Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ 7 ಭ್ರಷ್ಟರ ಮೇಲೆ ಎಸಿಬಿ ದಾಳಿ – ಕಂತೆ ಕಂತೆ ಹಣ ಎಣಿಸಿ ಅಧಿಕಾರಿಗಳು ಸುಸ್ತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ರಾಜ್ಯದ 7 ಭ್ರಷ್ಟರ ಮೇಲೆ ಎಸಿಬಿ ದಾಳಿ – ಕಂತೆ ಕಂತೆ ಹಣ ಎಣಿಸಿ ಅಧಿಕಾರಿಗಳು ಸುಸ್ತು

Bellary

ರಾಜ್ಯದ 7 ಭ್ರಷ್ಟರ ಮೇಲೆ ಎಸಿಬಿ ದಾಳಿ – ಕಂತೆ ಕಂತೆ ಹಣ ಎಣಿಸಿ ಅಧಿಕಾರಿಗಳು ಸುಸ್ತು

Public TV
Last updated: February 2, 2021 9:47 pm
Public TV
Share
4 Min Read
corruption acb raid 1
SHARE

– ಭ್ರಷ್ಟರ ಆಸ್ತಿ ಅಂದಾಜು 100 ಕೋಟಿ ರೂ.
– 30 ಕಡೆ ಎಸಿಬಿ ದಾಳಿ

ಬೆಂಗಳೂರು: ಕೊರೊನಾದಿಂದಾಗಿ ಇಡೀ ದೇಶ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದೆ. ಸಾಕಷ್ಟು ಅಳೆದು ತೂಗಿ ನಿನ್ನೆ ಕೇಂದ್ರ ಸರ್ಕಾರ ಕೊರತೆ ಬಜೆಟ್ ಮಂಡಿಸಿದೆ. ದೇಶಕ್ಕೆ ಆರ್ಥಿಕ ಸಂಕಷ್ಟ ಎದುರಾದರೇನು? ಭ್ರಷ್ಟರಿಗೆ ಮಾತ್ರ ಸುಗ್ಗಿನೇ ಅಲ್ವಾ. ಬರ ಅಥವಾ ಸಂಕಷ್ಟ ಕಾಲ ಎನ್ನುವುದು ಅಧಿಕಾರಿಗಳಿಗೆ ಹುಲುಸಾದ ಹುಲ್ಲುಗಾವಲು ಎಂಬ ಮಾತಿಗೆ ಪೂರಕ ಎಂಬಂತೆ ಇಂದು ಬೆಳ್ಳಂಬೆಳಗ್ಗೆ ರಾಜ್ಯದ 7 ಜಿಲ್ಲೆಗಳಲ್ಲಿ ಎಸಿಬಿ ನಡೆಸಿದ ದಾಳಿಯಲ್ಲಿ ಸಪ್ತ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ.

7 ಭ್ರಷ್ಟರಿಗೆ ಸಂಬಂಧಿಸಿ ಬೆಂಗಳೂರು, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಬಳ್ಳಾರಿ, ಕೋಲಾರ, ಧಾರವಾಡ ಜಿಲ್ಲೆಗಳ 30 ಕಡೆ ಏಕಕಾಲದಲ್ಲಿ ಎಸಿಬಿ ದಾಳಿ ನಡೆಸಿದೆ. ದಾಳಿ ವೇಳೆ, ಒಬ್ಬೊಬ್ಬ ಅಧಿಕಾರಿ ಬಳಿ ಕೋಟಿ ಕೋಟಿ ಮೌಲ್ಯದ ಆಸ್ತಿ, ರಾಶಿ ರಾಶಿ ಚಿನ್ನಾಭರಣ, ಕಂತೆ ಕಂತೆ ಹಣ ಪತ್ತೆಯಾಗಿದೆ.

acb raid

ಹೆಂಡತಿ, ತಂದೆ-ತಾಯಿ, ಅಳಿಯ ಹೀಗೆ ಸಿಕ್ಕಸಿಕ್ಕವರ ಹೆಸರಿನಲ್ಲಿ ಆಸ್ತಿ ಮಾಡಿಕೊಂಡಿದ್ದಾರೆ. ಕರ್ನಾಟಕ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲೂ ಬೇನಾಮಿ ಆಸ್ತಿ ಮಾಡಿರುವುದು ಪ್ರಾಥಮಿಕ ಪರಿಶಿಲನೆಯಲ್ಲಿ ದೃಢಪಟ್ಟಿದೆ. ಇದನ್ನ ನೋಡಿ ಎಸಿಬಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ.

