ನಮ್ಮ ಪ್ರತಿಭೆಗಳ ಪರವಾಗಿ ನಾವೇ ನಿಲ್ಲದಿದ್ರೆ ಬೇರಾರು ನಿಲ್ತಾರೆ?: ಸುದೀಪ್

Public TV
1 Min Read
Sudeep

– ಸರ್ಕಾರಕ್ಕೆ ಕಿಚ್ಚನ ಮನವಿ

ಬೆಂಗಳೂರು: ಕೊರೊನಾದಿಂದಾಗಿ ರದ್ದಾಗಿರುವ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡುವಂತೆ ಅಖಿಲ ಕರ್ನಾಟಕ ವಾದ್ಯಗೋಷ್ಠಿ ಕಲಾವಿದರ ಮಹಾ ಸಂಘದಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಕಲಾವಿದರ ಪ್ರತಿಭಟನೆಗೆ ಬೆಂಬಲ ಸೂಚಿಸಿರುವ ನಟ ಕಿಚ್ಚ ಸುದೀಪ್, ಸರ್ಕಾರಕ್ಕೆ ಮನವಿ ಸಹ ಮಾಡಿಕೊಂಡಿದ್ದಾರೆ.

Artist Protest 1

ನಾನು ಪ್ರತಿಭಟನಾ ನಿರತ ವಾದ್ಯಗೋಷ್ಠಿ ಕಲಾವಿದರ ಜೊತೆಗಿದ್ದೇನೆ. ಅವರ ಹೋರಾಟಕ್ಕೆ ನನ್ನ ಬೆಂಬಲವಿದೆ. ನನ್ನ ಸ್ನೇಹಿತರು ಮತ್ತು ಅಭಿಮಾನಿಗಳನ್ನ ಈ ವಿಷಯವಾಗಿ ಗಮನ ಹರಿಸಲು ಮತ್ತು ನಿಮ್ಮಿಂದಾಗುವ ನೆರವನ್ನ ನೀಡಲು ವಿನಂತಿಸುವೆ. ಹಾಗೆ ಈ ಕಲಾವಿದರ ಪರವಾಗಿ ಸರ್ಕಾರ ಸಹ ಪೂರಕ ಕ್ರಮಗಳನ್ನ ಕೈಗೊಳ್ಳಲು ಕೋರುತ್ತೇನೆ. ಏಕೆದಂರೆ ದೂರದರ್ಶನವಿಲ್ಲದ ಕಾಲದಿಂದಲೂ ನಮ್ಮನ್ನ ರಂಜಿಸುತ್ತಿರುವ ಕಲಾ ಬಳಗವನ್ನ ಮುಂದಿನ ತಲೆಮಾರುಗಳ ತನಕ ಕಾಪಾಡಿಕೊಳ್ಳಬೇಕಾದುದು ನಮ್ಮೆಲ್ಲರ ಕರ್ತವ್ಯವೆಂದು ಭಾವಿಸಿದ್ದೇನೆ. ನಮ್ಮ ಈ ಪ್ರತಿಭೆಗಳ ಪರವಾಗಿ ನಾವೇ ನಿಲ್ಲದಿದ್ರೆ ಬೇರಾರು ನಿಲ್ಲುತ್ತಾರೆ ಅಲ್ಲವೇ ಎಂದಿದ್ದಾರೆ.

Artist Protest 2

ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಲಾವಿದರು, ಜಾತ್ರೆ, ಉತ್ಸವ, ರಾಜ್ಯೋತ್ಸವ ನಡೆಸಲು ಪ್ರೋತ್ಸಾಹ ನೀಡಬೇಕು. ವಾದ್ಯಗೋಷ್ಠಿ ಕಲಾವಿದರಿಗೆ 5 ಸಾವಿರ ರೂಪಾಯಿ ಆರ್ಥಿಕ ಸಹಾಯದ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಿಗುವ ಎಲ್ಲಾ ಸೌಲಭ್ಯ ನೀಡಬೇಕು. ರಾಜ್ಯೋತ್ಸವ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ ನಮಗೂ ಕೊಡಬೇಕು ಎಂದು ಪ್ರತಿಭಟನಾ ನಿರತರು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *