Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ವರ್ಷದೊಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಆರಂಭ ನಿರೀಕ್ಷೆ: ಸಿಎಂ ಬಿಎಸ್‍ವೈ

Public TV
Last updated: October 19, 2020 7:43 pm
Public TV
Share
3 Min Read
SMG CM BSY
SHARE

– ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ

ಶಿವಮೊಗ್ಗ: ಜಿಲ್ಲೆಯ ಸೋಗಾನೆ ಬಳಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು, 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಇರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಇಂದು ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಲಾಯಿತು. ಇನ್ನೊಂದು ವರ್ಷದ ಒಳಗಾಗಿ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡುವ ನಿರೀಕ್ಷೆಯಿದ್ದು, ಇದರಿಂದ ಶಿವಮೊಗ್ಗ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ. ಸಂಸದರು, ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. pic.twitter.com/zTKJWibjOX

— B.S. Yediyurappa (@BSYBJP) October 19, 2020

ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, ಆರಂಭದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್ ಬಸ್ ಸೇರಿದಂತೆ ದೊಡ್ಡ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ರನ್ ವೇ ಉದ್ದವನ್ನು 3200 ಮೀಟರಿಗೆ ಹೆಚ್ಚಿಸಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಇದಕ್ಕೆ ಹೆಚ್ಚುವರಿಯಾಗಿ 75 ಕೋಟಿ ರೂಪಾಯಿಯನ್ನು ಮುಂದಿನ ಬಜೆಟ್ ನಲ್ಲಿ ಮಂಜೂರು ಮಾಡಲಾಗುವುದು ಎಂದರು.

ಶಿವಮೊಗ್ಗ ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರದ ಉಡಾನ್ ಯೋಜನೆ ವ್ಯಾಪ್ತಿಯಲ್ಲಿ ಒಳಪಡಿಸುವ ಕುರಿತು ಈಗಾಗಲೇ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ. ಇದರಿಂದ ಜನಸಾಮಾನ್ಯರಿಗೂ ಸಹ ವಿಮಾನಯಾನ ಕೈಗೊಳ್ಳಲು ಸಾಧ್ಯವಾಗಲಿದೆ. ವಿಮಾನ ನಿಲ್ದಾಣ ಕಾಮಗಾರಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆಯಿಂದ ಭೂಮಿ ಕಳೆದುಕೊಂಡ ಪ್ರತಿಯೊಬ್ಬರಿಗೂ ಸಮರ್ಪಕವಾದ ಪರಿಹಾರವನ್ನು ಒದಗಿಸಲಾಗುವುದು ಎಂದರು.

SMG CM BSY a

ವಿಮಾನ ನಿಲ್ದಾಣ ಸ್ಥಾಪನೆಯಿಂದಾಗಿ ಶಿವಮೊಗ್ಗ ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ವೇಗ ದೊರಕುವುದನ್ನು ನಿರೀಕ್ಷಿಸಲಾಗಿದೆ. ಈ ಭಾಗದಲ್ಲಿ ಹೆಚ್ಚಿನ ಕೈಗಾರಿಕೆಗಳನ್ನು ಆರಂಭಿಸಲು ಇದು ಪೂರಕವಾಗಲಿದೆ ಎಂದರು.

ಇತ್ತ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ, ಕಲ್ಲುವಡ್ಡು ಏತನೀರಾವರಿ ಯೋಜನೆಯಿಂದಾಗಿ ಶಿಕಾರಿಪುರ ಹಾಗೂ ಸೊರಬ ತಾಲೂಕುಗಳ 3,430 ಹೆಕ್ಟೇರ್ ಪ್ರದೇಶಗಳಿಗೆ ನೀರಾವರಿ ಸಾಧ್ಯವಾಗಲಿದೆ. ಯೋಜನೆಯಿಂದ 41 ಕೆರೆಗಳಿಗೆ ಸಹ ನೀರು ತುಂಬಿಸಲಾಗುತ್ತಿದೆ. ತಾಳಗುಂದ ಹೊಸೂರು ಏತ ನೀರಾವರಿ ಯೋಜನೆ ಈಗಾಗಲೇ ಅನುಷ್ಠಾನಗೊಳ್ಳುತ್ತಿದ್ದು, ಇದರಿಂದ 230 ಕೆರೆಗಳಿಗೆ ನೀರು ತುಂಬಿಸಲು ಸಾಧ್ಯವಾಗಲಿದೆ. ಮುಂದಿನ ವರ್ಷ ಈ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

