Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಅಂಕೋಲದಲ್ಲಿ ಹತ್ತನೇ ಶತಮಾನದ ತಾಮ್ರ ಶಾಸನ ಪತ್ತೆ

Public TV
Last updated: January 16, 2021 4:14 pm
Public TV
Share
2 Min Read
web dsb
SHARE

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕುಂಬಾರಕೇರಿಯಲ್ಲಿ ಕದಂಬೇಶ್ವರ ದೇವಾಲಯದ ಮರುನಿರ್ಮಾಣ ಕಾರ್ಯಕ್ಕಾಗಿ ಭೂಮಿ ಅಗೆಯುವ ವೇಳೆ 5 ಸೆಂ.ಮೀ ಹಾಗೂ 20 ಸೆಂ.ಮೀ ಉದ್ದಳತೆಯ ಜೊತೆಗೆ 15 ಸೆಂ.ಮೀ ಮತ್ತು 10 ಸೆಂ.ಮೀ ಉದ್ದಳತೆಯ ಎರಡು ತಾಮ್ರ ಶಾಸನಗಳು ಪತ್ತೆಯಾಗಿದೆ.

ಈ ಸಂಬಂಧ ದೇವಸ್ಥಾನದ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ವಿಠ್ಠಲರಾವ್ ವರ್ಣೇಕರ್ ಮಾಹಿತಿ ನೀಡಿದ್ದು, ಹೆಚ್ಚಿನ ಸಂಶೋಧನೆ ನಡೆಸಲು ಜಿಲ್ಲೆಯ ಇತಿಹಾಸ ತಜ್ಞ ಶ್ಯಾಮಸುಂದರ್ ಮುಂದಾಗಿದ್ದಾರೆ. ಈ ಶಾಸನವು ಕಲ್ಯಾಣ ಚಾಲುಕ್ಯರ ತ್ರೈಳೋಕ್ಯಮಲ್ಲನ ಆಡಳಿತ ಕಾಲದ್ದಾಗಿದ್ದು ಹತ್ತನೇ ಶತಮಾನದ್ದಾಗಿದೆ.

ಶಾಸನದಲ್ಲೇನಿದೆ?
ಸ್ವಸ್ತಿ ಸಮಸ್ತ ಭುವನಾಶ್ರಯ ಪ್ರತೂವೀವಲ್ಲಭ ಮಹಾರಾಜಾಧಿರಾಜ ಸತ್ಯಾಶ್ರಯ
ಕುಳತಿಳಕ ಪರಮಭಟ್ಟಾರಕ ಚಾಳುಕ್ಯಾಭರಣ

ಶ್ರೀಮತ್ರೈಲೋಕ್ಯಮಲ್ಲ ದೇವರ ರಾಜ್ಯದಲ್ಲಿ ಶಕವರ್ಷ 897ನೇಯ ಯುವ ಸಂವತ್ಸರದ ಭಾದ್ರಪದ ಮಾಸದ ಅಮವಾಸ್ಯೆ ಆದಿತ್ಯವಾರದಂದು ಸಂಭವಿಸಿದ ಸೂರ್ಯ ಗ್ರಹಣದ ಸಂದರ್ಭದಲ್ಲಿ ಶ್ರೀಮದ್ ಕಲಿಯರಸ ಪ್ಪಿರಿಯ ಭೂತಯ್ಯಗಡಂಬನು ಕದಂಬೇಶ್ವರ ದೇವಾಲಯ ನಿರ್ಮಾಣ ಮಾಡಿ, ಸಿವರಾಸಿ ಜೀಯರ ಪಾದಗಳಿಗೆ ನಮಿಸಿ, ಕಣ್ನಸೆ, ಬಡ್ಡಗಿವಾಳ್ಯ, ಸತ್ಯಾವಾಳು, ನಂದಾದೀವಿಗೆ, ಸೋಡಗ್ರ್ಗೆ ಇತ್ಯಾದಿ ನಿತ್ಯ ದೇವಸ್ವಂ ಕಾರ್ಯಗಳಿಗಾಗಿ ಹರದರಕೇರಿಯಿಂದ ಹತ್ತು ಗದ್ಯಾಣ ಮತ್ತು ತೆಂಕಣ ಕೇರಿಯಿಂದ ಐದು ಗದ್ಯಾಣ(ಹಣ)ವನ್ನು ದಾನವಾಗಿ ನೀಡಲಾಯಿತು.

