ಯತ್ನಾಳ್ ಹಾವು-ಚೇಳು ಆರೋಪಕ್ಕೆ ವಿಜಯೇಂದ್ರ ತಿರುಗೇಟು

Public TV
1 Min Read
YATNAL_ VIJAYENDRA

ಶಿವಮೊಗ್ಗ: ಈ ಹಿಂದೆ ಮುಖ್ಯಮಂತ್ರಿ ಅವರ ನಿವಾಸದಲ್ಲಿ ಅವರ ಆಪ್ತ ಸಹಾಯಕರು, ಅಧಿಕಾರಿಗಳು ಇರುತ್ತಿದ್ದರು. ಆದರೆ ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದಲ್ಲಿ ಹಾವು-ಚೇಳುಗಳ ರೀತಿ ಅವರ ಕುಟುಂಬಸ್ಥರು ಸೇರಿಕೊಂಡಿದ್ದಾರೆ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದರು.

bgk yatnal 2

ಯತ್ನಾಳ್ ಆರೋಪಕ್ಕೆ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿರುವ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಡಿವಿಜಿ ಅವರ ಕಗ್ಗದ ಮೂಲಕ ತಿರುಗೇಟು ನೀಡಿದ್ದಾರೆ. ಕಾಯಲು ಮೇಲೊಬ್ಬನಿರುವಾಗ ಕಾಯಕವಿಲ್ಲದವನ ಕೊಂಕು ಮಾತಿಗೆ ಕೊರಗುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

BY Vijayendra 2.jpg

ಯತ್ನಾಳ್ ಅವರು ಹಾವು-ಚೇಳು ಅಂತ ಆರೋಪ ಮಾಡಿರುವುದು ರಾಜಕೀಯ ವಿರೋಧಿಗಳಿಗೆ. ಈ ರೀತಿಯ ವೈಯಕ್ತಿಕ ಹೇಳಿಕೆಗಳಿಗೆ ದಿನೇ ದಿನೇ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಕೆಲಸ ಮಾಡುವ ಮೂಲಕ, ಪಕ್ಷ ಸಂಘಟನೆ ಮಾಡುವ ಮೂಲಕ ನನ್ನದೇ ಆದ ಸೇವೆ ಮಾಡುತ್ತೇನೆ ಎಂದು ವಿಜಯೇಂದ್ರ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *