Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಾಣಿಗಳಂದ್ರೆ ಪಂಚಪ್ರಾಣ, ಮನುಷ್ಯರಂದ್ರೆ ಭಯ: ನಟಿ ಸಂಯುಕ್ತಾ ಹೊರನಾಡು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಾಣಿಗಳಂದ್ರೆ ಪಂಚಪ್ರಾಣ, ಮನುಷ್ಯರಂದ್ರೆ ಭಯ: ನಟಿ ಸಂಯುಕ್ತಾ ಹೊರನಾಡು

Bengaluru City

ಪ್ರಾಣಿಗಳಂದ್ರೆ ಪಂಚಪ್ರಾಣ, ಮನುಷ್ಯರಂದ್ರೆ ಭಯ: ನಟಿ ಸಂಯುಕ್ತಾ ಹೊರನಾಡು

Public TV
Last updated: October 15, 2020 3:59 pm
Public TV
Share
7 Min Read
SAMYUKTA HORNAD 2
SHARE

ನಟಿ ಹಾಗೂ ಪ್ರಾಣಿಪ್ರಿಯೆ ಸಂಯುಕ್ತಾ ಹೊರನಾಡು ಲಾಕ್‍ಡೌನ್ ಅವಧಿಯಲ್ಲಿ ಕಳೆದ ಸಮಯ ಹಾಗೂ ಸುನಾಮಿ ಹಾಡಿನ ಬಗ್ಗೆ ಒಂದಿಷ್ಟು ಮಾಹಿತಿಯನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ.

• ಹೇಗಿದ್ದೀರಾ? ಲಾಕ್‍ಡೌನ್ ಅವಧಿಯಲ್ಲಿ ತುಂಬಾ ಬ್ಯುಸಿಯಾಗಿದ್ರಿ ನೀವು?
ನಾನು ಚೆನ್ನಾಗಿದ್ದೀನಿ. ಲಾಕ್‍ಡೌನ್ ಅವಧಿಯಲ್ಲಿ ಹೆಚ್ಚಾಗಿ ಸಾಮಾಜಿಕ ಕಾರ್ಯಗಳಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೆ. ಜೊತೆಗೆ ಸರ್ಕಾರದ ಕಾರ್ಯಕ್ರಮಗಳಲ್ಲಿ ಕೈ ಜೋಡಿಸಿದ್ದರಿಂದ ಆ ಕೆಲಸಗಳಲ್ಲಿ ಬ್ಯುಸಿಯಾಗಿದ್ದೆ. ಜನರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೆ.

SAMYUKTA HORNAD 3

• ಸುನಾಮಿ ವಿಡಿಯೋ ಸಾಂಗ್ ತುಂಬಾ ವೈರಲ್ ಆಗಿದೆ. ಎಲ್ಲರೂ ಇಷ್ಟಪಡುತ್ತಿದ್ದಾರೆ?
ಹೌದು, ಈ ಹಾಡಿಗೆ ತುಂಬಾ ಒಳ್ಳೆಯ ಪ್ರತಿಕ್ರಿಯೆ ಸಿಕ್ತಿದೆ. ಇದನ್ನು ಮಾಡಿರೋ ಉದ್ದೇಶ ಬೀದಿನಾಯಿಗಳ ಬಗ್ಗೆ ಜಾಗೃತಿ ಮೂಡಿಸಲು. ಬೀದಿನಾಯಿಗಳನ್ನ ಅಡಾಪ್ಟ್ ಮಾಡಿಕೊಳ್ಳಲಿ ಎಂಬ ಉದ್ದೇಶದಿಂದ. ಇದರ ಕ್ರೆಡಿಟ್ ರಘು ದೀಕ್ಷಿತ್ ಅವರಿಗೆ ಸೇರಬೇಕು. ಅವರೇ ಈ ಹಾಡನ್ನು ಬರೆದು, ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಡ್ಯುಯೇಟ್ ಕಾನ್ಸೆಪ್ಟ್ ನಲ್ಲಿ ಪ್ರಾಣಿಗಳ ಮೇಲಿನ ಪ್ರೀತಿಯನ್ನು ತೋರಿಸೋ ಒಂದು ಹೊಸ ಪ್ರಯತ್ನ. ನಾವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ರೀತಿಯಲ್ಲಿ ಇದನ್ನು ಮೆಚ್ಚಿಕೊಂಡಿದ್ದಾರೆ. ಇದರಲ್ಲಿ ನಾನು ಮೊದಲ ಬಾರಿ ಹಿನ್ನೆಲೆ ಗಾಯಕಿಯಾಗಿ ಹಾಡಿದ್ದೀನಿ ಅದೊಂದು ಖುಷಿ ಇದೆ ನನಗೆ.

