Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರಿನ ಪ್ರತಿ ವಿಧಾನಸಭೆ ಕ್ಷೇತ್ರಕ್ಕೊಂದು ಜಾಗತಿಕ ಗುಣಮಟ್ಟದ ಪದವಿ ಕಾಲೇಜು: ಅಶ್ವಥ್ ನಾರಾಯಣ್

Public TV
Last updated: February 15, 2021 6:19 pm
Public TV
Share
4 Min Read
ASHWATH
SHARE

– ಬೆಂಗ್ಳೂರು ಉತ್ತರ ವಿವಿಗೆ 170 ಎಕರೆ ಭೂಮಿ, ತಿಂಗಳಲ್ಲಿ ಎಲ್ಲ ಪ್ರಕ್ರಿಯೆ ಪೂರ್ಣ
– ಜಂಗಮಕೋಟೆಯಲ್ಲಿ ನಾಲೆಡ್ಜ್ ಸಿಟಿ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ಎಲ್ಲ ಸಿದ್ಧತೆಗಳು ಅಂತಿಮ ಹಂತದಲ್ಲಿರುವಾಗಲೇ ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ ಎನ್ ಅಶ್ವಥ್ ನಾರಾಯಣ್ ರಾಜಧಾನಿಯ 28 ವಿಧಾನಸಭೆ ಕ್ಷೇತ್ರಗಳಲ್ಲಿ ಗುಣಮಟ್ಟದ ಪದವಿ ಕಾಲೇಜುಗಳನ್ನು ಸ್ಥಾಪನೆ ಮಾಡುವುದಾಗಿ ಪ್ರಕಟಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಗುಣಮಟ್ಟದ ಕಲಿಕೆ, ಬೋಧನೆ ಮತ್ತು ಸಂಶೋಧನೆ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯ. ಅದರಂತೆ ಬೆಂಗಳೂರು ಕೇಂದ್ರ (ಸೆಂಟ್ರಲ್ ಕಾಲೇಜ್), ಬೆಂಗಳೂರು (ಜ್ಞಾನಭಾರತಿ) ಹಾಗೂ ಬೆಂಗಳೂರು ಉತ್ತರ (ಕೋಲಾರ) ವಿಶ್ವವಿದ್ಯಾಲಯಗಳ ಮೂಲಕವೇ ಇಷ್ಟೂ ವಿಧಾನಸಭೆ ಕ್ಷೇತ್ರಗಳಲ್ಲಿ ಅತ್ಯುತ್ತಮ ಗುಣಮಟ್ಟದ ಪದವಿ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದರು.

ಬೆಂಗಳೂರು ಅಗಾಧವಾಗಿ ಬೆಳೆಯುತ್ತಿದ್ದು, ಜನಸಂಖ್ಯೆ 1.50 ಕೋಟಿಯನ್ನೂ ಮೀರಿದೆ. ಈ ಹಿನ್ನೆಲೆಯಲ್ಲಿ ಇನ್ನು ಕೆಲವೇ ವರ್ಷಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಅಗತ್ಯಗಳನ್ನು ಪರಿಣಾಮಕಾರಿಯಾಗಿ ಪೂರೈಸಬೇಕಾದರೆ ಇಷ್ಟು ಕಾಲೇಜುಗಳ ನಿರ್ಮಾಣ ಅಗತ್ಯ. ಒಂದು ವೇಳೆ ಇಲ್ಲದಿದ್ದರೆ ಹೊಸ ಕಾಲೇಜನ್ನು ನಿರ್ಮಾಣ ಮಾಡಲಾಗುವುದು. ಖಾಸಗಿ ಕಾಲೇಜುಗಳಲ್ಲಿ ಶಿಕ್ಷಣ ಪಡೆಯಲಾಗದೆ ಆರ್ಥಿಕ- ಸಾಮಾಜಿಕವಾಗಿ ಹಿಂದುಳಿದಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಈ ಮೂಲಕ ಗುಣಮಟ್ಟದ ಶಿಕ್ಷಣ ಸಿಗಲಿದೆ ಎಂದು ಡಿಸಿಎಂ ಹೇಳಿದರು.

ಜಾಗ ಸರಕಾರದ್ದು:
ಇಷ್ಟು ಕಾಲೇಜುಗಳನ್ನು ನಿರ್ಮಾಣ ಮಾಡುವುದು ದೊಡ್ಡ ಕನಸು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಇದಕ್ಕೆ ಅಗತ್ಯವಾದ ಭೂಮಿಯನ್ನು ಸರ್ಕಾರವೇ ನೀಡಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು. ಇಲಾಖೆಯ ಇವತ್ತಿನ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಅವರ ಜತೆ ಮಾತುಕತೆ ನಡೆಸಿದ್ದೇನೆ. ನಗರದ ವ್ಯಾಪ್ತಿಯಲ್ಲಿ ಕಾಲೇಜುಗಳ ನಿರ್ಮಾಣಕ್ಕೆ ಬೇಕಾಗುವ ಭೂಮಿ ಎಲ್ಲೆಲ್ಲಿ ಲಭ್ಯವಿದೆ ಎಂಬ ಬಗ್ಗೆ ಅವರಿಂದ ಮಾಹಿತಿ ಕೇಳಿದ್ದೇನೆ ಎಂದು ಡಾ.ಅಶ್ವತ್ಥ್ ನಾರಾಯಣ್ ತಿಳಿಸಿದರು.

ಕೆಲ ದಿನಗಳಲ್ಲಿಯೇ ನಗರದ ಎಲ್ಲ ಶಾಸಕರ ಸಭೆಯನ್ನು ಕರೆಯಲಿದ್ದೇನೆ. ಭೂಮಿ ಪಡೆಯುವ ಸಂಬಂಧ ಅವರೆಲ್ಲರ ವಿಶ್ವಾಸವನ್ನು ಪಡೆದು ಮುಂದಿನ ಹೆಜ್ಜೆ ಇಡಲಾಗುವುದು. ಎಲ್ಲ ಕ್ಷೇತ್ರಗಳೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾನಾಂತರವಾಗಿ ಬೆಳೆಯಬೇಕು ಎಂಬುದು ನನ್ನ ಅಭಿಲಾಷೆಯಾಗಿದೆ. ಮೊದಲ ಹಂತದಲ್ಲಿ ಬೆಂಗಳೂರು ನಗರದಲ್ಲಿ ಈ ಯೋಜನೆಯನ್ನು ಕಾರ್ಯಗತ ಮಾಡಿ ನಂತರ ಇಡೀ ರಾಜ್ಯಕ್ಕೆ ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.

ಬೇಡಿಕೆ ಇರುವ ಕೋರ್ಸುಗಳು ಮಾತ್ರ:
ಶಿಕ್ಷಣ ನೀತಿಯಲ್ಲಿ ಉಲ್ಲೇಖ ಮಾಡಿರುವ ಅಂಶಗಳ ಆಧಾರದ ಮೇಲೆ ಉದ್ಯೋಗಾಧಾರಿತ, ವೃತ್ತಿಪರ ಮತ್ತು ಜಾಗತಿಕವಾಗಿ ಬೇಡಿಕೆ ಹೊಂದಿರುವ ಕೋರ್ಸುಗಳನ್ನೂ ಆರಂಭಿಸಲಾಗುವುದು. ಈ ಮೂಲಕ ವಿದ್ಯಾರ್ಥಿಗಳ ಕನಸುಗಳು ಈಡೇರಿ ಅವರ ಸಾಮಾಜಿಕ, ಆರ್ಥಿಕ ಪರಿಸ್ಥಿತಿಗಳು ಸುಧಾರಿಸುತ್ತವೆ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

