31 ವರ್ಷಗಳ ನಂತರ ಶ್ರೀನಗರದ ದೇವಾಲಯ ಓಪನ್

Public TV
1 Min Read
Shital Nath temple

ಶ್ರೀನಗರ: ಉಗ್ರವಾದದಿಂದಾಗಿ ಮುಚ್ಚಿದ ಶೀತಲ್ ನಾಥ್ ದೇವಾಲಯವಯವನ್ನು 31 ವರ್ಷಗಳ ನಂತರ ತೆರೆಯಲಾಗಿದೆ.

ಬಸಂತ ಪಂಚಮಿಯ ಶುಭ ಸಂದರ್ಭದಲ್ಲಿ ಶೀತಲ್ ನಾಥ್ ದೇವಾಲಯವನ್ನು ತೆರೆಯಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ದೇವಾಲಯದ ಆಡಳಿತಮಂಡಳಿ ಸದಸ್ಯರು ತಿಳಿಸಿದ್ದಾರೆ.

ಶ್ರೀನಗರದ ಹಬ್ಬಾ ಕಡಲ್ ಪ್ರದೇಶದಲ್ಲಿ ನೆಲೆಗೊಂಡಿರುವ ಶೀತಲ್ ನಾಥ್ ದೇವಾಲಯವನ್ನು ಉಗ್ರವಾದದ ಹಿನ್ನೆಲೆಯಲ್ಲಿ ಕಳೆದ 31 ವರ್ಷಗಳಿಂದ ಮುಚ್ಚಲಾಗಿತ್ತು. ದೇವಾಲಯವನ್ನು ಮುಚ್ಚಿದ ಬಳಿಕ ಇಲ್ಲಿನ ನೆಲೆಸಿದ್ದ ಹಿಂದೂ ಸಮುದಾಯದವರು ವಲಸೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

Shital Nath temple2

ದೇವಾಲಯವನ್ನು ತೆರೆಯಲು ಸ್ಥಳೀಯ ಮುಸ್ಲಿಂ ಸಮುದಾಯದವರಿಂದ ಬೆಂಬಲ ಹಾಗೂ ಅಗತ್ಯ ಸಹಕಾರ ದೊರೆತಿದೆ. ಮುಂದಿನದಿನಗಳಲ್ಲಿ ನಿತ್ಯ ಪೂಜೆ ಜರುಗಲಿದೆ ಎಂದು ದೇವಾಲಯದ ಆಡಳಿತ ಮಂಡಳಿಯ ಸದಸ್ಯರಾದ ಸಂತೋಷ್ ರಾಜಧನ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *