Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತರಣೆ: ಸಿಟಿ ರವಿ

Public TV
Last updated: November 14, 2020 4:39 pm
Public TV
Share
2 Min Read
ct ravi 2
SHARE

– ಅಯೋಧ್ಯೆಯಲ್ಲಿ ವೈಭವ ಮರುಕಳಿಸಿದೆ

ಚಿಕ್ಕಮಗಳೂರು: ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತಿರಣೆ ಮಾಡುವ ಬಹುತೇಕ ಸಾಧ್ಯತೆಗಳಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಬಿಂಡಿಗೆ ದೇವಿರಮ್ಮನ ಬೆಟ್ಟದಲ್ಲಿ ದೇವಿರಮ್ಮನ ದರ್ಶನದ ಬಳಿಕ ಮಾತನಾಡಿದ ಅವರು, ವರಿಷ್ಠರು ಬಿಹಾರದ ವಿದ್ಯಾಮಾನಗಳಲ್ಲಿ ತೊಡಗಿಕೊಂಡಿರುವುದರಿಂದ ಮುಖ್ಯಮಂತ್ರಿ ಯಡಿಯೂರಪ್ಪನವರ ಭೇಟಿ ಸಾಧ್ಯವಾಗಿಲ್ಲ. ಹಬ್ಬದ ಬಳಿಕ ಸಿಎಂ ದೆಹಲಿಗೆ ಹೋಗಿ ಸಮಾಲೋಚನೆ ನಡೆಸಿ, ವಿಸ್ತರಣೆ ಮಾಡಲಿದ್ದಾರೆ. ಸಿಎಂ ಮನದಲ್ಲಿ ಪುನರ್ ರಚನೆಯ ಯೋಜನೆ ಇದೆ. ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಎಂಬುದನ್ನು ವರಿಷ್ಠರ ಜೊತೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಅಲ್ಲದೆ ಶೀಘ್ರದಲ್ಲೇ ಚಿಕ್ಕಮಗಳೂರಿಗೆ ಉಸ್ತುವಾರಿ ಸಚಿವರು ಬರುತ್ತಾರೆ ಎಂದರು.

BJP SULLAI

ಬಿಹಾರದಲ್ಲಿ ಡಬಲ್ ಎಂಜಿನ್ ಸರ್ಕಾರ: ಬಿಹಾರದಲ್ಲಿ ನಾಲ್ಕನೇ ಬಾರಿಗೆ ನಿತಿಶ್ ಕುಮಾರ್ ಸರ್ಕಾರ ಜನಮನ್ನಣೆ ಗಳಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಅವರು ಅದನ್ನು ಸಾಧಿಸಿದ್ದಾರೆ. ಪ್ರಧಾನಿ ಹಾಗೂ ನಿತಿಶ್ ಕುಮಾರ್ ನೇತೃತ್ವದಲ್ಲಿ ಡಬಲ್ ಇಂಜಿನ್ ಸರ್ಕಾರ ಬಂದಿದೆ. ಬಿಹಾರ ಜನರ ಕನಸನ್ನ ನನಸು ಮಾಡಲು ಶಕ್ತಿ ತುಂಬುವಂತಹ ಕೆಲಸವನ್ನು ಎನ್‍ಡಿಎ ಮಾಡುತ್ತದೆ ಎಂದರು.