8,000 ಬೋಧಕರ ಮಂಜೂರು:
ಪ್ರಸ್ತುತ ರಾಜ್ಯದ ಪದವಿ ಕಾಲೇಜುಗಳಲ್ಲಿ ಬೋಧಕರ ಕೊರತೆ ಇದೆ. ಇದಲ್ಲದೆ ಇನ್ನೂ 8,000 ಬೋಧಕ ಹುದ್ದೆಗಳನ್ನು ಮಂಜೂರು ಮಾಡುವಂತೆ ಕೋರಲಾಗಿದೆ. ಈಗ ಖಾಲಿ ಇರುವ ಹುದ್ದೆಗಳ ಜತೆಗೆ ಈ ಹುದ್ದೆಗಳ ಮಂಜೂರು ಮಾಡಬೇಕಾಗಿದೆ. ಈಗಾಗಲೇ ಯಡಿಯೂರಪ್ಪ ಅವರಿಗೆ ಈ ಬಗ್ಗೆ ಬೇಡಿಕೆ ಸಲ್ಲಿಸಲಾಗಿದೆ. ಹಾಗೇಯೇ ಇಲಾಖೆಗೆ ಸಿಗುತ್ತಿರುವ ಒಟ್ಟಾರೆ ಅನುದಾನ ಕಡಿಮೆ ಇದ್ದು, ರಾಜ್ಯದ ಒಟ್ಟು ಬಜೆಟ್ ಗಾತ್ರದಲ್ಲಿ ಶೇ.3.5ರಷ್ಟು ಮೊತ್ತವನ್ನು ಉನ್ನತ ಶಿಕ್ಷಣಕ್ಕೆ ಮೀಸಲಿಡಬೇಕು ಎಂದು ಮನವಿ ಮಾಡಲಾಗಿದೆ. ಈಗ ಅಂದರೆ 2020-21ರ ಮುಂಗಪತ್ರದಲ್ಲಿ ಮಂಜೂರಾದ ಒಟ್ಟು 4687 ಕೋಟಿ ರೂ. ಅನುದಾನದಲ್ಲಿ ಶೇ.88ರಷ್ಟು ಅಂದರೆ, 3998 ಕೋಟಿ ರೂ. ವೇತನಕ್ಕೇ ಹೋಗಿದೆ. ಉಳಿದ ಶೇ.12ರಷ್ಟು ಅಂದರೆ 595 ಕೋಟಿ ರೂ. ಮೊತ್ತದಲ್ಲಿ ಮಾತ್ರ ಇಲಾಖೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಹೀಗಾಗಿ ಅನುದಾನವನ್ನು ಹೆಚ್ಚಿಸಬೇಕೆಂದು ಮುಖ್ಯಮಂತ್ರಿಗಳನ್ನು ಕೋರಲಾಗಿದೆ ಎಂದು ಡಿಸಿಎಂ ಮಾಹಿತಿ ನೀಡಿದರು

ಉತ್ತರ ವಿವಿಗೆ ಭೂಮಿ:
ಬೆಂಗಳೂರು ಉತ್ತರ ವಿಶ್ವವಿದ್ಯಾಲಯಕ್ಕೆ ಜಂಗಮಕೋಟೆ ಬಳಿ 172 ಎಕರೆ ಜಾಗ ಗುರುತಿಸಿದ್ದು, ಆ ಪೈಕಿ 57 ಎಕರೆಯನ್ನು ಹಸ್ತಾಂತರ ಮಾಡಲಾಗಿದೆ. ಇನ್ನೊಂದು ತಿಂಗಳಲ್ಲಿ 53 ಎಕರೆ ಹಸ್ತಾಂತರ ಮಾಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇದಲ್ಲದೆ 61 ಎಕರೆಯಲ್ಲಿ 51 ಎಕರೆ ಸರ್ಕಾರದ್ದೇ ಇದೆ ಎನ್ನುವುದು ಪರಿಶೀಲನೆ ವೇಳೆ ಗೊತ್ತಾಗಿದೆ. ಅದನ್ನೂ ವಶಕ್ಕೆ ಪಡೆಯಲಾಗುವುದು. ಇನ್ನೊಂದು ತಿಂಗಳ ಒಳಗಾಗಿ ಈ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಲಾಗುವುದು ಎಂದು ಡಾ.ಅಶ್ವಥ್ ನಾರಾಯಣ್ ಪ್ರಕಟಿಸಿದರು.

