Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪರಿಷತ್‌ನಲ್ಲಿ ಕಾಂಗ್ರೆಸ್‌, ಬಿಜೆಪಿ ಬಡಿದಾಟ – ಯಾರ ತಪ್ಪು ಏನು?

Public TV
Last updated: December 15, 2020 3:34 pm
Public TV
Share
3 Min Read
congress vidhan parishad
SHARE

– ಸಭಾಪತಿ ವಿರುದ್ಧ ಒಂದಾದ ಬಿಜೆಪಿ, ಜೆಡಿಎಸ್‌
– ಅನಿರ್ದಿಷ್ಟಾವಧಿಗೆ ಕಲಾಪ ಮುಂದೂಡಿಕೆ

ಬೆಂಗಳೂರು: ಅನಿರ್ದಿಷ್ಟಾವಧಿಗೆ ಕಲಾಪವನ್ನು ಮುಂದೂಡಿದ ನಂತರ ಇದೇ ಮೊದಲ ಬಾರಿಗೆ ಕಲಾಪವನ್ನು ಮತ್ತೆ ನಡೆಸುವ ಮೂಲಕ ರಾಜ್ಯ ವಿಧಾನ ಪರಿಷತ್ ಇತಿಹಾಸ ಸೃಷ್ಟಿಸುವ ಜೊತೆ ಕಪ್ಪು ಚುಕ್ಕೆಯನ್ನು ಅಂಟಿಸಿಕೊಂಡಿದೆ. ಒಂದೇ ಕುರ್ಚಿಗಾಗಿ ಕಾಂಗ್ರೆಸ್‌, ಬಿಜೆಪಿ ಸದಸ್ಯರು ಬಡಿದಾಡಿದ್ದು ಈಗ ಮತ್ತೊಮ್ಮೆ ಅನಿರ್ದಿಷ್ಟಾವಧಿಗೆ ಕಲಾಪವನ್ನು ಮುಂದೂಡಿಕೆ ಮಾಡಲಾಗಿದೆ.

ಬಿಜೆಪಿ ಸಭಾಪತಿ ಪ್ರತಾಪ್‌ ಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಆದರೆ ಸಭಾಪತಿಗಳು ಅವಿಶ್ವಾಸ ನಿರ್ಣಯ ಕ್ರಮಬದ್ಧವಾಗಿಲ್ಲ ಎಂದು ಹೇಳಿ ತಿರಸ್ಕೃತಗೊಳಿಸಿದ್ದರು. ಇದು ಬಿಜೆಪಿ ಸದಸ್ಯರನ್ನು ಕೆರಳಿಸಿತ್ತು. ನಿನ್ನೆಯವರೆಗೂ ತನ್ನ ನಿರ್ಧಾರ ಪ್ರಕಟಿಸದ ಜೆಡಿಎಸ್‌ ಇಂದು ಪರಿಷತ್‌ನಲ್ಲಿ ಬಿಜೆಪಿಯ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿತ್ತು. ಜೆಡಿಎಸ್‌ನಿಂದ ಬೆಂಬಲ ಸಿಕ್ಕಿದ ಪರಿಣಾಮ ಪ್ರತಾಪ್‌ ಚಂದ್ರ ಶೆಟ್ಟಿ ರಾಜೀನಾಮೆ ನೀಡದೇ ಇದ್ದರೂ ಬಿಜೆಪಿ ಸಭಾಪತಿ ಸ್ಥಾನಕ್ಕೆ ಧರ್ಮೇಗೌಡರನ್ನು ಕೂರಿಸಿತ್ತು. ನಂತರದ 20 ನಿಮಿಷದಲ್ಲಿ ಭಾರೀ ಹೈಡ್ರಾಮಾ ನಡೆದು ನಡೆಯಬಾರದ ಘಟನೆಗಳಿಗೆ ಪರಿಷತ್‌ ಸಾಕ್ಷಿ ಆಯ್ತು.

 

ಯಾರ ತಪ್ಪು ಏನು?
ಸಭಾಪತಿ ಸೂಚನೆ ಮೇರೆಗೆ ಬೆಳಗ್ಗೆ ಕಲಾಪ ಆರಂಭಕ್ಕೆ ಮೊದಲು ಬೆಲ್ ಹಾಕಲಾಗುತ್ತದೆ. ಬೆಲ್ ಮುಗಿದ ಮೇಲೆ ಸಭಾಪತಿಗಳು ಪೀಠದ ಮೇಲೆ ಕುಳಿತು ಕಲಾಪ ಪ್ರಾರಂಭ ಮಾಡುವುದು ಸಂಪ್ರದಾಯ. ಆದರೆ ಬೆಲ್ ಹೊಡೆಯುವ ಸಮಯದಲ್ಲಿ ಉಪ ಸಭಾಪತಿ ಧರ್ಮೇಗೌಡರು ಪೀಠಕ್ಕೆ ಬಂದು ಕುಳಿತದ್ದು ನಿಯಮ ಅಲ್ಲ.

ಸಭಾಪತಿ ಇಲ್ಲದೆ ವೇಳೆ ಅಥವಾ ಸಭಾಪತಿ ಸೂಚನೆ ಮೇಲೆ ಉಪ ಸಭಾಪತಿಗಳು ಕಲಾಪ ನಡೆಸಲು ಅಧಿಕಾರವಿದೆ. ಅದನ್ನು ಹೊರತು ಪಡಿಸಿ ಬೆಲ್ ಹೊಡೆಯುವಾಗ ಕುಳಿತುಕೊಳ್ಳುವಂತೆ ಇಲ್ಲ. ಇದು ಉಪ ಸಭಾಪತಿ ಮಾಡಿದ ತಪ್ಪು.

ಉಪ ಸಭಾಪತಿ ಕುಳಿತ ಬಳಿಕ ಸಭಾಪತಿ ಪ್ರತಾಪ್‌ ಚಂದ್ರ ಶೆಟ್ಟಿ ಆಗಮಿಸುವ ಬಾಗಿಲನ್ನು ಬಿಜೆಪಿ ಸದಸ್ಯರು ಮುಚ್ಚಿದ್ದರು. ಇದು ನಿಯಮಬಾಹಿರವಾಗಿದ್ದು ಮಾರ್ಷಲ್‌ಗಳೇ ಬಾಗಿಲು ಮತ್ತು ಮುಚ್ಚುವ ಕೆಲಸ ಮಾಡಬೇಕು. ಆದರೆ ಬಾಗಿಲನ್ನು ಮುಚ್ಚಿದ್ದಾರೆ ಎಂದು ಕಾಂಗ್ರೆಸ್ ಸದಸ್ಯ ನಜೀರ್ ಅಹಮದ್ ಸೇರಿ ಇತರರು ಡೋರ್ ಕಾಲಿನಲ್ಲಿ ಒದ್ದಿದ್ದು ಸರಿಯಲ್ಲ.

ಪೀಠದ ಮೇಲೆ ಕುಳಿತ ಉಪಸಭಾಪತಿಯನ್ನ ಎಬ್ಬಿಸಲು ಅಧಿಕಾರ ಇರುವುದು ಸಭಾಪತಿ ಸೂಚನೆ ಮೇರೆಗೆ ಮಾರ್ಷಲ್‌ಗಳಿಗೆ ಮಾತ್ರ. ಕಾಂಗ್ರೆಸ್‌ನ ನಾರಾಯಣಸ್ವಾಮಿ ಪೀಠದ ಮೇಲೆ ಕುಳಿತ ಉಪ ಸಭಾಪತಿ ಕತ್ತು ಪಟ್ಟಿ ಇಳಿದು ಎಳೆದಾಡಿದ್ದು ನಿಯಮ ಬಾಹಿರ.

