Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಡಿಜಿಟಲ್ ಕಲಿಕೆಗೆ ಪ್ರೋತ್ಸಾಹ – ಆರು ತಿಂಗಳಲ್ಲಿ 8,000 ಸ್ಮಾರ್ಟ್‍ಕ್ಲಾಸ್ ರೂಮ್

Public TV
Last updated: February 18, 2021 4:41 pm
Public TV
Share
3 Min Read
ASHWATH NARAYAN
SHARE

ಬೆಂಗಳೂರು: ಕೋವಿಡೋತ್ತರ ಕಾಲದಲ್ಲಿ ಡಿಜಿಟಲ್ ಕಲಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇನ್ನೂ ಎರಡು ತಿಂಗಳಲ್ಲಿ ರಾಜ್ಯದ ಉನ್ನತ ಶಿಕ್ಷಣ ವ್ಯಾಪ್ತಿಯಲ್ಲಿ ಶಿಕ್ಷಣ ಸಂಸ್ಥೆಗಳ 2,500 ತರಗತಿ ಕೊಠಡಿಗಳನ್ನು ಸ್ಮಾರ್ಟ್‍ಕ್ಲಾಸ್ ರೂಮ್‍ಗಳನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದ್ದಾರೆ.

ಬೆಂಗಳೂರು ಕಲಾ ಕಾಲೇಜ್‍ನಲ್ಲಿ ಗುರುವಾರ ನೂತನ ಜಿಮ್ ಹೌಸ್ ಹಾಗೂ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಕೋವಿಡ್ ಕಾರಣಕ್ಕೆ ಕಲಿಕೆಯ ಮಾದರಿಗಳೇ ಬದಲಾಗಿವೆ. ಹೀಗಾಗಿ ಸರಕಾರ ತಂತ್ರಜ್ಞಾನವನ್ನು ಬಳಸಿಕೊಂಡು ಸ್ಲಾರ್ಟ್‍ಕ್ಲಾಸ್ ರೂಮ್ ಪರಿಕಲ್ಪನೆಯನ್ನು ರೂಪಿಸಲಾಗಿದೆ. 2,500 ತರಗತಿ ಕೊಠಡಿಗಳು ಸ್ಮಾರ್ಟ್ ಕ್ಲಾಸ್‍ಗಳಾದ ನಂತರ ಮುಂಬರುವ 6 ತಿಂಗಳಲ್ಲಿ 5,500 ತರಗತಿ ಕೊಠಡಿಗಳನ್ನು ಸ್ಮಾರ್ಟ್‍ಕ್ಲಾಸ್ ರೂಮ್‍ಗಳಾಗಿ ರೂಪಿಸಲಾಗುವುದು ಎಂದರು.

ASHWATH NARAYAN 1

ಹೈಸ್ಪೀಡ್ ಇಂಟರ್‍ನೆಟ್, ಅತ್ಯಾಧುನಿಕ ಗುಣಮಟ್ಟದ ಟ್ಯಾಬ್ ನೀಡುವುದು ಹಾಗೂ ಸಮಗ್ರ ಕಲಿಕಾ ವ್ಯವಸ್ಥೆ (ಎಲ್‍ಎಂಎಸ್)ಯನ್ನು ಜಾರಿ ಮಾಡುವ ಮೂಲಕ ಸ್ಮಾರ್ಟ್‍ಕ್ಲಾಸ್ ರೂಮ್ ವ್ಯವಸ್ಥೆಯನ್ನು ಪರಿಪೂರ್ಣಗೊಳಿಸಲಾಗುವುದು. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಗತಿಯೇ ಬದಲಾಗುತ್ತದೆ. ಗುಣಮಟ್ಟದ ಕಲಿಕೆಯ ಕನಸು ಈ ಮೂಲಕ ಸಾಕಾರವಾಗುತ್ತದೆ ಎಂದು ತಿಳಿಸಿದರು.

ಸಮಗ್ರ ಕಲಿಕಾ ವ್ಯವಸ್ಥೆ (ಎಲ್‍ಎಂಎಸ್): ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾರಿ ಮಾಡಲಾಗಿರುವ ಸಮಗ್ರ ಕಲಿಕಾ ವ್ಯವಸ್ಥೆಯು ಕ್ರಾಂತಿಕಾರಕ. ಇಡೀ ದೇಶದಲ್ಲಿ ಇಂಥ ವ್ಯವಸ್ಥೆ ಯಾವುದೇ ರಾಜ್ಯದಲ್ಲೂ ಇಲ್ಲ. ನಮ್ಮದೇ ಮಾನವ ಸಂಪನ್ಮೂಲ ಬಳಸಿಕೊಂಡು ಈ ವ್ಯವಸ್ಥೆಯನ್ನು ರೂಪಿಸಲಾಗಿದೆ. ಎಲ್ಲೇ ಇದ್ದರೂ ಟ್ಯಾಬ್ ಮತ್ತು ಇಂಟರ್‍ನೆಟ್ ಇದ್ದರೆ ಕಲಿಯಬಹುದು. ಜತೆಗೆ, ವಿದ್ಯಾರ್ಥಿ ಕಲಿಕೆಯ ಮಟ್ಟವನ್ನೂ ಬೋಧಕರು ಟ್ರ್ಯಾಕ್ ಮಾಡಬಹುದು. ಈ ಎಲ್ಲ ಉಪಕ್ರಮಗಳ ಮೂಲಕ ಸರಕಾರಿ ಕಾಲೇಜುಗಳು ಖಾಸಗಿ ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಜತೆ ಮಾತ್ರವಲ್ಲ, ಜಾಗತಿಕ ಶಿಕ್ಷಣ ಸಂಸ್ಥೆಗಳ ಜತೆಗೂ ಪೈಪೋಟಿ ನಡೆಸಲು ಸಜ್ಜಾಗುತ್ತಿವೆ. ಅದಕ್ಕೆ ಅಗತ್ಯವಾದ ಎಲ್ಲ ಉಪ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ ಎಂದು ಹೇಳಿದರು.

ಪಠ್ಯ ಆಯ್ಕೆಯಲ್ಲಿ ಸ್ವಾತಂತ್ರ್ಯ: ಪ್ರಸಕ್ತ ಸಾಲಿನಿಂದಲೇ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿದೆ. ತದ ನಂತರ ವಿದ್ಯಾರ್ಥಿಗಳು ಪೂರ್ವ ನಿಗದಿ ಮಾಡಿದ ಪಠ್ಯ ಆಯ್ಕೆ ಮಾಡಿಕೊಳ್ಳುವ ವ್ಯವಸ್ಥೆ ಇರುವುದಿಲ್ಲ. ಅಂದರೆ ವಿದ್ಯಾರ್ಥಿಗಳ ಮೇಲೆ ಪಠ್ಯವನ್ನು ಹೇರುವ ವ್ಯವಸ್ಥೆ ಅಳಿಯಲಿದೆ. ಬದಲಿಗೆ ವಿದ್ಯಾರ್ಥಿಗಳೇ ತಮಗೆ ಆಸಕ್ತಿ ಇರುವ ಪಠ್ಯವನ್ನು ಆಯ್ಕೆ ಮಾಡಿಕೊಂಡು ವ್ಯಾಸಂಗ ಮಾಡುವ ವ್ಯವಸ್ಥೆ ಬರಲಿದೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಸರಕಾರ ಮಾಡಿಕೊಂಡಿದೆ ಎಂದು ಡಿಸಿಎಂ ಪ್ರಕಟಿಸಿದರು.

