Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೈಎಲೆಕ್ಷನ್ ಕದನ ಕುತೂಹಲಕ್ಕೆ ಇಂದು ತೆರೆ- ಆರ್.ಆರ್ ನಗರದಲ್ಲಿ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೈಎಲೆಕ್ಷನ್ ಕದನ ಕುತೂಹಲಕ್ಕೆ ಇಂದು ತೆರೆ- ಆರ್.ಆರ್ ನಗರದಲ್ಲಿ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ

Bengaluru City

ಬೈಎಲೆಕ್ಷನ್ ಕದನ ಕುತೂಹಲಕ್ಕೆ ಇಂದು ತೆರೆ- ಆರ್.ಆರ್ ನಗರದಲ್ಲಿ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ

Public TV
Last updated: November 10, 2020 7:17 am
Public TV
Share
2 Min Read
RR NAGAR
SHARE

ಬೆಂಗಳೂರು: ರಾಜರಾಜೇಶ್ವರಿ ನಗರ ಉಪ ಚುನಾವಣೆ ಮತಎಣಿಕೆಗೆ ಸಿದ್ಧತೆ ಮುಕ್ತಾಯವಾಗಿದೆ. ಬಿಬಿಎಂಪಿ, ಪೊಲೀಸ್ ಇಲಾಖೆಯ ಭದ್ರತೆಯಲ್ಲಿ ಮತಎಣಿಕೆ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರತಿಷ್ಠೆಯ ಅಖಾಡ, ಘಟಾನುಘಟಿಗಳೇ ಕಣಕ್ಕಿಳಿದು ಸವಾಲಿಗೆ ಸವಾಲೆಸೆದು ರಂಗೇರಿದ್ದ ರಣಕಣ ರಾಜರಾಜೇಶ್ವರಿ ನಗರ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ರಾಜರಾಜೇಶ್ವರಿ ಯಾರಿಗೆ ಒಲಿಯಲಿದ್ದಾಳೆ ಅನ್ನೋದು ಮಧ್ಯಾಹ್ನದ ವೇಳೆಗೆ ಕ್ಲೀಯರ್ ಪಿಕ್ಚರ್ ಸಿಗಲಿದೆ.

MUNIRATHNA

ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿರುವ ಕ್ಷೇತ್ರದಲ್ಲಿ ಗೆಲುವಿನ ಕುದುರೆ ಏರುವವರು ಯಾರು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಈಗಾಗಲೇ ರಾಜರಾಜೇಶ್ವರಿ ನಗರ ಉಪಚುನಾವಣೆಯ ಮತಎಣಿಕೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಬಿಜೆಪಿಯ ಮುನಿರತ್ನ, ಕಾಂಗ್ರೆಸ್ಸಿನ ಕುಸುಮಾ ಹಾಗೂ ಜೆಡಿಎಸ್‍ನ ಕೃಷ್ಣಮೂರ್ತಿ ಸೇರಿದಂತೆ 16 ಹುರಿಯಾಳುಗಳ ಭವಿಷ್ಯ ಮಧ್ಯಾಹ್ನದೊಳಗೆ ಪ್ರಕಟವಾಗಲಿದೆ.

KUSUMA 1 1

ಹಲಗೆವಡೇರಹಳ್ಳಿಯ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಮತಎಣಿಕೆ ನಡೆಯಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೂ ಇಡೀ ಕ್ಷೇತ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮದ್ಯ ಮಾರಾಟಕ್ಕೂ ನಿರ್ಬಂಧ ಹಾಕಲಾಗಿದೆ. ಪೊಲೀಸರ ಹದ್ದಿನ ಕಣ್ಣಿನಲ್ಲಿ ಮತ ಎಣಿಕೆ ನಡೆಯಲಿದೆ.

RR NAGAR 1  ಆರ್.ಆರ್.ನಗರ ಮತ ಎಣಿಕೆಗೆ ಕ್ಷಣಗಣನೆ: 
ಮುನಿರತ್ನ, ಕುಸುಮಾ, ಕೃಷ್ಣಮೂರ್ತಿ ಸೇರಿ ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 2,09,828 ಮತ ಚಲಾವಣೆ, ಒಟ್ಟು ಶೇ.45.48ರಷ್ಟು ಮತದಾನವಾಗಿದೆ. 412 ಅಂಚೆ ಹಾಗೂ 04 ಇಟಿಪಿಬಿಎಸ್ ಮತ ಚಲಾವಣೆ ಆಗಿದೆ. ಮೊದಲು ಬೆಳಗ್ಗೆ 8 ಗಂಟೆಗೆ ಅಂಚೆ ಮತ ಎಣಿಕೆ ಹಾಗೂ ಇಟಿಪಿಬಿಎಸ್ ಮತಎಣಿಕೆ ಆರಂಭವಾಗಲಿದೆ. ಅಂಚೆ ಮತ ಎಣಿಕೆ ಬಳಿಕ ಇವಿಎಂ ಮತಎಣಿಕೆ ಶುರುವಾಗಲಿದೆ. ಆರ್.ಆರ್.ನಗರದಲ್ಲಿ ಒಟ್ಟು 25 ಸುತ್ತುಗಳಲ್ಲಿ ಮತಎಣಿಕೆ ನಡೆಯಲಿದೆ. ಒಟ್ಟು 678 ಮತಗಟ್ಟೆಗಳಿದ್ದು ಪ್ರತಿ ಸುತ್ತಿನಲ್ಲಿ 28 ಟೇಬಲ್‍ಗಳಲ್ಲಿ ಮತಎಣಿಕೆ ನಡೆಯಲಿದ್ದು, ಒಂದು ಕೊಠಡಿಯಲ್ಲಿ 7 ಎಣಿಕಾ ಟೇಬಲ್‍ಗಳಂತೆ ಒಟ್ಟು 4 ಕೊಠಡಿಯಲ್ಲಿ 28 ಎಣಿಕಾ ಟೇಬಲ್ ವ್ಯವಸ್ಥೆ ಮಾಡಲಾಗಿದೆ.

