ಬೆಂಗಳೂರು: ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಒಂದು ವರ್ಷದ ಬಳಿಕ ಹೊಸ ಕಾರಿನ ಭಾಗ್ಯ ಸಿಕ್ಕಿದೆ. ಇದನ್ನೂ ಓದಿ: ಕ್ಯಾಸಿನೋಗೆ ಹೋದ್ರು ಅನ್ನೋದು ತಪ್ಪಲ್ಲ: ಜಮೀರ್ ನಡೆ ಸಮರ್ಥಿಸಿಕೊಂಡ ಸಿದ್ದರಾಮಯ್ಯ
ವಿಪಕ್ಷ ನಾಯಕ ಆದ ಬಳಿ ಸರ್ಕಾರ ಅವರಿಗೆ ಹೊಸ ಕಾರು ನೀಡಬೇಕು. ಕಳೆದ ವರ್ಷ ಕಾಂಗ್ರೆಸ್ ಹೈಕಮಾಂಡ್ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನಸಭಾ ವಿಪಕ್ಷ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ಸಿದ್ದರಾಮಯ್ಯ ಕೂಡ ತಾವು ವಿಪಕ್ಷ ನಾಯಕ ಆದ ತಕ್ಷಣ ಕಾರು ಕೊಡುವಂತೆ ಮನವಿ ಮಾಡಿಕೊಂಡಿದ್ದರು.
ಒಂದು ವರ್ಷ ಆದರೂ ಸಿದ್ದರಾಮಯ್ಯ ಅವರಿಗೆ ಸರ್ಕಾರ ಕಾರು ನೀಡಿರಲಿಲ್ಲ. ಇದೀಗ ಸಿದ್ದರಾಮಯ್ಯ ಅವರ ಮನವಿ ಸ್ಪಂದಿಸಿದ ಸ್ಪೀಕರ್ ಅವರಿಗೆ ಕಾರು ನೀಡಲು ಸೂಚನೆ ನೀಡಿದ್ದರು. ಅದರಂತೆಯೇ ಒಂದು ವರ್ಷದ ನಂತರ ಸರ್ಕಾರ ಸಿದ್ದರಾಮಯ್ಯ ಅವರಿಗೆ ಟೊಯೋಟಾ ಕಂಪನಿಯ ಫಾರ್ಚ್ಯೂನರ್ ಕಾರನ್ನು ನೀಡಿದೆ.
ಇತ್ತೀಚೆಗೆ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಶಾಸಕ ಜಮೀರ್ ಕೊಲಂಬೋಗೆ ಹೋಗಿದ್ದ ಬಗ್ಗೆ ಚರ್ಚೆಗಳು ನಡೆಯುತ್ತಿದ್ದಾವೆ. ಇದೀಗ ಸಿದ್ದರಾಮಯ್ಯ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ, ಶಾಸಕ ಜಮೀರ್ ಅಹ್ಮದ್ ಕ್ಯಾಸಿನೋಗೆ ಹೋಗಿರುವದನ್ನ ಒಪ್ಪಿಕೊಂಡಿದ್ದಾರೆ. ಈ ವಿಷಯದ ಕುರಿತು ನಾನು ಹೆಚ್ಚು ಮಾತನಾಡಲ್ಲ. ಬೇಕಿದ್ರೆ ಅವರನ್ನೇ ನೀವು ಕೇಳಬೇಕು. ನಾನು ವಿದೇಶಕ್ಕೆ ಹೋದಾಗ ಕ್ಯಾಸಿನೋ ಆಡುವ ಜಾಗವನ್ನ ನೋಡಿದ್ದೇನೆ. ಆದ್ರೆ ಅಲ್ಲಿ ಆಡಿಲ್ಲ. ಜಮೀರ್ ಕೊಲಂಬೋಗೆ ಹೋಗಿದ್ದು ಅಪರಾಧವಲ್ಲ ಎಂದು ಹೇಳಿದ್ದಾರೆ.
ಡ್ರಗ್ಸ್ ಬಹಳ ವರ್ಷದಿಂದಲೇ ಇದೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದರೆ ನಿಷ್ಪಕ್ಷಪಾತವಾಗಿ ಆಗಲಿ. ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಈ ಪ್ರಕರಣ ಬಳಸಿಕೊಳ್ಳಬಾರದು. ಪ್ರಕರಣದ ತನಿಖೆಯನ್ನ ರಾಜಕೀಯ ದುರುದ್ದೇಶದಿಂದ ನಡೆಸಬಾರದು. ಜಮೀರ್ ಡ್ರಗ್ಸ್ ದಂಧೆಯಲ್ಲಿದ್ದರಾ? ಅದು ಗೊತ್ತಿಲ್ಲ. ಇನ್ನು ಜಮೀರ್ ಡ್ರಗ್ಸ್ ಜಾಲದಲ್ಲಿದ್ದಾರೆ ಎಂದು ಪ್ರಶಾಂತ್ ಸಂಬರಗಿ ಆರೋಪಿಸುತ್ತಾರೆ. ಫಾಝಿಲ್ ಎಂಬಾತ ಡ್ರಗ್ಸ್ ದಂಧೆಯಲ್ಲಿದ್ದಾನೆ ಎಂದು ಹೇಳಲಾಗುತ್ತಿದ್ದು, ಆತನ ವಿರುದ್ಧ ಕ್ರಮಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.