Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂದುವರಿದ ‘ಸಂಪುಟ’ ಸಸ್ಪೆನ್ಸ್ – ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಂದುವರಿದ ‘ಸಂಪುಟ’ ಸಸ್ಪೆನ್ಸ್ – ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆ

Bengaluru City

ಮುಂದುವರಿದ ‘ಸಂಪುಟ’ ಸಸ್ಪೆನ್ಸ್ – ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆ

Public TV
Last updated: December 6, 2020 7:40 pm
Public TV
Share
3 Min Read
BSY Arun Singh 1
SHARE

– ಅರುಣ್ ಸಿಂಗ್ ಮೂಲಕ ಬಂದ ಹೈಕಮಾಂಡ್ ಸಂದೇಶ ಏನು?
– ಸಂಪುಟ ಸರ್ಜರಿಗೆ ಬ್ರೇಕ್ ಹಾಕಿದ್ಯಾಕೆ ಹೈಕಮಾಂಡ್?

ಬೆಂಗಳೂರು: ಬಿಜೆಪಿ ಮನೆಯ ಸಚಿವಾಕಾಂಕ್ಷಿ ಹಕ್ಕಿಗಳಿಗೆ ಇವತ್ತು ಬೆಳಗ್ಗೆ ಇದ್ದ ನಿರೀಕ್ಷೆ, ಕಾತರ ಸಂಜೆ ಹೊತ್ತಿಗೆ ಇಳಿದಿತ್ತು. ಬೆಂಗಳೂರಿಗೆ ಆಗಮಿಸಿದ್ದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜತೆ ಸಿಎಂ ಯಡಿಯೂರಪ್ಪ ಚರ್ಚಿಸಿ ನಮ್ಮನ್ನ ನಾಳೆ ಬೆಳಗ್ಗೆಯೊಳಗೆ ಸಚಿವರಾಗಿ ಮಾಡೇಬಿಡ್ತಾರೆಂಬ ನಿರೀಕ್ಷೆ ಠುಸ್ ಆಗಿದೆ. ಕಾವೇರಿ ನಿವಾಸದಲ್ಲಿ ಮಧ್ಯಾಹ್ನ ಸಿಎಂ ಮತ್ತು ಅರುಣ್ ಸಿಂಗ್ ನಡುವಿನ ಸಂಪುಟ ವಿಸ್ತರಣೆ ಕುರಿತ ಮಾತುಕತೆ ವಿಫಲವಾಗಿದೆ. ಹೈಕಮಾಂಡ್ ಸಂಪುಟ ವಿಸ್ತರಣೆಗೆ ಒಪ್ಪಿಗೆ ಕೊಡದೇ ತನ್ನ ಎಂದಿನ ಧೋರಣೆ ಪ್ರದರ್ಶಿಸಿದೆ ಎಂದು ತಿಳಿದು ಬಂದಿದೆ.

Arun Singh 11

ಕಾವೇರಿ ನಿವಾಸದಲ್ಲಿ ಅರುಣ್ ಸಿಂಗ್ ಜೊತೆ ಸಿಎಂ ಯಡಿಯೂರಪ್ಪ ಇಪ್ಪತ್ತು ನಿಮಿಷ ಕಾಲ ಮಾತುಕತೆ ನಡೆಸಿದರು. ಸಂಪುಟಕ್ಕೆ ಮೂವರು ವಲಸಿಗರ ಸೇರ್ಪಡೆಯ ಅನಿವಾರ್ಯತೆ ಬಗ್ಗೆ ಸಿಎಂ ಮನವರಿಕೆ ಮಾಡಿದ್ದರು. ವಲಸಿಗರ ಸೇರ್ಪಡೆಯಿಂದ ಮೂಲ ಬಿಜೆಪಿಗರಿಂದ ಅಸಮಧಾನ ಸೃಷ್ಟಿಯಾಗದಂತೆ ನೋಡಿಕೊಳ್ಳುವುದಾಗಿ ಸಿಎಂ ಭರವಸೆ ಕೊಟ್ಟಿದ್ದರು ಎನ್ನಲಾಗಿದೆ. ಸಿಎಂ ಅವರ ಮಾತುಗಳನ್ನ ಶಾಂತಿಯಿಂದ ಕೇಳಿಸಿಕೊಂಡ ಅರುಣ್ ಸಿಂಗ್ ಹೈಕಮಾಂಡ್ ಸದ್ಯಕ್ಕೆ ಈ ವಿಚಾರದಲ್ಲಿ ತಕ್ಷಣಕ್ಕೆ ನಿರ್ಧಾರ ಕೈಗೊಳ್ಳುವುದು ಅನುಮಾನ. ನಿಮ್ಮ ಭಾವನೆಗಳನ್ನು ವರಿಷ್ಠರ ಗಮನಕ್ಕೆ ತರೋದಾಗಿ ಹೇಳಿ ಅರುಣ್ ಸಿಂಗ್ ಕಾವೇರಿಯಿಂದ ನಿರ್ಗಮಿಸಿದರು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Arun Singh 8

ಸಂಪುಟ ಸರ್ಜರಿಗೆ ಬ್ರೇಕ್ ಹಾಕಿದ್ಯಾಕೆ?: ಅರುಣ್ ಸಿಂಗ್ ಮೂಲಕ ಒಪ್ಪಿಗೆ ಕೊಡೋ ಅನಿವಾರ್ಯತೆ ಹೈಕಮಾಂಡ್ ಗೆ ಇರಲಿಲ್ಲ. ಅರುಣ್ ಸಿಂಗ್ ಪಕ್ಷ ಮತ್ತು ಸರ್ಕಾರದೊಳಗಿನ ಮಾಹಿತಿ ಸಂಗ್ರಹಿಸಲು ರಾಜ್ಯಕ್ಕೆ ಆಗಮಿಸಿದ್ದರು. ಈಗಾಗಲೇ ಇರುವ ಗೊಂದಲಗಳನ್ನು ಮೊದಲು ಬಗೆಹರಿಸೋಣವೆಂಬ ಉದ್ದೇಶದಿಂದ ಸರ್ಜರಿ ದಿನಾಂಕ ಮುಂದೂಡಿರುವ ಸಾಧ್ಯತೆಗಳಿವೆ.

Arun Singh 3

ರಾಜ್ಯ ಬಿಜೆಪಿಯೊಳಗಿನ ಪರಿಸ್ಥಿತಿ ಸರಿಹೋಗಲೆಂಬ ಲೆಕ್ಕಕ್ಕೆ ಹೈಕಮಾಂಡ್ ಬದ್ಧವಾಗಿದ್ದರಿಂದ ಸಂಪುಟ ವಿಸ್ತರಣೆಗೆ ಇನ್ನೂ ಗ್ರೀನ್ ಸಿಕ್ಕಿಲ್ಲ ಎನ್ನಲಾಗ್ತಿದೆ. ಹೈಕಮಾಂಡ್ ಸರ್ಕಾರದಲ್ಲಿ ಮಹತ್ವದ ಬದಲಾವಣೆ ಮಾಡಬೇಕೆಂಬ ಲೆಕ್ಕಾಚಾರಗಳಿದ್ದು, ಗ್ರಾಮ ಪಂಚಾಯ್ತಿ ಚುನಾವಣೆ, ಉಪಚುನಾವಣೆಗಳು ಮುಗಿಯಲಿ ಎಂಬ ಆಲೋಚನೆ ಇರಬಹುದು. ವಿಸ್ತರಣೆ ಬದಲು ಪುನಾರಚನೆಯ ಉದ್ದೇಶ. ಇದಕ್ಕೆ ಸಮಯದ ಅಗತ್ಯ ಇದೆ ಅನ್ನೋದು ದೆಹಲಿ ನಾಯಕರ ಅಭಿಪ್ರಾಯ ಆಗಿರಬಹುದು. ಯಡಿಯೂರಪ್ಪ ವಿಚಾರದಲ್ಲಿ ಹೈಕಮಾಂಡ್ ಗೆ ಇನ್ನೂ ಇರುವ ಅತೃಪ್ತಿ ಸಹ ಎನ್ನಲಾಗಿದೆ.