• ಲಾಕ್‍ಡೌನ್ ಸಮಯದಲ್ಲಿ ಬಿಡುವಿನ ವೇಳೆ ಹೊಸ ಹವ್ಯಾಸ ಏನಾದ್ರು ಬೆಳೆಸಿಕೊಂಡ್ರಾ?
ಹೌದು, ನಂಗೆ ನಿಜಕ್ಕೂ ಖುಷಿ ಆಗುತ್ತೆ ಇದನ್ನ ಹೇಳೋದಕ್ಕೆ. ನನಗೆ ಸಂಗೀತ ಕಲಿಬೇಕು ಅಂತ ಆಸಕ್ತಿ ಇತ್ತು. ರಂಗಭೂಮಿ ಕಲಾವಿದರಿಗೆ ಹಾಡೋಕು ಬರಬೇಕು ತುಂಬಾ ಮುಖ್ಯ ಅದು. ನಾನು ರಂಗಭೂಮಿಯಲ್ಲಿ ನಾಟಕಕ್ಕೋಸ್ಕರ ಕಲಿತಿದ್ದೆ ಆದ್ರೆ ಅಷ್ಟಾಗಿ ಸಂಗೀತದ ಬಗ್ಗೆ ಗೊತ್ತಿರಲಿಲ್ಲ. ಚಿಕ್ಕಂದಿನಲ್ಲೂ ಅಭ್ಯಾಸ ಮಾಡಿರಲಿಲ್ಲ. ಲಾಕ್‍ಡೌನ್ ಅವಧಿಯಲ್ಲಿ ಆ ಆಸೆಯನ್ನು ಈಡೇರಿಸಿಕೊಂಡೆ. ಪೂರ್ಣ ಪ್ರಮಾಣದಲ್ಲಿ ಕಲಿತಿಲ್ಲವಾದ್ರು ಸಂಗೀತದ ಬಗ್ಗೆ ಒಂದಿಷ್ಟು ಅರಿತುಕೊಂಡಿದ್ದೇನೆ, ಪ್ರತಿನಿತ್ಯ ಪ್ರಾಕ್ಟೀಸ್ ಕೂಡ ಮಾಡ್ತಿದ್ದೀನಿ. ಅದನ್ನು ಹೊರತು ಪಡಿಸಿ ಒಂದು ಡಾಕ್ಯುಮೆಂಟರಿ ಮಾಡ್ದೆ. ಬಿಡುವು ಸಿಕ್ಕಾಗ ಪೇಟಿಂಗ್‌ ಮಾಡ್ತಿದ್ದೆ.

SAMYUKTA HORNAD 5

• ನಿಮ್ಮ ಸೋಶಿಯಲ್ ಮೀಡಿಯಾ ಅಕೌಂಟ್‍ನಲ್ಲಿ ಎಲ್ಲಿ ನೋಡಿದ್ರು ನಿಮಗಿಂತ ಪ್ರಾಣಿಗಳ ಫೋಟೋನೇ ಇರುತ್ತೆ?
ನಿಜ, ನಾನು ಪ್ರಾಣಿ ಪ್ರಿಯೆ. ಹಲವು ಸಂಸ್ಥೆಗಳ ಅಂಬಾಸಿಡರ್ ಕೂಡ ಹೌದು, ಹಲವಾರು ರೆಸ್ಕ್ಯೂ ಸಂಸ್ಥೆಗಳ ಜೊತೆ ಕೈ ಜೋಡಿಸಿದ್ದೇನೆ. ಸೋಶಿಯಲ್ ಮೀಡಿಯಾವನ್ನು ನಮಗೋಸ್ಕರ ಬಳಸಿಕೊಳ್ಳೋದ್ರ ಜೊತೆಗೆ ಜಾಗೃತಿ ಮೂಡಿಸಲು ಬಳಸೋದು ಒಳ್ಳೆಯದು ಅನ್ನೋದು ನನ್ನ ಅನಿಸಿಕೆ. ಅದಕ್ಕಾಗಿ ನಾನು ಹೆಚ್ಚಾಗಿ ಪ್ರಾಣಿಗಳ ಪೋಟೋ ಪೋಸ್ಟ್ ಮಾಡುತ್ತೇನೆ. ಅದನ್ನು ನೋಡಿದವ್ರಲ್ಲಿ ಒಬ್ಬರಾದ್ರು ಪ್ರಾಣಿಗಳನ್ನು ಅಡಾಪ್ಟ್ ಮಾಡಿಕೊಳ್ಳಲೋ ಅಥವಾ ಅವುಗಳ ಸಹಾಯಕ್ಕೆ ಕೈ ಚಾಚಿದ್ರೆ ಸಹಾಯವಾಗುತ್ತೆ ಅನ್ನೋದು ನನ್ನ ಉದ್ದೇಶ.