SMG CM BSY b

ಉತ್ತರ ಕರ್ನಾಟಕದ ಅತಿವೃಷ್ಟಿ ತಾಲೂಕುಗಳ ವೈಮಾನಿಕ ಸಮೀಕ್ಷೆಯನ್ನು ಅ.21ರಂದು ನಡೆಸಲಿದ್ದೇನೆ. ಪ್ರಧಾನಮಂತ್ರಿ ಅವರು ನೆರೆಪೀಡಿತ ಪ್ರದೇಶಗಳಿಗೆ ಎಲ್ಲಾ ನೆರವು ನೀಡುವ ಭರವಸೆಯನ್ನು ನೀಡಿದ್ದಾರೆ. ಅಕ್ಕಮಹಾದೇವಿ ಅವರ ಜನ್ಮಸ್ಥಳವಾದ ಉಡುತಡಿಯನ್ನು ಪುಣ್ಯಕ್ಷೇತ್ರ ಹಾಗೂ ಪ್ರವಾಸಿ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿ ಪಡಿಸಲು ನಾವು ಬದ್ಧರಾಗಿದ್ದು ಈಗಾಗಲೇ ಕಾಮಗಾರಿ ಆರಂಭವಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಮುಂದಿನ ಮೂರು ವರ್ಷಗಳಲ್ಲಿ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸುವ ‘ಮನೆಮನೆಗೆ ಗಂಗೆ’ ಯೋಜನೆಯನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಇಂದು ಶಿಕಾರಿಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು, ತೋಟಗಾರಿಕೆ ಮತ್ತು ಪೌರಾಡಳಿತ ಸಚಿವರು, ಲೋಕಸಭಾ ಸದಸ್ಯರು, ಶಾಸಕರುಗಳು, ಗಣ್ಯರು ಉಪಸ್ಥಿತರಿದ್ದರು‌. pic.twitter.com/hWgviPlUfP

— B.S. Yediyurappa (@BSYBJP) October 19, 2020

ಮುಖ್ಯಮಂತ್ರಿ ಅವರು 125 ಕೋಟಿ ರೂ. ವೆಚ್ಚದ ಕಸಬಾ ಏತ ನೀರಾವರಿ ಯೋಜನೆ, 17.80 ಕೋಟಿ ರೂ. ವೆಚ್ಚದಲ್ಲಿ ಶಿವಶರಣೆ ಅಕ್ಕಮಹಾದೇವಿ ಜನ್ಮಸ್ಥಳದ ಸಮಗ್ರ ಅಭಿವೃದ್ಧಿ ಕಾಮಗಾರಿ, 16ಕೋಟಿ ರೂ. ವೆಚ್ಚದ ಸನ್ಯಾಸಿಕೊಪ್ಪ ಏತ ನೀರಾವರಿ ಕಾಮಗಾರಿ ಹಾಗೂ 8.33 ಕೋಟಿ ರೂ. ವೆಚ್ಚದ ಭಕ್ತನಕೊಪ್ಪ ವಿದ್ಯುತ್ ಉಪಕೇಂದ್ರ, 9 ಕೋಟಿ ರೂ. ವೆಚ್ಚದ ಅಂಬಾರಕೊಪ್ಪ ವಿದ್ಯುತ್ ಉಪಕೇಂದ್ರ ಸೇರಿದಂತೆ ನೂರಾರು ಕೋಟಿ ರೂ. ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಮುಖ್ಯಮಂತ್ರಿ ಅವರು ಇದೇ ಸಂದರ್ಭದಲ್ಲಿ ತೊಗರ್ಸಿ ಹಾಗೂ ಬಿಳಕಿಯಲ್ಲಿ ನಿರ್ಮಿಸಿರುವ ಪಶು ಚಿಕಿತ್ಸಾ ಕೇಂದ್ರ, ಶಿಕಾರಿಪುರ ಹಾಗೂ ಶಿರಾಳಕೊಪ್ಪದಲ್ಲಿ ನಿರ್ಮಿಸಿರುವ ಮೆಟ್ರಿಕ್ ಪೂರ್ವ ಹಾಗೂ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತೋಟಗಾರಿಕೆ, ಪೌರಾಡಳಿತ ಸಚಿವ ನಾರಾಯಣಗೌಡ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಕುಮಾರ್ ಬಂಗಾರಪ್ಪ, ಅರಗ ಜ್ಞಾನೇಂದ್ರ, ಹರತಾಳು ಹಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.

