Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಲ್ಲದ ಉತ್ತರದ ಮಹಾ ಪ್ರವಾಹ- ಹೆಚ್ಚುತ್ತಲೇ ಇದೆ ಭೀಮಾ, ಕೃಷ್ಣಾ ಒಳಹರಿವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ನಿಲ್ಲದ ಉತ್ತರದ ಮಹಾ ಪ್ರವಾಹ- ಹೆಚ್ಚುತ್ತಲೇ ಇದೆ ಭೀಮಾ, ಕೃಷ್ಣಾ ಒಳಹರಿವು

Karnataka

ನಿಲ್ಲದ ಉತ್ತರದ ಮಹಾ ಪ್ರವಾಹ- ಹೆಚ್ಚುತ್ತಲೇ ಇದೆ ಭೀಮಾ, ಕೃಷ್ಣಾ ಒಳಹರಿವು

Public TV
Last updated: October 18, 2020 7:45 am
Public TV
Share
2 Min Read
flood rain
SHARE

– ಮಳೆ ಕಡಿಮೆಯಾದರೂ ಹೆಚ್ಚುತ್ತಲೇ ಇದೆ ನೆರೆ

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಸ್ವಲ್ಪ ತಗ್ಗಿದರೂ ನೆರೆ ಮಾತ್ರ ತಗ್ಗಿಲ್ಲ. ಇನ್ನೂ ಹಲವು ಜನ ಮನೆಗೆ ತೆರಳಲಾಗದೆ ಕಾಳಜಿ ಕೇಂದ್ರಗಳಲ್ಲೇ ಕಾಲ ಕಳೆಯುತ್ತಿದ್ದಾರೆ. ಇತ್ತ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಲೇ ಇದ್ದು, ಇನ್ನಷ್ಟು ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗುತ್ತಿದೆ. ಹಲವು ರಸ್ತೆಗಳ ಸಂಪರ್ಕ ಕಡಿತವಾಗಿದೆ.

vlcsnap 2020 10 18 07h35m44s114

ಭೀಮಾ ನದಿಯ ಮಹಾ ಪ್ರವಾಹಕ್ಕೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಸಂಪೂರ್ಣ ಮುಳುಗಡೆಯಾಗಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಅಪಾಯ ಮಟ್ಟ ಮೀರಿ ಬ್ರಿಡ್ಜ್ ಮೇಲೆ ನೀರು ಹರಿಯುತ್ತಿರುವ ಹಿನ್ನೆಲೆ ವಡಗೇರಾ ಮೂಲಕ ರಾಯಚೂರು ಮತ್ತು ಯಾದಗಿರಿ ಸಂಪರ್ಕ ಬಂದ್ ಆಗಿದೆ. ಅವೈಜ್ಞಾನಿಕವಾಗಿ ಬ್ರಿಡ್ಜ್ ನಿರ್ಮಾಣ ಹಿನ್ನೆಲೆ ಇದರ ಅಕ್ಕ ಪಕ್ಕದ ಜೋಳದಡಗಿ, ಶಿವನೂರು, ಕೊಂಗಂಡಿ, ಗೋನಾಲಕ್ಕೆ ಪ್ರತಿ ವರ್ಷ ಪ್ರವಾಹದ ಆತಂಕ ಉಂಟಾಗುತ್ತಿದೆ.

vlcsnap 2020 10 18 07h36m15s175

ರಾಯಚೂರು ಜಿಲ್ಲೆಯಲ್ಲಿ ಕೃಷ್ಣಾ ನದಿ ರೌದ್ರ ನರ್ತನ ತಾಳಿದ್ದು, ಹಲವು ಗ್ರಾಮಗಳು ಮುಳುಗಡೆಯಾಗಿವೆ. ಭೀಮಾ ನದಿಯಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಡುತ್ತಿರುವುದರಿಂದ ರಾಯಚೂರಿನ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ನದಿ ಪಾತ್ರದ ಬುರ್ದಿಪಾಡ ಗ್ರಾಮದಲ್ಲಿ 10 ಮನೆಗಳು ಸ್ಥಳಾಂತರವಾಗದೆ ಉಳಿದಿದ್ದು ಮುಳುಗಡೆ ಭೀತಿ ಎದುರಿಸುತ್ತಿವೆ. ಅಲ್ಲದೆ ಕೃಷ್ಣಾ ನದಿಯ ನಡುಗಡ್ಡೆ ಗ್ರಾಮಗಳು ಸಂಪೂರ್ಣವಾಗಿ ಹೊರ ಜಗತ್ತಿನ ಸಂಪರ್ಕವನ್ನು ಕಳೆದುಕೊಂಡಿವೆ. ಕಲಬುರ್ಗಿಯ ಸೊನ್ನ ಬ್ಯಾರೇಜ್‍ನಿಂದ 8 ಲಕ್ಷ ಕ್ಯೂಸೆಕ್ ನೀರು ಹರಿಸಿರುವುದರಿಂದ ಕೃಷ್ಣ ನದಿ ಪಾತ್ರದ 17 ಗ್ರಾಮಗಳ ಜನ ಆತಂಕದಲ್ಲಿದ್ದಾರೆ.

vlcsnap 2020 10 18 07h31m46s38

ಸನ್ನತಿ ಬ್ಯಾರೇಜ್ ನಿಂದ ಭೀಮಾ ನದಿಗೆ 3 ಲಕ್ಷ ಕ್ಯೂಸೆಕ್ ನೀರು ಬಿಡುಲಾಗಿದೆ. ಅಲ್ಲದೆ ಬಸವಸಾಗರ ಜಲಾಶಯದಿಂದ 1.23 ಕ್ಯೂಸೆಕ್ ನೀರು ಹರಿಸಲಾಗಿದೆ. ಇದರಿಂದಾಗಿ ಭೀಮಾ ನದಿಯ ಒಳ ಹರಿವು ಹೆಚ್ಚಳವಾಗುವ ಸಾಧ್ಯತೆ ಇದೆ. ಭೀಮಾ ನದಿಯಲ್ಲಿ ನೀರು ಹೆಚ್ಚಾಗುತ್ತಿದ್ದಂತೆ ಸೊನ್ನ ಬ್ಯಾರೇಜಿನಿಂದ 8 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿದೆ. ಈ ನೀರು ಇಂದು ರಾಯಚೂರು ತಾಲೂಕಿಗೆ ಬರಲಿದ್ದು, ಕೃಷ್ಣಾ ನದಿ ಪ್ರವಾಹ ಇನ್ನೂ ಹೆಚ್ಚಳವಾಗಲಿದೆ.

vlcsnap 2020 10 18 07h32m55s222

ಜಿಲ್ಲಾಡಳಿತ ಭಾರೀ ಪ್ರವಾಹದ ಮುನ್ಸೂಚನೆ ನೀಡಿದ್ದು, ಪ್ರವಾಹ ಎದುರಿಸಲು ಸಿದ್ಧತೆ ನಡೆಸಿದೆ. ರಾಯಚೂರು ತಾಲೂಕಿನ ಗುರ್ಜಾಪುರ, ಬೂರ್ದಿಪಾಡ ಹಾಗೂ ಡಿ ರಾಂಪುರ ಸ್ಥಳಾಂತರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಯಚೂರು ತಾಲೂಕಿನ 17 ಗ್ರಾಮಗಳಲ್ಲಿ ಕಟ್ಟೆಚ್ಚೆರ ವಹಿಸಲಾಗಿದೆ. ಒಂದು ಎನ್‍ಡಿಆರ್‍ಎಫ್ ತಂಡ ರಾಯಚೂರಿನಲ್ಲಿ ಬೀಡು ಬಿಟ್ಟಿದೆ.

vlcsnap 2020 10 18 07h34m47s66

ಮಹಾರಾಷ್ಟ್ರದಿಂದ ಮತ್ತೆ ನೀರು
ಮಹಾರಾಷ್ಟ್ರದಿಂದ ಭೀಮಾ ನದಿಗೆ ಮತ್ತೆ ನೀರು ಬಿಡಲಾಗಿದ್ದು, ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ತಾವರಖೇಡ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಏಕಾಏಕಿ ಭೀಮೆಗೆ ನೀರು ಬಂದ ಕಾರಣ ಸುರಕ್ಷಿತ ಸ್ಥಳಗಳಿಗೆ ಗ್ರಾಮಸ್ಥರೇ ಶಿಫ್ಟ್ ಆಗಿದ್ದಾರೆ. ಆದರೆ ಅಪಾರ ಪ್ರಮಾಣದ ದವಸ, ಧಾನ್ಯ, ಮನೆಗಳು ಸೇರಿದಂತೆ ಗ್ರಾಮ ಸಂಪೂರ್ಣ ನೀರುಪಾಲಾಗಿದೆ. ಯಾವೊಬ್ಬ ಅಧಿಕಾರಿ ಸಹ ಗ್ರಾಮಸ್ಥರಿಗೆ ಪ್ರವಾಹದ ಮನ್ಸೂಚನೆ ನೀಡಿಲ್ಲ. ಇದೀಗ ಇಡೀ ಗ್ರಾಮ ನೀರಲ್ಲಿ ಮುಳುಗಿ ಹೋಗಿದ್ದರೂ ಈ ವರೆಗೆ ಯಾರೂ ಸಹಾಯಕ್ಕೆ ಬಂದಿಲ್ಲ ಎಂದು ಜನ ಹಿಡಿ ಶಾಪ ಹಾಕುತ್ತಿದ್ದಾರೆ. ಅಲ್ಲದೆ ಮೂಕ ಪ್ರಾಣಿಗಳ ರೋಧನೆ ಮುಗಿಲು ಮುಟ್ಟಿದೆ.

TAGGED:floodnorth karnatakaPublic TVraichurrainyadgirಉತ್ತರ ಕರ್ನಾಟಕಪಬ್ಲಿಕ್ ಟಿವಿಪ್ರವಾಹಮಳೆಯಾದಗಿರಿರಾಯಚೂರು
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
1 minute ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
13 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
16 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
28 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
60 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?