SAMYUKTA HORNAD 4

• ನಿಮ್ಮ ಪ್ರಾಣಿ ಪ್ರೀತಿ ಬಗ್ಗೆ ಎಲ್ಲರಿಗೂ ಗೊತ್ತಿದೆ ಆದರೂ ಒಂದು ಕುತೂಹಲ ಇದೆ, ಪ್ರಾಣಿಗಳನ್ನು ಕಂಡರೆ ಯಾಕಿಷ್ಟು ಪ್ರೀತಿ?
ಚಿಕ್ಕವಯಸ್ಸಿನಿಂದಲೂ ಪ್ರಾಣಿಗಳು ಅಂದ್ರೆ ಪಂಚಪ್ರಾಣ. ನಾನು ಚಿಕ್ಕವಳಿದ್ದಾಗ ನಮ್ಮ ಮನೆ ಮುಂದೆ ಮೋರಿಲಿ ಒಂದು ನಾಯಿ ಇತ್ತು. ಅದರ ಜೊತೆ ನಾನು ಕಾಲ ಕಳೆಯುತ್ತಿದ್ದೆ, ಅದಕ್ಕೆ ತಿನ್ನೋಕೆ ಕೊಡ್ತಾ ಇದ್ದೆ. ಅಲ್ಲಿಂದ ಶುರುವಾದ ಪ್ರೀತಿ ಇವತ್ತು ಬೀದಿನಾಯಿಗಳ ಬಗ್ಗೆ ಕಾಳಜಿ ಹಾಗೂ ಪ್ರಾಣಿಗಳ ಬಗ್ಗೆ ಜಾಗೃತಿ ಮೂಡಿಸೋವರೆಗೆ ಬಂದಿದೆ. ಪ್ರಾಣಿಗಳಿಗೆ ನೀವು ಪ್ರೀತಿ ತೋರಿಸಿದ್ರೆ ಅವು ನಿಮಗೆ ಪ್ರೀತಿ ತೋರಿಸುತ್ತೆ. ಅವುಗಳು ತೋರಿಸೋ ಪ್ರೀತಿಯಲ್ಲಿ ಸ್ವಾರ್ಥ ಇರೋದಿಲ್ಲ ನಿಷ್ಕಲ್ಮಶ ಪ್ರೀತಿ ಅವುಗಳದ್ದು. ನಾನು ಯಾವ ಪ್ರಾಣಿನಾದ್ರು ಮುಟ್ಟೋಕೆ ರೆಡಿಯಿದ್ದೀನಿ. ಆ ಪ್ರಾಣಿ ಕಂಡ್ರೆ ಭಯ ಈ ಪ್ರಾಣಿ ಕಂಡ್ರೆ ಭಯ ಆ ರೀತಿ ಏನು ಇಲ್ಲ. ನನ್ನ ಪ್ರಕಾರ ಎಲ್ಲ ಪ್ರಾಣಿಗಳು ಒಂದೇ. ನೀವು ಎಷ್ಟು ಪ್ರೀತಿ, ರಕ್ಷಣೆ ಕೊಡ್ತೀರೋ ಅವು ನಮ್ಮನ್ನು ಅಷ್ಟೇ ಪ್ರೀತಿ ಮಾಡುತ್ತವೆ.ನಾನು ಅವುಗಳಲ್ಲಿ ದೇವರನ್ನು ಕಾಣುತ್ತೇನೆ. ನಿಜವಾಗ್ಲೂ ಹೇಳಬೇಕು ಅಂದ್ರೆ ನನಗೆ ಭಯ ಆಗೋದೇ ಮನುಷ್ಯರನ್ನ ಕಂಡ್ರೆ.

