Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ಬೀಗ ಬೀಳುವ ಹೊಸ್ತಿಲಲ್ಲಿ ಶೃಂಗೇರಿ ಶ್ರೀಗಳು ಓದಿದ ಕನ್ನಡ ಶಾಲೆ

Public TV
Last updated: February 13, 2021 3:36 pm
Public TV
Share
3 Min Read
Sringeri Sri School 4 copy
SHARE

– ಶಾಲೆ ಉಳಿವಿಗಾಗಿ ಟೊಂಕ ಕಟ್ಟಿ ನಿಂತ ಹಳೆ ವಿದ್ಯಾರ್ಥಿಗಳು

ಚಿಕ್ಕಮಗಳೂರು: ಶೃಂಗೇರಿ ಮಠದ 34ನೇ ಜಗದ್ಗುರುಗಳಾದ ಚಂದ್ರಶೇಖರ ಭಾರತೀ ಶ್ರೀಗಳು ಓದಿದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಗೆ ಬೀಗ ಬೀಳುವ ಕಾಲ ಸನ್ನಿಹಿತವಾಗಿದೆ. 1900 ಇಸವಿಯಲ್ಲಿ ಪುಟ್ಟ-ಪುಟ್ಟ ಹೆಜ್ಜೆಗಳನ್ನಿಟ್ಟುಕೊಂಡು ಇದೇ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ದ ಶ್ರೀಗಳು ಮುಂದಿನ ದಿನಗಳಲ್ಲಿ ಶೃಂಗೇರಿ ಮಠದ ಜಗದ್ಗುರುಗಳಾಗಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಅಜರಾಮರವಾದರು. ವಿಶ್ವದ ಉದ್ದಗಲಕ್ಕೂ ಖ್ಯಾತಿಯಾದರು. ಅದೆಲ್ಲಾ ಒಂದು ತಪ್ಪಸ್ಸು ಹಾಗೂ ಇತಿಹಾಸ. ಆದರೆ ಇಂದು ಅವರು ಆಡಿ-ಬೆಳೆದು ಓದಿದ ಸರ್ಕಾರಿ ಕನ್ನಡ ಶಾಲೆಗೆ ಬೀಗ ಬೀಳುವ ಕಾಲ ಸನ್ನಿಹಿತವಾಗಿದೆ.

Sringeri Sri School 2 copy

ಈ ಶಾಲೆ ಆರಂಭವಾಗಿದ್ದು 1853ನೇ ಇಸವಿಯಲ್ಲಿ. ಈ ಶಾಲೆಗೆ ಸುಮಾರು 168 ವರ್ಷಗಳ ಇತಿಹಾಸವಿದೆ. ಈ ಶಾಲೆಯ ದಾಖಲಾತಿ ಪುಸ್ತಕದಲ್ಲಿ ಶ್ರೀಗಳ ಹೆಸರೂ ಕೂಡ ಇದೆ. ಶ್ರೀ ಜಗದ್ಗುರು ಚಂದ್ರಶೇಖರ ಭಾರತಿಗಳು ಈ ಶಾಲೆಯಲ್ಲಿ ಅಂದಾಜು 1900ನೇ ಇಸವಿಯಲ್ಲಿ ಓದಿದ್ದಾರೆ. ಅವರ ಪೂರ್ಣನಾಮ ನರಸಿಂಹ. ತಂದೆ ವಿದ್ವಾನ್ ಗೋಪಾಲಶಾಸ್ತ್ರಿ ತಾಯಿ ಲಕ್ಷ್ಮಮ್ಮ. ಅವರು ಹುಟ್ಟಿದ ವರ್ಷ 1892. ದಾಖಲೆಗಳು ಕಳೆದು ಹೋಗಿವೆ ಎಂದು ಇಂದಿಗೂ 130 ವರ್ಷಗಳ ಹಿಂದಿನ ದಾಖಲಾತಿ ಪುಸ್ತಕದ ಮೇಲ್ಭಾಗದಲ್ಲೇ ಬರೆದು ಜೋಪಾನವಾಗಿ ಇಟ್ಟಿದ್ದಾರೆ. ಶೃಂಗೇರಿ ಮಠ ಅಂದ್ರೆ ದೇಶ-ವಿದೇಶದ ಉದ್ದಗಲಕ್ಕೂ ಪೂಜ್ಯ ಭಾವನೆ. ಮಠದ ಶ್ರೀಗಳು ಇಟ್ಟ ಒಂದೊಂದು ಹೆಜ್ಜೆಯೂ ನೆನಪಿನ ಬುತ್ತಿ. ಆದರೆ ಸರ್ಕಾರ ಇಂತಹಾ ಜೀವಂತ ದಂತಕಥೆಯ ಶಾಲೆಗೆ ಬೀಗ ಹಾಕುವ ಕಾಲ ಸನ್ನಿಹಿತವಾಗಿದೆ.