ಈ ಧರ್ಮವನ್ನು ಹಾಳು ಮಾಡಿದವರು ಕುರುಕ್ಷೇತ್ರದಲ್ಲಿ, ವಾರಣಾಸಿಯಲ್ಲಿ ಸಾವಿರ ಗೋವುಗಳನ್ನು ಕೊಂದಂತಹ ಪಾಪಕ್ಕೆ ಗುರಿಯಾಗುತ್ತಾರೆ ಎಂಬ ಶಾಪಾಶಯದ ನುಡಿಗಳಿವೆ.

ಶಾಸನದ ಪ್ರಾಮುಖ್ಯತೆ:
ಪ್ರಸ್ತುತ ಶಾಸನಗಳು 10ನೇ ಶತಮಾನದ ಕೊನೆಯಲ್ಲಿ ಅಂಕೋಲೆಯು ನೇರವಾಗಿ ಕಲ್ಯಾಣ ಚಾಲುಕ್ಯರ ಆಡಳಿತಕ್ಕೆ ಒಳಪಟ್ಟಿತ್ತು ಎಂಬ ವಿಷಯವನ್ನು ತಿಳಿಸುತ್ತದೆ. ಶಾಸನದಲ್ಲಿ ಯಾವುದೇ ಮಾಂಡಳೀಕ ಅರಸನ ಉಲ್ಲೇಖವಿಲ್ಲ. ದೇವಾಲಯವನ್ನು ಕಟ್ಟಿಸಿದ ಭೂತಯ್ಯಗಡಂಬ ತ್ರೈಲೋಕ್ಯಮಲ್ಲನ ಯಾವುದೋ ಒಬ್ಬ ಅಧಿಕಾರಿಯಾಗಿರಬೇಕು. ಈ ಶಾಸನವು ಶಕವರ್ಷ 897 ಅಂದರೆ ಕ್ರಿ.ಶ. 975ನೇ ಇಸವಿಯಲ್ಲಿ ನಿರ್ಮಾಣವಾಗಿರುವುದು ತಿಳಿಸುವುದರಿಂದ ಇಂದಿಗೆ ಸರಿಯಾಗಿ 1046 ವರ್ಷಗಳ ಹಿಂದೆ ಕದಂಬೇಶ್ವರ ದೇವಾಲಯ ಶ್ರೀಮದ್ ಕಲಿಯರಸ ಪ್ಪಿರಿಯ ಭೂತಯ್ಯಗಡಂಬನಿಂದ ನಿರ್ಮಾಣವಾಯಿತೆಂದು ಸ್ಪಷ್ಟವಾಗಿ ಹೇಳುತ್ತದೆ.

ಅಂತೆಯೇ ತೆಂಕಣಕೇರಿಯನ್ನು ಉಲ್ಲೇಖಿಸಿರುವುದರಿಂದ ಅದರ ಪ್ರಾಚೀನತೆಯೂ 1046 ವರ್ಷಗಳಷ್ಟು ಹಿಂದಕ್ಕೆ ಒಯ್ಯುತ್ತದೆ. ಶಾಸನದಲ್ಲಿ ಉಲ್ಲೇಖಿತ ತ್ರೈಲೋಕ್ಯಮಲ್ಲನು ಕಲ್ಯಾಣ ಚಾಳುಕ್ಯರ ಎರಡನೇ ತೈಲಪನಾಗಿದ್ದು ಈತನು ಕ್ರಿ.ಶ.973 ರಿಂದ 979ರ ವರೆಗೆ ಆಳ್ವಿಕೆ ನಡೆಸಿದ್ದಾನೆ. ಈತನ ಅವಧಿಯಲ್ಲಿ ಅಧಿಕಾರಿಯಾಗಿದ್ದ ಭೂತಯ್ಯ ಗಡಂಬ ಕದಂಬ ವಂಶಸ್ಥನಾಗಿರಬೇಕು ಎಂದು ಊಹಿಸಲಾಗಿದೆ.

ಭೂತಯ್ಯ+ಕದಂಬ=ಭೂತಯ್ಯಗಡಂಬ. ಆದ್ದರಿಂದಲೇ ಆತ ಕಟ್ಟಿಸಿದ ದೇವಾಲಯ ಕದಂಬೇಶ್ವರ ದೇವಾಲಯವೆಂದು ಖ್ಯಾತಿಯಾಗಿದೆ. ಅಲ್ಲದೆ ಶಾಸನವು ಸಿವರಾಸಿ ಜೀಯನನ್ನು ಉಲ್ಲೇಖಿಸುವುದರಿಂದ ಆ ಸಮಯದಲ್ಲಿ ಈ ಪ್ರದೇಶದಲ್ಲಿ ಕಾಳಾಮುಖ ಯತಿಗಳ ಪ್ರಾಬಲ್ಯವಿರುವುದರ ಕುರಿತು ಬೆಳಕು ಚೆಲ್ಲುತ್ತದೆ. ಶಾಸನದಲ್ಲಿ ಬರುವ ತೆಂಕಣಕೇರಿಯು ಇಂದಿನ ತೆಂಕಣ ಕೇರಿಯೆಂದು ಗುರುತಿಸಿದರೆ ಶಾಸನ ಹೇಳುವ ‘ತಳವಟ್ಟೆ ಧಮ್ಮಗೇರಿ ಹರದರಕೇರಿ’ಯನ್ನು ತಳವೃತ್ತಿಯಾ ಧಾರಿತ ವ್ಯಾಪಾರಿಗಳ ಕೇರಿ ಎಂದು ಭಾವಿಸಿದಾಗ ಅದನ್ನು ಇಂದಿನ ಕುಂಬಾರಕೇರಿ ಎಂದು ಗುರುತಿಸಬಹುದು ಎಂದು ಶ್ಯಾಮಸುಂದರ ಗೌಡ ವಿವರಿಸಿದ್ದಾರೆ.

TAGGED:AngolaCopperInscriptionPublic TVಅಂಕೋಲಉತ್ತರ ಕನ್ನಡತಾಮ್ರಪಬ್ಲಿಕ್ ಟಿವಿ Uttara Kannadaಶಾಸನ
Share This Article
Facebook Whatsapp Whatsapp Telegram

Cinema Updates

madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
1 day ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
2 days ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
2 days ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
3 days ago

You Might Also Like

r ashok 1 1
Bengaluru City

ಸಿಎಂ, ಡಿಸಿಎಂ ತಿಕ್ಕಾಟ ಇಲ್ಲದಿದ್ದರೆ ವಿದ್ಯಾರ್ಥಿಗಳು ಸಾಯುತ್ತಿರಲಿಲ್ಲ: ಅಶೋಕ್‌

Public TV
By Public TV
29 minutes ago
manipur protest
Latest

ಮೈತೇಯಿ ಸಮುದಾಯದ ನಾಯಕ ಬಂಧನ – ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಯುವಕರ ಬೆದರಿಕೆ

Public TV
By Public TV
32 minutes ago
Bengaluru Chinnaswamy Stampede
Bengaluru City

ಚಿನ್ನಸ್ವಾಮಿ ಕಾಲ್ತುಳಿತ | ಕತ್ತು, ಬೆನ್ನು ತುಳ್ಕೊಂಡು ಹೋಗ್ತಿದ್ರು, ಉಸಿರಾಡೋಕೂ ಆಗ್ತಿರಲಿಲ್ಲ – ಗಾಯಾಳು ಪ್ರಶಾಂತ್

Public TV
By Public TV
56 minutes ago
Rinku Singh 3
Cricket

ಅದ್ಧೂರಿ ನಿಶ್ಚಿತಾರ್ಥ – ರಿಂಕುಗೆ ರಿಂಗು ಹಾಕಿದ ಸಂಸದೆ ಪ್ರಿಯಾ ಸರೋಜ್

Public TV
By Public TV
57 minutes ago
Provide facility every day in prison demand of Harsha murder accused
Bellary

ಜೈಲಾಧಿಕಾರಿಗಳ ಜೊತೆ ಕಿರಿಕ್‌ – ಹರ್ಷ ಕೊಲೆ ಆರೋಪಿಗಳಿಗೆ ಜೈಲಿನಲ್ಲಿ ಕ್ಲಾಸ್‌

Public TV
By Public TV
1 hour ago
Chinnaswamy Stadium Stampede Case CM Siddaramaiahs Political Secretary K Govindaraj Sacked
Bengaluru City

ಗೋವಿಂದರಾಜ್‌ ಎಸಗಿದ ತಪ್ಪನ್ನು ಜನರ ಮುಂದೆ ಹೇಳಿ – ಗಾಢ ಮೌನಕ್ಕೆ ಜಾರಿದ್ದು ಯಾಕೆ: ಸಿಎಂಗೆ ಸುನಿಲ್‌ ಕುಮಾರ್‌ ಪ್ರಶ್ನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?