SAMYUKTA HORNAD 6

• ಲಾಕ್‍ಡೌನ್ ಅವಧಿಯಲ್ಲಿ ನಿಮ್ಮ ಕೆಲಸ ಶ್ಲಾಘನೀಯ. ಸಾವಿರಾರು ಬೀದಿನಾಯಿಗಳಿಗೆ ಆಹಾರ ನೀಡ್ತಿದ್ರಿ, ಜಾಗೃತಿ ಮೂಡಿಸಿದ್ರಿ. ನಿಮ್ಮ ಕೆಲಸ ಮೆಚ್ಚುಗೆ ಪಡೆದುಕೊಂಡಿತ್ತು.
ಹೌದು, ಲಾಕ್‍ಡೌನ್ ನಿಂದ ಸಾವಿರಾರು ಜನರ ಬದುಕು ಬೀದಿಗೆ ಬಂತು. ಮನುಷ್ಯರಿಗೇ ಊಟ ಸಿಗ್ತಾ ಇರ್ಲಿಲ್ಲ ಇನ್ನು ಬೀದಿ ನಾಯಿಗಳ ಪಾಡೇನು ಅಲ್ವಾ!? ಅವುಗಳ ಕಷ್ಟ ನೋಡೋಕಾಗದೇ ಬೀದಿ ನಾಯಿಗಳಿಗೆ ಊಟ ನೀಡಲು ಶುರು ಮಾಡಿದೆ. ಇದೆಲ್ಲದರ ಜೊತೆಗೆ ನಾಯಿಗಳಿಂದ ಕೊರೊನಾ ಹರಡುತ್ತೆ ಎಂದು ಸುಳ್ಳು ಸುದ್ಧಿ ಹರಡಿ ಬೆಂಗಳೂರಲ್ಲಿ ಎಷ್ಟೋ ಜನ ತಮ್ಮ ನಾಯಿಗಳನ್ನ ಬೀದಿ ಪಾಲು ಮಾಡಿದ್ರು. ಇದು ನನಗೆ ತುಂಬಾ ನೋವು ಕೊಡ್ತು. ಇದಕ್ಕೆಲ್ಲ ಏನಾದ್ರು ಮಾಡಲೇಬೇಕು ಎಂದು ‘ಕೇರ್’ ಎಂಬ ಸಂಸ್ಥೆ ಜೊತೆ ಸೇರಿ ಜಾಗೃತಿ ಮೂಡಿಸಲು ಆರಂಭಿಸಿದೆ. ಸಾವಿರಾರು ನಾಯಿಗಳು ಇದ್ವು ನನ್ನೊಬ್ಬಳಿಂದ ಇವುಗಳಿಗೆ ಆಹಾರ ಪೂರೈಕೆ ಮಾಡೋಕೆ ಸಾದ್ಯವಿಲ್ಲ ಎಂದು ಗೊತ್ತಾದಾಗ ನಾನು ವಾಟ್ಸಾಪ್ ಗ್ರೂಪ್ ಕ್ರಿಯೇಟ್ ಮಾಡಿದೆ ಜೊತೆಗೆ ಫಂಡ್ ರೈಸ್‍ಗೆ ಮುಂದಾದೆ. ನನ್ನ ಈ ಕೆಲಸಕ್ಕೆ ಉತ್ತಮ ಪ್ರತಿಕ್ರಿಯೇ ಸಿಕ್ತು. ಸುಮಾರು 150 ಜನರು ವಾಟ್ಸಾಪ್ ಗ್ರೂಪ್‍ನಲ್ಲಿ ಕೈ ಜೋಡಿಸಿದ್ರು. ಹಲವಾರು ಜನರು ಫಂಡ್ ನೀಡಲು ಮುಂದಾದ್ರು. ಇವರೆಲ್ಲರ ಸಹಕಾರದಿಂದ ಪ್ರತಿನಿತ್ಯ 4000 ಬೀದಿನಾಯಿಗಳಿಗೆ ಲಾಕ್‍ಡೌನ್ ಅವಧಿಯಲ್ಲಿ ಆಹಾರ ನೀಡಲು ಸಾಧ್ಯವಾಯ್ತು. ಅದನ್ನು ಅಲ್ಲಿಗೆ ಕೈ ಬಿಡಲಿಲ್ಲ, ಈಗಲೂ ಮುಂದುವರೆಸಿಕೊಂಡು ಹೋಗುತ್ತಿದ್ದೇನೆ.