SMG AIRPORT WORK

TAGGED:airportCM BS YeddyurappaIrrigation ProjectsMinister KS EshwarappaPublic TVshivamoggaನೀರಾವರಿಪಬ್ಲಿಕ್ ಟಿವಿವಿಮಾನ ನಿಲ್ದಾಣಶಿವಮೊಗ್ಗಸಚಿವ ಕೆಎಸ್ ಈಶ್ವರಪ್ಪಸಿಎಂ ಬಿಎಸ್ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema Updates

mrunal thakur
ಮೃಣಾಲ್ ಠಾಕೂರ್ ಫ್ಯಾನ್ಸ್‌ಗೆ ಡಬಲ್ ಧಮಾಕ!
3 hours ago
aishwarya rai 1 2
‘ಸಿಂಧೂರ’ ಆಯ್ತು, ಈಗ ಭಗವದ್ಗೀತೆ ಶ್ಲೋಕ- ಭಾರತೀಯ ಸಂಸ್ಕೃತಿ ಪ್ರದರ್ಶಿಸಿದ ಐಶ್ವರ್ಯಾ ರೈ!
7 hours ago
pranitha subhash
ಕಾನ್ ಚಿತ್ರೋತ್ಸವದಲ್ಲಿ ಪ್ರಣಿತಾ ಧರಿಸಿದ್ದ ವಾಚ್ ಬೆಲೆ ಕೇಳಿ ಫ್ಯಾನ್ಸ್ ಶಾಕ್!
8 hours ago
rukmini vasanth
ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?
10 hours ago

You Might Also Like

RCB Fans
Cricket

ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲ್ಲೋವರೆಗೂ ನಾನು ಮದುವೆಯಾಗಲ್ಲ: ಫಲಕ ಪ್ರದರ್ಶಿಸಿದ ಅಭಿಮಾನಿ

Public TV
By Public TV
35 minutes ago
RCB Playoffs
Cricket

IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

Public TV
By Public TV
37 minutes ago
Weather 1
Bengaluru City

ಬೆಂಗಳೂರು | ಧಾರಾಕಾರ ಮಳೆಯಿಂದಾಗಿ ಬೆಸ್ಕಾಂಗೆ 3.54 ಕೋಟಿ ನಷ್ಟ

Public TV
By Public TV
49 minutes ago
Phil Salt
Cricket

ಸನ್‌ ರೈಸರ್ಸ್‌ ಆರ್ಭಟಕ್ಕೆ ಆರ್‌ಸಿಬಿ ಬರ್ನ್‌ – ಹೈದರಾಬಾದ್‌ಗೆ 42 ರನ್‌ಗಳ ಜಯ, 3ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

Public TV
By Public TV
55 minutes ago
virat kohli rcb fans
Cricket

ಬೆಂಗಳೂರಲ್ಲಿ ಮಿಸ್‌.. ಕೊಹ್ಲಿಗೆ ಲಕ್ನೋದಲ್ಲಿ ಸಿಕ್ತು ಆರ್‌ಸಿಬಿ ಅಭಿಮಾನಿಗಳಿಂದ ‘ಟೆಸ್ಟ್‌ ಫೇರ್‌ವೆಲ್‌’

Public TV
By Public TV
1 hour ago
police station
Belgaum

ಕರ್ನಾಟಕದ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?