Nitish Modi

ಮೂರು ರಾಜ್ಯಗಳ ಉಸ್ತುವಾರಿ ಕುರಿತಂತೆ ಪಕ್ಷ ಕೊಡುವ ಜವಾಬ್ದಾರಿಗೆ ಜೀವ ತುಂಬುವ ಕೆಲಸ ಮಾಡುತ್ತೇನೆ. ಈಗ ಮಹಾರಾಷ್ಟ್ರ, ಗೋವಾ ಹಾಗೂ ತಮಿಳುನಾಡಿನ ಸಂಘಟನೆಯ ಉಸ್ತುವಾರಿ ವಹಿಸಿದೆ. ಬೇರೆಲ್ಲಾ ಪದಾಧಿಕಾರಿಗಳಿಗೆ ಒಂದು, ಎರಡು, ಮೂರು ರಾಜ್ಯಗಳ ಜವಾಬ್ದಾರಿ ಕೊಟ್ಟಿದ್ದಾರೆ. ಜೊತೆಗೆ ರಾಷ್ಟ್ರೀಯ ಅಧ್ಯಕ್ಷರ ಪ್ರವಾಸದ ಹೊಣೆಗಾರಿಕೆಯನ್ನ ಈಶಾನ್ಯ, ಪಶ್ಚಿಮ ಹಾಗೂ ದಕ್ಷಿಣ ಭಾರತದ ಹೊಣೆಗಾರಿಕೆಯನ್ನೂ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರದ ಕೆಲ ಯೋಜನೆಗಳ ಅನುಷ್ಠಾನದ ಕುರಿತಂತೆ ಸಂಘಟನೆಯಿಂದ ವಹಿಸಬೇಕಾದ ಜಾಗೃತಿಯ ಜವಾಬ್ದಾರಿಗಳನ್ನೂ ಕೊಟ್ಟಿದ್ದಾರೆ. ಚಿಕ್ಕಮಗಳೂರು ಹಾಗೂ ಕರ್ನಾಟಕದಲ್ಲಿ ಕಾರ್ಯಕರ್ತನಾಗಿ ಗಳಿಸಿರುವ ಅನುಭವವನ್ನ ಸಂಘಟನೆ ಕಟ್ಟಲು ಉಪಯೋಗಿಸಿರುವ ಮಾನದಂಡಗಳನ್ನಿಟ್ಟುಕೊಂಡು ನಮಗೆ ವಹಿಸಿರುವ ರಾಜ್ಯದಲ್ಲಿ ಕಾರ್ಯಕರ್ತರು ಜನನಾಯಕರಾಗಿ ಹೊರಬರುವಂತೆ, ಜನನಾಯಕದ ಮೂಲಕ ರಾಜ್ಯದ ನೇತೃತ್ವ ವಹಿಸುವಂತ ಎಲ್ಲ ಪ್ರಯತ್ನ ಮಾಡುತ್ತೇವೆ ಎಂದರು.

AVDAYODHYALIGHTS

ಅಯೋಧ್ಯೆಯಲ್ಲಿ ಮರುಕಳಿಸಿದ ವೈಭವ: 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮತ್ತೆ ಸಂಭ್ರಮ ನೆಲೆಸಿದೆ. ಶ್ರೀರಾಮನ ಪಟ್ಟದ ಮಹೋತ್ಸವದ ಕಾಲಘಟ್ಟದಲ್ಲಿ ವರ್ಣನೆಯನ್ನ ಸಾಕಾರಗೊಳ್ಳುವಂತ ಕೆಲಸವನ್ನು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮಾಡುತ್ತಿದೆ. ಜಗತ್ತಿನ ಜನ ಸಂಭ್ರಮಿಸಿದ್ದಾರೆ. ಇದನ್ನೇ ಪುನರುತ್ಥಾನ ಎನ್ನುವುದು. ಸಾವಿರಾರು ವರ್ಷಗಳಿಂದ ಬಹುತೇಕರು ನಮ್ಮ ಸಂಸ್ಕೃತಿಯನ್ನು ನಾಶ ಮಾಡಲು ಪ್ರಯತ್ನಿಸಿದರು. ನಾವು ಯಾರಿಗೂ ಕೆಡುಕು ಮಾಡಿದವರಲ್ಲ. ಎಲ್ಲವನ್ನೂ ಸ್ವೀಕಾರ ಮಾಡಿದವರು. ಜಗತ್ತಿನ ಯಾವ ನೆಲದಲ್ಲೂ ಕೂಡ ಅಣುರೇಣು ತೃಣಕಾಷ್ಟಗಳಲ್ಲೂ ಭಗವಂತ ಇದ್ದಾನೆಂಬ ಸಂದೇಶವನ್ನಾಗಲಿ, ಎಲ್ಲ ಕಡೆಯಿಂದಲೂ ಒಳ್ಳೆಯ ಗುಣಗಳೇ ಹರಿದು ಬರಲೆಂಬ ಪ್ರಾರ್ಥನೆಯಾಗಲಿ ಹಾಗೂ ದೇವನೊಬ್ಬ ನಾಮ ಹಲವು ಎಂಬ ನಂಬಿಕೆಯಾಗಲಿ ಜಗತ್ತಿನಲ್ಲಿ ಎಲ್ಲೂ ಇಲ್ಲ. ಆದರೂ ಈ ಸಂಸ್ಕೃತಿಯನ್ನು ನಾಶ ಮಾಡುವಂತಹ ಪ್ರಯತ್ನ ಸಾವಿರಾರು ವರ್ಷಗಳಿಂದ ನಡೆಯಿತು. ಆ ಕಾರಣದಿಂದಲೇ ಅಯೋಧ್ಯೆಯ ವೈಭವವನ್ನು ಕಸಿಯುವ ಕೆಲಸ ಮಾಡಿದ್ದರು. ಈಗ ಆ ವೈಭವ ಮತ್ತೆ ಮರುಕಳಿಸಿದೆ ಎಂದರು.

