Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ 16% ಜನರಲ್ಲಿ ಕೋವಿಡ್ ಪ್ರತಿಕಾಯ ಪತ್ತೆ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ 16% ಜನರಲ್ಲಿ ಕೋವಿಡ್ ಪ್ರತಿಕಾಯ ಪತ್ತೆ: ಸುಧಾಕರ್

Bengaluru City

ರಾಜ್ಯದ 16% ಜನರಲ್ಲಿ ಕೋವಿಡ್ ಪ್ರತಿಕಾಯ ಪತ್ತೆ: ಸುಧಾಕರ್

Public TV
Last updated: November 4, 2020 5:06 pm
Public TV
Share
2 Min Read
sudhakar
SHARE

– ಸೆರೋ ಸರ್ವೆಯಲ್ಲಿ ಪ್ರತಿಕಾಯ ಮೂಲಕ ಸೋಂಕು ಪರೀಕ್ಷೆ
– ಡಿಸೆಂಬರ್ ಅಂತ್ಯ ಹಾಗೂ ಮಾರ್ಚ್ ಅಂತ್ಯದಲ್ಲಿ ಮತ್ತೆ ಸರ್ವೆ

ಬೆಂಗಳೂರು : ರಾಜ್ಯದಲ್ಲಿ 16% ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬೈ, ಪುಣೆ, ದೆಹಲಿ ನಗರಗಳಲ್ಲಿ ಕೆಲ ಸ್ಥಳಗಳಲ್ಲಿ ಸರ್ವೆ ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಎಲ್ಲ 30 ಜಿಲ್ಲೆಗಳಲ್ಲೂ ಸರ್ವೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಎಂಟು ವಲಯಗಳಲ್ಲೂ ನಡೆದಿದೆ. 16,585 ಜನರ ಮಾದರಿಗಳನ್ನು ಪಡೆದು ಪರೀಕ್ಷೆ ಮಾಡಿದ್ದು, 15,624 ಜನರ ಫಲಿತಾಂಶ ಬಂದಿದೆ. ಹಿಂದೆ ಹಾಗೂ ಸರ್ವೆ ಮಾಡುವ ಸಮಯದಲ್ಲಿ ಸೋಂಕಿಗೆ ಒಳಗಾಗಿದ್ದವರ ಒಟ್ಟು ಪ್ರಮಾಣ 27.3% ರಷ್ಟಿದೆ ಎಂದು ತಿಳಿಸಿದರು.

karnaatka corona test

ಕಡಿಮೆ ರಿಸ್ಕ್, ಮಧ್ಯಮ ರಿಸ್ಕ್ ಮತ್ತು ಹೆಚ್ಚು ರಿಸ್ಕ್ ಎಂದು ವರ್ಗೀಕರಣ ಮಾಡಿ ಪರೀಕ್ಷೆ ನಡೆಸಲಾಗಿದೆ. ಕೋವಿಡ್ ವೈರಸ್ ದೇಹಕ್ಕೆ ಬಂದಾಗ ಪ್ರತಿರೋಧಕವಾಗಿ ಐಜಿಜಿ ಉತ್ಪತ್ತಿಯಾಗುತ್ತದೆ. ಐಜಿಜಿ ಹೊಂದಿದವರು ಹಾಗೂ ಸಕ್ರಿಯ ಸೋಂಕಿತರನ್ನು ಪತ್ತೆ ಮಾಡುವ ಮೂಲಕ ಈ ಸರ್ವೆಯನ್ನು ಕ್ರಮಬದ್ಧವಾಗಿ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

15,624 ಜನರಲ್ಲಿ ಐಜಿಜಿ ಪ್ರತಿಕಾಯ ಇರುವವರ ಪ್ರಮಾಣ 16.4% ಇದೆ. ಅಂದರೆ ಇಷ್ಟು ಜನರು ಸೋಂಕಿಗೊಳಗಾಗಿ ಗುಣಮುಖರಾಗಿದ್ದಾರೆ. ಈ ಪ್ರಮಾಣ ದೆಹಲಿಯಲ್ಲಿ 29.1%, ಮುಂಬೈ ಸ್ಲಮ್ ರಹಿತ ಪ್ರದೇಶಗಳಲ್ಲಿ 16% ಹಾಗೂ ಸ್ಲಮ್ ಗಳಲ್ಲಿ 57%, ಪುಣೆಯ 5 ಪ್ರದೇಶಗಳಲ್ಲಿ 36.1 ರಿಂದ 65.4%, ಇಂದೋರ್ ನಲ್ಲಿ 7.8%, ಪಾಂಡಿಚೆರಿಯಲ್ಲಿ 22.7%, ಚೆನ್ನೈನಲ್ಲಿ 32.3% ಇದೆ. 15,624 ಜನರಲ್ಲಿ ಸಕ್ರಿಯ ಸೋಂಕಿತರ ಪ್ರಮಾಣ 12.7% ರಷ್ಟಿದೆ ಎಂದು ವಿವರಿಸಿದರು.

