Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಮೂವರು ಹುದ್ದೆಯಿಂದ ವಜಾ, ಕ್ರಿಮಿನಲ್ ಕೇಸ್ ದಾಖಲಿಸಲು ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಮೂವರು ಹುದ್ದೆಯಿಂದ ವಜಾ, ಕ್ರಿಮಿನಲ್ ಕೇಸ್ ದಾಖಲಿಸಲು ಸೂಚನೆ

Bengaluru City

ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಮೂವರು ಹುದ್ದೆಯಿಂದ ವಜಾ, ಕ್ರಿಮಿನಲ್ ಕೇಸ್ ದಾಖಲಿಸಲು ಸೂಚನೆ

Public TV
Last updated: October 27, 2020 12:04 pm
Public TV
Share
2 Min Read
POBBATHI
SHARE

– ಪಬ್ಲಿಕ್ ಟಿವಿಗೆ ಆರೋಗ್ಯ ಸಚಿವ ಅಭಿನಂದನೆ

ಬೆಂಗಳೂರು: ಹಣ ಕೊಟ್ಟರೆ ಕೊರೊನಾ ನೆಗೆಟಿವ್ ರಿಪೋರ್ಟ್ ನಿಮ್ಮ ಕೈಗೆ ಸಿಗುತ್ತೆ ಎಂಬ ಪಬ್ಲಿಕ್ ಟಿವಿ ಸ್ಟಿಂಗ್ ಆಪರೇಷನ್ ನಲ್ಲಿ ಬಯಲು ಮಾಡಿದ ಬೆನ್ನಲ್ಲೇ ಮೂವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.

ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೇ ಆಶಾ ವರ್ಕರ್, ಸ್ಟಾಫ್ ನರ್ಸ್, ಸ್ವಾಬ್ ಕಲೆಕ್ಟರ್ ಹುದ್ದೆಯಿಂದ ವಜಾ ಮಾಡಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಮೂವರ ಮೇಲೂ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸೂಚನೆ ನೀಡಿದ್ದಾರೆ.

BBMP Commissioner Manjunath Prasad

Public Tv IMPACT ಕೊರೊನಾ ರಿಪೋರ್ಟ್ ನೆಗೆಟಿವ್ ಸ್ಟಿಂಗ್ ಆಪರೇಷನ್ ಸಂಬಂಧ ಆರೋಗ್ಯ ಸಚಿವ ಸುಧಾಕರ್ ಮಾತನಾಡಿ, ಮೊದಲು ಪಬ್ಲಿಕ್ ಟಿವಿ ವರದಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪಬ್ಲಿಕ್ ಟಿವಿ ಸ್ಟಿಂಗ್ ನೋಡಿ ವೈದ್ಯನಾಗಿ ನನಗೆ ನೋವಾಗಿದೆ. ಕೆಳಹಂತದ ಆರೋಗ್ಯ ಇಲಾಖೆ ಅಧಿಕಾರಿಗಳು ಇಂತಹ ಕೆಲಸ ಮಾಡಿರೋದು ನೋವಾಗಿದೆ. ತಕ್ಷಣ ಬಿಬಿಎಂಪಿ ಆಯುಕ್ತರ ಕರೆ ಮಾಡಿ ಮಾಹಿತಿ ಪಡೆದಿದ್ದೇನೆ. ಜಂಟಿ ಆಯುಕ್ತರು ಸ್ಥಳದಲ್ಲಿ ಈಗಾಗಲೇ ಇದ್ದಾರೆ. ಘಟನೆಯ ಸಂಪೂರ್ಣ ವಿವರ ತೆಗೆದುಕೊಂಡು ತಕ್ಷಣ ಕ್ರಮ ತೆಗೆದುಕೊಳ್ತೀನಿ. ಪಬ್ಲಿಕ್ ಟಿವಿ ಅಭಿಯಾನಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಬಿಬಿಎಂಪಿ ಜಂಟಿ ಆಯುಕ್ತರು ಹಾಗೂ ಆರೋಗ್ಯ ಅಧಿಕಾರಿಗಳ ತಂಡ ಬೆಂಗಳೂರಿನ ಪೊಬ್ಬತ್ತಿ ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋವಿಡ್ ಟೆಸ್ಟಿಂಗ್ ಅವ್ಯವಹಾರದಲ್ಲಿ ಭಾಗಿಯಾಗಿರುವ ಆಶಾ ಕಾರ್ಯಕರ್ತೆ ಹಾಗೂ ಲ್ಯಾಬ್ ಟೆಕ್ನಿಷಿಯನ್ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. (1/2)

— Dr Sudhakar K (@DrSudhakar_) October 27, 2020

ಕೆಳ ಹಂತದ ನ್ಯೂನತೆ ಎತ್ತಿ ತೋರಿಸಿ ಕಣ್ಣು ತೆರೆಸುವ ಕೆಲಸ ಪಬ್ಲಿಕ್ ಟಿವಿ ಮಾಡಿದೆ. ಮುಂದೆ ಇಂತಹ ಘಟನೆ ಆಗದಂತೆ ಕಠಿಣ ಕಾನೂನು ಜಾರಿಗೆ ತರುತ್ತೇವೆ. ತಪಿತಸ್ಥರ ವಿರುದ್ದ ತಕ್ಷಣವೇ ಶಿಷ್ಟಾಚಾರದ ಅಡಿಯಲ್ಲಿ ಕ್ರಮ ತೆಗೆದುಕೊಳ್ತೀವಿ. ಇದೊಂದು ಅಮಾನವೀಯ, ಅನೈತಿಕ, ಕಾನೂನುಬಾಹಿರ ಕೆಲಸ. ಚಿಕಿತ್ಸೆ ಕೊಡೋ ಆರೋಗ್ಯ ಸಿಬ್ಬಂದಿ ಹೀಗೆ ತಪ್ಪು ಮಾಡಿದ್ರೆ ಅಮಾಯಕ ಜನರ ಜೀವಕ್ಕೆ ಸಮಸ್ಯೆ ಆಗುತ್ತೆ. ನೆಗೆಟೀವ್ ಅಂತ ಹೋಗಿ ಅವ್ರು ಬೇರೆ ಅವ್ರಿಗೆ ಹರಡಿ ಜೀವಕ್ಕೆ ಅಪಾರ ಆದ್ರೆ ಯಾರು ಜವಾಬ್ದಾರಿ ಎಂದು ಪ್ರಶ್ನಿಸಿದರು.

ಅಕ್ರಮ ಎಸಗುತ್ತಿದ್ದ ಸಿಬ್ಬಂದಿಗಳ ವಿರುಧ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ನಿರ್ಧರಿಸಲಾಗಿದ್ದು ಶೀಘ್ರವೇ FIR ದಾಖಲಿಸಲಾಗುವುದು. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲ್ಯಾಬ್ ಟೆಕ್ನಿಷಿಯನ್ನ ಅನ್ನು ಈ ಕೂಡಲೇ ವಜಾಗೊಳಿಸಲು ಆದೇಶಿಸಲಾಗಿದೆ. ಈ ಅಕ್ರಮವನ್ನು ಬಯಲಿಗೆ ತಂದ @publictvnews ಸಂಸ್ಥೆಗೆ ಅಭಿನಂದನೆಗಳು. (2/2)

— Dr Sudhakar K (@DrSudhakar_) October 27, 2020

ವೈದ್ಯಕೀಯ ಕೆಲಸ ಮಾಡೋಕೆ ಹೃದಯ ಪೂರ್ವಕವಾಗಿ ಸೇರಿರುತ್ತೇವೆ. ಹೀಗೆ ಅನೈತಿಕವಾಗಿ ಹಣ ಮಾಡೋದು ವೈದ್ಯಕೀಯ ಜಗತ್ತಿಗೆ, ವೃತ್ತಿಗೆ ಅವಮಾನ ಮಾಡಿದ ಹಾಗೆ ಆಗಿದೆ. ಇವರ ಕೆಲಸದಿಂದ ನಾವು ತಲೆ ತಗ್ಗಿಸುವಂತೆ ಆಗಿದೆ. ಮುಂದೆ ಹೀಗೆ ಆಗದಂತೆ ಅಗತ್ಯ ಕ್ರಮವಹಿಸುತ್ತೇನೆ ಎಂದು ಭರವಸೆ ನಿಡಿದರು. ಇದನ್ನೂ ಓದಿ: ಕಾಸು ಕೊಟ್ರೆ ಸಿಗುತ್ತೆ ಕೋವಿಡ್ ನೆಗೆಟಿವ್ ರಿಪೋರ್ಟ್- ಪಬ್ಲಿಕ್ ಟಿವಿ ಸ್ಟಿಂಗ್‍ನಲ್ಲಿ ಬಯಲು

