ರಾಗಿಣಿಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ

Public TV
1 Min Read
ragini

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿ ದ್ವಿವೇದಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದಿನ ವಾರಕ್ಕೆ ಮುಂದೂಡಿದೆ.

ragini dwivedi 1

ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿ ಮತ್ತು ಪ್ರಕರಣ ನಂಬರ್ 1 ಆರೋಪಿ ಶಿವಪ್ರಕಾಶ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಒಗ್ಗೂಡಿಸಿ ನ್ಯಾ.ನಾಗೇಶ್ವರಾವ್ ನೇತೃತ್ವದ ತ್ರಿ ಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆಗೂ ಮುನ್ನ ಅನಾರೋಗ್ಯ ಹಿನ್ನಲೆ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಆರೋಪಿ ಶಿವಪ್ರಕಾಶ್ ಮನವಿ ಮಾಡಿದ ಹಿನ್ನಲೆ ವಿಚಾರಣೆ ಮುಂದೂಡಲಾಯಿತು. ಸೋಮವಾರ ಬದಲಿ ಪೀಠದಲ್ಲಿ ವಿಚಾರಣೆ ನಡೆಯುವ ಸಾಧ್ಯತೆಗಳಿವೆ.

Supreme Court

ಈ ಹಿಂದೆ ಸಹ ಜಾಮೀನು ಅರ್ಜಿ ವಿಚಾರಣೆಯನ್ನು ವಜಾಗೊಳಿಸಿದ್ದ ಸುಪ್ರೀಂ ಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿತ್ತು. ಈ ಹಿನ್ನೆಲೆಯಲ್ಲಿ ಹೊಸ ವರ್ಷವನ್ನು ಸಹ ನಟಿ ಜೈಲಿನಲ್ಲೇ ಬರಮಾಡಿಕೊಳ್ಳುವಂತಾಗಿತ್ತು.

ಕೋರ್ಟ್, ರಾಜ್ಯ ಸರ್ಕಾರ ಹಾಗೂ ಸಿಸಿಬಿ ಪೊಲೀಸರಿಗೂ ನೋಟಿಸ್ ನೀಡಲಾಗಿತ್ತು. ಅಲ್ಲದೆ ಅರ್ಜಿ ವಿಚಾರಣೆಯನ್ನು ಜನವರಿಗೆ ಮುಂದೂಡಿತ್ತು. ಆದರೆ ಇಂದು ವಿಚಾರಣೆ ಆರಂಭವಾಗುವುದಕ್ಕೂ ಮುನ್ನ ಆರೋಪಿ ಶಿವಪ್ರಕಾಶ್ ಅನಾರೋಗ್ಯದ ಹಿನ್ನೆಲೆ ಮನವಿ ಮಾಡಿದ್ದಕ್ಕೆ ಮತ್ತೆ ವಿಚಾರಣೆಯನ್ನು ಮುಂದೂಡಿದೆ.

Ragini Dwivedi

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್ 4ರಂದು ತುಪ್ಪದ ಬೆಡಗಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ, ಕೆಳ ನ್ಯಾಯಾಲಯದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *