Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಪ್ರತಿಭಟನೆಗಷ್ಟೇ ಸೀಮಿತವಾದ ಕರ್ನಾಟಕ ಬಂದ್- ಬಸ್, ಆಟೋ, ಟ್ಯಾಕ್ಸಿ ಇದ್ರೂ ಜನ ಸಂಚಾರ ವಿರಳ

Public TV
Last updated: December 7, 2020 8:16 pm
Public TV
Share
3 Min Read
Band 1
SHARE

– ಬಂದ್ ಫೇಲ್ ಅಂತ ಮರಾಠಿಗರ ವಿಜಯೋತ್ಸವ

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ಬಿಸಿ ಜೋರಾಗಿತ್ತು. ಬೆಳಗ್ಗೆ 8 ಗಂಟೆಯಿಂದ ಕಾವೇರಿದ್ದ ಬಂದ್ ಬಿಸಿ, ಮಧ್ಯಾಹ್ನ ವೇಳೆಗೆ ತಣ್ಣಗಾಗಿತ್ತು. ಬೆಂಗಳೂರಿನ ರಸ್ತೆಗಳೆಲ್ಲ ಜನರಿಲ್ಲದೆ ಬಣಗುಟ್ಟುತ್ತಿದ್ವು. ಬೆಂಗಳೂರಿನಲ್ಲಿ ಎಂದಿನಂತೆ ಬಸ್ ಸಂಚಾರ, ಆಟೋ ಸಂಚಾರ ಇತ್ತು. ಬಿಎಂಟಿಸಿ ಬಸ್ ಓಡಾಟ ಇದ್ದರೂ ಪ್ರಯಾಣಿಕರ ಸಂಖ್ಯೆ ಮಾತ್ರ ವಿರಳವಾಗಿತ್ತು.

vatal 3

ಗ್ರಾಹಕರಿಲ್ಲದೆ ಹೋಟೆಲ್, ಅಂಗಡಿಗಳು, ಮಾರುಕಟ್ಟೆಗಳು ಖಾಲಿ ಖಾಲಿ ಆಗಿದ್ದವು. ಮೆಟ್ರೋ ಸಂಚಾರ ಎಂದಿನಂತೆ ಇದ್ದರೂ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿತ್ತು. ಓಲಾ-ಊಬರ್, ಆಟೋ ಸಂಘ ಬಂದ್‍ಗೆ ಬೆಂಬಲ ನೀಡಿದ್ದರೂ ಎಂದಿನಂತೆ ರಸ್ತೆಗೆ ವಾಹನಗಳು ಇಳಿದಿದ್ದವು. ಮೈಸೂರು ರಸ್ತೆ, ಸುಮನಹಳ್ಳಿ ಜಂಕ್ಷನ್, ನಾಯಂಡಳ್ಳಿ ಜಂಕ್ಷನ್‍ಗಳಲ್ಲಿ ಎಂದಿನಂತೆ ವಾಹನಗಳ ಸಂಚಾರ ಇತ್ತು. ಇನ್ನು ಬೆಂಗಳೂರಿನಲ್ಲಿ ರ‍್ಯಾಲಿ ಪರಿಣಾಮ ಅರಮನೆ ಮೈದಾನ ರಸ್ತೆ, ಕಾವೇರಿ ಜಂಕ್ಷನ್, ಕಾರ್ಪೋರೇಷನ್ ಸರ್ಕಲ್, ಮೆಜೆಸ್ಟಿಕ್ ಸುತ್ತಾಮುತ್ತಾ ಕಿ.ಮೀಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು.

GDG 2

ಪ್ರತಿಭಟನಾಕಾರರು ಪೊಲೀಸರ ವಶಕ್ಕೆ: ಮರಾಠ ನಿಗಮ ಖಂಡಿಸಿ ರಸ್ತೆಗಿಳಿದ ಕನ್ನಡಪರ ಸಂಘಟನೆಗಳ ರ‍್ಯಾಲಿಗೆ ಪೊಲೀಸರು ಮಾರ್ಗ ಮಧ್ಯೆಯೇ ಬ್ರೇಕ್ ಹಾಕಿದ್ದರು. ಅನುಮತಿ ನಿರಾಕರಣೆ ಮಧ್ಯೆಯು ಟೌನ್‍ಹಾಲ್ ಬಳಿ 12ಕ್ಕೂ ಹೆಚ್ಚು ಸಂಘಟನೆಗಳು ಪ್ರತಿಭಟನೆ ನಡೆಸಿದವು. ಟೌನ್‍ಹಾಲ್ ಮುಂದೆ ಜಮಾಯಿಸುತ್ತಿದ್ದಂತೆ ಪ್ರತಿಭಟನೆಗೆ ಪೊಲೀಸರು ಅವಕಾಶ ಕೊಡ್ಲಿಲ್ಲ. ವಾಟಾಳ್ ನಾಗರಾಜ್, ಸಾರಾ ಗೋವಿಂದು & ಕಾರ್ಯಕರ್ತರನ್ನ ವಶಕ್ಕೆ ಪಡೆದರು.

