Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 20 ವರ್ಷಗಳಿಂದ ಮಳೆಗಾಲದಲ್ಲಿ ಹಲವು ಬಾರಿ ಮುಳುಗ್ತಿದೆ ಹೆಬ್ಬಾಳೆ ಸೇತುವೆ- ಮನವಿಗೆ ಡೋಂಟ್‍ಕೇರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | 20 ವರ್ಷಗಳಿಂದ ಮಳೆಗಾಲದಲ್ಲಿ ಹಲವು ಬಾರಿ ಮುಳುಗ್ತಿದೆ ಹೆಬ್ಬಾಳೆ ಸೇತುವೆ- ಮನವಿಗೆ ಡೋಂಟ್‍ಕೇರ್

Chikkamagaluru

20 ವರ್ಷಗಳಿಂದ ಮಳೆಗಾಲದಲ್ಲಿ ಹಲವು ಬಾರಿ ಮುಳುಗ್ತಿದೆ ಹೆಬ್ಬಾಳೆ ಸೇತುವೆ- ಮನವಿಗೆ ಡೋಂಟ್‍ಕೇರ್

Public TV
Last updated: November 7, 2020 7:53 am
Public TV
Share
2 Min Read
CKM
SHARE

– ಸರ್ಕಾರಕ್ಕೆ ಸ್ಥಳೀಯರು ಹಿಡಿಶಾಪ
– ಅನ್ನಪೂರ್ಣೇಶ್ವರಿ ಬಳಿ ಬೇಡಿಕೊಂಡ ಜನ

ಚಿಕ್ಕಮಗಳೂರು: ಈ ಮಳೆಗಾಲ ಮುಗಿದ ತಕ್ಷಣ ಅದಕ್ಕೊಂದು ಶಾಶ್ವತ ಪರಿಹಾರ ಮಾಡ್ತೀವಿ ಅಂತ ಜನಪ್ರತಿನಿಧಿಗಳು, ಸರ್ಕಾರ ಹೇಳ್ತಾ ಬರೋಬ್ಬರಿ 20 ವರ್ಷಗಳೇ ಕಳೆದಿವೆ. ಆದರೂ ಸಮಸ್ಯೆಗೆ ಮಾತ್ರ ಇದುವರೆಗೂ ಪರಿಹಾರ ಸಿಕ್ಕಿಲ್ಲ. ಮಳೆಗಾಲದಲ್ಲಿ ದಿನಕ್ಕೆ ನಾಲ್ಕೈದು ಬಾರಿ ಮುಳುಗಡೆಯಾಗೋ ಆ ಸೇತುವೆಯಿಂದ ಅಲ್ಲಿಯ ಜನ ಅಲ್ಲೇ, ಇಲ್ಲಿಯ ಜನ ಇಲ್ಲೆ. ರಾಜಕಾರಣಿಗಳು, ಸರ್ಕಾರದ ಆಶ್ವಾಸನೆಯಿಂದ ಬೆಂದು ಬೆಂಡಾಗಿರೋ ಜನಸಾಮಾನ್ಯರು ಸರ್ಕಾರದ ವಿರುದ್ಧ ಇಡಿ ಶಾಪ ಹಾಕ್ತಿದ್ದಾರೆ.

CKM 7

ಹೌದು. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಳಸ ಬಳಿಯ ಹೆಬ್ಬಾಳೆ ಸೇತುವೆ ಮೇಲೆ ಮಳೆಗಾಲದಲ್ಲಿ ನಾಲ್ಕೈದು ಅಡಿ ಎತ್ತರದಲ್ಲಿ ನೀರು ಹರಿಯುತ್ತದೆ. ಈ ಸೇತುವೆ ದಿನದಲ್ಲಿ ನಾಲ್ಕೈದು ಬಾರಿ ಮುಳುಗುತ್ತೆ. ಇದೇ ವರ್ಷದ ಆಗಸ್ಟ್ ತಿಂಗಳ ಮೊದಲ ವಾರದ ಮಳೆಗೆ ಒಂದೇ ವಾರಕ್ಕೆ ಹಲವು ಬಾರಿ ಮುಳುಗಡೆಯಾಗಿತ್ತು. ಕಳೆದ 20 ವರ್ಷಗಳಿಂದಲೂ ಇದು ನಿರಂತರ ಕ್ರಿಯೆ. ಬೇಸಿಗೆ ಬಂದಾಗ ಮಾಡ್ತೀವಿ ಅನ್ನೋ ಜನನಾಯಕರು 20 ವರ್ಷಗಳಿಂದ ಚುನಾವಣೆಗಳನ್ನ ದೂಡ್ತಿದ್ದಾರೆ.