ಬೆಳಗ್ಗೆ 7 ಗಂಟೆಯಿಂದ ನಡೆಯುತ್ತಿರುವ ಶೋಧ ಕಾರ್ಯ, ಕೆಲವು ಕಡೆ ಕತ್ತಲಾದರೂ ನಿಂತಿಲ್ಲ. ಲೆಕ್ಕ ಹಾಕೋ ಕಾರ್ಯ ಈಗಲೂ ಮುಂದುವರೆದಿದೆ. ಲಂಚ ಹೊಡೆಯೋದ್ರಲ್ಲಿ ಇವ್ರೆಲ್ಲಾ ಪೈಪೋಟಿಗೆ ಬಿದ್ದಂತೆ ವರ್ತಿಸಿರೋದು ಕಂಡು ಬಂದಿದೆ.

ಶ್ರೀನಿವಾಸ್
ಬಳ್ಳಾರಿ ವಿಮ್ಸ್ ಆಸ್ಪತ್ರೆ ಮಾಜಿ ನಿರ್ದೇಶಕ ಶ್ರೀನಿವಾಸ್ ಸದ್ಯ ಕೊಪ್ಪಳದ ಕಿಮ್ಸ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಆಸ್ತಿ 20 ಕೋಟಿ ರೂ. ಇರಬಹುದು ಎಂದು ಅಂದಾಜಿಸಲಾಗಿದೆ. 1.94 ಲಕ್ಷ ರೂ. ನಗದು, 800ಗ್ರಾಂ ಚಿನ್ನ, 9.300 ಕೆಜಿ ಬೆಳ್ಳಿ, 3 ಕೋಟಿ ಮೌಲ್ಯದ 4 ನಿವೇಶನ, 2 ಕೋಟಿ ಮೌಲ್ಯದ ಮನೆ. ಪತ್ನಿ, ಮಾವನ ಹೆಸರಲ್ಲಿ 18 ಕೋಟಿ ಮೌಲ್ಯದ ಆಸ್ತಿ ಸೇರಿ 2 ಕಾರು, 2 ಬೈಕ್ ಹೊಂದಿದ್ದಾರೆ.

ವಿಜಯ್‍ಕುಮಾರ್
ಕೋಲಾರದ ಡಿಎಚ್‍ಒ ವಿಜಯ್‍ಕುಮಾರ್‌ಗೆ ಸೇರಿದ 6 ಕಡೆ ಏಕಕಾಲದಲ್ಲಿ ದಾಳಿ ನಡೆದಿದ್ದು ಅಂದಾಜು15 ಕೋಟಿ ರೂ. ಆಸ್ತಿ ಪತ್ತೆಯಾಗಿದೆ. ಬ್ಯಾಂಕ್ ಖಾತೆಯಲ್ಲಿ 71 ಲಕ್ಷ ರೂ ನಗದು, 300 ಗ್ರಾಂ ಚಿನ್ನ ಸಿಕ್ಕಿದೆ.

ಮೂರು ಮನೆ, ಬೆಂಗಳೂರಿನಲ್ಲಿ ಮೂರು ಫ್ಲ್ಯಾಟ್ ಇದ್ದು ಒಂದೊಂದರ ಬೆಲೆಯೂ 2 ರಿಂದ 3 ಕೋಟಿ ರೂ. ಬೆಲೆ ಬಾಳುತ್ತದೆ. ಮುಳಬಾಗಲಿನಲ್ಲಿ 7 ಕೋಟಿ ರೂ.ಮೌಲ್ಯದ ಮನೆ, ಖಾಸಗಿ ಆಸ್ಪತ್ರೆ ಕೋಲಾರ ಬಳಿ ಹೈವೇ ಪಕ್ಕದಲ್ಲೇ 1.13 ಎಕರೆ ಜಮೀನು ಇವರ ಹೆಸರಿನಲ್ಲಿದೆ. ಎರಡು ಕಾರು ಒಂದು ಬೈಕ್ ಪತ್ತೆಯಾಗಿದೆ.

ದೇವರಾಜ
ಹುಬ್ಬಳ್ಳಿಯ ಸಣ್ಣ ನೀರಾವರಿ ಇಲಾಖೆ ಇಇ ದೇವರಾಜ್ ಶಿಗ್ಗಾಂವಿ ಬಳಿ 10 ಕೋಟಿ ರೂ. ಆಸ್ತಿ ಇರಬಹುದು ಎಂದು ಅಂದಾಜಿಸಲಾಗಿದೆ. ಹುಬ್ಬಳ್ಳಿಯಲ್ಲಿ ನಾಲ್ಕು ಮನೆ, 2 ಸೈಟ್, 59.84 ಲಕ್ಷ ನಗದು, ಬ್ಯಾಂಕ್‍ನಲ್ಲಿ 30 ಲಕ್ಷ ಹಣ, 500 ಗ್ರಾಂ ಚಿನ್ನ, 4 ಕೆಜಿ ಬೆಳ್ಳಿ, 3 ಲಕ್ಷ ಮೌಲ್ಯದ ಗೃಹಪಯೋಗಿ ವಸ್ತುಗಳು ಪತ್ತೆಯಾಗಿದೆ.

