Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕುಮಾರಸ್ವಾಮಿ ಶಿರಾಕ್ಕೆ ಬಂದು ವಿಷ ಕೊಡಿಯೆಂದು ಅಳ್ತಾ ಇದ್ನಪ್ಪ: ಸಿದ್ದರಾಮಯ್ಯ ವ್ಯಂಗ್ಯ

Public TV
Last updated: October 4, 2020 2:03 pm
Public TV
Share
3 Min Read
siddu hdk
SHARE

– ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಸಿ ಎಚ್ಚರಿಕೆಯ ಘಂಟೆ ಭಾರಿಸ್ಬೇಕು
– ಜೆಡಿಎಸ್ ನನ್ನ ಪ್ರಕಾರ ಪಕ್ಷವೇ ಅಲ್ಲ

ಬೆಂಗಳೂರು: ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಬಳಿಕ ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ. ಜೊತೆಗೆ ಬೈ ಎಲೆಕ್ಷನ್ ಜಯಗಳಿಸಲು ಮೂರು ಪಕ್ಷಗಳು ತಮ್ಮದೇ ಆದ ಪ್ಲಾನ್ ಮಾಡಿಕೊಂಡು ಕಣಕ್ಕಿಳಿಯುತ್ತಿವೆ.

ಉಪಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಪಕ್ಷದ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು. ಜೊತೆಗೆ ಈ ಸಭೆಯಲ್ಲಿ ಶಿರಾ ಕ್ಷೇತ್ರದ ನೂರಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಡಳಿತ ಪಕ್ಷ ಮತ್ತು ಜೆಡಿಎಸ್ ಪಕ್ಷದ ಮೇಲೆ ಕಿಡಿಕಾರಿದರು.

siddu dkshi

ಮೊನ್ನೆ ಯಾಕೋ ಕುಮಾರಸ್ವಾಮಿ ಶಿರಾಗೆ ಬಂದು ಅಳ್ತಾ ಇದ್ನಪ್ಪ. ವಿಷ ಕೊಡಿ ಮತ್ತೊಂದು ಕೊಡಿ ಅಂತಿದ್ದ. ಇದೇನು ಹೊಸತಲ್ಲ ದೇವೇಗೌಡರ ಕಾಲದಿಂದಲೂ ಹೀಗೆ ನಡೆದುಕೊಂಡು ಬಂದಿದೆ. ಕಮಾರಸ್ವಾಮಿ ಅದನ್ನು ಮುಂದುವರಿಸಿದ್ದಾರೆ ಅಷ್ಟೇ. ನನ್ನ ಪ್ರಕಾರ ಜೆಡಿಎಸ್ ಒಂದು ಪಕ್ಷವೇ ಅಲ್ಲ. ರಾಜಕೀಯದಲ್ಲಿ ಜನ ಸೇವೆ ಮಾಡಬೇಕು. ಅದನ್ನು ಬಿಟ್ಟು ವಿಷ ಕೊಡಿ ಎಂಬುದು ರಾಜಕಾರಣನಾ? ಜನರೇ ಆಶೀರ್ವಾದ ಮಾಡಬೇಕು. ನಾವೇ ಕೇಳಿಕೊಳ್ಳಬಾರದು ಎಂದು ಹೆಚ್‍ಡಿಕೆಗೆ ಸಿದ್ದು ಟಾಂಗ್ ನೀಡಿದರು.

hdk 1

ಇದೇ ವೇಳೆ ಆಡಳಿತ ಪಕ್ಷದ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲ. ಒಂದೂ ರೂಪಾಯಿ ಸಹಾ ಅಭಿವೃದ್ಧಿಗೆ ನೀಡುತ್ತಿಲ್ಲ. ಜನ ಸರ್ಕಾರಕ್ಕೆ ಎಚ್ಚರಿಕೆಯ ಘಂಟೆ ಹೊಡಿಬೇಕು. ಹಾಗೆ ಘಂಟೆ ಹೊಡಿಬೇಕಾದರೆ ಜನ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು. ಈ ಹಿಂದೆ ನಮ್ಮ ಶಾಸಕರನ್ನ 20-25 ಕೋಟಿ ಕೊಟ್ಟು ಖರೀದಿ ಮಾಡಿ ಸರ್ಕಾರ ರಚನೆ ಮಾಡಿದರು ಎಂದು ದೂರಿದರು.