samyuktahornad 47490080 330805957764583 4043938058111246598 n

• ನಿಮ್ಮ ಸೋಶೀಯಲ್ ಸರ್ವಿಸ್ ಹಾಗೂ ಪ್ರಾಣಿಗಳ ಮೇಲಿನ ಕಳಕಳಿಗೆ ತುಂಬಾ ಮೆಚ್ಚುಗೆ ಸಿಕ್ತಿದೆ ಎಷ್ಟೋ ಜನಕ್ಕೆ ನೀವು ಪ್ರೇರಣೆ ಕೂಡ ಆಗಿದ್ದೀರ?
ನನ್ನಿಂದ ನಾಲ್ಕು ಜನ ಬದಲಾಗ್ತಾರೆ ಅಂದ್ರೆ ಅದಕ್ಕಿಂತ ದೊಡ್ಡ ಖುಷಿ ಮತ್ತೊಂದಿಲ್ಲ. ಎಲ್ಲರೂ ಮೆಚ್ಚುಗೆ, ಪ್ರೀತಿ ವ್ಯಕ್ತಪಡಿಸೋದ್ರಿಂದ ಇನ್ನೊಂದಿಷ್ಟು ಕೆಲಸ ಮಾಡಲು ಸಹಾಯ ಆಗುತ್ತೆ. ಇನ್ನು ಕೆಲವರು ಕೆಲವು ಕಾರ್ಯಕ್ರಮಗಳಿಗೆ ನನ್ನ ಜೊತೆ ಕೈ ಜೋಡಿಸುತ್ತಾರೆ. ನನ್ನ ಕೆಲಸ ನನಗೆ ತುಂಬಾ ತೃಪ್ತಿ ನೀಡಿದೆ. ನನ್ನ ಕೆಲಸ ನನಗೆ ಪ್ರೇರಣೆ ಮತ್ತು ಸ್ಪೂರ್ತಿ ನೀಡಿದೆ.

samyuktahornad 26332454 320262971803248 6870459278453374976 n

• ಹಲವಾರು ಸಂಘ, ಸಂಸ್ಥೆಗಳ ರಾಯಭಾರಿ ಕೂಡ ಆಗಿ ಕಾರ್ಯ ನಿರ್ವಹಿಸುತ್ತಿದ್ದೀರ ಎಷ್ಟು ಖುಷಿ ಅನಿಸುತ್ತೆ?
ನಾನು ಸಾಮಾಜಿಕ ಸೇವೆಯನ್ನ ನನ್ನ ಖುಷಿಗೆ ಮಾಡುತ್ತಿದ್ದೇನೆ. ನನ್ನ ಕೆಲಸವನ್ನು ಗುರುತಿಸಿ ದೊಡ್ಡ ಜವಾಬ್ದಾರಿಯನ್ನು ನನಗೆ ಹಲವು ಸಂಸ್ಥೆಗಳು ನೀಡಿರೋದು ಸಂತಸ ತಂದಿದೆ. ಪೀಪಲ್ ಫಾರ್ ಅನಿಮಲ್ ಫೌಡೇಷನ್ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದೆ. ಈ ಸಂಸ್ಥೆ ನಗರದಲ್ಲಿ ತೊಂದರೆಗೆ ಒಳಗಾಗೋ ಸಾವಿರಾರು ಪ್ರಾಣಿಗಳ ರಕ್ಷಣೆ ಮಾಡುತ್ತಾ ಬಂದಿದೆ. ಈ ಸಂಸ್ಥೆಯ ಬೆಂಗಳೂರು ರಾಯಭಾರಿಯಾಗಿ ನನನ್ನು ನೇಮಿಸಿದ್ದಾರೆ. ಇದಲ್ಲದೆ ಯುನೆಸೆಫ್‍ನವರ ಮೈನರ್ ಪ್ರಾಜೆಕ್ಟ್, ಚೈಲ್ಡ್ ವಯೋಲೆನ್ಸ್ ರಾಯಭಾರಿಯಾಗಿಯೂ ಕಾರ್ಯ ನಿರ್ವಹಿಸೋ ಅವಕಾಶ ನನಗೆ ಸಿಕ್ಕಿದೆ. ಕೇರ್ ಎಂಬ ಸಂಸ್ಥೆ ಸಾವಿರಾರು ಬೀದಿನಾಯಿಗಳ ರಕ್ಷಣೆ ಮಾಡುತ್ತಿದೆ ಜೊತೆಗೆ ಅವುಗಳಿಗೆ ಆಹಾರ ಒದಗಿಸುತ್ತಿದೆ ಆ ಸಂಸ್ಥೆಯ ರಾಯಭಾರಿಯಾಗಿದ್ದೇನೆ. ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳಲು ಅರಿವು ಮೂಡಿಸಲು ವೇದಿಕೆ ಸಿಗುತ್ತಿರೋದು ತುಂಬಾ ಹೆಮ್ಮೆ ಇದೆ.