ಪತ್ನಿಯ ಬ್ಯಾಂಕ್ ಲಾಕರ್‌ನಲ್ಲಿ 56.50 ಲಕ್ಷ ನಗದು, 400 ಗ್ರಾಂ ಚಿನ್ನ, ಪತ್ನಿ, ಭಾಮೈದನ ಹೆಸರಲ್ಲಿ 30 ಲಕ್ಷ ರೂ. ಡಿಪಾಸಿಟ್‌, ದೇವರಾಜ್ ಮಾವನ ಲಾಕರ್‌ನಲ್ಲಿ 300 ಗ್ರಾಂ ಚಿನ್ನಾಭರಣ, ಹಾನಗಲ್‍ನಲ್ಲಿ 23 ಎಕರೆ, ಹುಬ್ಬಳ್ಳಿ ಬಳಿ 3 ಎಕರೆ ಜಮೀನು ಮತ್ತು 8 ಲಕ್ಷ  ರೂ. ಮೌಲ್ಯದ ಎರಡು ವಾಹನಗಳು ಇರುವುದು ದೃಢಪಟ್ಟಿದೆ.

ಚನ್ನಬಸಪ್ಪ ಅವುಟೆ
ಲೋಕೋಪಯೋಗಿ ಇಲಾಖೆ ಜೆಇ ಚನ್ನಬಸಪ್ಪ ಎರಡು ತಿಂಗಳ ಹಿಂದೆಯಷ್ಟೇ ಆಳಂದದಿಂದ ಮಾಗಡಿಗೆ ವರ್ಗಾವಣೆಯಾಗಿದ್ದರು. 10 ಕೋಟಿ ರೂ. ಆಸ್ತಿ ಇರಬಹುದು ಎಂದು ಅಂದಾಜಿಸಲಾಗಿದೆ. ಕಲಬುರಗಿ ನಿವಾಸದಲ್ಲಿ 1.27 ಲಕ್ಷ ರೂ. ನಗದು, 125 ಗ್ರಾಂ ಚಿನ್ನ, 650 ಗ್ರಾಂ ಬೆಳ್ಳಿ, 22 ಲಕ್ಷ ರೂ. ಮೌಲ್ಯದ ಇನ್ನೋವಾ ಸೇರಿ ಎರಡು ಕಾರ್, ಎರಡು ಬೈಕ್ ಪತ್ತೆಯಾಗಿವೆ.

ಕಲಬುರಗಿ ನಗರದಲ್ಲಿ 8 ಫ್ಲ್ಯಾಟ್, 1 ಸೂಪರ್ ಮಾರ್ಕೆಟ್, 1 ಫಾರ್ಮ್‍ಹೌಸ್, ಚಿಂಚೋಳಿಯಲ್ಲಿ 23 ಎಕರೆ, ಬಸವಕಲ್ಯಾಣದಲ್ಲಿ 3 ಎಕರೆ ಜಮೀನು , ಚನ್ನಬಸಪ್ಪ ಪತ್ನಿ ಹಾಗೂ ಭಾಮೈದನ ಹೆಸರಲ್ಲೂ ಅಪಾರ ಆಸ್ತಿ, ತೆಲಂಗಾಣದ ಸಂಗಾರೆಡ್ಡಿಯಲ್ಲಿ 50 ಲಕ್ಷ ರೂ. ಮೌಲ್ಯದ ಸೈಟ್ ಹೊಂದಿದ್ದಾರೆ.

ಪಾಂಡುರಂಗ ಗರಗ್‌
ಸಹಕಾರ ಸಂಘಗಳ ಜಂಟಿ ನಿಬಂಧಕ ಪಾಂಡುರಂಗ ಗರಗ್ ಬಳಿ ಅಂದಾಜು 10 ಕೋಟಿ ರೂ. ಮೌಲ್ಯದ ಆಸ್ತಿಗಳಿದೆ. ಬೆಂಗಳೂರಿನ ನಾಲ್ಕು ಕಡೆ ಮತ್ತು ಚಿತ್ರದುರ್ಗದಲ್ಲಿ ರೇಡ್ ನಡೆದಿದೆ. ವಿಜಯನಗರದಲ್ಲಿ ಐಶಾರಾಮಿ 3 ಅಂತಸ್ತಿನ ಮನೆ, ಮನೆಗೆ ಲಿಫ್ಟ್, ಹೋಂ ಥಿಯೇಟರ್ ವ್ಯವಸ್ಥೆಇದೆ. 4.44 ಲಕ್ಷ  ರೂ ನಗದು, 1.166 ಕೆಜಿ ಚಿನ್ನ, 31 ಕೆಜಿ ಬೆಳ್ಳಿ, 20 ಲಕ್ಷ ರೂ. ವಿಮೆ, ಬೆಂಗಳೂರಲ್ಲಿ 2 ಸೈಟ್, ಚಿತ್ರದುರ್ಗದಲ್ಲಿ 10 ಎಕರೆ ಜಮೀನು, ಮೂರು ಕಾರು, ಒಂದು ಟ್ರಾಕ್ಟರ್, ಮೂರು ದ್ವಿ ಚಕ್ರ ವಾಹನವನ್ನು ಹೊಂದಿದ್ದಾರೆ.

ಶ್ರೀನಿವಾಸ್
ಧಾರವಾಡದಲ್ಲಿ ಎಸಿಎಫ್ ಆಗಿರುವ ಶ್ರೀನಿವಾಸ್ ಚಿತ್ರದುರ್ಗದಲ್ಲಿ ವಾಸವಾಗಿದ್ದಾರೆ. ಅಂದಾಜು 7 ಕೋಟಿ ರೂ. ಆಸ್ತಿ ಇದೆ. 2 ಐಶಾರಾಮಿ ಮನೆ, 1 ತೋಟದ ಮನೆ, 63 ಲಕ್ಷ  ರೂ. ಮೌಲ್ಯದ ಗೃಹಪಯೋಗಿ ವಸ್ತುಗಳು, 4.87 ಲಕ್ಷ ರೂ. ನಗದು, ಬ್ಯಾಂಕ್ ಖಾತೆಯಲ್ಲಿ 5 ಲಕ್ಷ ಕ್ಯಾಶ್, 850 ಗ್ರಾಂ ಚಿನ್ನ, 3.500 ಕೆಜಿ ಬೆಳ್ಳಿ, ಎರಡು ಕಾರು, ಒಂದು ಟ್ರಾಕ್ಟರ್, ಒಂದು ಬೈಕ್ ಪತ್ತೆಯಾಗಿದೆ.

ಜಯರಾಜ
ಮಂಗಳೂರು ಪಾಲಿಕೆಯಲ್ಲಿ ಟೌನ್ ಪ್ಲಾನಿಂಗ್ ಆಫೀಸರ್ ಆಗಿರುವ ಜಯರಾಜ ಬಳಿ ಅಂದಾಜು 3.50 ಕೋಟಿ ರೂ. ಮೌಲ್ಯದ ಆಸ್ತಿಯಿದೆ. 8 ಲಕ್ಷ ರೂ. ನಗದು, 1.5 ಕೋಟಿ  ರೂ. ಮೌಲ್ಯದ ಆಸ್ತಿ ದಾಖಲೆ ಪತ್ರ, 500 ಮತ್ತು 2 ಸಾವಿರ ಮುಖಬೆಲೆ ನೋಟುಗಳು ಪತ್ತೆಯಾಗಿದೆ. ಪತ್ನಿಯ ಬ್ಯಾಂಕ್ ಅಕೌಂಟ್‍ನಲ್ಲಿ 1 ಕೋಟಿ ರೂ. ನಗದು, 160 ಗ್ರಾಂ ಚಿನ್ನಾಭರಣ, ಮಂಗಳೂರಿನಲ್ಲಿ ಅಪಾರ್ಟ್‍ಮೆಂಟ್, ಪಡೀಲ್‍ನಲ್ಲಿ ಮನೆ, ಕೇರಳದಲ್ಲಿರುವ ಜಯರಾಜ್ ಪತ್ನಿಯ ಕ್ವಾಟ್ರಸ್ ಮೇಲೂ ಎಸಿಬಿ ದಾಳಿ ಮಾಡಿದೆ.

TAGGED:ACBbenaglurucorruptionkannada newsraidsಎಸಿಬಿಕರ್ನಾಟಕಬೆಂಗಳೂರುಭ್ರಷ್ಟಾಚಾರ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
20 minutes ago
Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
46 minutes ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
1 hour ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
2 hours ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
2 hours ago
Husband who killed wife with axe surrenders to police Mysuru
Crime

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?