Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕರ್ನಾಟಕವನ್ನು ನಡುಗ್ತಿಸಿದೆ ಶತಮಾನದ ಮಳೆ – ಕಲಬುರಗಿಯಲ್ಲಿ ಇಂದು, ನಾಳೆ ರೆಡ್ ಅಲರ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಉತ್ತರ ಕರ್ನಾಟಕವನ್ನು ನಡುಗ್ತಿಸಿದೆ ಶತಮಾನದ ಮಳೆ – ಕಲಬುರಗಿಯಲ್ಲಿ ಇಂದು, ನಾಳೆ ರೆಡ್ ಅಲರ್ಟ್

Districts

ಉತ್ತರ ಕರ್ನಾಟಕವನ್ನು ನಡುಗ್ತಿಸಿದೆ ಶತಮಾನದ ಮಳೆ – ಕಲಬುರಗಿಯಲ್ಲಿ ಇಂದು, ನಾಳೆ ರೆಡ್ ಅಲರ್ಟ್

Public TV
Last updated: October 15, 2020 7:48 am
Public TV
Share
2 Min Read
GLB Rain
SHARE

– ಮಾಯದ ಮಳೆಗೆ ರಸ್ತೆ, ಸೇತುವೆಗಳೇ ಮಾಯ
– ಬಿಸಿಲ ನಾಡ ಬದುಕು ಹೈರಾಣಾಗಿಸಿದ ರಣಮಳೆ
– ಉಕ್ಕಿದ ಭೀಮಾ, ಕಾಗಿಣಾ ನದಿ, ಪ್ರವಾಹ ಭೀತಿ

ಬೆಂಗಳೂರು: ಮಹಾಮಳೆಗೆ ಉತ್ತರ ಕರ್ನಾಟಕ ನಲುಗಿದ್ದು, ಜನರು ಜೀವ ಉಳಿಸಿಕೊಳ್ಳಲು ಹರಸಾಹಸಪಡುತ್ತಿದ್ದಾರೆ. ಜಲಾಸುರನ ದಾಳಿಗೆ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್, ರಾಯಚೂರು ಜಿಲ್ಲೆಗಳು ತತ್ತರಿಸಿದ್ದು, ಗಾಯದ ಮೇಲೆ ಬರೆ ಎಳೆದಂತೆ ಕೊಯ್ನಾ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ. ಕೊಯ್ನಾದಿಂದ ಅತಿ ಹೆಚ್ಚು ನೀರು ಹೊರ ಬಂದಲ್ಲಿ ಬೆಳಗಾವಿ, ಚಿಕ್ಕೋಡಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಲಿದೆ.

Bhima River

ಕಲಬುರಗಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇತ್ತ ಮಹಾರಾಷ್ಟ್ರದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಸಾಧ್ಯತೆ ಹಿನ್ನೆಲೆ ಕಲಬುರಗಿ ಜನರಿಗೆ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ. ಮಹಾರಾಷ್ಟ್ರದ ಉಜನಿ, ವೀರ್ ಡ್ಯಾಂನಿಂದ ನೀರು ರಿಲೀಸ್ ಮಾಡಲಾಗುತ್ತಿದ್ದು, ಭೀಮಾ ನದಿಗೆ 1 ಲಕ್ಷ 23 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಮಳಖೇಡ ಉತ್ತರಾಧಿ ಮಠ ಸಂಪೂರ್ಣ ಮುಳುಗಡೆಯಾಗಿದ್ದು, ಗೋವುಗಳು, ಅರ್ಚಕರ ಕುಟುಂಬ ಸಂಕಷ್ಟದಲ್ಲಿ ಸಿಲುಕಿದೆ.

