– ಇನ್ಸ್ ಪೆಕ್ಟರ್ ವರ್ಗಾವಣೆ ಹಿಂದಿರೋದು ಬೇರೆ ಕಾರಣ
ಮಂಗಳೂರು: ಡ್ರಗ್ಸ್ ಪ್ರಕರಣ ಚೈನ್ ಲಿಂಕ್ ದೊಡ್ಡದಿದೆ. ಇನ್ಸ್ ಪೆಕ್ಟರ್ ವರ್ಗಾವಣೆ ಹಿಂದೆ ಇರೋದು ಬೇರೆ ಕಾರಣ ಎಂದು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ವರ್ಗಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವರ್ಗಾವಣೆ ಹಿಂದೆ ಬೇರೆನೇ ಕಾರಣ ಇದೆ. ಈಗ ಪ್ರಚಾರವಾಗುತ್ತಿರುವ ವಿಷಯ ಸತ್ಯಕ್ಕೆ ದೂರ. ಬಹಳ ವಿಚಾರ ನಮಗೇನೇ ಗೊತ್ತಾಗಲ್ಲ. ಮಾಧ್ಯಮಗಳಲ್ಲಿ ಬಂದ ವಿಚಾರವನ್ನು ನಾವೇ ತನಿಖೆ ಮಾಡಬೇಕಾಗುತ್ತದೆ. ಯಾವ ಅಧಿಕಾರಿಗಳ ಮೇಲೂ ಒತ್ತಡ ಹೇರಲಾಗಿಲ್ಲ ಎಂದಿದ್ದಾರೆ.
ಪ್ರಕರಣದಲ್ಲಿ ಚೈನ್ ಲಿಂಕ್ ದೊಡ್ಡದಿದೆ. ಈ ಚೈನ್ ಲಿಂಕ್ ಎಲ್ಲಿ ಕೊನೆಯಾಗುತ್ತೋ ಅಲ್ಲಿ ತನಕ ವಿಚಾರಣೆ ಮಾಡುತ್ತೇವೆ. ಡ್ರಗ್ಸ್ ಪ್ರಕರಣದಲ್ಲಿ ಒಟ್ಟು 6 ಮಂದಿ ಆರೋಪಿಗಳ ಬಂಧನವಾಗಿದೆ. ಪ್ರಕರಣದ ಬಗ್ಗೆ ಪ್ರತಿನಿತ್ಯ ತನಿಖೆ ಮಾಡಲಾಗುತ್ತಿದೆ. ಮಾಹಿತಿ ಬೇಕಾದಲ್ಲಿ ನೋಟಿಸ್ ಮಾಡುತ್ತೇವೆ. ನೋಟಿಸ್ ಕೊಟ್ಟು ಪ್ರಕರಣದ ವಿಚಾರಣೆಯನ್ನು ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ನಟಿಯರನ್ನು ಬಿಟ್ಟು ಬೇರೆ ಯಾರೂ ಡ್ರಗ್ಸ್ ತಗೊಂಡಿಲ್ವಾ – ಡಿಕೆಶಿ ಪ್ರಶ್ನೆ
ಪ್ರಕರಣ ಸಂಬಂಧ ಮಂಗಳೂರಿನಲ್ಲಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರು ಮೊದಲು ಡಾನ್ಸರ್ ಕಿಶೋರ್ ಶೆಟ್ಟಿಯನ್ನು ಬಂಧಿಸಿದ್ದರು. ಈ ವೇಳೆ ಕಿಶೋರ್ ಶೆಟ್ಟಿಯನ್ನು ಬಿಡುಗಡೆ ಮಾಡುವಂತೆ ಶಾಸಕರು ಒತ್ತಡ ಹಾಕಿದ್ದರು. ಕಿಶೋರ್ ಶೆಟ್ಟಿಯನ್ನು ಪ್ರಕರಣದಿಂದ ಕೈ ಬಿಡುವಂತೆ ಒತ್ತಾಯ ಹೇರಿದ್ದರು. ಆದರೆ ಶಾಸಕನ ಒತ್ತಾಯಕ್ಕೆ ಶಿವಪ್ರಕಾಶ್ ಮಣಿದಿರಲಿಲ್ಲ. ಹೀಗಾಗಿ ಇದೀಗ ಶಿವಪ್ರಕಾಶ್ ನೇತೃತ್ವದಲ್ಲೇ ನಡೆಯುತ್ತಿದ್ದ ಕಂಪ್ಲೀಟ್ ಡ್ರಗ್ಸ್ ಪ್ರಕರಣ ತನಿಖಾ ಉತ್ತುಂಗದಲ್ಲಿದ್ದಾಗ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಇದನ್ನೂ ಓದಿ: ಅನುಶ್ರೀ ವಿಚಾರಣೆ ನಡೆಸಿದ್ದ ಇನ್ಸ್ಪೆಕ್ಟರ್ ವರ್ಗಾವಣೆ – ಸ್ಥಳೀಯ ಶಾಸಕರ ಪ್ರಭಾವದ ಶಂಕೆ
ಅನುಶ್ರೀ ಬಚಾವ್ ಮಾಡಲು ದೆಹಲಿಯಿಂದಲೂ ಪ್ರಭಾವ ಬೀರಲಾಗುತ್ತಿದೆ. ದೆಹಲಿಯಲ್ಲಿರುವ ಪ್ರಭಾವಿ ನಾಯಕರು ಕೂಡ ಪ್ರಕರಣದಿಂದ ಅನುಶ್ರೀಯನ್ನು ಕೈಬಿಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಅನುಶ್ರೀ ದೂರವಾಣಿ ಕರೆಗಳ ಸಾಕ್ಷ್ಯ ಕೆದಕಿರುವ ಸಿಸಿಬಿಗೆ ಅಚ್ಚರಿಯಾಗಿದೆ. 6 ಸಿಮ್ ಬಳಸ್ತಿದ್ದ ಅನುಶ್ರೀ, ಸಿಸಿಬಿ ನೋಟಿಸ್ ಬೆನ್ನಲ್ಲೇ ನಾಲ್ವರು ಪ್ರಭಾವಿಗಳಿಗೆ ಫೋನ್ ಮಾಡಿದ್ದಾರೆ. ಮಾಜಿ ಸಿಎಂ, ಮಾಜಿ ಸಿಎಂ ಮಗ ಹಾಗೂ ಕರಾವಳಿ ಭಾಗದ ಪ್ರಭಾವಿ ರಾಜಕಾರಣಿಗೂ ಕರೆ ಮಾಡಿದ್ದರು. 3 ಪಕ್ಷಗಳ ಮೂವರು ನಾಯಕರಿಗೆ ಕಾಲ್ ಮಾಡಿದ್ದರು ಎಂದು ದೂರವಾಣಿ ಕರೆ ದಾಖಲೆ ಪರಿಶೀಲನೆ ವೇಳೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.