ಮರಾಠ ಅಭಿವೃದ್ಧಿಗೆ 50 ಕೋಟಿ – ಸರ್ಕಾರದ ನಿರ್ಧಾರಕ್ಕೆ ಸಾ.ರಾ ಗೋವಿಂದ್ ವಿರೋಧ

Public TV
1 Min Read
mnd sara govind

– ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ, ಪ್ರತಿಭಟನೆ ಮಾಡ್ತೇವೆ

ಬೆಂಗಳೂರು: ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ 50 ಕೋಟಿ ರೂಪಾಯಿ ಅನುದಾನ ನೀಡಿರುವುದನ್ನು ನಾನು ವಿರೋಧಿಸುತ್ತೇನೆ ಎಂದು ಸಾ.ರಾ ಗೋವಿಂದ್ ಅವರು ಹೇಳಿದ್ದಾರೆ.

ಇಂದು ನಗರದಲ್ಲಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಸಿಎಂ ನಿರ್ಧಾರವನ್ನು ಖಂಡಿಸಿ ನಾಡಿದ್ದು ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪ್ರತಿಭಟನೆ ಮಾಡುತ್ತೇವೆ. ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ, ಕನ್ನಡಪರ ಸಂಘಟನೆಗಳು ಹೋರಾಟಕ್ಕೆ ಮುಂದಾಗಿ ಎಂದು ಮನವಿ ಮಾಡಿದರು.

Sa Ra Govindu

ಬೇರೆ ರಾಜ್ಯಗಳಲ್ಲಿ ಭಾಷೆಯನ್ನು ಅಭಿವೃದ್ಧಿ ಮಾಡುವ ಕೆಲಸವಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಆಗಲೇ ಇಲ್ಲ. ಮರಾಠಿ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂಪಾಯಿ ಕೊಟ್ಟಿದ್ದಾರೆ. 2020-21ರಲ್ಲಿ ಕನ್ನಡ ಅನುಷ್ಟಾನ ಮತ್ತು ಅಭಿವೃದ್ಧಿಗಾಗಿ ಪ್ರಯತ್ನ ಮಾಡೋಣ ಅಂತ ಸಿಎಂ ಹೇಳಿದ್ದರು, ಆದರೆ ಇಲ್ಲಿಯವರೆಗೆ 2 ಕೋಟಿ ಕೇಳಿದರೂ ಕನ್ನಡ ಅಭಿವೃದ್ಧಿಗೆ ಕೊಡುವುದಕ್ಕೆ ಆಗಲಿಲ್ಲ. ಆದರೆ ಮರಾಠ ಅಭಿವೃದ್ಧಿಗೆ 50 ಕೋಟಿ ಕೊಟ್ಟಿದ್ದಾರೆ ಎಂದು ಗುಡುಗಿದರು.

BSY

ನಿಮ್ಮ ಈ ನಿರ್ಧಾರಕ್ಕೆ ಸಲಹೆ ಕೊಟ್ಟವರು ಯಾರು? ಮರಾಠಿಗರು ನವೆಂಬರ್ 1ಕ್ಕೆ ಕರಾಳ ದಿನ ಆಚರಣೆ ಮಾಡುತ್ತಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನ ನೀಡುವ ಮೂಲಕ ಕನ್ನಡ ಪ್ರಾಧಿಕಾರವನ್ನು ಮುಚ್ಚುತ್ತಿರಾ? ಮರಾಠ ಅಭಿವೃದ್ಧಿ ಪ್ರಾಧಿಕಾರ ರದ್ದು ಮಾಡಿ. ಕನ್ನಡ ಪರ ಹೋರಾಟಗಾರನಾಗಿ ನಾನು ವಿರೋಧ ಮಾಡುತ್ತೇನೆ ಎಂದು ಹೇಳಿದರು.

sa ra govindu A

ಬೆಳಗಾವಿ ಬಸವ ಕಲ್ಯಾಣ ಉಪ ಚುನಾವಣೆ ಘೋಷಣೆಗೂ ಮುನ್ನವೇ, ಮರಾಠ ಸಮುದಾಯ ಓಲೈಸುವ ಸಲುವಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಸಿಎಂ ಬಿಎಸ್‍ವೈ ಆದೇಶ ಹೊರಡಿಸಿದ್ದರು. ಅಲ್ಲದೇ 50 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *