ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ: ಈಶ್ವರಪ್ಪ

Public TV
1 Min Read
Eshwarappa Santosh

– ಡಿಕೆಶಿಗೆ ಈಶ್ವರಪ್ಪ ಬಹಿರಂಗ ಸವಾಲ್

ಬೆಳಗಾವಿ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನಿಸಿರುವ ವಿಚಾರವಾಗಿ ಸಚಿವ ಈಶ್ವರಪ್ಪ ಅವರನ್ನು ಪ್ರಶ್ನೆ ಮಾಡಲಾಗಿದ್ದು, ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಎಂದು ಉತ್ತರಿಸಿದ್ದಾರೆ

ಇಂದು ಈ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾನು ಮಾಧ್ಯಮಗಳಲ್ಲಿ ರಾತ್ರಿ ಈ ಬಗ್ಗೆ ನೋಡಿದೆ. ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ ಎಂದು ಗೊತ್ತಾಗಿದೆ. ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಮಾಡುತ್ತಿದ್ದೀರಾ ಎಂದು ವಾಪಸ್ ಮಾಧ್ಯಮದವರನ್ನೇ ಪ್ರಶ್ನೆ ಮಾಡಿದ್ದಾರೆ.

ESHWARAPPA 1

ಇದರ ಜೊತೆಗೆ ರಾಜಕೀಯ ಒತ್ತಡದಿಂದ ಸಂತೋಷ್ ಆತ್ಮಹತ್ಯೆ ಯತ್ನಿಸಿದ್ದಾರೆ ಎಂದು ಅವರ ಕುಟುಂಬಸ್ಥರ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿರುವ ಈಶ್ವರಪ್ಪ, ರಾಜ್ಯ ಬಿಜೆಪಿಯಲ್ಲಿ ಒಂದು ಕೋಟಿಗೂ ಹೆಚ್ಚು ಸದಸ್ಯರಿದ್ದಾರೆ. ಆದರೆ ಅವನು ಮಾತ್ರ ಯಾಕೆ ಆತ್ಮಹತ್ಯೆಗೆ ಯತ್ನ ಮಾಡಿದ. ಅವರ ವೈಯಕ್ತಿಕ ಸಮಸ್ಯೆ ನೂರು ಇರುತ್ತೆ, ಅದರ ಬಗ್ಗೆ ಅವರ ಮನೆಯವರನ್ನು ಕೇಳಬೇಕು ಎಂದು ತಿಳಿಸಿದರು.

santhosh 3

ಆತನಿಗೆ ರಾಜಕೀಯ ಒತ್ತಡವಿದ್ದರೆ, ಅದೇನು ಎಂದು ನನಗೇನೂ ಗೊತ್ತು? ಆತನೇ ಇಂತಹ ವ್ಯಕ್ತಿ ಇಂತಹ ಕಾರಣಗಳಿಂದ ತೊಂದರೆ ಕೊಟ್ಟಿದ್ದಾರೆ ಎಂದು ಹೇಳಲಿ. ಆ ರೀತಿಯ ತೊಂದರೆ ಇದ್ದರೆ ಪೊಲೀಸ್ ಠಾಣೆಗೆ ದೂರು ಕೊಡಲಿ. ಸುಮ್ಮನೇ ಹೇಳಿಕೆ ಕೊಟ್ಟು ಬಿಜೆಪಿ ಮೇಲೆ ಆಪಾದನೆ ಮಾಡುತ್ತಾ ಕುಳಿತರೇ? ಮನೆಯಲ್ಲಿಯೂ ಪಾಲಿಟಿಕ್ಸ್ ತುಂಬಾ ಇರುತ್ತೆ. ಆದರೆ ಖಾಸಗಿ ವಿಚಾರ ಬಗ್ಗೆ ನಾನು ಉತ್ತರ ಕೊಡೋಕೆ ಇಷ್ಟಪಡಲ್ಲ ಎಂದು ಹೇಳಿದರು.

DK Shivakumar Santosh

ಇದೇ ವೇಳೆ ಯಾವುದೋ ವೀಡಿಯೋ ವಿಚಾರವಾಗಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ಡಿಕೆಶಿ ಕೆಪಿಸಿಸಿ ಅಧ್ಯಕ್ಷರು ಅವರು ಮಾತನಾಡುವಾಗ ಘನತೆಯಿಟ್ಟುಕೊಂಡು ಮಾತನಾಡಬೇಕು. ಅವರ ಬಳಿ ವೀಡಿಯೋ ಇದ್ದರೆ ನಮಗೂ ತೋರಿಸಲಿ ಎಂದು ಬಹಿರಂಗ ಸವಾಲ್ ಹಾಕಿದರು.

Share This Article