ASHWATH NARAYAN 2

ಉದ್ಯೋಗ ಸೃಷ್ಟಿಯಲ್ಲಿ ಬೆಂಗಳೂರು ನಂ.1: ಉದ್ಯೋಗ ಸೃಷ್ಟಿಯಲ್ಲಿ ಬೆಂಗಳೂರು ನಗರ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕೇವಲ ಔಷಧ ಕ್ಷೇತ್ರವೊಂದರಲ್ಲೇ ಪ್ರತಿ ವರ್ಷ 5 ಲಕ್ಷ ಉದ್ಯೋಗ ಸೃಷ್ಟಿಯಾಗುತ್ತಿದೆ. ಭವಿಷ್ಯ ನಿಧಿ ಖಾತೆಗಳಲ್ಲಿ ವರ್ಷಕ್ಕೆ 5 ಲಕ್ಷ ಜನ ನೋಂದಣಿ ಆಗುತ್ತಿದ್ದಾರೆ. ಜೊತೆಗೆ ಇತರೆ ಕ್ಷೇತ್ರಗಳಲ್ಲಿ ಎರಡು ಲಕ್ಷದಷ್ಟು ಉದ್ಯೋಗ ಸೃಷ್ಟಿ ಆಗುತ್ತಿದೆ. ವರ್ಷಕ್ಕೆ ಒಟ್ಟು 7 ಲಕ್ಷ ಉದ್ಯೋಗ ಸೃಷ್ಟಿ ನಮ್ಮ ಬೆಂಗಳೂರಿನಲ್ಲಿ ಆಗುತ್ತಿದೆ. ಬೆಂಗಳೂರು ನಾಲೆಜ್ ಸಿಟಿ ಮಾತ್ರವಲ್ಲದೆ ಆವಿಷ್ಕಾರಕ್ಕೂ ಹೆಚ್ಚು ಒತ್ತಾಸೆ ನೀಡುತ್ತಿರುವುದರಿಂದ ಇದು ಸಾಧ್ಯವಾಗಿದೆ ಎಂದರು.

ಅಲ್ಲದೆ ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಹತ್ತು ದಶಲಕ್ಷ ಉದ್ಯೋಗಳನ್ನು ಸೃಷ್ಟಿ ಮಾಡಲು ಗುರಿ ಹೊಂದಲಾಗಿದೆ. ಅದಕ್ಕೆ ಪೂರಕವಾಗಿ ದಿನದ 24 ಗಂಟೆ ವಿದ್ಯುತ್ ಹಾಗೂ ಎಲ್ಲ ಜಾಗದಲ್ಲೂ ಹೈಸ್ಪೀಡ್ ಇಂಟರ್‍ನೆಟ್ ಸಿಗುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

ನಮ್ಮ ಅಕ್ಕಪಕ್ಕದ ರಾಜ್ಯಗಳಲ್ಲಿ ಈ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಮಾಡುವ ಹಾಗೂ ಉದ್ಯಮಶೀಲತೆಯ ವಾತಾವರಣವನ್ನು ಸಾಧಿಸಲು ಸಾಧ್ಯವಾಗುತ್ತಿಲ್ಲ. ಆದರೆ ಬೆಂಗಳೂರಿಗೆ ಮಾತ್ರ ಇದು ಸಾಧ್ಯವಾಗುತ್ತಿದೆ. ನಮ್ಮ ರಾಜ್ಯದಲ್ಲಿ ಅತ್ಯುತ್ತಮ ಪ್ರತಿಭೆಗಳು ಹೊರ ಹೊಮ್ಮುತ್ತಿರುವ ಜೊತೆಗೆ ಹೊರ ರಾಜ್ಯಗಳಿಂದ ಪ್ರತಿಭಾವಂತ ಯುವಕರು ನಮ್ಮ ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ನುಡಿದರು.

rizwan arshad

ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಬಾಲಚಂದ್ರ, ಸರಕಾರಿ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಡಾ.ಟಿ.ಎಂ.ಮಂಜುನಾಥ, ಕಾಲೇಜಿನ ಪ್ರಾಂಶುಪಾಲ ಪ್ರೊ.ಕೋಡದ ರಾಜಶೇಖರಪ್ಪ, ಡಾ.ಶಶಿಕಲಾ ಮುಂತಾದವರು ಭಾಗಿಯಾಗಿದ್ದರು.

TAGGED:Ashwaththa NarayanaDigital LearningJob creationPublic TVಅಶ್ವತ್ಥ ಣಾರಾಯಣಉದ್ಯೋಗ ಸೃಷ್ಟಿಡಿಜಿಟಲ್ ಕಲಿಕೆಪಬ್ಲಿಕ್ ಟಿವಿ. bengaluruಬೆಂಗಳೂರು
Share This Article
Facebook Whatsapp Whatsapp Telegram

Cinema Updates

The girl Friend
ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್ ಫ್ರೆಂಡ್ ಚಿತ್ರದ ಫಸ್ಟ್ ಸಾಂಗ್ ರಿಲೀಸ್
Cinema Latest Top Stories
Actor Darshan At Bengaluru Airpor
ಏರ್‌ಪೋರ್ಟ್‌ನಲ್ಲಿ ದರ್ಶನ್ ಫೋಟೋ ರಿವೀಲ್
Bengaluru City Cinema Latest Sandalwood Top Stories
Yogaraj Bhat Jayant Kaikini
ಯೋಗರಾಜ್ ಭಟ್ ಗೀತ ಗುಚ್ಛಕ್ಕೆ ಕಾಯ್ಕಿಣಿ ಸಾಥ್
Bengaluru City Cinema Latest Sandalwood
31 Days
ಜಾಲಿಡೇಸ್ ಹುಡುಗನ ಚಿತ್ರಕ್ಕೆ ಮನೋಹರ್ ಸಂಗೀತ : ಇದು 150ನೇ ಸಿನಿಮಾ
Cinema Latest Sandalwood Top Stories
K Manju and Style Shrinu
ಸದ್ಯದಲ್ಲೇ ಕೆ.ಮಂಜು ಮತ್ತು ಸ್ಮೈಲ್ ಶ್ರೀನು ಕಾಂಬಿನೇಶನ್ ಚಿತ್ರ
Cinema Latest Sandalwood Top Stories

You Might Also Like

KSRTC 2
Bengaluru City

ಸರ್ಕಾರ Vs ಸಾರಿಗೆ ನೌಕರರು – ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ!

Public TV
By Public TV
13 minutes ago
Siddaramaiah 7
Bengaluru City

22 ಸಚಿವರ ಮೀಟಿಂಗ್ ಬೆನ್ನಲ್ಲೇ ಸಿಎಂ-ಡಿಸಿಎಂ ಜೊತೆ ಸುರ್ಜೇವಾಲಾ ಸಭೆ – ಕೆರಳಿದ ಕುತೂಹಲ

Public TV
By Public TV
20 minutes ago
PM Modi Meeting
Latest

100 ಕೃಷಿ ಜಿಲ್ಲೆಗಳ ಅಭಿವೃದ್ಧಿಗೆ ನಿರ್ಧಾರ – 24,000 ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಸಂಪುಟ ಅಸ್ತು

Public TV
By Public TV
37 minutes ago
01 7
Big Bulletin

ಬಿಗ್‌ ಬುಲೆಟಿನ್‌ 16 July 2025 ಭಾಗ-1

Public TV
By Public TV
51 minutes ago
02 8
Big Bulletin

ಬಿಗ್‌ ಬುಲೆಟಿನ್‌ 16 July 2025 ಭಾಗ-2

Public TV
By Public TV
52 minutes ago
03 4
Big Bulletin

ಬಿಗ್‌ ಬುಲೆಟಿನ್‌ 16 July 2025 ಭಾಗ-3

Public TV
By Public TV
53 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?