karnataka 123

ಈ ಸರ್ವೆ 2020 ರ ಸೆಪ್ಟೆಂಬರ್ 3 ರಿಂದ 16 ರವರೆಗೆ ನಡೆದಿತ್ತು. ಕೋವಿಡ್ ಮರಣ ಪ್ರಮಾಣವನ್ನು ಸೋಂಕಿಗೆ ಒಳಗಾದ ಒಟ್ಟು ಜನರಿಗೆ ಹೋಲಿಸಿದರೆ, ಬಹಳ ಕಡಿಮೆ ಇದೆ. ರಾಜ್ಯದಲ್ಲಿ ಮರಣ ಪ್ರಮಾಣ 0.05% ಇದೆ. ಮುಂಬೈಯಲ್ಲಿ 0.05-0.10%, ಪುಣೆಯಲ್ಲಿ 0.08%, ದೆಹಲಿಯಲ್ಲಿ 0.09%, ಚೆನ್ನೈನಲ್ಲಿ 0.13% ಮರಣ ಪ್ರಮಾಣವಿದೆ ಎಂದು ವಿವರಿಸಿದರು.

ಹೆಚ್ಚು ಪರೀಕ್ಷೆ ನಡೆಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು, ಚಿಕಿತ್ಸೆಯ ಗುಣಮಟ್ಟ ಹೆಚ್ಚಿಸುವುದು ಸೇರಿದಂತೆ ಹಲವಾರು ಕ್ರಮಗಳನ್ನು ಜಾರಿ ಮಾಡಲು ಈ ಸರ್ವೆ ನೆರವಾಗಲಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣ ಬಹಳ ಕಡಿಮೆ ಇದೆ. ಗುಣಮುಖರ ಪ್ರಮಾಣ 95% ಇದೆ ಎಂದು ತಿಳಿಸಿದರು.

ಆರೋಗ್ಯ ಇಲಾಖೆಯ ಆಯುಕ್ತರಾದ ಶ್ರೀ ಪಂಕಜ್ ಕುಮಾರ್ ಪಾಂಡೆ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ (SAST) ಕಾರ್ಯನಿರ್ವಾಹಕ ನಿರ್ದೇಶಕಿ ಶ್ರೀಮತಿ ಎನ್‌.ಟಿ.ಅಬ್ರೂ ಮತ್ತು ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. (2/2) pic.twitter.com/XeAGD9Oky5

— Dr Sudhakar K (@DrSudhakar_) November 4, 2020

ದೀಪಾವಳಿ ಆಚರಣೆಗೆ ಸಂಬಂಧಿಸಿದಂತೆ ವರದಿ ನೀಡಲು ತಜ್ಞರಿಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು. ಕೋವಿಡ್ ಸೋಂಕಿಗೊಳಗಾಗಿ ಗುಣಮುಖರಾದವರ ಆರೋಗ್ಯದ ನಿಗಾ ಇರಿಸಲು ಪುನರ್ವಸತಿ ಕೇಂದ್ರ ಆರಂಭಿಸಲಾಗುವುದು ಎಂದು ಹೇಳಿದರು.

ಇದೇ ರೀತಿ ಡಿಸೆಂಬರ್ ಅಂತ್ಯದಲ್ಲಿ ಒಂದು ಹಾಗೂ ಮಾರ್ಚ್ ಅಂತ್ಯಕ್ಕೆ ಮತ್ತೊಂದು ಸರ್ವೆ ನಡೆಸಲಾಗುವುದು ಎಂದು ತಿಳಿಸಿದರು. ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ಕೋವಿಡ್ ಸರ್ವೆ ಸಮಿತಿಯ ಮುಖ್ಯಸ್ಥ ಡಾ.ಗಿರಿಧರ ಬಾಬು ಉಪಸ್ಥಿತರಿದ್ದರು.

TAGGED:CoronaCovid19kannada newskarnatakaSudhakarಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19ಸುಧಾಕರ್
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Zameer Ahmed Khan
Bengaluru City

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ – ಜಮೀರ್ ಅಹ್ಮದ್ ಸ್ಪಷ್ಟನೆ

Public TV
By Public TV
12 minutes ago
UP teen murder case
Crime

ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Public TV
By Public TV
34 minutes ago
SN Narayanaswamy Bangarpet MLA
Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
42 minutes ago
Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
1 hour ago
Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
2 hours ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?