BAND 2

ಸರ್ಕಾರದ ವಿರುದ್ಧ ಕಿಡಕಾರಿದ ವಾಟಾಳ್, ಯಡಿಯೂರಪ್ಪ ಮರಾಠಿ ಏಜೆಂಟ್, ಹಿಟ್ಲರ್ ವರ್ತನೆ ಅಂತ ಗುಡುಗಿದರು. ಬುಧವಾರ ಸಭೆ ಮಾಡಿ ಮತ್ತೆ ಹೋರಾಟದ ಚರ್ಚೆ ಮಾಡ್ತೇವೆ ಅಂತ ಎಚ್ಚರಿಸಿದರು. ಮತ್ತೊಂದ ಕಡೆ, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳ್ತಿದ್ದ ಕರವೇ ನಾರಾಯಣಗೌಡ ಬಣವನ್ನ ರೇಸ್‍ಕೋರ್ಸ್ ಬಳಿ ಪೊಲೀಸರು ವಶಕ್ಕೆ ಪಡೆದ್ರು. ಈ ವೇಳೆ ನಾರಾಯಣಗೌಡ & ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು.

Band 2

ಬಂದ್‍ಗೆ ನೈತಿಕ ಬೆಂಬಲ ಕೊಟ್ಟಿದ್ದ ಕರವೇ ಪ್ರವೀಣ್ ಶೆಟ್ಟಿ ಬಣ ಮೇಖ್ರಿ ಸರ್ಕಲ್‍ನಿಂದ ಮೌರ್ಯ ಸರ್ಕಲ್‍ವರೆಗೆ ರ‍್ಯಾಲಿ ನಡೆಸಿದರು. ಮರಾಠ ಪ್ರಾಧಿಕಾರ ವಿರೋಧಿಸಿ ನಗರದ ಸಿಟಿ ಸಿವಿಲ್ ಕೋರ್ಟ್ ಮುಂಭಾಗದಲ್ಲಿ ವಕೀಲರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ನೋ ಬಂದ್: ಜಿಲ್ಲೆಗಳಲ್ಲಿ ಬಂದ್ ಬಿಸಿ ತಟ್ಟಿಲ್ಲ. ಮಾಮೂಲಿನಂತೆ ಜನಜೀವನ ಇತ್ತು. ಆದರೆ ಕೆಲ ಸಂಘಟನೆ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ರು. ರಾಮನಗರದಲ್ಲಿ ಪ್ರತಿಭಟನೆ ವೇಳೆ ರೈತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೀತು. ಗದಗನಲ್ಲಿ ಶಾಸಕ ಬಸನಗೌಡ ಯತ್ನಾಳ ಪ್ರತಿಕೃತಿ ದಹಿಸಲು ಕರವೇ ಕಾರ್ಯಕರ್ತರು ಯತ್ನಿಸಿದರು. ಇದಕ್ಕೆ ಪೊಲೀಸರು ಅವಕಾಶ ಕೊಡ್ಲಿಲ್ಲ. ವಾಗ್ವಾದ ನಡೀತು. ಆದರೂ ಕರವೇ ಕಾರ್ಯಕರ್ತನೊಬ್ಬ ಬೆಂಕಿ ಹಚ್ಚೇಬಿಟ್ಟ. ತಕ್ಷಣವೇ ಅಲ್ಲಿದ್ದ ಎಲ್ಲರೂ ದಿಕ್ಕಾಪಾಲಾಗಿ ಓಡಿದರು.

Band

ಕೊಪ್ಪಳದ ಗಂಗಾವತಿಯಲ್ಲಿ ಉಪ್ಪಿ 2 ಶೈಲಿಯಲ್ಲಿ ಉಲ್ಟಾ ನಿಂತು ಪ್ರತಿಭಟನೆ ನಡೆಸಿದ್ರು. ಯಾದಗಿರಿಯಲ್ಲಿ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಕೆಂಪು ಮೆಣಸಿನಕಾಯಿ ತಿನ್ನುವ ಮೂಲಕ ಪ್ರತಿಭಟನೆ ನಡೆಸಿದರು. ರಾಯಚೂರಲ್ಲಿ ತಲೆ ಮೇಲೆ ಇಟ್ಟಿಗೆ ಹೊತ್ತುಕೊಂಡು ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯ್ತು. ಸರ್ಕಾರ ಸತ್ತಿದೆ ಎಂದು ರಸ್ತೆಯಲ್ಲಿ ಕುಳಿತು ಗಳಗಳನೇ ಅಳುತ್ತ ಶ್ರದ್ದಾಂಜಲಿ ಸಲ್ಲಿಸಿದ್ರು. ಚಿತ್ರದುರ್ಗದ ಓಬವ್ವ ವೃತ್ತದಲ್ಲಿ ಕರವೇ ಕಾರ್ಯಕರ್ತರು ಬಾಯಿ ಬಡಿದುಕೊಂಡು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