ಜಂಗಮಕೋಟೆಯಲ್ಲಿ ನಾಲೆಡ್ಜ್ ಸಿಟಿ:
2015ರಲ್ಲಿ ಈ ಬೆಂಗಳೂರು ಉತ್ತರ ವಿವಿ ಸ್ಥಾಪನೆ ಬಗ್ಗೆ ಸರಕಾರ ನಿರ್ಧಾರ ಕೈಗೊಂಡಿತಾದರೂ ಅದು ಅಸ್ತಿತ್ವಕ್ಕೆ ಬಂದಿದ್ದು 2018ರಲ್ಲಿ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಬಳಿ ಸುಸಜ್ಜಿತ ಕ್ಯಾಂಪಸ್ ನಿರ್ಮಾಣವಾಗಲಿದೆ. ಈ ಜಾಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಂಬಾ ಹತ್ತಿರದಲ್ಲಿದೆ. ಹೀಗಾಗಿ ಇಲ್ಲಿ ಒಂದು ಜ್ಞಾನ ನಗರ (ನಾಲೆಡ್ಜ್ ಸಿಟಿ) ವನ್ನು ಸ್ಥಾಪನೆ ಮಾಡಲಾಗುವುದು ಎಂದರು.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ, ಬೆಂಗಳೂರು ಉತ್ತರ ವಿವಿ ಕುಲಪತಿ ಡಾ.ಕೆಂಪರಾಜು ಮತ್ತಿತರರು ಹಾಜರಿದ್ದರು.

TAGGED:Ashwath NarayanbengaluruPublic TVಅಶ್ವಥ್ ನಾರಾಯಣ್ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
3 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
4 hours ago
Kamal Haasan Sudha rani
ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ
5 hours ago
Rachita Ram
ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್
6 hours ago

You Might Also Like

health department
Bengaluru City

ಸರ್ಕಾರಿ ಆಸ್ಪತ್ರೆಗಳಲ್ಲಿ ಅವ್ಯವಸ್ಥೆ, ಚಿಕಿತ್ಸೆ ಕೊರತೆ ಇದ್ರೆ ದೂರು ಕೊಡಿ – ಆರೋಗ್ಯ ಇಲಾಖೆಯಿಂದ ವಾಟ್ಸಪ್‌ ನಂಬರ್‌ ರಿಲೀಸ್‌

Public TV
By Public TV
3 minutes ago
rinku singh priya saroj
Cricket

ಸಂಸದೆ ಜೊತೆ ಎಂಗೇಜ್‌ಮೆಂಟ್‌ ಆಗ್ತಿದ್ದಾರೆ ರಿಂಕು ಸಿಂಗ್‌ – ಕ್ರಿಕೆಟಿಗನ ಕೈ ಹಿಡಿಯೋ ಚೆಲುವೆ ಯಾರು?

Public TV
By Public TV
18 minutes ago
Canadian Man Claims His Ex Girlfriend Stole CA5 Million Lottery Winnings Ran Away With Lover
Crime

ಗೆಳೆಯ ಲಾಟರಿಯಲ್ಲಿ ಗೆದ್ದ 30 ಕೋಟಿ ರೂ. ಕದ್ದು ಲವ್ವರ್‌ ಜೊತೆ ಕೇಡಿ ಲೇಡಿ ಎಸ್ಕೇಪ್‌

Public TV
By Public TV
33 minutes ago
MB Patil
Districts

ವಿಜಯಪುರದ ರಸ್ತೆ, ರೈಲು, ವಾಯುಮಾರ್ಗ ಎಲ್ಲವೂ ಅಭಿವೃದ್ಧಿಯಾಗಲಿದೆ: ಎಂ.ಬಿ ಪಾಟೀಲ್

Public TV
By Public TV
37 minutes ago
lovers arrested for gold chain stealing in chikkaballapur
Chikkaballapur

ಸಂಸಾರ ಸಾಗಿಸೋಕೆ ಸರಗಳ್ಳತನ ಮಾಡಿದ್ದ ಲವರ್ಸ್ ಅರೆಸ್ಟ್!

Public TV
By Public TV
42 minutes ago
Raichuru Hatti Gold Mine Blast
Crime

ಹಟ್ಟಿ ಚಿನ್ನದಗಣಿ | 2,800 ಅಡಿ ಆಳದಲ್ಲಿ ಏರ್ ಬ್ಲಾಸ್ಟ್ – ಕಾರ್ಮಿಕ ದುರ್ಮರಣ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?