Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 33 ರನ್ ಅಂತರದಲ್ಲಿ 5 ವಿಕೆಟ್ ಪತನ- ಆರ್‌ಸಿಬಿಗೆ ಹೀನಾಯ ಸೋಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 33 ರನ್ ಅಂತರದಲ್ಲಿ 5 ವಿಕೆಟ್ ಪತನ- ಆರ್‌ಸಿಬಿಗೆ ಹೀನಾಯ ಸೋಲು

Cricket

33 ರನ್ ಅಂತರದಲ್ಲಿ 5 ವಿಕೆಟ್ ಪತನ- ಆರ್‌ಸಿಬಿಗೆ ಹೀನಾಯ ಸೋಲು

Public TV
Last updated: October 5, 2020 11:46 pm
Public TV
Share
3 Min Read
IPL DC
SHARE

– ಮೊದಲ ಸ್ಥಾನಕ್ಕೆ ಏರಿದ ಡೆಲ್ಲಿ
– ಮೂರನೇ ಸ್ಥಾನದಲ್ಲಿ ಆರ್‌ಸಿಬಿ

ದುಬೈ: ಐಪಿಎಲ್ 2020ರ ಆವೃತ್ತಿಯಲ್ಲಿ ಬೆಂಗಳೂರು ವಿರುದ್ಧ 59 ರನ್ ಗಳ ಗೆಲುವು ಪಡೆದ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳೊಂದಿಗೆ ಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದೆ.

ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 197 ರನ್ ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್.ಸಿ.ಬಿ ತಂಡದ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಯಿತು. ಐಪಿಎಲ್‍ನಲ್ಲಿ ಟೂರ್ನಿಯ ಪಂದ್ಯದಲ್ಲಿ 190 ಪ್ಲಸ್ ರನ್ ಗಳಿಸಿದ ಯಾವುದೇ ಪಂದ್ಯವನ್ನು ಇದುವರೆಗೂ ಸೋಲದೇ ಡೆಲ್ಲಿ ತಂಡ ತನ್ನ ಸಾಧನೆಯನ್ನು ಮುಂದುವರಿಸಿತು.

DC 2

94 ರನ್‍ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ಆರ್‌ಸಿಬಿ ಯಾವುದೇ ಹೋರಾಟ ನಡೆಸದೇ 33 ರನ್ ಅಂತರದಲ್ಲಿ 5 ವಿಕೆಟ್ ಕಳೆದುಕೊಂಡಿತ್ತು. ಪರಿಣಾಮ ಹೀನಾಯ ಸೋಲು ಕಾಣುವುದರೊಂದಿಗೆ -1.355 ರನ್ ರೇಟ್‍ನೊಂದಿಗೆ ಮೂರನೇ ಸ್ಥಾನದಲ್ಲಿದೆ.

197 ರನ್ ಗಳ ಬೃಹತ್ ಮೊತ್ತದ ಗುರಿ ಪಡೆದ ಆರ್‌ಸಿಬಿ ತಂಡಕ್ಕೆ ಉತ್ತಮ ಆರಂಭ ಲಭಿಸಲಿಲ್ಲ. ಇನ್ನಿಂಗ್ಸ್ ನ 2ನೇ ಓವರಿನ ಅಂತಿಮ ಎಸೆತದಲ್ಲಿ 4 ರನ್ ಗಳಿಸಿದ್ದ ಪಡಿಕ್ಕಲ್ ಸುಲಭ ಕ್ಯಾಚ್ ನೀಡಿ ನಿರ್ಗಮಿಸಿದ್ದರು. ಇದರ ಬೆನ್ನಲ್ಲೇ 13 ರನ್ ಗಳಿಸಿದ್ದ ಫಿಂಚ್, ಅಕ್ಷರ್ ಪಟೇಲ್ ಬೌಲಿಂಗ್‍ನಲ್ಲಿ ಕ್ಯಾಚ್ ನೀಡುವ ಮೂಲಕ ಪೆವಿಲಿಯನ್ ಗೆ ನಡೆದರು. ಇದಕ್ಕೂ ಮುನ್ನ ಇನ್ನಿಂಗ್ಸ್ ನ ಮೊದಲ ಓವರ್ ಬೌಲ್ ಮಾಡಿದ ರಬಾಡಾ ಬೌಲಿಂಗ್‍ನಲ್ಲಿ ಫಿಂಚ್ ಜೀವದಾನ ಪಡೆದಿದ್ದರು ಮಿಂಚಲು ವಿಫಲರಾದರು.