Sringeri Sri School 1 copy

ಶಾಲೆಯ ಈ ಸ್ಥಿತಿಗೆ ಎರಡು ಕಾರಣ: ಆರಂಭದಲ್ಲಿ ಶ್ರೀಗಳು ಓದುವಾಗ ಈ ಶಾಲೆಯಲ್ಲಿ ಸಾವಿರಾರು ಮಕ್ಕಳಿದ್ದರು. 168 ವರ್ಷಗಳಲ್ಲಿ ಲಕ್ಷಾಂತರ ಮಕ್ಕಳು ಬದುಕು ರೂಪಿಸಿಕೊಂಡಿದ್ದಾರೆ. ವಿವಿಧ ಉನ್ನತ ಹುದ್ದೆಗೇರಿದ್ದಾರೆ. ಇಂದು ಈ ಶಾಲೆಯಲ್ಲಿ ಇರೋದು ಕೇವಲ 16 ಜನ ಮಕ್ಕಳು. ಶಿಕ್ಷಕರ ಶ್ರಮ ಹಾಗೂ ಹೋರಾಟದ ಫಲವಾಗಿ ನಾಲ್ಕು ಜನ ಸೇರ್ಪಡೆಯಾಗಿದ್ದಾರೆ. ಈ ದಂತಕಥೆಯ ಶಾಲೆಯ ಇಂದಿನ ಸ್ಥಿತಿಗೆ ಕಾರಣ ಎರಡು. ಒಂದು, ಹೆತ್ತವರ ಇಂಗ್ಲಿಷ್ ವ್ಯಾಮೋಹ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಮತ್ತೊಂದು, ಸರ್ಕಾರಿ ಶಾಲೆಯ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಖಾಸಗಿ ಶಾಲೆಗೆ ಅನುಮತಿ ನೀಡಬಾರದೆಂಬ ಸರ್ಕಾರದ ಆದೇಶದ ಮಧ್ಯೆಯೂ ಈ ಶಾಲೆಯ 100-200 ಮೀಟರ್ ದೂರದಲ್ಲಿ ಎರಡು ಖಾಸಗಿ ಶಾಲೆಗೆ ಅನುಮತಿ ನೀಡಿರೋದು. ಈ ಶಾಲೆಯ ಇಂದಿನ ಈ ಸ್ಥಿತಿಗೆ ಅಧಿಕಾರಿ ವರ್ಗ ಕೂಡ ಕಾರಣವಾಗಿದೆ.