CORONA 2

ಪಬ್ಲಿಕ್ ಟಿವಿ ವರದಿ ಪ್ರಸಾರ ಆಗ್ತಿದ್ದಂತೆ ದಕ್ಷಿಣ ವಿಭಾಗದ ಜಂಟಿ ಆಯುಕ್ತ ವೀರಭದ್ರಯ್ಯ ಅವರು ಪೂಬ್ಬತಿ ಹೆರಿಗೆ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಈ ವೇಳೆ ನರ್ಸ್ ಒಬ್ಬರನ್ನು ತರಾಟೆಗೆ ತೆಗೆದುಕೊಂಡ ಅವರು ಯಾರಿದ್ದಾರೆ ಡಾಕ್ಟರ್ಸ್, ನರ್ಸ್ ಕರಿಯಿರಿ ಬೇಗ ಕಿಡಿಕಾರಿದ್ದಾರೆ. ನಂತರ ಅವರು ಗಂಟಲು ದ್ರವ ಸಂಗ್ರಹದ ದಾಖಲೆಗಳನ್ನ ಪರಿಶೀಲಿಸಿದ್ದಾರೆ. ಆದರೆ ಈ ವೇಳೆ ಜಂಟಿ ಆಯುಕ್ತ ಕೇಳಿದ ಗಂಟಲು ದ್ರವದ ದಾಖಲೆಗಳೇ ಆಸ್ಪತ್ರೆಯಲ್ಲಿ ಇಲ್ಲ. ಅಲ್ಲದೆ ಜಂಟಿ ಆಯುಕ್ತರು ಭೇಟಿ ವೇಳೆ ಆಶಾ ವರ್ಕರ್, ಸ್ವಾಬ್ ಕಲೆಕ್ಟರ್ ಬಂದಿರಲಿಲ್ಲ.

CORONA 4

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವೀರಭದ್ರಯ್ಯ, ತಪ್ಪಿತಸ್ಥರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ. ಈ ಪ್ರಕರಣದ ಬಗ್ಗೆ ತನಿಖೆ ಮಾಡಲು 4 ಜನರ ವೈದ್ಯಾಧಿಕಾರಿಗಳ ತಂಡ ನಿಯೋಜನೆ ಮಾಡುವುದಾಗಿ ಭರವಸೆ ನೀಡಿದರು. ಇದೇ ವೇಳೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವಗುಪ್ತಾ ಮಾತನಾಡಿ, ನಾನು ಇದನ್ನ ತನಿಖೆ ಮಾಡಿಸುತ್ತೇನೆ. ಕೆಳ ಹಂತದ ಹುದ್ದೆಯಲ್ಲಿ ಇರೋರು ಈ ರೀತಿ ಕೆಲಸ ಮಾಡೋದು ಸರಿ ಇಲ್ಲ. ಮಾಹಿತಿ ತೆಗೆದುಕೊಂಡು ತನಿಖೆ ಮಾಡಿಸುತ್ತೇನೆ ಎಂದರು.

TAGGED:bengaluruCorona TestingPublic TVPublic TV Impactಅಕ್ರಮಕೊರೊನಾ ಟೆಸ್ಟಿಂಗ್ಪಬ್ಲಿಕ್ ಟಿವಿ ಇಂಪ್ಯಾಕ್ಟ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

accident death
Bengaluru City

ಬೆಂಗಳೂರು| ಹುಟ್ಟುಹಬ್ಬದ ದಿನವೇ ಯುವಕ ಅಪಘಾತದಲ್ಲಿ ಸಾವು

Public TV
By Public TV
23 minutes ago
hassan murder
Crime

ಸಾರಿಗೆ ಇಲಾಖೆ ನೌಕರನ ಬರ್ಬರ ಹತ್ಯೆ ಕೇಸ್ – 10 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
1 hour ago
Kalaburagi Woman In Coma
Crime

ಹಲ್ಲಿನ ಸಮಸ್ಯೆಗೆ ಹೋದ ಮಹಿಳೆ ಕೋಮಾಗೆ; ಸಾವು-ಬದುಕಿನ ಮಧ್ಯೆ ಹೋರಾಟ

Public TV
By Public TV
1 hour ago
Ravi waters
Latest

ಪಾಕಿಸ್ತಾನಕ್ಕೆ ರಾವಿ ನದಿ ನೀರು ಹರಿವು ತಡೆಯಲು ಮುಂದಾದ ಭಾರತ – ನದಿಗೆ ಅಡ್ಡಲಾಗಿ ಡ್ಯಾಂ ಸಿದ್ಧ

Public TV
By Public TV
2 hours ago
BMW buried
Latest

ಮಗನ ಸಾವಿನ ನೋವಿನಲ್ಲಿ 6 ಕೋಟಿ ಮೌಲ್ಯದ BMW ಕಾರನ್ನ ಸಮಾಧಿ ಮಾಡಿದ ತಂದೆ

Public TV
By Public TV
2 hours ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?