Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ನೈಟ್ ಕರ್ಫ್ಯೂ ಜಾರಿ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ನೈಟ್ ಕರ್ಫ್ಯೂ ಜಾರಿ: ಸುಧಾಕರ್

Bengaluru City

ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ನೈಟ್ ಕರ್ಫ್ಯೂ ಜಾರಿ: ಸುಧಾಕರ್

Public TV
Last updated: December 23, 2020 5:24 pm
Public TV
Share
3 Min Read
Sudhakar Meeting 2
SHARE

– 14 ದಿನಗಳಲ್ಲಿ ಯು.ಕೆ.ಯಿಂದ ಬಂದವರ ಮೇಲೆ ನಿಗಾ

ಬೆಂಗಳೂರು: ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಈ ನಡುವೆ ಯುನೈಟೆಡ್ ಕಿಂಗ್ ಡಮ್ ನಿಂದ ಬಂದ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Sudhakar Meeting 3

ಯು.ಕೆ.ಯಲ್ಲಿ ಹೊಸ ಪ್ರಭೇದದ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಚಿವ ಡಾ.ಕೆ.ಸುಧಾಕರ್ ಸುದೀರ್ಘ ಸಭೆ ನಡೆಸಿದರು. ನಂತರ ಸಚಿವರು ಗೃಹಕಚೇರಿ ಕೃಷ್ಣಾಗೆ ತೆರಳಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಭೆಯಲ್ಲಾದ ಚರ್ಚೆ ಕುರಿತು ಮಾಹಿತಿ ನೀಡಿದರು.

Sudhakar Meeting 4

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ತಾಂತ್ರಿಕ ಸಲಹಾ ಸಮಿತಿ ಜತೆ ಚರ್ಚಿಸಿದ ಬಳಿಕ ನೈಟ್ ಕರ್ಫ್ಯೂ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಇಂದಿನಿಂದ ಜನವರಿ 2 ರವರೆಗೆ ಪ್ರತಿ ದಿನ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಇಡೀ ರಾಜ್ಯದಲ್ಲಿ ಕರ್ಫ್ಯೂ ವಿಧಿಸಲಾಗುತ್ತದೆ. ಜನರು ರಾತ್ರಿ 10ರೊಳಗೆ ತಮ್ಮ ಎಲ್ಲ ಚಟುವಟಿಕೆಗಳನ್ನು ಮುಗಿಸಿ ಮನೆಗೆ ಮರಳಬೇಕು. ಹಬ್ಬದ ಸಮಾರಂಭ, ಹೊಸ ವರ್ಷದ ಸಮಾರಂಭ, ಆಚರಣೆ ಎಂದು ಅನವಶ್ಯಕವಾಗಿ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದು, ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

Sudhakar Meeting 1

ಆರೋಗ್ಯ ಇಲಾಖೆಯಿಂದ ನಿಗಾ: ನವೆಂಬರ್ 25 ರಿಂದ ಡಿಸೆಂಬರ್ 22 ರವರೆಗೆ ರಾಜ್ಯಕ್ಕೆ ಯು.ಕೆ.ಯಿಂದ ಬಂದವರ ಮೇಲೆ ಆರೋಗ್ಯ ಇಲಾಖೆಯ ಸಿಬ್ಬಂದಿ ನಿಗಾ ಇರಿಸಲಿದ್ದಾರೆ. ಯು.ಕೆ.ಯಿಂದ ಬಂದವರು ಕಡ್ಡಾಯವಾಗಿ 28 ದಿನಗಳ ಕಾಲ ಕ್ವಾರಂಟೈನ್ ಗೆ ಒಳಗಾಗಬೇಕು. ಮೊದಲ 14 ದಿನಗಳ ಕಾಲ ಅವರ ಮೇಲೆ ಆರೋಗ್ಯ ಇಲಾಖೆಯ ಸಿಬ್ಬಂದಿ ನಿಗಾ ಇರಿಸುತ್ತಾರೆ. ನಂತರದ 14 ದಿನ ಅವರೇ ಸ್ವತಃ ನಿಗಾ ಇರಿಸಿಕೊಳ್ಳಬೇಕು ಎಂದು ವಿವರಿಸಿದರು.

Sudhakar BSY Meeting 2

ನವೆಂಬರ್ 25 ರಿಂದ ಡಿಸೆಂಬರ್ 22 ರವರೆಗೆ ಯು.ಕೆ.ಯಿಂದ ರಾಜ್ಯಕ್ಕೆ 2,500 ಜನರು ಬಂದಿದ್ದಾರೆ. ಪ್ರತಿ ದಿನ ಯು.ಕೆ.ಯಿಂದ ಎರಡೇ ವಿಮಾನ ಬಂದಿದೆ. ಯಾವ ವಿಮಾನದಲ್ಲಿ ಎಷ್ಟು ಜನ ಬಂದಿದ್ದಾರೆ ಎಂಬ ಮಾಹಿತಿಯನ್ನೂ ಕೂಡ ನೀಡಲಾಗುವುದು. ಇಷ್ಟೂ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗುವುದು. ಯಾರಲ್ಲಾದರೂ ರೋಗ ಲಕ್ಷಣ ಕಂಡುಬಂದರೆ ಆರ್ ಟಿಪಿಸಿಆರ್ ಪರೀಕ್ಷೆ ಮಾಡಿಸಲಾಗುವುದು ಎಂದು ತಿಳಿಸಿದರು.

Sudhakar BSY Meeting 3

ನಿಮ್ಹಾನ್ಸ್, ಭಾರತೀಯ ವಿಜ್ಞಾನ ಸಂಸ್ಥೆ ಸೇರಿದಂತೆ ವೈರಸ್ ಬಗ್ಗೆ ಅಧ್ಯಯನ ಮಾಡುವ ನಾಲ್ಕು ಸಂಸ್ಥೆಗಳು ಬೆಂಗಳೂರಿನಲ್ಲಿವೆ. ಪಾಸಿಟಿವ್ ಆದವರ ಮಾದರಿಯನ್ನು ಈ ಸಂಸ್ಥೆಗಳಿಗೆ ನೀಡಿ ಹೊಸ ಪ್ರಭೇದದ ವೈರಸ್ ಬಗ್ಗೆ ಅಧ್ಯಯನ ಮಾಡಲಾಗುವುದು. ಅಗತ್ಯವಿದ್ದರೆ ಜೀನ್ ಸೀಕ್ವೆನ್ಸ್ ಅಧ್ಯಯನ ಮಾಡಲಾಗುವುದು ಎಂದು ಹೇಳಿದರು.

Sudhakar BSY Meeting 1

ತಪ್ಪು ಮಾಹಿತಿ ನೀಡಬೇಡಿ: ರಾಜಕೀಯ ಮುಖಂಡರೊಬ್ಬರು ಯು.ಕೆ.ಯಿಂದ 14 ಸಾವಿರ ಜನರು ಬಂದಿದ್ದಾರೆ ಎಂದು ತಪ್ಪಾಗಿ ಹೇಳಿದ್ದಾರೆ. ನಮ್ಮ ಸರ್ಕಾರಕ್ಕೆ ಸಾವಿನ ಸಂಖ್ಯೆ, ಸೋಂಕಿತರ ಸಂಖ್ಯೆ, ಪ್ರಯಾಣಿಕರ ಸಂಖ್ಯೆಯನ್ನು ಮರೆಮಾಚುವ ಅಗತ್ಯವಿಲ್ಲ. ಅಂಕಿ ಸಂಖ್ಯೆಯನ್ನು ಮುಚ್ಚಿಡುವ ಯಾವುದೇ ಅವಶ್ಯಕತೆ ಇಲ್ಲ. ಯಾವುದೇ ರಾಜಕೀಯ ಮುಖಂಡರು ಸರಿಯಾದ ಮಾಹಿತಿ ಕಲೆಹಾಕಿ ಮಾತನಾಡಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.

As a precautionary measure to contain the spread of corona virus, Govt has decided to impose night curfew will across the state from 10 PM to 6AM starting today till 2nd Jan 2021. I request people to cooperate with the govt and strictly follow safety measures.@CMofKarnataka pic.twitter.com/XqVBsDAhxL

— Dr Sudhakar K (@DrSudhakar_) December 23, 2020

ಇದು ಅನಿವಾರ್ಯ: ಕರ್ಫ್ಯೂ ನಿರ್ಧಾರಕ್ಕೆ ಬಾರ್ ಮತ್ತು ಹೋಟೆಲ್ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಡಾ.ಕೆ.ಸುಧಾಕರ್, ರಾತ್ರಿ ಕರ್ಫ್ಯೂ ನಿರ್ಧಾರವನ್ನು ಸಂತೋಷದಿಂದೇನೂ ತೆಗೆದುಕೊಂಡಿಲ್ಲ. ಬಹಳ ಅನಿವಾರ್ಯ, ಅವಶ್ಯಕತೆ ಇರುವುದರಿಂದ ಹಾಗೂ ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ತೀರ್ಮಾನಕ್ಕೆ ಬರಲಾಗಿದೆ. ರಾತ್ರಿ 10 ಗಂಟೆ ನಂತರ ಕರ್ಫ್ಯೂ ವಿಧಿಸಲಾಗಿದೆಯೇ ಹೊರತು ಅದಕ್ಕೂ ಮುಂಚೆ ಯಾವುದೇ ಚಟುವಟಿಕೆ ನಿಷೇಧ ಮಾಡಿಲ್ಲ. ಕೃಷಿ ಚಟುವಟಿಕೆಗಳಿಗೆ, ಸರಕು ಸಾಗಣಿಕೆಗೆ, ಮಾರಾಟಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವಿಚಾರದಲ್ಲಿ ಎಲ್ಲರಿಗೂ ಜವಾಬ್ದಾರಿ ಇದೆ. ಕೇವಲ ಹಣ ಸಂಪಾದನೆ ಹಾಗೂ ಆರ್ಥಿಕ ಚಟುವಟಿಕೆಯನ್ನು ಮಾತ್ರ ನೋಡದೆ, ಜನರ ಸುರಕ್ಷತೆ ಹಾಗೂ ಆರೋಗ್ಯವನ್ನು ಕೂಡ ನೋಡಬೇಕು. ಕೇವಲ ಒಂಬತ್ತು ದಿನಗಳು ಮಾತ್ರ ಈ ಕ್ರಮ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ಹೊಸ ಪ್ರಭೇದದ ಬಗ್ಗೆ ಅಧ್ಯಯನ ನಡೆಸಲು ಅನುಕೂಲವಾಗಲಿದೆ ಎಂದರು.

ಬೆಂಗಳೂರಿನ ಆರ್ಚ್ ಬಿಷಪ್ ನವರು ನನಗೆ ಮಾಹಿತಿ ಕಳುಹಿಸಿದ್ದಾರೆ. ಯಾವುದೇ ಸಮಾರಂಭ ಮಾಡುವುದಿಲ್ಲ ಎಂದು ಅವರೇ ಹೇಳಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸಿ ಪತ್ರ ಬರೆದಿದ್ದೇನೆ ಎಂದರು.

TAGGED:Corona VirusCovid 19karnatakaNight CurfewPublic TVSudhakarಕರ್ನಾಟಕಕೊರೊನಾ ವೈರಸ್ಕೋವಿಡ್ 19ನೈಟ್ ಕರ್ಫ್ಯೂಪಬ್ಲಿಕ್ ಟಿವಿಸುಧಾಕರ್
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

Namma Metro Greenline
Bengaluru City

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಮೆಟ್ರೋ ನಿಲ್ದಾಣಗಳ ಹತ್ತಿರದಲ್ಲೇ ಬಸ್ ನಿಲ್ದಾಣ ಓಪನ್

Public TV
By Public TV
4 hours ago
T20 Team India
Cricket

ಸೂರ್ಯ, ಸಿರಾಜ್‌ ಮಿಂಚು; ಯುಎಸ್‌ಎ ವಿರುದ್ಧ ಭಾರತಕ್ಕೆ 29 ರನ್‌ಗಳ ಗೆಲುವು

Public TV
By Public TV
4 hours ago
Elephant
Bengaluru Rural

ಬೈಕ್‌ನಲ್ಲಿ ತೆರಳುವಾಗ ಏಕಾಏಕಿ ಆನೆ ದಾಳಿ – ಅಪ್ಪ ಸಾವು, ಮಗನ ಸ್ಥಿತಿ ಗಂಭೀರ

Public TV
By Public TV
4 hours ago
01 1
Big Bulletin

ಬಿಗ್‌ ಬುಲೆಟಿನ್‌ 07 February 2026 ಭಾಗ- 1

Public TV
By Public TV
5 hours ago
02 2
Big Bulletin

ಬಿಗ್‌ ಬುಲೆಟಿನ್‌ 07 February 2026 ಭಾಗ- 2

Public TV
By Public TV
5 hours ago
Man dies after setting himself on fire inside car in Wayanad
Crime

ಕೇರಳದಲ್ಲಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಕೊಡಗಿನ ಉದ್ಯಮಿ – ಹೆಂಡತಿ ಮಕ್ಕಳ ಸ್ಥಿತಿ ಗಂಭೀರ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?