ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೋಲಪಲ್ಲಿ ಬಳಿ ಸರಣಿ ಅಪಘಾತವಾಗಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಮೂರು ಲಾರಿ ಮತ್ತು ಒಂದು ಕಾರು ನಡುವೆ ಸರಣಿ ಅಪಘಾತ ನಡೆದಿದೆ.
ಲಾರಿಗಳ ಮುಖಾಮುಖಿ ಡಿಕ್ಕಿಯಿಂದ ಅಪಘಾತ ಸಂಭವಿಸಿದೆ. ಮೃತರನ್ನ ದೇವದುರ್ಗ ಮೂಲದ ಹರ್ಷಿತಾ(18) ಹಾಗೂ ಭುವನ್(16) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಪರಿಸ್ಥಿತಿ ಚಿಂತಾಜನಕವಾಗಿದೆ.
ಲಾರಿ ಹಿಂದೆ ಬರುತ್ತಿದ್ದ ಕಾರಿಗೆ ಹಿಂಬದಿಯಲ್ಲಿನ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿ ಇದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಹಟ್ಟಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.