CKM 6

ಸೇತುವೆ ಮುಳುಗಡೆಯಾದರೆ ಯಾವ ವಾಹನವೂ ಸಂಚರಿಸುವಂತಿಲ್ಲ. ಹೊರನಾಡಿನ ಅನ್ನಪೂರ್ಣೇಶ್ವರಿ ದೇಗುಲಕ್ಕೆ ಬರುವ ಹೊರ ರಾಜ್ಯ, ಜಿಲ್ಲೆಯ ವಾಹನಗಳು ರಾತ್ರಿ ವೇಳೆ ಈ ಸೇತುವೆ ಮೇಲೆ ನೀರಲ್ಲಿ ತೊಯ್ದು ನಿಂತ ಉದಾಹರಣೆಗಳಿವೆ. ಆದರೆ ಈವರೆಗೂ ಕೂಡ ಸಂಬಂಧಪಟ್ಟೋರಿಗೆ ಬೇಸಿಗೆನೆ ಬಂದಿಲ್ಲ. ಇದೀಗ ನೀರಿನಲ್ಲಿ ತೊಯ್ದ ಈ ಸೇತುವೆ ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದು, ಅವನತಿಯ ಅಂಚಿನಲ್ಲಿದೆ. ಒಂದು ವೇಳೆ ಕುಸಿದು ಬಿದ್ದರೆ ಆಗುವ ಅನಾಹುತ ದೊಡ್ಡ ಪ್ರಮಾಣದ್ದಾಗಿರುತ್ತೆ. ಸೇತುವೆಯನ್ನ ಎತ್ತರಿಸಿಕೊಡುವಂತೆ ಸ್ಥಳೀಯರು ಹಲವು ವರ್ಷಗಳಿಂದ ಮನವಿ ಮಾಡುತ್ತಿದ್ದಾರೆ. ಆದರೆ ಸ್ಥಳೀಯರ ಮನವಿಗೆ ಸರ್ಕಾರದಿಂದ ಸಿಕ್ಕ ಕೊಡುಗೆ ಶೂನ್ಯ.