Sringeri Sri School 5

ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ: ಹಿಂದೊಮ್ಮೆ ಈ ಶಾಲೆಯನ್ನ ಮುಚ್ಚಲು ಮುಂದಾಗಿದ್ದರು. ಸ್ಥಳಿಯರು ಹಾಗೂ ಹಿರಿಯ ವಿದ್ಯಾರ್ಥಿಗಳು ಶ್ರೀಗಳ ನೆನಪಿಗಾಗಿ ಉಳಿಸಿದ್ದರು. 2016ರಲ್ಲಿ ಈ ಶಾಲೆಯನ್ನ ಬಾಲಕಿಯರ ಶಾಲೆ ಜೊತೆ ವಿಲೀನ ಮಾಡಲು ಸರ್ಕಾರ ಚಿಂತಿಸಿತ್ತು. ಸ್ಥಳಿಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಬಾಲಕರ ಶಾಲೆಯಾಗೇ ಉಳಿದಿದೆ. ಇಂತಹ ಶಾಲೆಯನ್ನ ಮುಚ್ಚಲು ಅಥವ ಮರ್ಜ್ ಮಾಡಲು ಯೋಚಿಸೋ ಸರ್ಕಾರಕ್ಕೆ ಈ ನೆನಪಿನ ಬುತ್ತಿಯನ್ನ ಉಳಿಸೋ ಮನಸ್ಸಿಲ್ಲ ಎಂದು ಸ್ಥಳಿಯರು ಸರ್ಕಾರದ ವಿರುದ್ಧ ಅಸಮಾಧಾನ ಕೂಡ ಹೊರಹಾಕಿದ್ದಾರೆ. ಹೆತ್ತವರ ಇಂಗ್ಲಿಷ್ ಪ್ರೀತಿ ಕೂಡ ಶಾಲೆಯ ಈ ದುಸ್ಥಿತಿಗೆ ಕಾರಣವಾಗಿದೆ.

sringeri sri school a 2

ಶಾಲೆ ಉಳಿವಿಗಾಗಿ ಟೊಂಕ ಕಟ್ಟಿ ನಿಂತ ಹಳೆ ವಿದ್ಯಾರ್ಥಿಗಳು:
ಸ್ಥಳೀಯರು, ಹಳೇ ವಿಧ್ಯಾರ್ಥಿಗಳು, ಅಧಿಕಾರಿಗಳು, ಶಿಕ್ಷಕ ವೃಂದ ಹಾಗೂ ಎಡಿಎಂಸಿ ಸದಸ್ಯರು ಈಗ ಮತ್ತೆ ಶಾಲೆಗೆ ಮರುಜೀವ ನೀಡಲು ಮುಂದಾಗುತ್ತಿದ್ದಾರೆ. ಸುಣ್ಣ-ಬಣ್ಣ ಹೊಡೆಸಿ ಶ್ರೀಗಳ ನೆನಪಿಗಾಗಿ ಈ ಶಾಲೆಯ ಹೊಸ ಶಕೆಗೆ ನಾಂದಿ ಹಾಡಲು ಸಿದ್ಧತೆ ನಡೆಸಿದ್ದಾರೆ. ಅಧಿಕಾರಿಗಳು ಕೂಡ ಕೂಡ ಶಾಲೆಯನ್ನ ಮುಚ್ಚಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸ್ಥಳೀಯರು ಕೂಡ ಸರ್ಕಾರಕ್ಕೆ ಇದು ಬರೀ ಶಾಲೆಯಷ್ಟೆ. ನಮಗೆ ಜ್ಞಾನದ ದೇಗುಲ. ಶ್ರೀಗಳ ನೆನಪು. ಈ ಶಾಲೆಯ ಅಭಿವೃದ್ಧಿಗೆ ನಾವು ಸದಾ ಸಿದ್ಧ ಎಂದು ಶಾಲೆ ಉಳಿಸಲು ಟೊಂಕ ಕಟ್ಟಿ ನಿಂತಿದ್ದಾರೆ.