TAGGED:Ayodhyabjpcabinet expansionCT RaviPublic TVಅಯೋಧ್ಯೆಪಬ್ಲಿಕ್ ಟಿವಿಬಿಜೆಪಿಸಚಿವ ಸಂಪುಟ ವಿಸ್ತರಣೆಸಿ.ಟಿ ರವಿ
Share This Article
Facebook Whatsapp Whatsapp Telegram

Cinema Updates

Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
27 minutes ago
pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
5 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
5 hours ago
Kamal Haasan Sudha rani
ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ
6 hours ago

You Might Also Like

covid schools
Bengaluru City

ಜ್ವರ, ಕೆಮ್ಮು, ನೆಗಡಿ ಲಕ್ಷಣ ಇರೋ ಮಕ್ಕಳು ಶಾಲೆಗೆ ಹೋಗೋದು ಬೇಡ: ಶಾಲೆಗಳಿಗೆ ಸರ್ಕಾರ ಗೈಡ್‌ಲೈನ್ಸ್‌

Public TV
By Public TV
26 minutes ago
Heavy Rain in Northeast states
Latest

ಕೇರಳದಿಂದ ಈಶಾನ್ಯ ರಾಜ್ಯಗಳವರೆಗೂ ನಿಲ್ಲದ ವರುಣನ ಅಬ್ಬರ – ಮಳೆಯಾರ್ಭಟಕ್ಕೆ 30ಕ್ಕೂ ಹೆಚ್ಚು ಬಲಿ

Public TV
By Public TV
54 minutes ago
Dinesh Gundu Rao 2
Dakshina Kannada

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬೇಡ ಎಂದಿಲ್ಲ: ದಿನೇಶ್ ಗುಂಡೂರಾವ್

Public TV
By Public TV
1 hour ago
MI vs PBKS rain
Cricket

ಪಂಜಾಬ್‌ vs ಮುಂಬೈ ಕ್ವಾಲಿಫೈಯರ್ 2 ಪಂದ್ಯಕ್ಕೆ ಮಳೆ ಅಡ್ಡಿ – ಮ್ಯಾಚ್‌ ರದ್ದಾದ್ರೆ ಯಾರಿಗೆ ನಷ್ಟ?

Public TV
By Public TV
1 hour ago
V Somanna
Bidar

ಡಿಕೆಶಿ ಪಾದಕ್ಕೆ ಕೋಟಿ ನಮಸ್ಕಾರ ಮಾಡ್ತೀನಿ, ಹೇಮಾವತಿ ಕೈ ಬಿಡಿ: ವಿ.ಸೋಮಣ್ಣ

Public TV
By Public TV
2 hours ago
Ukrainian Drones Strike Airbase In Russia At Least 40 Aircraft Hit
Latest

ರಷ್ಯಾದ ವಾಯುನೆಲೆಗಳ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ – 40 ವಿಮಾನಗಳು ಧ್ವಂಸ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?