Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಿಂಗಳು ಕಳೆದ್ರೂ ಆರಲಿಲ್ಲ ಅನ್ನದಾತರ ಕಿಚ್ಚು- ಕೃಷಿ ಕಾನೂನು ವಿರುದ್ಧ ರೈತರ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತಿಂಗಳು ಕಳೆದ್ರೂ ಆರಲಿಲ್ಲ ಅನ್ನದಾತರ ಕಿಚ್ಚು- ಕೃಷಿ ಕಾನೂನು ವಿರುದ್ಧ ರೈತರ ಪ್ರತಿಭಟನೆ

Latest

ತಿಂಗಳು ಕಳೆದ್ರೂ ಆರಲಿಲ್ಲ ಅನ್ನದಾತರ ಕಿಚ್ಚು- ಕೃಷಿ ಕಾನೂನು ವಿರುದ್ಧ ರೈತರ ಪ್ರತಿಭಟನೆ

Public TV
Last updated: December 26, 2020 11:34 am
Public TV
Share
3 Min Read
Farmers Protest 2 1
SHARE

– ರೈತರ ಪ್ರತಿಭಟನೆಗೆ ಬರೋಬ್ಬರಿ 1 ತಿಂಗಳು!
– ಕೊರೆವ ಚಳಿಯಲ್ಲಿ ಟ್ರ್ಯಾಕ್ಟರ್‍ಗಳೇ ಮನೆ
– ಅಡುಗೆಗೆ ದಾನದ ರೂಪದಲ್ಲಿ ರೇಷನ್

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಒಂದು ತಿಂಗಳು ಕಳೆದಿದ್ದು, ಬೇಡಿಕೆ ಈಡೇರುವವರೆಗೂ ಅನಿರ್ಧಿಷ್ಟಾವಧಿಗೆ ಪ್ರತಿಭಟನೆ ನಡೆಸಲು ರೈತ ಮುಖಂಡರು ತಿರ್ಮಾನಿಸಿದ್ದಾರೆ.

Farmers Protest 1 1

ದೆಹಲಿ ಹರಿಯಾಣ ಹೆದ್ದಾರಿಯ ಸಿಂಘು ಗಡಿ, ಠಿಕ್ಕರಿ, ಘಾಜೀಪುರ್ ಸೇರಿದಂತೆ ಎಂಟು ಗಡಿ ಪ್ರದೇಶಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್ ನಿಂದ ಆರಂಭವಾದ ಹೋರಾಟದ ಕಿಚ್ಚು ಈಗ ಇಡೀ ದೇಶವನ್ನು ಆವರಿಸಿಕೊಂಡಿದ್ದು ಪ್ರತಿಭಟನೆಗೆ ಈಗ ಹರಿಯಾಣ, ಉತ್ತಾರಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ದೇಶದ್ಯಾಂತ ಎಲ್ಲ ರಾಜ್ಯಗಳಿಂದ ಪೂರ್ಣ ಪ್ರಮಾಣದ ಬೆಂಬಲ ವ್ಯಕ್ತವಾಗುತ್ತಿದೆ.

ಸಿಂಹ ಸ್ವಪ್ನವಾಗಿ ಕಾಡುತ್ತಿರುವ ರೈತರ ಪ್ರತಿಭಟನೆ ನಿಯಂತ್ರಿಸುವ ಕೇಂದ್ರ ಸರ್ಕಾರ ಹಲವು ಪ್ರಯತ್ನಗಳನ್ನು ಮಾಡುತ್ತಿದೆ. ಈಗಾಗಲೇ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ನೇತೃತ್ವದಲ್ಲಿ ಐದು ಸಂಧಾನ ಸಭೆಗಳನ್ನು ರೈತ ಮುಖಂಡರ ಜೊತೆಗೆ ನಡೆಸಿದ್ದು ವಿಫಲವಾಗಿದೆ. ಗೃಹ ಸಚಿವ ಅಮಿತ್ ಶಾ ನಡೆಸಿದ ಮಾತುಕತೆ ಕೂಡ ವಿಫಲವಾಗಿದ್ದು ಏಳನೇ ಸಂಧಾನ ಸಭೆಗೆ ವೇದಿಕೆ ಸಿದ್ಧವಾಗುತ್ತಿದೆ.

Farmers Protest 3

ಹೊಸ ಕೃಷಿ ಕಾನೂನಗಳಲ್ಲಿ ಬದಲಾವಣೆ ಮಾಡಲು ಸಿದ್ಧ, ಎಪಿಎಂಸಿ ಉಳಿಸಿಕೊಳ್ಳುವ ಮತ್ತು ಬೆಂಬಲ ಬೆಲೆ ನೀಡುವ ಬಗ್ಗೆ ಲಿಖಿತ ಭರವಸೆ ನೀಡುವುದಾಗಿ ಸರ್ಕಾರ ಹೇಳಿದರೂ ರೈತ ಮುಖಂಡರು ಒಪ್ಪಿಕೊಂಡಿಲ್ಲ. ಹೊಸ ಕಾನೂನುಗಳನ್ನು ಸಂಪೂರ್ಣವಾಗಿ ಹಿಂಪಡೆಯುವಂತೆ ಒತ್ತಡ ಹೇರುತ್ತಿದ್ದು, ದಿನದಿಂದ ದಿನಕ್ಕೆ ಪ್ರತಿಭಟನೆಯನ್ನು ತೀವ್ರಗೊಳಿಸುತ್ತಿದ್ದಾರೆ.

ಅನಿರ್ಧಿಷ್ಟಾವಧಿಗೆ ಪ್ರತಿಭಟನೆಗೆ ಸಿದ್ಧವಾಗಿ ಬಂದಿರುವ ರೈತ ಸಮೂಹ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ. ದಿಲ್ಲಿಯ ಕೊರೆಯುವ ಚಳಿಗೆ ಮೈವೊಡ್ಡಿ ನಿಂತಿರುವ ಅವರು ಸದ್ಯ ಟ್ರ್ಯಾಕ್ಟರ್‍ಗಳನ್ನೇ ತಾತ್ಕಾಲಿಕ ಮನೆ ಮಾಡಿಕೊಂಡಿದ್ದಾರೆ. ಅಲ್ಲದೇ ಪ್ರತಿಭಟನೆ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸಿಕ್ಕಿದ್ದು ಅಡುಗೆ ತಯಾರಿಸಲು ರೇಷನ್ ದಾನದ ರೂಪದಲ್ಲಿ ಬರುತ್ತಿದೆ.

Farmers Protest 2

ದೊಡ್ಡ ಅಡುಗೆ ಕೋಣೆಗಳನ್ನು ನಿರ್ಮಿಸಿ ನಿತ್ಯ ಸಾವಿರಾರು ಅನ್ನದಾತರಿಗೆ ಊಟ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ. ಹಲವು ವೈದ್ಯರು ಸ್ವಯಂಚಾಲಿತವಾಗಿ ಕ್ಲಿನಿಕ್ ಗಳನ್ನು ತೆರೆದು ಅನಾರೋಗ್ಯ ಪೀಡಿತ ರೈತರಿಗೆ ಚಿಕಿತ್ಸೆ ನೀಡುತ್ತಿದ್ದರೆ ಮತ್ತಷ್ಟು ದಾನಿಗಳು ರೈತರು ಕಾಲ್ ಮಸಾಜ್ ಮಾಡಿಕೊಳ್ಳಲು ಹಾಗೂ ಬಟ್ಟೆಗಳನ್ನು ತೊಳೆಯಲು ಯಂತ್ರಗಳನ್ನು ನೀಡಿದ್ದಾರೆ.

ಎಲ್ಲ ಗಡಿಯಲ್ಲೂ ಪ್ರತಿಭಟನೆ ಕಿಚ್ಚು ಹೆಚ್ಚಾಗುತ್ತಿದ್ದು, ದೆಹಲಿ ಸಂಪರ್ಕಿಸುವ ಎಲ್ಲ ಹೆದ್ದಾರಿಗಳು 15 ಕಿಲೋಮೀಟರ್ ಹೆಚ್ಚು ಉದ್ದ ಜಾಮ್ ಆಗಿದೆ. ಪ್ರಕರಣ ವಿಕೋಪಕ್ಕೆ ತೆರಳುತ್ತಿದ್ದಂತೆ ಸುಪ್ರೀಂಕೋರ್ಟ್ ಈಗ ಮಧ್ಯಸ್ಥಿಕೆ ವಹಿಸಿದೆ. ಪ್ರತಿಭಟನೆ ನಡೆಸುವುದು ಮೂಲಭೂತ ಹಕ್ಕು ಎಂದಿರುವ ನ್ಯಾ.ಎಸ್.ಎ ಬೋಬ್ಡೆ ನೇತೃತ್ವದ ಪೀಠ ಜನರಿಗೆ ತೊಂದರೆಯಾಗಂತೆ ಪ್ರತಿಭಟನೆ ನಡೆಸಿ ಎಂದಿದೆ. ಅಲ್ಲದೆ ಇಂದೊಂದು ರಾಷ್ಟ್ರೀಯ ವಿಚಾರ ಆಗಿರುವ ಕಾರಣ ಪ್ರಕರಣದ ಇತ್ಯರ್ಥಕ್ಕೆ ಸಮಿತಿ ರಚನೆ ಮಾಡುವುದಾಗಿ ಹೇಳಿದೆ.

