ಕಾರವಾರ: ಬಿಜೆಪಿ ಸುಳ್ಳು ಹೇಳಿಕೊಂಡು ಜನರ ದೃಷ್ಟಿ ತನ್ನತ್ತ ಸೆಳೆಯುತ್ತಿದೆ ಎಂದು ಶಾಸಕ ಹೆಚ್ಕೆ ಪಾಟೀಲ್ ಅವರು ಹೇಳಿದ್ದಾರೆ.
ಕಾರವಾರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಹೆಚ್.ಕೆ ಪಾಟೀಲ್ ಮಾತನಾಡಿ, ಮೋದಿಯವರ ಯಾವ ಆಶ್ವಾಸನೆ ಕೂಡ ನಿಜವಾಗಿಲ್ಲ. ದೇಶ ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿದೆ. 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಉದ್ಯೋಗ ನಷ್ಟ ಮಾಡಿದರು. ಉದ್ಯೋಗ ನಷ್ಟದ ಬಗ್ಗೆ ಮಾತನಾಡಿದರೆ ಕೊರೊನಾ ಅಂತಾ ಕಾರಣ ಕೊಡುತ್ತಾರೆ ಎಂದು ಬಿಜೆಪಿಯನ್ನು ದೂರಿದರು.
ಬಿಜೆಪಿ ಇಡೀ ಆಡಳಿತ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಆಡಳಿತ ನಡೆಸುತ್ತಿದೆ. ಅನ್ಯಾಯದ ವಿರುದ್ಧ ಧ್ವನಿ ಎತ್ತಿದರೆ ಅವರ ಧ್ವನಿ ಹತ್ತಿಕ್ಕುವ ಪ್ರಯತ್ನವಾಗುತ್ತಿದೆ. ಉತ್ತರ ಪ್ರದೇಶದ ಹತ್ರಾಸ್ ವಿಚಾರದಲ್ಲಿ ಇದೇ ಆಗಿದ್ದು. ಬಿಹಾರ ಚುನಾವಣೆಯಲ್ಲಿ ವ್ಯಾಕ್ಸಿನ್ ಕೊಡುವ ವಿಚಾರದಲ್ಲೂ ರಾಜಕೀಯಕ್ಕೆ ಇಳಿದಿದ್ದಾರೆ. ತಮ್ಮ ಪಕ್ಷಕ್ಕೆ ವೋಟ್ ಹಾಕಿದರೆ ಮಾತ್ರ ಲಸಿಕೆ ಉಚಿತ ಅಂತಾರೆ. ಬಿಹಾರ ಚುನಾವಣಾ ಕಣದಲ್ಲಿ ಈ ರೀತಿ ಆಮಿಷ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬೀಮಣ್ಣ ಮುಂತಾದವರು ಉಪಸ್ಥಿತರಿದ್ದರು.