sringeri sri school a 1

ವಿಶ್ವದ ಉದ್ಧಗಲಕ್ಕೂ ಶಂಕರಾಚಾರ್ಯರು, ಶೃಂಗೇರಿ ಮಠ ಅಂದ್ರೆ ಪೂಜ್ಯ ಭಾವನೆ. ಶೃಂಗೇರಿ ಶ್ರೀಗಳು ಇಟ್ಟ ಒಂದೊಂದು ಹೆಜ್ಜೆಯೂ ಒಂದೊಂದು ನೆನಪಿನ ಬುತ್ತಿ. ಇತಿಹಾಸ. ಜೀವಂತ ದಂತಕಥೆ. ಅವುಗಳನ್ನ ಉಳಿಸಿಕೊಳ್ಳಬೇಕೇ ವಿನಃ ಸೃಷ್ಠಿಸಲಾಗಲ್ಲ. ಸರ್ಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಪ್ರತಿಮೆ-ರಸ್ತೆ ಮಾಡಿ ಅದಕ್ಕೆ ಒಬ್ಬೊಬ್ಬರ ಹೆಸರಿಟ್ಟು ವಸ್ತುಗಳಲ್ಲಿ ವ್ಯಕ್ತಿಗಳನ್ನ ನೆನಪಿಸಿಕೊಳ್ಳುವ ಬದಲು ಶತಶತಮಾನಕ್ಕೂ ನೈಸರ್ಗಿಕ ಹಾಗೂ ಜೀವಂತ ಆ್ಯಂಟಿಕ್ ಪೀಸ್ ಆಗಿರೋ ಇಂತಹಾ ಕನ್ನಡ ಶಾಲೆಗಳನ್ನೇ ಉಳಿಸಿ ಅಭಿವೃದ್ಧಿಪಡಿಸಿದರೆ ಅದಕ್ಕಿಂತ ದೊಡ್ಡ ಸಾಧನೆ ಮತ್ತೊಂದಿಲ್ಲ ಅನ್ನೋದು ಜಿಲ್ಲೆಯ ಜನರ ಆಸೆಯಾಗಿದೆ.

TAGGED:Chandrashekhara Bharatee SreeChikkamagaluruKannada SchoolPublic TVSringeristudentsಕನ್ನಡ ಶಾಲೆಚಂದ್ರಶೇಖರ ಭಾರತೀ ಶ್ರೀಗಳುಚಿಕ್ಕಮಗಳೂರುಪಬ್ಲಿಕ್ ಟಿವಿವಿದ್ಯಾರ್ಥಿಗಳು
Share This Article
Facebook Whatsapp Whatsapp Telegram

Cinema Updates

ramya 5
ರಮ್ಯಾ ವಿರುದ್ಧ `ಡಿ’ ಫ್ಯಾನ್ಸ್‌ನಿಂದ ಕೆಟ್ಟ ಕಾಮೆಂಟ್ಸ್; ಕಾನೂನು ಹೋರಾಟಕ್ಕೆ ಮುಂದಾದ ಮೋಹಕ ತಾರೆ
Cinema Latest Main Post Sandalwood
rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories

You Might Also Like

UP Temple Stampede
Latest

UP | ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಕಾಲ್ತುಳಿತ – ಇಬ್ಬರು ಭಕ್ತರು ಸಾವು, 29 ಮಂದಿಗೆ ಗಾಯ

Public TV
By Public TV
4 minutes ago
Bengaluru Youth Suicide
Bengaluru City

Bengaluru | ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Public TV
By Public TV
4 minutes ago
Operation Sindoor
Latest

ಆಪರೇಷನ್‌ ಸಿಂಧೂರ | ಲೋಕಸಭೆಯಲ್ಲಿಂದು 16 ಗಂಟೆಗಳ ಮ್ಯಾರಥಾನ್‌ ಚರ್ಚೆ, ಪ್ರಧಾನಿ ಮೋದಿ ಭಾಗಿ

Public TV
By Public TV
39 minutes ago
Mallikarjuna Kharge
Bengaluru City

ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್‌ ಖರ್ಗೆ ಆರೋಗ್ಯ ಸ್ಥಿತಿ ಗಂಭೀರ – ಬೆಂಗಳೂರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

Public TV
By Public TV
49 minutes ago
Davanagere Tungabhadra River
Davanagere

ಮಲೆನಾಡು ಭಾಗದಲ್ಲಿ ನಿರಂತರ ಮಳೆ – ಅಪಾಯಮಟ್ಟ ಮೀರಿ ಹರಿಯುತ್ತಿದೆ ತುಂಗಭದ್ರಾ ನದಿ

Public TV
By Public TV
1 hour ago
Yathindra
Districts

ಮೈಸೂರಿಗೆ ನಾಲ್ವಡಿ ಬಿಟ್ಟರೆ ನಮ್ಮಪ್ಪನ ಕೊಡುಗೆಯೇ ಜಾಸ್ತಿ – ವಿಪಕ್ಷಗಳ ವಾಗ್ದಾಳಿ ಬೆನ್ನಲ್ಲೇ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?