Rain 3

 

ಕಲಬುರಗಿ ಜಿಲ್ಲೆಯಾದ್ಯಂತ ಭಾರೀ ಮಳೆ ಆಗ್ತಿರುವ ಹಿನ್ನೆಲೆ ಹಾಗರಗುಂಡಗಿ ಗ್ರಾಮದಲ್ಲಿ ಕೆರೆ ಒಡ್ಡು ಒಡೆದು ಭಾರೀ ಅವಾಂತರ ಸೃಷ್ಟಿಯಾಗಿದೆ. ಜಮೀನುಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿದೆ. ಕೆರೆಯ ಕೆಳ ಭಾಗ ಹೊಲಗಳೆಲ್ಲಾ ಜಲಾವೃತವಾಗಿದ್ದು ಬೆಳೆಗಳೆಲ್ಲಾ ನೀರು ಪಾಲಾಗಿದೆ. ಇದರಿಂದ ಕೊರೊನಾ ಮಧ್ಯೆ ರೈತನಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಜೊತೆಗೆ ಚಿಂಚೋಳಿಯ ನಾಗಾಯಿದಲಾಯಿ ಗ್ರಾಮದ ಕೆರೆ ಒಡೆದಿದೆ. ನೀರಿನ ರಭಸಕ್ಕೆ ಕೆರೆಯ ತಡೆಗೋಡೆ ಕುಸಿದು ನೀರು ಮುನ್ನಗ್ಗುತ್ತಿದೆ. ಪರಿಣಾಮ ಸುತ್ತಮುತ್ತಲ ಗ್ರಾಮಗಳ ಜನರಲ್ಲಿ ಆತಂಕ ಮನೆ ಮಾಡಿದೆ. ಜೊತೆಗೆ ಭೋಸಗಾ ಕೆರೆ ಕೂಡ ಭರ್ತಿ ಆಗಿದ್ದು ಕೆರೆಯಿಂದ ಅಪಾರ ಪ್ರಮಾಣದ ನೀರು ಬಿಡಲಾಗ್ತಿದೆ. ಗ್ರಾಮಸ್ಥರಿಗೆ ಮುಂಜಾಗ್ರತೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

HYD Rain

ಪ್ರವಾಹದಲ್ಲಿ ಸಿಲುಕಿದ್ದ ಐವರನ್ನು ರಕ್ಷಣೆ ಮಾಡಲಾಗಿದೆ. ಕಲಬುರಗಿ ಜಿಲ್ಲೆ ಚಿಂಚೋಳಿ ಹೊರವಲಯದ ತೋಟದಲ್ಲಿ ಸುತ್ತ ನೀರು ಆವರಿಸಿದ್ದರಿಂದ ಮನೆಯ 5 ಮಂದಿ ಮನೆ ಮೇಲ್ಛಾವಣಿಯಲ್ಲಿ ಆಶ್ರಯ ಪಡೆದಿದ್ದರು. ರಕ್ಷಣೆಗಾಗಿ ಮೊರೆ ಇಟ್ಟಿದ್ದರು. ತಕ್ಷಣ ಸ್ಪಂದಿಸಿದ ಎನ್‍ಡಿಆರ್‍ಎಫ್ ತಂಡ ಬೋಟ್‍ನಲ್ಲಿ ತೆರಳಿ ದಂಪತಿ, ಇಬ್ಬರು ಮಕ್ಕಳು, ಕೃಷಿ ಕಾರ್ಮಿಕನನ್ನು ರಕ್ಷಿಸಿದೆ. ಜೀವ ಉಳಿಸಿಕೊಂಡ ಐವರು ರಕ್ಷಣಾ ತಂಡಕ್ಕೆ ಧನ್ಯವಾದ ಹೇಳಿದ್ದಾರೆ. ಕಮಲಾಪುರ ತಾಲೂಕಿನಲ್ಲಿ ಜವಳಗಾ ಬಿ ಗ್ರಾಮದ ರಸ್ತೆ ಕೊಚ್ಚಿ ಹೋಗಿದೆ. ರಸ್ತೆ ಯಾವುದು? ನದಿ ಯಾವುದು ಎಂದು ಗೊತ್ತಾಗುತ್ತಲೇ ಇಲ್ಲ. ಇದರಿಂದ ಜವಳಗಾ ಬಿ- ವಡಾಲ ಗ್ರಾಮದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಲ್ಲಿ ರಸ್ತೆ ಇತ್ತು ಎಂಬ ಸುಳಿವೇ ಇಲ್ಲದಂತೆ ರಸ್ತೆ ಕೊಚ್ಚಿ ಹೋಗಿದ್ದು ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಭೋರ್ಗರೆಯುತ್ತಿರುವ ಭೀಮಾ ನದಿ ನೋಡಲು ಹೋಗಿದ್ದ ಯುವಕ ಕೊಚ್ಚಿ ಹೋಗಿದ್ದಾನೆ. ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದ 21 ವರ್ಷದ ಭಗವಾನ್ ಎಂಬ ಯುವಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ರಣರಕ್ಕಸ ಮಳೆ ಮುತ್ತಿನ ನಗರಿ ಹೈದ್ರಾಬಾದ್ ನಲುಗಿ ಹೋಗಿದೆ. 24 ಗಂಟೆಯಲ್ಲಿ 20 ಸೆಂ.ಮೀಟರ್ ಮಳೆ ಸುರಿದೆ. ಮಳೆಯಿಂದಾಗಿ ಹೈದ್ರಾಬಾದ್‍ನಲ್ಲಿ 19 ಮಂದಿ, ತೆಲಂಗಾಣದಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಆಸ್ಪತ್ರೆಗೂ ನೀರು ನುಗ್ಗಿದ್ದು, ಕೆರೆಯಂತಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತವಾಗಿತ್ತು. ಹೈದ್ರಾಬಾದ್‍ನ ಫಲಕ್ನುಮಾ ಬಳಿಯ ಬರ್ಕಾಸ್‍ನಲ್ಲಿ ವ್ಯಕ್ತಿಯೊಬ್ಬರು ನೋಡು ನೋಡ್ತಿದ್ದಂತೆ ಪ್ರವಾಹದಲ್ಲಿ ಕೊಚ್ಚಿಹೋಗಿದ್ದಾರೆ.