ಉಪ ಸಭಾಪತಿಗಳನ್ನ ಎಬ್ಬಿಸಿ ಕಾಂಗ್ರೆಸ್‌ ಸದಸ್ಯರು ಚಂದ್ರಶೇಖರ ಪಾಟೀಲರನ್ನು ಕೂರಿಸಿದ್ದು ಇನ್ನೊಂದು ತಪ್ಪು. ಸಭಾಪತಿ, ಉಪ ಸಭಾಪತಿ ಇಲ್ಲದ ವೇಳೆ ಸಭಾಪತಿ ಮೊದಲೇ ಸೂಚಿಸಿದ ಸದಸ್ಯರು ಮಾತ್ರ ಪೀಠದ ಮೇಲೆ ಕುಳಿತುಕೊಳ್ಳಬೇಕು. ಆದರೆ ಅ ನಿಯಮ ಗಾಳಿಗೆ ತೂರಿ ಚಂದ್ರಶೇಖರ ಪಾಟೀಲರು ಪೀಠದ ಮೇಲೆ ಕುಳಿತಿದ್ದು ತಪ್ಪು.

ಸಭಾಪತಿಗಳ ಪೀಠಕ್ಕೆ ಇತಿಹಾಸದ ಜೊತೆ ಅಪಾರ ಗೌರವ ಇದೆ. ಅ ಪೀಠದ ಮೇಲೆ ಸದಸ್ಯರು ಕುಳಿತಿದ್ದು ತಪ್ಪು. ಪೀಠದ ಮುಂದೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸದಸ್ಯರ ವರ್ತನೆ ಪೀಠಕ್ಕೆ ಮಾಡಿದ ಅಪಮಾನ.

ಕಾಂಗ್ರೆಸ್ ಸದಸ್ಯ ಪೀಠದ ಮೇಲೆ ಕುಳಿತ ಅಂತ ಬಿಜೆಪಿ ಸದಸ್ಯರು ಪೀಠದ ಮೇಲೆ ಕುಳಿತುಕೊಳ್ಳಲು ಮುಂದಾಗಿದ್ದು ಮತ್ತೊಂದು ತಪ್ಪು. ಪೀಠದ ಮುಂದಿನ ಗ್ಲಾಸ್ ಮುರಿದದ್ದು, ಅಜೆಂಡಾ ಕಾಪಿ ಹರಿದು ಹಾಕಿದ್ದು ಪೀಠಕ್ಕೆ ತೋರಿಸಿದ ಅಗೌರವ.

ಯಾವ ಸಮಯದಲ್ಲಿ ಏನಾಯ್ತು?
11:18 – ಪರಿಷತ್ ಬೆಲ್.
11:19 – ಬೆಲ್ ಹೊಡೆಯುವ ವೇಳೆಯೇ ಉಪಸಭಾಪತಿ ಎಲ್.ಧರ್ಮೇಗೌಡ ಪೀಠಾಸೀನ. ಸಭಾಪತಿ ಪ್ರವೇಶ ಬಾಗಿಲು ಬಂದ್ ಮಾಡಿದ ಬಿಜೆಪಿ ಸದಸ್ಯರು.
11:20 – ಕಾಂಗ್ರೆಸ್ ಸದಸ್ಯರ ಆಕ್ಷೇಪ. ಬಾಗಿಲು ಒದ್ದ ಕಾಂಗ್ರೆಸ್ ಸದಸ್ಯ ನಜೀರ್ ಅಹಮದ್
11:22 – ಸಭಾಪತಿ ಪೀಠಕ್ಕೆ ಕಾಂಗ್ರೆಸ್, ಬಿಜೆಪಿ ಮುತ್ತಿಗೆ .
11:25 – ಉಪಸಭಾಪತಿಯನ್ನ ಎಳೆದ ನಾರಾಯಣಸ್ವಾಮಿ.
11:30 – ಸಭಾಪತಿ ಬಾಗಿಲು ತೆರೆದ ಮಾರ್ಷಲ್‌ಗಳು.