samyuktahornad 89593974 249781849375629 6162681960816353259 n e1585406414177

• ಏಳು ವರ್ಷದ ಸಿನಿಮಾ ಜರ್ನಿ ಎಷ್ಟು ಖುಷಿ ಕೊಟ್ಟಿದೆ?
ನಾನು ಚಿತ್ರರಂಗಕ್ಕೆ ಬಂದು ಏಳು ವರ್ಷ ಆಯ್ತು, ನಂಗೆ ಸಕ್ಸಸ್, ಸೋಲು ಇದ್ಯಾವುದರ ಯೋಚನೆ ಇಲ್ಲ. ಯಾವ ಪಾತ್ರ ಖುಷಿ ಕೊಡುತ್ತೋ, ಯಾವ ಸಬ್ಜೆಕ್ಟ್ ಖುಷಿ ಕೊಡುತ್ತೋ ಆ ಪಾತ್ರಗಳನ್ನ ಒಪ್ಪಿಕೊಳ್ತೀನಿ. ಚಿತ್ರರಂಗದಲ್ಲಿ ಎಲ್ಲರೂ ನನ್ನ ಪ್ರೀತಿಯಿಂದ ಕಾಣುತ್ತಾರೆ. ಬೇರೆ ಚಿತ್ರರಂಗದಲ್ಲೂ ಒಳ್ಳೆಯ ಸಿನಿಮಾಗಳು ಸಿಕ್ತಿವೆ. ಏಳು ವರ್ಷದ ಜರ್ನಿ ಖುಷಿ ಕೊಟ್ಟಿದೆ. ನಾನು ತುಂಬಾ ಖುಷಿಯಾಗಿದ್ದೇನೆ. ನನಗೆ ಯಾವುದೇ ರಿಗ್ರೇಟ್ ಇಲ್ಲ.

• ಹೊಸ ಸಿನಿಮಾಗಳಿಗೆ ಸಹಿ ಮಾಡಿದ್ರಾ?
ಹೊಸ ಪ್ರಾಜೆಕ್ಟ್ ಗಳು ಬರ್ತಿವೆ. ಸದ್ಯಕ್ಕೆ ಕನ್ನಡದಲ್ಲಿ ಹೊಂದಿಸಿ ಬರೆಯಿರಿ, ಅರಿಷಡ್ವರ್ಗ, ಮೈಸೂರು ಮಸಾಲ ಚಿತ್ರಗಳಿವೆ. ತೆಲುಗಿನಲ್ಲಿ ಲಾಕ್ಡ್, ಗಾಡ್ ಸೀಕ್ವೆಲ್ 2 ವೆಬ್ ಸಿರೀಸ್ ಶೂಟಿಂಗ್ ಬಾಕಿ ಇದೆ. ತಮಿಳಿನಲ್ಲಿ ರೆಡ್ ರ್ಯಾಂಮ್ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಹೊಸ ಪ್ರಾಜೆಕ್ಟ್ ಬರ್ತಾ ಇವೆ ಇಲ್ಲಿವರೆಗೆ ಯಾವುದೂ ಒಪ್ಪಿಕೊಂಡಿಲ್ಲ.