TAGGED:Kalaburaginorth karnatakaPublic TVrainyadagiriಉತ್ತರ ಕರ್ನಾಟಕಕಲಬುರಗಿಪಬ್ಲಿಕ್ ಟಿವಿಮಳೆಯಾದಗಿರಿ
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

Kalladka Prabhakar Bhat
Dakshina Kannada

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೆ ಎಫ್‌ಐಆರ್

Public TV
By Public TV
11 seconds ago
Donald Trump Diego Garcia
Latest

ಗ್ರೀನ್‌ಲ್ಯಾಂಡ್ ಬಳಿಕ ಹಿಂದೂ ಮಹಾಸಾಗರದ ಮೇಲೆ ಟ್ರಂಪ್ ಕಣ್ಣು

Public TV
By Public TV
15 minutes ago
thawarchand gehlot join session exit
Bengaluru City

ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ – ಭಾಷಣ ಓದದೇ ತೆರಳಿದ ಗೆಹ್ಲೋಟ್‌

Public TV
By Public TV
21 minutes ago
Siddaramaiah 2 1
Bengaluru City

ಸಂವಿಧಾನದ ಉಲ್ಲಂಘನೆಯಾಗಿದೆ, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ ತೀವ್ರ ಆಕ್ಷೇಪ

Public TV
By Public TV
27 minutes ago
VidhanSoudha
Bengaluru City

ವಿಧಾನಸೌಧಕ್ಕೆ ರಾಜ್ಯಪಾಲರ ಆಗಮನ – ಹೂಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದ ಸಿಎಂ

Public TV
By Public TV
56 minutes ago
Thawar Chand Gehlot Siddaramaiah
Bengaluru City

ರಾಜ್ಯಪಾಲರು ಅಧಿವೇಶನಕ್ಕೆ ಬರ್ತಾರೆ; ಲೋಕಭವನದಿಂದ ಸರ್ಕಾರಕ್ಕೆ ಅಧಿಕೃತ ಮಾಹಿತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?