CKM 5

ಸೇತುವೆಗೆ ಯಾವುದೇ ತಡೆಗೋಡೆಗಳಿಲ್ಲ. ರಾತ್ರಿ ವೇಳೆ ವಾಹನ ಸ್ವಲ್ಪ ಜಾರಿದ್ರು ಕೂಡ ನದಿ ಪಾಲಾಗೋದ್ರಲ್ಲಿ ಎರಡು ಮಾತಿಲ್ಲ. ಈ ಮಾರ್ಗವಾಗಿ ಹೊರನಾಡಿನ ಅನ್ನಪೂರ್ಣೇಶ್ವರಿ ದರ್ಶನ ಪಡೆಯೋಕೆ ಹೋಗೋ ಪ್ರವಾಸಿಗರೇ ಹೆಚ್ಚು. ರಸ್ತೆ ಹಾಗೂ ಕರ್ವ್ ಪರಿಚಯವಿರೋ ಚಾಲಕರಾದ್ರೆ ಓಕೆ. ಹೊಸಬರಾದ್ರೆ ಅಪಾಯ ಕಟ್ಟಿಟ್ಟ ಬುತ್ತಿ. ಈ ಮಾರ್ಗ ನೀರಿನಲ್ಲಿ ಮುಳುಗಿದ್ರೆ ಸುಮಾರು 10 ರಿಂದ 15 ಕಿ.ಮೀ. ಸುತ್ತಿಕೊಂಡು ದೇಗುಲಕ್ಕೆ ಹೋಗಬೇಕಾಗುತ್ತೆ. ಮಳೆಗಾಲದಲ್ಲಿ ಬೇರೆ ಮಾರ್ಗವಿಲ್ಲದೇ ರೋಗಿಗಳು ಕೂಡ ಸಂಕಷ್ಟಕ್ಕೀಡಾಗಿದ್ದಾರೆ. ರಾಜಕಾರಣಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದಿಂದ ಈ ಸೇತುವೆ ವರ್ಷದಿಂದ ವರ್ಷಕ್ಕೆ ತನ್ನ ಸಾಮಥ್ರ್ಯ ಕಳೆದುಕೊಳ್ತಿದೆ. 20 ವರ್ಷದಿಂದ ಜನರ ಸಮಸ್ಯೆಯೊಂದು ಅರ್ಥವಾಗದ ಇಲ್ಲಿನ ಜಡ್ಡು ಹಿಡಿದ ಅಧಿಕಾರಿ ಹಾಗೂ ಜನಪ್ರತಿನಿಧಿಗಳಿಗೆ ಹೊರನಾಡು ಅನ್ನಪೂರ್ಣೇಶ್ವರಿಯೇ ಬುದ್ಧಿ ಕೊಡಬೇಕೆಂದು ಸ್ಥಳೀಯರು ಅನ್ನಪೂರ್ಣೇಶ್ವರಿ ಬಳಿ ಬೇಡಿಕೊಳ್ತಿದ್ದಾರೆ.

CKM 4

ಒಟ್ಟಾರೆ ಮಲೆನಾಡಲ್ಲಿ ಯಥೇಚ್ಚವಾಗಿ ಸುರಿಯೋ ಮಳೆಯಿಂದ ಏಳೆಂಟು ತಿಂಗಳ ಕಾಲ ಸೇತುವೆ ಅಡಿಯಲ್ಲಿ ಶಾಂತಳಾಗಿ ಹರಿಯೋ ಭದ್ರೆ ಮಳೆಗಾಲದಲ್ಲಿ ಅಷ್ಟೆ ವೇಗವಾಗಿ ಹರಿಯುತ್ತಾಳೆ. ಮುಂದೊಂದು ದಿನ ಮತ್ತೊಂದು ದೊಡ್ಡ ಅನಾಹುತವಾದಾಗ ಸರ್ಕಾರ ಕೈಹಿಸುಕಿಕೊಳ್ಳುವ ಬದಲು ಕೂಡಲೇ ಇತ್ತ ಗಮನ ಹರಿಸಿ ಈ ಸೇತುವೆಗೆ ತಡೆಗೋಡೆ ನಿರ್ಮಿಸಿ, ಸೇತುವೆಯನ್ನ ಎತ್ತರಿಸೋ ಕಾರ್ಯಕ್ಕೆ ಮುಂದಾಗ್ಲಿ ಅಂತ ಸ್ಥಳೀಯರು ಒತ್ತಾಯಿಸಿದ್ದಾರೆ.

CKM 2

TAGGED:bridgechikkamagaoluruhebbalePublic TVroadಚಿಕ್ಕಮಗಳೂರುಪಬ್ಲಿಕ್ ಟಿವಿರಸ್ತೆಸೇತುವೆ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
11 minutes ago
01 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-1

Public TV
By Public TV
25 minutes ago
02 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-2

Public TV
By Public TV
30 minutes ago
03 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-3

Public TV
By Public TV
32 minutes ago
DK Shivakumar 9
Bengaluru City

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆಶಿ

Public TV
By Public TV
1 hour ago
pete hegseth
Latest

ಮುಂದಿನ 24-48 ಗಂಟೆಗಳಲ್ಲಿ ಇರಾನ್ ಮೇಲಿನ ದಾಳಿ ಅತ್ಯಂತ ಭೀಕರವಾಗಿರಲಿದೆ – US ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ 

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?