Arun Singh 10

ಸಿಎಂ ಬಿಎಸ್‍ವೈ ಬೇಸರ: ಕಳೆದ ಮೂರು ದಿನಗಳಿಂದಲೂ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆ ಅಧಿವೇಶನಕ್ಕೂ ಮುನ್ನ ಮುಗಿಸಲು ಸಾಕಷ್ಟು ಕಸರತ್ತು ನಡೆಸಿದ್ದರು. ಬೆಳಗಾವಿಯಲ್ಲೂ ಅರುಣ್ ಸಿಂಗ್ ಜತೆ ಚರ್ಚೆ ನಡೆಸಿ ಮೂವರ ಹೆಸರಿನ ಪಟ್ಟಿ ನೀಡಿ ವಿಸ್ತರಣೆಯ ಅನಿವಾರ್ಯತೆ ಬಗ್ಗೆ ವಿವರಣೆ ಕೊಟ್ಟಿದ್ರು. ಬೆಂಗಳೂರಿನ ಭೇಟಿ ವೇಳೆ ವರಿಷ್ಠರ ಸಂದೇಶ ತಲುಪಿಸುವುದಾಗಿ ಅರುಣ್ ಸಿಂಗ್ ಭರವಸೆ ಕೊಟ್ಟಿದ್ದರು ಎನ್ನಲಾಗಿದೆ. ಆದರೆ ಅರುಣ್ ಸಿಂಗ್ ಬೆಂಗಳೂರಿಗೆ ಬಂದ್ರೂ ಏನೂ ಪ್ರಯೋಜನ ಆಗ್ಲಿಲ್ಲ. ಹೀಗಾಗಿ ಸಿಎಂ ಯಡಿಯೂರಪ್ಪಗೂ ಬೇಸರವಾಗಿದ್ದು, ಅವರು ಈಗ ವಿಸ್ತರಣೆ ವಿಚಾರ ಬದಿಗೊತ್ತಿ ಅಧಿವೇಶನ, ಗ್ರಾ.ಪಂ. ಚುನಾವಣೆಯತ್ತ ಗಮನ ಕೊಡುವಂತಾಗಿದೆ.

ನಿರಾಸೆಯ ಕಾರ್ಮೋಡ: ಈ ಮಧ್ಯೆ ಶಾಸಕ ಮುನಿರತ್ನ, ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್ ಮತ್ತು ಆರ್ ಶಂಕರ್ ಇವತ್ತು ಮಧ್ಯಾಹ್ನ ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿದ್ರು. ಕಾವೇರಿ ನಿವಾಸಕ್ಕೆ ಅರುಣ್‍ಸಿಂಗ್ ಭೇಟಿಗೂ ಮುನ್ನ ಈ ಮೂವರೂ ಸಿಎಂ ಭೇಟಿ ಮಾಡಿ, ವಿಸ್ತರಣೆಗೆ ಮತ್ತೆ ಒತ್ತಾಯ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಗದ ಹಿನ್ನೆಲೆಯಲ್ಲಿ ಆಕಾಂಕ್ಷಿಗಳಲ್ಲಿ ಮತ್ತೆ ನಿರಾಸೆಯ ಕಾರ್ಮೋಡ ಕವಿದಿದೆ. ಮತ್ತೊಂದು ಅವಕಾಶಕ್ಕಾಗಿ ಆಕಾಂಕ್ಷಿಗಳು ಎದುರು ನೋಡುತ್ತಿದ್ದಾರೆ.

TAGGED:Arun SinghB. S.YediyurappabjpBSY CabinetKarnataka BJPPublic TVಅರುಣ್ ಸಿಂಗ್ಪಬ್ಲಿಕ್ ಟಿವಿಬಿಎಸ್‍ವೈ ಸಂಪುಟಬಿಜೆಪಿಬಿಜೆಪಿ ಹೈಕಮಾಂಡ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
11 minutes ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
34 minutes ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
1 hour ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
1 hour ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
1 hour ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?