ತೇನೆ ಎಂದು ಆಗಲಿಲ್ಲ. ಇನ್ನೂ ಆಸ್ತಿ ಬರ್ದು ಕೊಡುತ್ತೀರಾ ಎಂದು ಬಿಜೆಪಿ ಶಾಸಕ ರಾಮದಾಸ್ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರನ್ನು ಕುಟುಕಿದ್ದಾರೆ.
ಸದ್ಯ ರಾಜ್ಯದಲ್ಲಿ ಬೀರುಗಾಳಿಯಂತೆ ಬೀಸುತ್ತಿರುವ ಡ್ರಗ್ ಪ್ರಕರಣದಲ್ಲಿ ಜಮೀರ್ ಅವರು ಕೊಲಂಬೋಗೆ ಹೋಗಿ ಬಂದಿದ್ದಾರೆ ಎಂಬ ಆರೋಪ ಬಂದಿದೆ. ಈ ವಿಚಾರವಾಗಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಜಮೀರ್ ಅವರು, ನನ್ನ ಮೇಲೆ ಕೇಳಿ ಬಂದಿರುವ ಆರೋಪ ಸಾಬೀತಾದರೆ ನಾನು ನನ್ನೆಲ್ಲ ಆಸ್ತಿಯನ್ನು ಸರ್ಕಾರಕ್ಕೆ ಬರೆದು ಕೊಡುತ್ತೇನೆ ಎಂದು ಹೇಳಿದ್ದರು.
@BSYBJP ನವರು ಮುಖ್ಯಮಂತ್ರಿ ಆದರೆ ಅವರ ಮನೆ ಮುಂದೆ ನಾನು ವಾಚ್ ಮ್ಯಾನ್ ಆಗುತ್ತೇನೆ ಎಂದು ಹೇಳಿ ವರ್ಷಗಳು ಉರುಳಿದವು, ಇನ್ನೂ ಅದರ ಕುರುಹು ಕಾಣುತ್ತಿಲ್ಲ.!
ಇನ್ನು ಸಂಜನಾ ಜೊತೆ ಕೊಲಂಬೋ ಹೋಗಿದ್ದು ಸಾಬೀತಾದರೆ ನೀವು ನಿಜಕ್ಕೂ ಆಸ್ತಿ ಬರೆದುಕೊಡುತ್ತೀರೆ ಜಮೀರ್.?@BJP4Karnataka @BJPKarSMITCell pic.twitter.com/VGLnDK5slT
— S A Ramadass (@ramadassmysuru) September 11, 2020
ಈ ಹೇಳಿಕೆಗೆ ಟಾಂಗ್ ನೀಡಿ ಟ್ವೀಟ್ ಮಾಡಿರುವ ರಾಮದಾಸ್, ಯಡಿಯೂರಪ್ಪನವರು ಮುಖ್ಯಮಂತ್ರಿ ಆದರೆ ಅವರ ಮನೆ ಮುಂದೆ ನಾನು ವಾಚ್ಮ್ಯಾನ್ ಆಗುತ್ತೇನೆ ಎಂದು ಹೇಳಿ ವರ್ಷಗಳು ಉರುಳಿದವು. ಇನ್ನೂ ಅದರ ಕುರುಹು ಕಾಣುತ್ತಿಲ್ಲ. ಇನ್ನು ಸಂಜನಾ ಜೊತೆ ಕೊಲಂಬೋ ಹೋಗಿದ್ದು ಸಾಬೀತಾದರೆ ನೀವು ನಿಜಕ್ಕೂ ಆಸ್ತಿ ಬರೆದುಕೊಡುತ್ತೀರೆ ಜಮೀರ್ ಎಂದು ವ್ಯಂಗ್ಯವಾಗಿ ಪ್ರಶ್ನೆ ಮಾಡಿದ್ದಾರೆ. ಇದನ್ನು ಓದಿ: ಹಿಂದೆ ಹೇಳಿದ್ದ 3 ಸ್ಫೋಟಕ ಒಗಟುಗಳಲ್ಲಿ ಮೂರು ಸತ್ಯವಾಗಿದೆ – ಪ್ರಶಾಂತ್ ಸಂಬರಗಿ
ಕಳೆದ ವಿಧಾನಸಭೆ ಚುನವಾಣೆ ವೇಳೆ ಬಿಜೆಪಿ ಪಕ್ಷ ಗೆದ್ದು ಯಡಿಯೂರಪ್ಪನವರು ಮುಖ್ಯಮಂತ್ರಿಯಾದರೆ, ನಾನು ಒಂದು ದಿನ ವಾಚ್ಮ್ಯಾನ್ ಡ್ರೆಸ್ ಹಾಕಿಕೊಂಡು ಅವರ ಮನೆಯ ಬಳಿ ವಾಚ್ಮ್ಯಾನ್ ಕೆಲಸ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಯಡಿಯೂರಪ್ಪ ಸಿಎಂ ಅದರೂ ಕೂಡ ಜಮೀರ್ ಹೇಳಿದಂತೆ ನಡೆಯಲಿಲ್ಲ. ಈ ಅಂಶವನ್ನು ಇಟ್ಟುಕೊಂಡು ರಾಮದಾಸ್ ಈ ರೀತಿ ಟ್ವೀಟ್ ಮಾಡಿದ್ದಾರೆ.