samyukta hornad

• ಟ್ರಾವೆಲ್ಲಿಂಗ್ ನಿಮಗೆ ತುಂಬಾ ಇಷ್ಟ ಅನ್ಸುತ್ತೆ?
ಹೌದು, ನಂಗೆ ಟ್ರಾವೆಲ್ ಮಾಡೋದು ಅಂದ್ರೆ ತುಂಬಾ ಇಷ್ಟ. ಫ್ರೆಂಡ್ಸ್ ಫ್ಯಾಮಿಲಿ ಜೊತೆ ಟ್ರಾವೆಲ್ ಮಾಡೋದು, ಹೊಸ ಊರು ನೋಡೋದು ತುಂಬಾ ಖುಷಿ ಕೊಡುತ್ತೆ ನನಗೆ. ಟ್ರಾವೆಲ್‍ನಿಂದ ಮನಸ್ಸಿಗೂ ನೆಮ್ಮದಿ ಸಿಗುತ್ತೆ ಹೊಸದನ್ನು ಕಲಿಯೋಕೆ, ತಿಳಿದುಕೊಳ್ಳೋಕೆ ಸಾಧ್ಯವಾಗುತ್ತೆ. ಲಾಕ್‍ಡೌನ್ ಟೈಂನಲ್ಲಿ ಟ್ರಾವೆಲ್ ಮಾಡೋಕೆ ಆಗಲಿಲ್ಲ ಅದೊಂದು ಬೇಸರ ಇದೆ.

• ನಿಮ್ಮ ಫೇವರೇಟ್ ಫುಡ್ ಯಾವುದು?
ನಾನು ಪ್ಯೂರ್ ವೆಜಿಟೇರಿಯನ್, ವೆಜ್‍ನಲ್ಲಿ ಎಲ್ಲ ಬಗೆಯೂ ಇಷ್ಟವಾಗುತ್ತೆ. ಫೇವರೇಟ್ ಅಂದ್ರೆದಹಿ ಪೂರಿ, ಆಂಬೊಡೆ, ಸಾಬುದಾನ ಕಿಚಡಿ, ಮೊಸರು ಅಂದ್ರೆ ತುಂಬಾ ಇಷ್ಟ. ನಾನು ಕಾಫಿ ಪ್ರಿಯೆ, ಏನ್ ಬೇಕಾದ್ರು ಬಿಟ್ಟು ಇರ್ತೀನಿ ಆದ್ರೆ ಕಾಫಿ ಕುಡಿಯದೇ ಇರೋಕೆ ಆಗೋದೇ ಇಲ್ಲ. ಕಾಫಿ ಬೇಕೇ ಬೇಕು.

 

View this post on Instagram

 

Giving back ⁣ I got a call from the make up chief that 200odd makeup artists and daily wage workers are in need of ration kits. I immediately got in touch with @pranitha.insta @shwetharprasad and they responded quickly and generously 🙂 Sooo, within a day we arranged for their food kits. ⁣⁣ ⁣⁣ Also a big big thank you to Smt Roopamouli, Aravind Suchindran, Karthik Reddy, Nanda Girish, Sanjay, Manjunath who have been helping farmers, migrant workers and everyone in need by making these vegetable kits and ration kits. Thank you being proactive and generous 🙂 ⁣⁣ ⁣⁣ #Repost @pranitha.insta with @get_repost⁣⁣ ・・・⁣⁣ Gratitude to those who make us look good everyday⁣⁣ ????⁣⁣ ⁣⁣ 150 Ration kits distributed to the #Makeup and #Hairstyle #Association of #KannadaFilmIndustry ⁣⁣ @samyuktahornad thankyou for initiating this.. #GirlPower in its true sense ???????? in these times of #covid19 crisis and thankyou Nandu.⁣

A post shared by Samyukta Hornad (@samyuktahornad) on May 4, 2020 at 2:03am PDT

TAGGED:animalkannada cinemaLockdownPublic TVSamyukta Hornadsandalwoodಕನ್ನಡ ಸಿನಿಮಾಪಬ್ಲಿಕ್ ಟಿವಿಪ್ರಾಣಿಲಾಕ್‍ಡೌನ್ಸಂಯುಕ್ತಾ ಹೊರನಾಡುಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

milk producers association secretary commits suicide in tarikere
Chikkamagaluru

ತರೀಕೆರೆ | ಹಿಂದಿನ ದಾಖಲೆ ಕೇಳಿ ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

Public TV
By Public TV
15 minutes ago
Rupee Value dollar down
Latest

ಡಾಲರ್‌ ವಿರುದ್ಧ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

Public TV
By Public TV
36 minutes ago
Sri Mariyamma Temple Karkala
Bengaluru City

ಮಾಹಿತಿ ನೀಡದ್ದಕ್ಕೆ ಕಾರ್ಕಳದ ಶ್ರೀ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಿಗೆ 1 ಲಕ್ಷ ರೂ. ದಂಡ

Public TV
By Public TV
1 hour ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
1 hour ago
india sets up high level group led by rajnath singh to monitor middle east crisis
Latest

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

Public TV
By Public TV
2 hours ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?