Farmers Protest 1

ಅನ್ನದಾತರ ಹೋರಾಟದ ಕಿಚ್ಚು ಹೆಚ್ಚಾಗುತ್ತಿರುವ ಹೊತ್ತಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಅಖಾಡಕ್ಕೆ ಇಳಿದಿದ್ದಾರೆ. ರೈತರ ಮನವೊಲಿಸುವ ಕಾರ್ಯ ಮಾಡುತ್ತಿದ್ದು ವಿಫಲವಾಗಿದ್ದಾರೆ. ಈವರೆಗೂ ಮೂರು ಬಾರಿ ರೈತರನ್ನು ಉದ್ದೇಶಿಸಿ ಮೋದಿ ಸಾರ್ವಜನಿಕ ಭಾಷಣ ಮಾಡಿದ್ದಾರೆ. ತಮ್ಮ ಭಾಷಣದಲ್ಲಿ ಕೃಷಿ ಕಾನೂನುಗಳನ್ನು ಸರ್ಮರ್ಥಿಸಿಕೊಂಡಿರುವ ಅವರು ಹೊಸ ಕಾನೂನು ರೈತ ಜೀವನದಲ್ಲಿ ಹೊಸ ಭಾಷ್ಯ ಬರೆಯಲಿದೆ ಎಂದಿದ್ದಾರೆ. ವಿಪಕ್ಷಗಳ ಷಡ್ಯಂತ್ರಗಳಿಗೆ ಬಲಿಯಾಗದೇ ಸರ್ಕಾರದ ಜೊತೆಗೆ ಮಾತುಕತೆ ನಡೆಸಿ ಪ್ರತಿಭಟನೆ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ.

ಆದರೆ ರೈತರು ಮಾತ್ರ ಸರ್ಕಾರದ ಮಾತನ್ನು ಈವರೆಗೂ ಕೇಳಿಲ್ಲ ಸದ್ಯ ಒಂದು ತಿಂಗಳು ಪೂರೈಸಿದ್ದು ಕಾನೂನು ವಾಪಸ್ ಪಡೆಯುವವರೆಗೂ ಪ್ರತಿಭಟನೆ ನಿರಂತರ ಎಂದಿದ್ದಾರೆ. ಹೀಗಾಗಿ ಕ್ರಿಸ್ಮಸ್ ರಜೆ ಬಳಿಕ ಸುಪ್ರೀಂಕೋರ್ಟ್ ಈ ಪ್ರಕರಣವನ್ನು ಇತ್ಯರ್ಥ ಮಾಡುವ ಸಾಧ್ಯತೆಗಳಿದ್ದು ಮುಂದೆ ಪ್ರತಿಭಟನೆ ಯಾವ ದಿಕ್ಕಿಗೆ ತಿರುಗಲಿದೆ ಕಾದು ನೋಡಬೇಕಿದೆ.

Farmers Protest

TAGGED:farmersnewdelhiprotestPublic TVನವದೆಹಲಿಪಬ್ಲಿಕ್ ಟಿವಿಪ್ರತಿಭಟನೆರೈತರು
Share This Article
Facebook Whatsapp Whatsapp Telegram

Cinema news

MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post

You Might Also Like

Donald Trump gaza peace inauguration 1
Latest

6,7,8 ಆಯ್ತು ಈಗ ಭಾರತ, ಪಾಕ್‌ ಕಾದಾಟದಲ್ಲಿ 11 ಜೆಟ್‌ ಹೊಡೆದುರುಳಿಸಲಾಗಿದೆ ಎಂದ ಟ್ರಂಪ್‌

Public TV
By Public TV
8 minutes ago
food inspection officer attacked in davangere
Crime

ದಾವಣಗೆರೆ | ಪೊಲೀಸರಿಗೆ ಹೊಡೆದ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಅಧಿಕಾರಿ ಮೇಲೆ ಹಲ್ಲೆ

Public TV
By Public TV
10 minutes ago
dutch prime minister dick schoof arrives bengaluru 1
Bengaluru City

ಬೆಂಗಳೂರಿಗೆ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನಿ ಡಿಕ್ ಶೂಫ್  

Public TV
By Public TV
44 minutes ago
Chikkamagaluru Police
Chikkamagaluru

ಸ್ನೇಹಿತೆ ಜೊತೆಗಿದ್ದ ಅಪ್ರಾಪ್ತನ ಮೇಲೆ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್‌ಗಿರಿ – ನಾಲ್ವರು ಅರೆಸ್ಟ್‌

Public TV
By Public TV
58 minutes ago
forest officials raid bhatkal 21 kg of deer meat found in fridge
Crime

ಭಟ್ಕಳ | ಅರಣ್ಯಾಧಿಕಾರಿಗಳ ದಾಳಿ – ಫ್ರಿಡ್ಜ್‌ಲ್ಲಿ 21 ಕೆಜಿ ಜಿಂಕೆ ಮಾಂಸ ಪತ್ತೆ

Public TV
By Public TV
1 hour ago
Contractors Association Manjunath
Belgaum

ಬೆಳಗಾವಿಯಲ್ಲೇ 3,458 ಕೋಟಿ ಬಾಕಿ, ಪಾವತಿಸದಿದ್ರೆ ಬೆಂಗಳೂರಿನಲ್ಲಿ ಕುಟುಂಬದರೊಂದಿಗೆ ಪ್ರತಿಭಟನೆ: ಗುತ್ತಿಗೆದಾರರ ಸಂಘ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?