CM BSY 1 1

ಇದು 10% ಕಮಿಷನ್ ಸರ್ಕಾರ. ನಾನು ಹೆಸರು ಹೇಳಲ್ಲ ಇದೇ ಸರ್ಕಾರದ ಒಬ್ಬ ಸಚಿವ ಹೇಳುತ್ತಾನೆ ಸರ್ ಗುತ್ತಿಗೆ ಕಾಮಗಾರಿ ಸ್ಯಾಂಕ್ಷನ್ ಆಗಬೇಕು ಅಂದ್ರೆ 10% ಕಮಿಷನ್ ಕೊಡಲೇಬೇಕು. ನಮ್ಮ ಕ್ಷೇತ್ರದ ಗುತ್ತಿಗೆದಾರ ಒಬ್ಬ 10 ಲಕ್ಷ ಕೊಟ್ಟು ಕೆಲಸ ಮಾಡಿಕೊಂಡು ಬಂದಿದ್ದಾನೆ ಎಂದು ಸಚಿವನೇ ಹೇಳುತ್ತಾನೆ. ಸಚಿವನಿಗೆ ಹೀಗಾದ್ರೆ ಶಾಸಕರ ಪರಿಸ್ಥಿತಿ ಏನು? ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಕಳೆದ ಒಂದು ವರ್ಷದಲ್ಲಿ ವಿಪರೀತ ಸಾಲ ಮಾಡಿದ್ದಾರೆ. ಹೀಗಾಗಿ ರಾಜ್ಯ ಮತ್ತು ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ ಎಂದು ಸಿದ್ದರಾಮಯ್ಯ ತಿಳಿಸಿದರು.

Congress JDS BJP 1

ಜೆಡಿಎಸ್ ಅವರು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಇರಬೇಕು. ಆ ಗಿರಾಕಿಗಳು ಯಾವಾಗ ಬೇಕಿದ್ದರೂ ಮೈತ್ರಿ ಮಾಡಿಕೊಳ್ಳುತ್ತಾರೆ. ನಮ್ಮಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳು ಇದ್ದವು. ಈ ಹಿಂದೆ ತುಮಕೂರಿನಲ್ಲಿ ಜಯಚಂದ್ರ, ಪರಮೇಶ್ವರ್ ಮತ್ತು ರಾಜಣ್ಣ ನಡುವೆ ಸಣ್ಣಪುಟ್ಟ ವ್ಯತ್ಯಾಸಗಳು ಇತ್ತು. ಇದೆಲ್ಲ ಬಗೆಹರಿಸಿಕೊಂಡು ಈಗ ಒಂದಾಗಿ ಚುನಾವಣೆ ಮಾಡುತ್ತಿದ್ದಾರೆ. ಹಾಗಾಗಿ ಈ ಬಾರಿ ಜಯಚಂದ್ರನನ್ನು ಗೆಲ್ಲಿಸಿ ಕಳಿಸಬೇಕು ಎಂದು ಜನರಲ್ಲಿ ಮನವಿ ಮಾಡಿದರು.

siddu 2

ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಒಂದೂವರೆ ವರ್ಷದಿಂದ ಶಾಸಕನಿಲ್ಲ. ಸಮ್ಮಿಶ್ರ ಸರ್ಕಾರ ಬೀಳಿಸಲು ಮುನಿರತ್ನ ಸಹ ಕಾರಣ. ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲೂ ಮುಖಂಡರು ಉತ್ಸಾಹ ತೋರುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ. ಜೆಡಿಎಸ್ ನವರು ಯಾವತ್ತು ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬರಲ್ಲ. ಅವರು ಬೇರೆಯವರ ಹೆಗಲ ಮೇಲೆ ಕುಳಿತು ಆಡಳಿತ ನಡೆಸುವವರು ಎಂದು ಸಿದ್ದರಾಮಯ್ಯ ಗುಡುಗಿದರು.

dkshi tb jayachandra

ಕಳೆದ ಬಾರಿ ಟಿಬಿ ಜಯಚಂದ್ರ ಒಳ್ಳೆಯ ಕೆಲಸ ಮಾಡಿದ್ದ ಆದರೂ ನೀವು ಆತನನ್ನು ಸೋಲಿದ್ರಿ. ನಾನು ಕೂಡ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತೆ. ಜೆಡಿಎಸ್‍ನವರು ಭಾವನಾತ್ಮಕವಾಗಿ ವೋಟ್ ಕೇಳುತ್ತಾರೆ. ಈ ಬಾರಿಯ ಚುನಾವಣೆಯಲ್ಲಿ ನಮಗೂ ಬಿಜೆಪಿಗೂ ನೇರಾ ಪೈಪೋಟಿ. ಜೆಡಿಎಸ್ ಈ ಬಾರಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ವ್ಯಂಗ್ಯವಾಡಿದರು.

TAGGED:bengalurubjpby electioncongressKumaraswamyPublic TVsiddaramaiahಉಪಚುನಾವಣೆಕಾಂಗ್ರೆಸ್ಕುಮಾರಸ್ವಾಮಿಪಬ್ಲಿಕ್ ಟಿವಿಬಿಜೆಪಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Is Dhanush Dating Mrunal Thakur
ಧನುಶ್ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?
Cinema Karnataka Latest
Actress Sumalatha condoles the death of Malayalam Actor Shanawas
ʼಕೇರಂ, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories

You Might Also Like

Nikki Haley
Latest

ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗೆ ಸಂಬಂಧವನ್ನ ಹದಗೆಡಿಸಬೇಡಿ – ಟ್ರಂಪ್‌ಗೆ ತಿವಿದ ನಿಕ್ಕಿ ಹ್ಯಾಲಿ

Public TV
By Public TV
23 minutes ago
Anekal Murder copy
Bengaluru Rural

ಮಹಿಳೆಯ ಬರ್ಬರ ಹತ್ಯೆ – ಕೊಲೆ ಬಳಿಕ ಆರೋಪಿಯೂ ನೇಣಿಗೆ ಶರಣು

Public TV
By Public TV
36 minutes ago
Ajit Doval
Latest

ಟ್ರಂಪ್‌ ಬೆದರಿಕೆಗೆ ಡೋಂಟ್‌ ಕೇರ್‌ – ಸಂಬಂಧ ಬಲಪಡಿಸಲು ರಷ್ಯಾಗೆ ಅಜಿತ್ ದೋವಲ್ ಭೇಟಿ

Public TV
By Public TV
49 minutes ago
Kalaburagi
Crime

ಕಲಬುರಗಿಯಲ್ಲಿ ಬಿಎಸ್ಸಿ ಪದವೀಧರೆ ನಾಪತ್ತೆ – ಲವ್ ಜಿಹಾದ್ ಆರೋಪ, ಕೇಸ್‌ ದಾಖಲು

Public TV
By Public TV
1 hour ago
Udupi Boat
Chikkamagaluru

Rain Alert | ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ – ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

Public TV
By Public TV
2 hours ago
koppal murder
Crime

ಕೊಪ್ಪಳ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್ – ಟ್ರಯಾಂಗಲ್ ಲವ್ ಸ್ಟೋರಿಗೆ ಹೆಣವಾದ್ನಾ?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?