DC A

ಅಶ್ವಿನ್ ಮಂಕಡ್ ವಾರ್ನಿಂಗ್: ಈ ಹಿಂದೆ ಮಂಕಡ್ ಔಟ್ ಮಾಡಿ ಹೆಚ್ಚು ಚರ್ಚೆಗೆ ಕಾರಣವಾಗಿದ್ದ ಆರ್.ಅಶ್ವಿನ್ ಇಂದಿನ ಪಂದ್ಯದಲ್ಲಿ ಫಿಂಚ್ ವಾರ್ನಿಂಗ್ ನೀಡಿದ್ದರು. 3ನೇ ಓವರಿನ 4ನೇ ಎಸೆತದಲ್ಲಿ ನಾನ್‍ಸ್ಟ್ರೈಕ್‍ನಲ್ಲಿದ್ದ ಫಿಂಚ್, ಬೌಲರ್ ಬೌಲ್ ಮಾಡುವ ಮುನ್ನವೇ ಕ್ರಿಸ್ ಬಿಟ್ಟು ತೆರಳಿದ್ದರು. ಈ ಸಂದರ್ಭದಲ್ಲಿ ಫಿಂಚ್ ಅವರತ್ತ ನೋಡಿ ನಕ್ಕ ಅಶ್ವಿನ್ ಮಂಕಡ್ ವಾರ್ನಿಗ್ ನೀಡಿದರು.

4ನೇ ಓವರ್ ಅಂತ್ಯದ ವೇಳೆಗೆ 27 ರನ್ ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ನಾಯಕ ಕೊಹ್ಲಿ ಚೇತರಿಕೆ ನೀಡುವ ಪ್ರಯತ್ನ ನಡೆಸಿದರು. ಇನ್ನಿಂಗ್ಸ್ ನಲ್ಲಿ ಎದುರಿಸಿದ ಮೊದಲ ಎಸೆತವನ್ನು ಬೌಂಡರಿ ಬಾರಿಸುವ ಮೂಲಕ ಎಚ್ಚರಿಕೆ ಸಂದೇಶ ರವಾಸಿದರು. ಆದರೆ 9 ರನ್ ಗಳಿಸಿ ಆಡುತ್ತಿದ್ದ ಎಬಿ ಡಿಲಿಯರ್ಸ್, ಅನ್ರಿಚ್ ಬೌಲಿಂಗ್‍ನಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಪವರ್ ಪ್ಲೇ ಅಂತ್ಯಕ್ಕೆ ಆರ್.ಸಿ.ಬಿ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು 43 ರನ್ ಗಳಿಸಿತ್ತು.