RR NAGAR 2

ಪ್ರತಿ ಟೇಬಲ್‍ಗೆ ಮೂವರು ಅಧಿಕಾರಿ, ಸಿಬ್ಬಂದಿಯ ನೇಮಕ ಮಾಡಲಾಗಿದೆ. ಮತಎಣಿಕೆ ಕಾರ್ಯಕ್ಕೆ 250 ಸಿಬ್ಬಂದಿ ನೇಮಕ ಮಾಡಲಾಗಿದ್ದು, ಸಿಬ್ಬಂದಿಗೆ 2 ಹಂತದ ತರಬೇತಿ ನೀಡಲಾಗಿದೆ. ಗುರುತಿನ ಚೀಟಿ ಹೊಂದಿರುವವರಿಗಷ್ಟೇ ಪ್ರವೇಶಕ್ಕೆ ಅವಕಾಶ. ಚುನಾವಣೆ ಸಿಬ್ಬಂದಿಗೆ ಮೊಬೈಲ್ ನಿಷೇಧ ಮಾಡಲಾಗಿದ್ದು, ಎಲ್ಲರಿಗೂ ಮಾಸ್ಕ್, ಸ್ಯಾನಿಟೈಸ್ ಕಡ್ಡಾಯ ಎಂದು ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

RR NAGAR 3

ವಿಜಯೋತ್ಸವ, ಪಟಾಕಿ ಹಚ್ಚಂಗಿಲ್ಲ:
ಮತ ಎಣಿಕೆ ಕಾರ್ಯ ಪೊಲೀಸ್ ಭದ್ರತೆಯಲ್ಲಿ ನಡೆಯಲಿದೆ. ಗೆದ್ದ ಅಭ್ಯರ್ಥಿಗಳ ಪರವಾಗಿ ಮತ ಎಣಿಕೆ ಕೇಂದ್ರದ ಬಳಿ ಸಂಭ್ರಮಾಚರಣೆಗೆ ಮತ್ತು ಪಟಾಕಿ ಸಿಡಿಸಲು ಅವಕಾಶವಿಲ್ಲ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನುರೀತ್ಯ ಕ್ರಮದ ಎಚ್ಚರಿಕೆ ನೀಡಲಾಗಿದೆ. ಇನ್ನು ಎಣಿಕೆ ಕೇಂದ್ರದ ಮುಂಭಾಗದಲ್ಲಿನ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಮತಎಣಿಕೆ ಕೇಂದ್ರ ಮತ್ತು ಆರ್.ಆರ್.ನಗರ ಕ್ಷೇತ್ರದಲ್ಲಿ ಪೊಲೀಸ್ ಸರ್ಪಗಾವಲು ಹಾಕಿದ್ದಾರೆ.

RR NAGAR 4

ಒಟ್ಟಿನಲ್ಲಿ ಹೈವೋಲ್ಟೇಜ್ ಕ್ಷೇತ್ರದ ಮತ ಎಣಿಕೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದೆ. ಮಧ್ಯಾಹ್ನ 1 ಗಂಟೆ ಒಳಗೆ ವಿಜಯಲಕ್ಷ್ಮಿ ಯಾರಿಗೆ ಒಲಿಯುತ್ತಾಳೆ ಎಂಬುದು ಕುತೂಹಲ ಮೂಡಿಸಿದೆ.

TAGGED:bengaluruby electionPublic TVresultrr nagarಆರ್ ಆರ್ ನಗರಉಪ ಚುನಾವಣೆಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
25 minutes ago
Basavaraj Rayareddy Shivalinge Gowda UT Khader
Bengaluru City

ವಿಧಾನಸಭೆಯಲ್ಲಿ ಶಿವಲಿಂಗೇಗೌಡ VS ರಾಯರೆಡ್ಡಿ ಇಂಗ್ಲೀಷ್ ವಾರ್

Public TV
By Public TV
41 minutes ago
21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
55 minutes ago
7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
1 hour ago
Supreme Court
Court

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Public TV
By Public TV
1 hour ago
Delhi Assembly Bomb Threat
Crime

ದೆಹಲಿ ವಿಧಾನಸಭೆ, ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?