11:32 – ಖಾಲಿಯಿದ್ದ ಪೀಠದ ಮೇಲೆ ಕುಳಿತ ಕಾಂಗ್ರೆಸ್ ಸದಸ್ಯ ಚಂದ್ರಶೇಖರ್ ಪಾಟೀಲ್.
11:33 – ಬಿಜೆಪಿ-ಕಾಂಗ್ರೆಸ್ ಸದಸ್ಯರ ತಳ್ಳಾಟ ನೂಕಾಟ.
11:35 – ಸಭಾಪತಿ ಮುಂದಿನ ಗ್ಲಾಸ್ ಮುರಿದು ಹಾಕಿದ ಕಾಂಗ್ರೆಸ್ ಬಿಜೆಪಿ ಸದಸ್ಯರು.
11:38 – ಮಾರ್ಷಲ್ ಗಳ ಭದ್ರತೆ ಯಲ್ಲಿ ಸಭಾಪತಿ ಪ್ರತಾಪ್‌ ಚಂದ್ರ ಶೆಟ್ಟಿ  ಆಗಮನ.
11:38 -ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಿದ ಸಭಾಪತಿ.
11:39 – ಸದನದಿಂದ ಹೊರನಡೆದ ಪ್ರತಾಪಚಂದ್ರ ಶೆಟ್ಟಿ.
11:40 – ಸದನದಲ್ಲಿ ಗದ್ದಲ ಗಲಾಟೆ. ಪರಸ್ಪರ ನೂಕಾಟ ತಳ್ಳಾಟ.

TAGGED:bjpcongressjdskarnatakavidhan parishadಕಾಂಗ್ರೆಸ್ಜೆಡಿಎಸ್ಧರ್ಮೇಗೌಡಪ್ರತಾಪ್‌ ಚಂದ್ರ ಶೆಟ್ಟಿಬಿಜೆಪಿವಿಧಾನ ಪರಿಷತ್ಸಭಾಪತಿ
Share This Article
Facebook Whatsapp Whatsapp Telegram

You Might Also Like

Narendra Modi Mark Carney Canada
Latest

ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭೇಟಿಯಾದ ಮೋದಿ – ಹೊಸ ಹೈಕಮೀಷನರ್ ನೇಮಿಸಲು ಸಮ್ಮತಿ

Public TV
By Public TV
10 minutes ago
iran israel war
Latest

ಇಸ್ರೇಲ್-ಇರಾನ್ ಯುದ್ಧ ಭೀತಿ; ಭಾರತಕ್ಕೆ ಹೆಚ್ಚಿದ ಆತಂಕ

Public TV
By Public TV
14 minutes ago
Ayatollah Ali Khamenei
Latest

ಯುದ್ಧ ಶುರುವಾಗಿದೆ – ಟ್ರಂಪ್‌ ಧಮ್ಕಿಗೆ ಇರಾನ್‌ ಸರ್ವೋಚ್ಚ ನಾಯಕ ಖಮೇನಿ ರಿಯಾಕ್ಷನ್‌

Public TV
By Public TV
20 minutes ago
CM Siddaramaiah Residence Tree Fall
Bengaluru City

ಗಾಳಿ ಇಲ್ಲ, ಮಳೆ ಇಲ್ಲ – ಸಿಎಂ ನಿವಾಸದ ಮುಂದೆ ಧರೆಗುರುಳಿದ ಬೃಹತ್ ಮರ

Public TV
By Public TV
47 minutes ago
Yadagiri Bridge
Chikkamagaluru

ವರುಣಾರ್ಭಟಕ್ಕೆ ಬಿರುಕು ಬಿಟ್ಟ ನಿಜಾಮರ ಕಾಲದ ಸೇತುವೆ – ಇತ್ತ ಮಲೆನಾಡಲ್ಲಿ ನದಿಗಳಿಗೆ ಜೀವಕಳೆ

Public TV
By Public TV
50 minutes ago
Malenadu
Karnataka

ಮಲೆನಾಡಿನ ಮಳೆಗಾಲದ ಗೆಳೆಯರು!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?