band 4

ಮರಾಠಿಗರಿಂದ ವಿಜಯೋತ್ಸವ: ಮರಾಠ ನಿಗಮ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ವಿಫಲ ಅಂತ ಧಾರವಾಡದಲ್ಲಿ ಮರಾಠಿಗರು ವಿಜಯೋತ್ಸವ ಮಾಡಿದ್ದಾರೆ. ಸರ್ಕಾರದ ಮರಾಠ ನಿಗಮ ಅಭಿವೃದ್ಧಿ ಸ್ವಾಗತಿಸಿ ಪೊಲೀಸರ ವಿರೋಧದ ನಡುವೆಯೂ ಧಾರವಾಡದಲ್ಲಿ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಕರ್ನಾಟಕ ಬಂದ್‍ಗೆ ಜನರು ಬೆಂಬಲ ನೀಡಿಲ್ಲ. ಮರಾಠಿ ಸಮುದಾಯದ ಬಡವರ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಮಾಡಲಾಗಿದೆ. ನಿಗಮ ಸ್ಥಾಪನೆ ಮಾಡಿರುವುದು ಮರಾಠಿ ಭಾಷೆಯ ಸಲುವಾಗಿ ಅಲ್ಲ, ಮರಾಠ ಸಮುದಾಯದ ಅಭಿವೃದ್ಧಿಗಾಗಿ ಎಂದರು.

TAGGED:BangaloreKannada organizationskarnataka bandhPublic TVಕನ್ನಡ ಪರ ಸಂಘಟನೆಗಳುಕರ್ನಾಟಕ ಬಂದ್ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

Nagalakshmi Chowdary
`ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ
Bengaluru City Cinema Districts Karnataka Latest Top Stories
Ramya 5
`ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
Bengaluru City Cinema Latest Main Post Sandalwood
Olle Hugda Pratham ramya
`I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್
Cinema Latest Sandalwood Top Stories
Ramya 4
ʻಡಿʼ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌ – ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ: ಪರಮೇಶ್ವರ್‌
Bengaluru City Cinema Districts Karnataka Latest Sandalwood
Actress Rakshith Prem and Ramya
`ದಯೆಯಿಂದಿರಿ’ ಡಿ-ಬಾಸ್ ಫ್ಯಾನ್ಸ್‌ಗೆ ರಕ್ಷಿತಾ ಕಿವಿಮಾತು – ಸ್ಯಾಂಡಲ್‌ವುಡ್ ಕ್ವೀನ್‌ಗೆ ಟಾಂಗ್ ಕೊಟ್ರಾ ಕ್ರೇಜಿ ಕ್ವೀನ್?
Cinema Latest Sandalwood Top Stories

You Might Also Like

Dharmasthala SIT 1 1
Dakshina Kannada

ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ನೇತ್ರಾವತಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

Public TV
By Public TV
54 minutes ago
chidambaram
Latest

ಪಾಕಿಸ್ತಾನದಿಂದಲೇ ಬಂದರೆಂದು ಏಕೆ ಅನ್ಕೋತೀರಿ, ಉಗ್ರರು ದೇಶದೊಳಗೇ ಬೆಳೆದಿರಬಹುದು – ʻಕೈʼ ನಾಯಕ ಚಿದಂಬರಂ ಹೇಳಿಕೆ ವಿವಾದ

Public TV
By Public TV
1 hour ago
jnanabharathi police 2
Bengaluru City

ಟೆಕ್ಕಿ ಮನೆಯಲ್ಲಿ ಕಳ್ಳತನ – 1 ಕೆಜಿ ಚಿನ್ನ, 4 ಲಕ್ಷ ಹಣ ಕದ್ದು ಪರಾರಿ

Public TV
By Public TV
2 hours ago
Kampli Bridge
Bellary

ಟಿಬಿ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಕಂಪ್ಲಿ ಸೇತುವೆ ಮುಳುಗಡೆ

Public TV
By Public TV
2 hours ago
Ramya Vijayalakshmi Darshan
Cinema

`ಡಿ’ ಫ್ಯಾನ್ಸ್ ವಿರುದ್ಧ ದೂರು ಕೊಡಲು ಮುಂದಾದ ರಮ್ಯಾ; ಪತಿ ಪರ ಕಾನೂನು ಸಮರಕ್ಕಿಳಿದ ವಿಜಯಲಕ್ಷ್ಮಿ

Public TV
By Public TV
3 hours ago
R Ashok 1
Bengaluru City

ಪರಿಶಿಷ್ಟರ 11.8 ಸಾವಿರ ಕೋಟಿಯನ್ನು `ಗ್ಯಾರಂಟಿ’ಗಾಗಿ ದೋಚಲು ಕಾಂಗ್ರೆಸ್ ಮುಂದಾಗಿದೆ: ಅಶೋಕ್ ಕಿಡಿ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?