RCB Ashwin

ಪ್ರಮುಖ ವಿಕೆಟ್‍ಗಳು ಉರುಳುತ್ತಿದಂತೆ ಕೊಹ್ಲಿ, ಮೋಯಿನ್ ಅಲಿ ನಿಧಾನಗತಿ ಬ್ಯಾಟಿಂಗ್‍ಗೆ ಮುಂದಾಗಿ ತಂಡದ ಮೊತ್ತವನ್ನು ಹೆಚ್ಚಿಸಲು ಮುಂದಾದರು, ಆದರೆ 12ನೇ ಓವರಿನಲ್ಲಿ ದಾಳಿಗಿಳಿದ ಅಕ್ಷರ್ ಪಟೇಲ್ 11 ರನ್ ಗಳಿಸಿದ್ದ ಅಲಿ ವಿಕೆಟ್ ಕಬಳಿಸಿ ಎದುರಾಳಿ ತಂಡಕ್ಕೆ ಹೊಡೆತ ನೀಡಿದರು. 14ನೇ ಓವರ್ ಎಸೆತ ರಬಾಡಾ ಬೌಲಿಂಗ್‍ನಲ್ಲಿ ಬಿರುಸಿನ ಆಟಕ್ಕೆ ಮುಂದಾದ ವಿರಾಟ್ ಕೊಹ್ಲಿ ವಿಕೆಟ್ ಕೀಪರ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಪಂದ್ಯದಲ್ಲಿ 39 ಎಸೆತ ಎದುರಿಸಿದ್ದ ಕೊಹ್ಲಿ 2 ಬೌಂಡರಿ, ಸಿಕ್ಸರ್ ನೆರವಿನಿಂದ 43 ರನ್ ಗಳಿಸಿದ್ದರು.

15ನೇ ಓವರ್ ಅಂತ್ಯಕ್ಕೆ ಆರ್.ಸಿ.ಬಿ ಗೆಲುವಿಗೆ 30 ಎಸೆತಗಳಲ್ಲಿ 92 ರನ್ ಗಳ ಅಗತ್ಯವಿತ್ತು. ಆದರೆ ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಆರ್‌ಸಿಬಿ ಅಂತಿಮವಾಗಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿತು. ಮೊಯಿನ್ ಅಲಿ 11 ರನ್, ಸುಂದರ್ 17 ರನ್, ದುಬೆ 11 ರನ್, ಉದಾನ 1 ರನ್, ಸಿರಾಜ್ 5 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. 12 ರನ್ ಗಳಿಸಿದ ಸೈನಿ, ಯಾವುದೇ ರನ್ ಗಳಿಸದೆ ಚಹರ್ ಅಜೇಯರಾಗಿ ಉಳಿದರು.

point table

 

ಡೆಲ್ಲಿ ಕ್ಯಾಪಿಟಲ್ಸ್ ಪರ ಉತ್ತಮ ಬೌಲಿಂಗ್ ದಾಳಿ ನಡೆಸಿದ ರಬಾಡಾ 4 ಓವರ್ ಗಳಲ್ಲಿ 24 ರನ್ ನೀಡಿ 4 ವಿಕೆಟ್ ಪಡೆದು ಮಿಂಚಿಸಿದರು. ಉಳಿದಂತೆ ಅಕ್ಷರ್ ಪಟೇಲ್, ಅನ್ರಿಚ್ ತಲಾ 2, ಅಶ್ವಿನ್ 1 ವಿಕೆಟ್ ಕಿತ್ತು ತಂಡದ ಗೆಲುವಿಗೆ ಕಾರಣರಾದರು.

ಇದಕ್ಕೂ ಮುನ್ನ ಟಾಸ್ ಸೋತು ಬ್ಯಾಟಿಂಗ್ ನಡೆಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸ್ಟೋಯ್ನಿಸ್ 53 ರನ್, ಪೃಥ್ವಿ ಶಾ 42 ರನ್, ಶಿಖರ್ ಧವನ್ 32 ರನ್ ಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 196 ರನ್ ಗಳಿಸಿತ್ತು.

A big big win for @DelhiCapitals as they beat #RCB by 59 runs.#Dream11IPL pic.twitter.com/Zv6Ep4ELQN

— IndianPremierLeague (@IPL) October 5, 2020

TAGGED:ಆರ್‍ಸಿಬಿಡಿಸಿದುಬೈವಿರಾಟ್ ಕೊಹ್ಲಿಶ್ರೇಯಾಸ್ ಅಯ್ಯರ್ಸ್ಟೋಯ್ನಿಸ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
2 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
3 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
3 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
5 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?