ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ

Public TV
2 Min Read
HBL RAIN 2

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಮಳೆ ಆಗಿದೆ. ಇಂದು ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಚಿಕ್ಕಬಳ್ಳಾಪುರ, ಕೊಪ್ಪಳ, ಚಿಕ್ಕೋಡಿ, ಕಲಬುರಗಿ, ಬಾಗಲಕೋಟೆ ಸೇರಿ ಹಲವೆಡೆ ಭಾರೀ ಮಳೆಯಾಗಿದ್ದು, ಒಟ್ಟು 9 ಮಂದಿ ಬಲಿ ಆಗಿದ್ದಾರೆ.

HBL RAIN 1

ಸಂಜೆ ವೇಳೆಗೆ ಬೆಂಗಳೂರಿನ ಮಲ್ಲೇಶ್ವರಂ, ಶಾಂತಿನಗರ, ಜಯನಗರ, ಟೌನ್ ಹಾಲ್, ಮಾರ್ಕೆಟ್, ಯಶವಂತಪುರ ಸೇರಿದಂತೆ ಹಲವು ಭಾಗಗಳಲ್ಲಿ ಜೋರು ಮಳೆಯಾಗಿದೆ. ಕೆಲಸ ಮುಗಿಸಿ ಮನೆಯತ್ತ ಹೊರಟಿದ್ದ ಜನರು ಮಳೆಯಲ್ಲಿ ಸಿಲುಕಿ ಹೈರಾಣಾದ್ರು. ಇಂದು ಬೆಳಗ್ಗೆ ಸಹ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಮಳೆಯಾಗಿದೆ. ಸಂಜೆ ಮಳೆಗೆ ವಾಹನ ಸವಾರರು ಫ್ಲೈಓವರ್ ಕೆಳಗೆ ರಕ್ಷಣೆ ಪಡೆದಿರುವ ದೃಶ್ಯಗಳು ಬೆಂಗಳೂರಿನಲ್ಲಿ ಸಾಮಾನ್ಯವಾಗಿತ್ತು.

RAN CKD

ಹಾವೇರಿ ರಾಣೆಬೆನ್ನೂರಿನಲ್ಲಿ ಮತ್ತು ಬಳ್ಳಾರಿಯ ಬೈರಾಪುರದಲ್ಲಿ ಸಿಡಿಲಿಗೆ ತಲಾ ಇಬ್ಬರು ಸಾವನ್ನಪ್ಪಿದ್ದಾರೆ. ಕೊಪ್ಪಳದ ಗೆದಗೇರಿ ತಾಂಡಾದಲ್ಲಿ, ವಿಜಯಪುರದ ಹತ್ತಳ್ಳಿಯಲ್ಲಿ, ಬೆಳಗಾವಿಯ ಅಷ್ಟಗಾದಲ್ಲಿ ತಲಾ ಒಬ್ರು ಸಿಡಿಲಿಗೆ ಬಲಿಯಾಗಿದ್ದಾರೆ. ಬೆಳಗಾವಿಯ ಚಿಕ್ಕ ಉಳ್ಳಿಗೇರಿಯಲ್ಲಿ ಮರ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಗಣೇಶ ನಗರ ಸಂಪೂರ್ಣ ಜಲಾವೃತವಾಗಿದೆ. ಮೊಣಕಾಲೆತ್ತರ ನೀರು ನಿಂತಿದೆ. ನೂರಾರು ಮನೆಗಳಿಗೆ ನೀರು ನುಗ್ಗಿ ಜರ ಪರದಾಡಿದ್ದಾರೆ.

ckb rain

ಬೆಳಗಾವಿಯ ಬೈಲಹೊಂಗಲ-ಮುನವಳ್ಳಿ, ಸವದತ್ತಿ-ಬೈಲಹೊಂಗಲ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತವಾಗಿದೆ. ಚಿಕ್ಕೋಡಿಯಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಹುತೇಕ ಹಳ್ಳ-ಕೊಳ್ಳಗಳು ಭರ್ತಿಯಾಗಿವೆ. ಕೋರೇನಹಳ್ಳಿ ಗ್ರಾಮಕ್ಕೆ ನೀರು ನುಗ್ಗಿದ್ದು, ಬೆಳೆ ಹಾಳಾಗಿದೆ. ಜಾತವಾರ-ಹೊಸಹಳ್ಳಿ ಬಳಿಯ ರೈಲ್ವೇ ಅಂಡರ್ ಪಾಸಲ್ಲಿ ನೀರು ನಿಂತು ವಾಹನ ಸವಾರರು ಪರದಾಡಿದ್ರು. ಬಾಗಲಕೋಟೆಯ ತೇರದಾಳದಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

klr 7

ಗದಗ ಜಿಲ್ಲೆಯ ಹಲವೆಡೆ ತಡರಾತ್ರಿ ಹಾಗೂ ಬೆಳಗಿನ ಜಾವ ಬಾರಿ ಮಳೆಯಾಗಿದೆ. ಜಿಲ್ಲೆಯ ಲಕ್ಷ್ಮೇಶ್ವರ ಭಾಗದಲ್ಲಿ ಸುರಿದ ಮಳೆಗೆ ರಸ್ತೆಗಳೆಲ್ಲಾ ಜಲಾವೃತವಾಗಿವೆ. ಪಟ್ಟಣದ ಹಳೆ ಬಸ್‍ನಿಲ್ದಾಣ ಬಳಿ, ಸೋಮೇಶ್ವರ ಟೆಂಪಲ್, ಹಳೆ ಸ್ಟೇಷನ್, ದೂದಪೀರ್ ನಾನಾ ದರ್ಗಾ ಭಾಗದ ರಸ್ತೆಗಳ ತುಂಬೆಲ್ಲಾ ಮಳೆನೀರು ನದಿಗಳಂತೆ ಹರಿದಿದೆ. ಸಾರ್ವಜನಿಕರು, ವಾಹನ ಸವಾರರು ಸಾಕಷ್ಟು ಪರದಾಡಿದ್ದಾರೆ. ಹಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಬಾರಿ ಮಳೆಯಿಂದ ಮಣ್ಣಿನ ಮನೆಗಳ ಕೆಲವು ಕುಟುಂಬಗಳು ಜಾಗರಣೆ ಮಾಡುವಂತಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *